Homeಕರ್ನಾಟಕಕೊಂದವರು ಯಾರು: ಧರ್ಮಸ್ಥಳದಲ್ಲಿ ನಡೆದಿರುವ ಎಲ್ಲಾ ಹತ್ಯೆಗಳ ಬಗ್ಗೆ ಸಮಗ್ರ ತನಿಖೆ ನಡೆಸಬೇಕು: ಮಲ್ಲಿಗೆ ಸಿರಿಮನೆ

ಕೊಂದವರು ಯಾರು: ಧರ್ಮಸ್ಥಳದಲ್ಲಿ ನಡೆದಿರುವ ಎಲ್ಲಾ ಹತ್ಯೆಗಳ ಬಗ್ಗೆ ಸಮಗ್ರ ತನಿಖೆ ನಡೆಸಬೇಕು: ಮಲ್ಲಿಗೆ ಸಿರಿಮನೆ

- Advertisement -
- Advertisement -

“ನಾವು ಕೊಂದವರು ಯಾರು’ ಆಂದೋಲನದಿಂದ ‘ಮಹಿಳಾ ನ್ಯಾಯ ಸಮಾವೇಶ’ವನ್ನು ಬೆಳ್ತಂಗಡಿಯಲ್ಲಿ ಹಮ್ಮಿಕೊಳ್ಳಬೇಕು ಎಂದುಕೊಂಡಾಗ ನೂರಾರು ಪ್ರಶ್ನೆಗಳು, ನೂರಾರು ಆಪಾದನೆಗಳು, ಆರೋಪಗಳು ಬಂದವು. ಯಾಕೆ ಇಲ್ಲಿಗೆ ಬರುತ್ತಿದ್ದಾರೆ, ಇಲ್ಲಿಗೇ ಬಂದು ಏನು ಮಾಡುತ್ತಾರೆ ಅನ್ನುವ ಹಲವು ಬಗೆಯ ಪ್ರಶ್ನೆಗಳು ಬಂದವು. ಇವತ್ತು ನಮ್ಮ ಹಕ್ಕೋತ್ತಾಯಗಳು, ಆ ಎಲ್ಲಾ ಪ್ರಶ್ನೆಗಳಿಗೆ ಉತ್ತರ ಕೊಟ್ಟಿರುತ್ತವೆ” ಎಂದು ಸಾಮಾಜಿಕ ಹೋರಾಟಗಾರ್ತಿ ಮಲ್ಲಿಗೆ ಸಿರಿಮನೆ ಹೇಳಿದರು.

ಡಿಸೆಂಬರ್ 16ರಂದು ಬೆಳ್ತಂಗಡಿಯಲ್ಲಿ ಹಮ್ಮಿಕೊಂಡಿದ್ದ ‘ಕೊಂದವರು ಯಾರು ಆಂದೋಲನ’ದ ‘ಮಹಿಳಾ ನ್ಯಾಯ ಸಮಾವೇಶದ’ಲ್ಲಿ ಪ್ರಸ್ತಾವಿಕ ಮಾತುಗಳನ್ನಾಡಿದ ಅವರು ‘ಇಲ್ಲಿ ನೆರೆದಿರುವ ಎಲ್ಲರೂ ಸಹ ಕಾರ್ಯಕ್ರಮವನ್ನ ವೀಕ್ಷಣೆ ಮಾಡಲು ಬಂದವರಲ್ಲ, ಬದಲಿಗೆ ತಮ್ಮ ತಮ್ಮ ಊರುಗಳಿಂದ, ತಮ್ಮ ತಮ್ಮ ಬದುಕುಗಳಿಂದ, ತಮ್ಮ ತಮ್ಮ ಜೀವನದ ನೋವಿನ ಕಥೆಗಳಿಂದ ಒಂದೊಂದು ಕಿಡಿಯನ್ನು ಹೊತ್ತಿಸಿಕೊಂಡು ಬಂದು, ಈ ಧರ್ಮಸ್ಥಳದ ನೆಲದಲ್ಲಿ ಹೆಣ್ಣು ಮಕ್ಕಳಿಗೆ ನ್ಯಾಯ ಸಿಗಲಿ ಅಂತಾ ಆಗ್ರಹಿಸುತ್ತಿರುವವರು. ಇಲ್ಲಿ ಬಂದಂತಹ ಹೆಣ್ತನದ, ಹೆಂಗರುಳಿನ ಎಲ್ಲರೂ ಕೂಡಾ ನ್ಯಾಯಕ್ಕಾಗಿ ಆಗ್ರಹಿಸುವ ದೀಪಗಳು ಎಂದರು. 

‘ಇಲ್ಲಿ ಬಂದವರಲ್ಲಿ ದೂರದ ಬೀದರ್ ನ ಭಾಲ್ಕಿಯಿಂದ, ಇದೇ ಬೆಳ್ತಂಗಡಿಯ ತನಕ, ಪಕ್ಕದ ಜಿಲ್ಲೆ ಚಿಕ್ಕಮಂಗಳೂರಿನಿಂದ, ದೂರದ ಚಿತ್ರದುರ್ಗದ ತನಕ, ಎಲ್ಲಾ ಜಿಲ್ಲೆಗಳಿಂದ, ಎಲ್ಲಾ ಜೀವನದ ಹಂತಗಳಿಂದ, ಬೇರೆ ಬೇರೆ ಹಿನ್ನೆಲೆಗಳಿಂದ ಬಂದವರಾಗಿದ್ದಾರೆ. ಆದರೆ ನಮ್ಮೆಲ್ಲರ ಕೂಗು ಒಂದೇ ಆಗಿದೆ, ಹೆಣ್ಣು ಮಕ್ಕಳಿಗೆ ನ್ಯಾಯ ಸಿಗಬೇಕು, ಹೆಣ್ಣು ಮಕ್ಕಳಿಗೆ ಘನತೆಯಿಂದ ಬದುಕುವ ಹಕ್ಕು ಸಿಗಬೇಕು. ಸಂವಿಧಾನ ನಮಗೆ ಸಮಾನತೆಯನ್ನು ಕೊಟ್ಟಿದೆ. ಆ ಸಮಾನತೆ ನಿಜ ಜೀವನದಲ್ಲೂ ಕೂಡಾ ಜಾರಿಯಾಗಬೇಕು’ ಎಂದು ಆಗ್ರಹಿಸಿದರು. 

ಇದೇ ವೇಳೆ ಸಮಾನತೆ ನಮ್ಮ ಹಕ್ಕು, ಭಿಕ್ಷೆ ಅಲ್ಲ ಅನ್ನುವ ಘೋಷಣೆಯ ಮೂಲಕ ಪ್ರಸ್ತಾವಿಕ ಮಾತುಗಳನ್ನು ಮುಂದುವರಿಸಿದರು.

‘ನಮ್ಮ ಹಕ್ಕೋತ್ತಾಯಗಳನ್ನು ಓದಿದ್ದನ್ನು ಕೇಳಿದ ಮೇಲೆ ಇದು ಯಾವುದೋ ಒಂದು ಊರಿಗೆ ಸಂಬಂಧಿಸಿದ, ಒಂದು ಪ್ರಕರಣಕ್ಕೆ ಸಂಬಂಧಿಸಿದ ಹೋರಾಟ ಅಲ್ಲ ಅನ್ನುವುದು ನಿಮಗೆ ಅರ್ಥವಾಗಿರುತ್ತದೆ. ‘ನಾವು ಕೊಂದವರು ಯಾರು’ ಆಂದೋಲನದಿಂದ ‘ಮಹಿಳಾ ನ್ಯಾಯ ಸಮಾವೇಶ’ವನ್ನು ಬೆಳ್ತಂಗಡಿಯಲ್ಲಿ ಹಮ್ಮಿಕೊಳ್ಳಬೇಕು ಎಂದು ಯೋಚಿಸುತ್ತಿದ್ದಾಗ, ನೂರಾರು ಪ್ರಶ್ನೆಗಳು, ನೂರಾರು ಆಪಾದನೆಗಳು, ಆರೋಪಗಳು ಬಂದವು. ಯಾಕೆ ಇಲ್ಲಿಗೆ ಬರುತ್ತಿದ್ದಾರೆ, ಇಲ್ಲಿಗೇ ಬಂದು ಏನು ಮಾಡುತ್ತಾರೆ, ಅನ್ನುವ ನೂರಾರು ಬಗೆಯ ಪ್ರಶ್ನೆಗಳು ಬಂದವು. ಇವತ್ತು ನಮ್ಮ ಹಕ್ಕೋತ್ತಾಯಗಳು, ಆ ಪ್ರಶ್ನೆಗಳಿಗೆ ಉತ್ತರ ಕೊಟ್ಟಿರುತ್ತವೆ ಎಂದುಕೊಳ್ಳುತ್ತೇನೆ. ನಾವು ಕೇವಲ ಬೆಳ್ತಂಗಡಿಗೆ ಬಂದವರಲ್ಲ, ಅಥವಾ ಇಲ್ಲಿಗೆ ಬಂದು ನಮ್ಮ ಪ್ರಯಾಣವನ್ನು ಮುಗಿಸುವವರು ಅಲ್ಲ, ಮಹಿಳಾ ಚಳವಳಿಯ ಈ ಪ್ರಯಾಣ ಶುರುವಾಗಿದ್ದು ಬಹಳಷ್ಟು ವರ್ಷಗಳ ಹಿಂದೆ. ನೂರಾರು ವರ್ಷಗಳಿಂದ ಮಹಿಳೆಯರು ನಡೆಸಿಕೊಂಡು ಬಂದಿರುವಂತ ಆಂದೋಲನದ ಕೆಲವು ಪ್ರತಿನಿಧಿಗಳು ಇಲ್ಲಿದ್ದೇವೆ. ಮುಂದೆಯು ಕೂಡಾ ಎಷ್ಟೋ ಜನ ಮಹಿಳೆಯರು, ಎಷ್ಟೋ ಜನ ನಮ್ಮ ಕಿರಿಯ ಸಹೋದರಿಯರು ಈ ಹೋರಾಟದ ಪಂಜನ್ನು ಹಿಡಿದು ಮುನ್ನೆಡೆಯುತ್ತಾರೆ’ ಎಂದು ಭರವಸೆ ವ್ಯಕ್ತ ಪಡಿಸಿದರು.  

‘ಇಂದಲ್ಲಾ-ನಾಳೆ ಈ ದೇಶದಲ್ಲಿ, ಈ ರಾಜ್ಯದಲ್ಲಿ, ಈ ನೆಲದಲ್ಲಿ ಕೂಡಾ ಹೆಣ್ಣು ಮಕ್ಕಳಿಗೆ ನ್ಯಾಯ ಖಾತ್ರಿಯಾಗುತ್ತದೆ. ಹೆಣ್ಣು ಮಕ್ಕಳಿಗೆ ಸಂವಿಧಾನ ಕೊಟ್ಟಿರುವಂತಹ ಸಮಾನತೆ ಖಾತ್ರಿಯಾಗುತ್ತೆ. ಈ ಭರವಸೆಯ ಜೊತೆಗೆ ಇಲ್ಲಿ ಬಂದು ಸೇರಿರುವವರು ನಾವು’ ಎಂದು ಹೇಳಿದರು. 

‘ಇಲ್ಲಿಗೆ ಯಾಕೆ ಬರ್ತಿದ್ದೀರೀ..ಇಲ್ಲಿ ಬಂದು ಏನ್ ಮಾಡ್ತೀರಿ ಅಂದ್ರೆ. ಹಾಗೇ ಕೇಳುವವರಿಗೆ ನಾವಿವತ್ತು ಇಲ್ಲಿಂದ ಈ ಎಲ್ಲಾ ಸಹೋದರಿಯರ ಪರವಾಗಿ ಹೇಳೋದಕ್ಕೆ ಬಯಸುತ್ತೀವಿ. ನಾವು ಇಲ್ಲಿಗೆ ಮಾತ್ರ ಬಂದವರಲ್ಲ, ಬಿಜಾಪುರದಲ್ಲಿ ದಲಿತ ಬಾಲಕಿಯ ಮೇಲೆ ಅತ್ಯಾಚಾರ ಆಯ್ತು. ಅತ್ಯಾಚಾರ ಆಗಿ ಆಕೆಯನ್ನ ಅತ್ಯಂತ ಬರ್ಬರವಾಗಿ ಕೊಂದು ಹಾಕಿದ್ದರು, ಸಾಲದ್ದಕ್ಕೆ ಆ ಸಣ್ಣ ಹುಡುಗಿಯ ನಡೆತೆಯೇ ಸರಿ ಇರಲಿಲ್ಲ ಅನ್ನುವ ಆರೋಪಗಳನ್ನು ಮಾಡಲಾಯಿತು. ಆ ದಿನ ಜನಪರ ಕಾಳಜಿ ಇರುವಂತಹವರು, ಮಹಿಳಾ ಸಂಘಟನೆಗಳು ಸೇರಿದಂತೆ ಎಲ್ಲರೂ ದೊಡ್ಡ ಸಂಖ್ಯೆಯಲ್ಲಿ ಬಿಜಾಪುರಕ್ಕೆ ಹೋಗಿದ್ದೇವೆ. ಆ ದಲಿತ ಹೆಣ್ಣು ಮಗುವಿನ ಪ್ರಾಣ ಕಸಿದವರ ವಿರುದ್ಧ ಪ್ರತಿಭಟನೆ ಮಾಡಿದ್ದೇವೆ. ಆ ಪ್ರತಿಭಟನೆಯ ಮುಂದಾಳತ್ವ ವಹಿಸಿದ್ದ ಹಲವಾರು ಜನ, ಈ ವೇದಿಕೆಯ ಮುಂಭಾಗದಲ್ಲಿ ಕುಳಿತಿದ್ದಾರೆ’ ಎಂದು ತಿಳಿಸಿದರು. 

ಅಲ್ಲದೇ ‘ನೂರಾರು ಹೆಣ್ಣು ಮಕ್ಕಳನ್ನ ಅತ್ಯಂತ ಅಸಹ್ಯಕರವಾಗಿ ಲೈಂಗಿಕ ಶೋಷಣೆಗೆ ಒಳಪಡಿಸಿದ ಪ್ರಕರಣ ಹಾಸನದಲ್ಲಿ ನಡೆದರೆ, ನಾವು ಹಾಸನಕ್ಕೂ ಹೋಗಿ, ಹಾಸನದ ನೆಲದಲ್ಲಿ ಪಾದಯಾತ್ರೆ ಮಾಡಿದ್ದೆವು, ನ್ಯಾಯಕ್ಕಾಗಿ ಘೋಷಣೆಗಳನ್ನ ಕೂಗಿದ್ದೆವು, ನಮಗೆ ನ್ಯಾಯ ಬೇಕು, ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕು ಅಂತಾ ಕೇಳಿದ್ದೆವು. ನಮ್ಮ ಒಡಲ ಸಂಕಟದ ಧ್ವನಿ ಒಂದಲ್ಲಾ ಒಂದು ದಿನ ನ್ಯಾಯಾಲಯದ ಬಾಗಿಲನ್ನು ಮುಟ್ಟುತ್ತದೆ, ತಪ್ಪಿತಸ್ತರಿಗೆ ಶಿಕ್ಷೆ ಆಗುತ್ತದೆ. ನಮಗೆ ನ್ಯಾಯ ಸಿಗುತ್ತದೆ ಅನ್ನುವುದನ್ನು ಹಾಸನದ ಪ್ರಕರಣ ತೋರಿಸುತ್ತಿದೆ’ ಎಂದು ಹೇಳಿದರು. 

‘ಒಂದಲ್ಲಾ, ಎರಡರಲ್ಲ, ಎಲ್ಲವನ್ನು ಹೇಳಿಕೊಳ್ಳಲು ಸಮಯವಿಲ್ಲ, 70ರ ದಶಕದ ಮಥುರಾ ಪ್ರಕರಣದಿಂದ ಹಿಡಿದು, 90ರ ದಶಕದಲ್ಲಿ ಭನ್ವರಿ ದೇವಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದ ವಿರುದ್ಧದ ಹೋರಾಟದಿಂದ, ಅಥವಾ ಮಹಾರಾಷ್ಟ್ರದ ಖೈರ್ಜಾಂಜಿಯಲ್ಲಿ ನಡೆದ ದಲಿತ ತಾಯಿ-ಮಗಳು ಹೋರಾಡಿದಂತಹ ಪ್ರಕರಣದಲ್ಲಿ ಅವರ ಮೇಲೆ ನಡೆದ ದೌರ್ಜನ್ಯದ ವಿರುದ್ಧದ ಹೋರಾಟದಿಂದ, ಎಲ್ಲೇ ಅನ್ಯಾಯ, ಅತ್ಯಾಚಾರ ನಡೆದರು ನಾವಲ್ಲಿ ಹೋಗಿ ಪ್ರತಿಭಟನೆ ಮಾಡಿದ್ದೇವೆ. ಇವತ್ತು ನಾವು ಯಾಕೆ ಬರಬಾರದು ಇಲ್ಲಿಗೆ, ಯಾಕೆ ಬರಬಾರದು ಬೆಳ್ತಂಗಡಿಗೆ, ಯಾಕೆ ನಾವು ಪ್ರಶ್ನೆ ಮಾಡಬಾರದು, ಇಲ್ಲಿ ಮಹಿಳೆಯರನ್ನ ಕೊಂದವರು ಯಾರು ಅನ್ನುವುದನ್ನು ನಾವು ಯಾಕೆ ಕೇಳಬಾರದು. ಯಾರು ನಮ್ಮನ್ನ ತಡೆಯುವುದು, ಯಾರು ನಮ್ಮ ಮೇಲೆ ಆಪಾದನೆ ಹೊರಿಸುತ್ತಿರುವವರು, ಅಂತವರಿಗೆ ನಿಮ್ಮ ಆತ್ಮಸಾಕ್ಷಿಯಲ್ಲಿಯೇ ಉಳುಕಿರಬೇಕು. ನಿಮ್ಮ ಎದೆಗಳನ್ನ ಮುಟ್ಟಿ ನೋಡಿಕೊಳ್ಳಿ, ನೀವೇ ಅಲ್ಲವೇ ಕೊಂದವರು, ನೀವೇ ಅಲ್ಲವೇ ಕೊಂದವರ ಪರ ನಿಂತವರು..ನಿಮ್ಮ ಆತ್ಮಸಾಕ್ಷಿಗಳನ್ನ ಮುಟ್ಟಿ ನೋಡಿಕೊಳ್ಳಿ’ ಎಂದು ಆಕ್ರೋಶ ವ್ಯಕ್ತಪಡಿಸಿದರು. 

ಈ ವೇಳೆ ಸರ್ಕಾರದ ಗಮನ ಸೆಳೆದ ಮಲ್ಲಿಗೆ, ‘ಸರ್ಕಾರದಲ್ಲಿ ಮೇಲೆ ಕೂತಿರುವಂತವರು, ಮಾನ್ಯ ಮುಖ್ಯಮಂತ್ರಿಗಳು, ಮಾನ್ಯ ಉಪಮುಖ್ಯಮಂತ್ರಿಗಳು, ಗೃಹ ಸಚಿವರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರು ನೀವು ನಿಮ್ಮ ಮನಸಾಕ್ಷಿಯನ್ನು ಮುಟ್ಟಿ ನೋಡಿಕೊಳ್ಳಿ, ಯಾರನ್ನ ಬೆಂಬಲಿಸಬೇಕಿತ್ತು, ನೀವು ಯಾರನ್ನು ಬೆಂಬಲಿಸುತ್ತಿದ್ದೀರಿ ಎಂದು ಪ್ರಶ್ನಿಸಿದರು. ಅಲ್ಲದೇ ನಾವು ನೊಂದಂತಹ ಹೆಣ್ಣು ಮಕ್ಕಳು ಇಲ್ಲೇ ಇದ್ದೇವೆ. ತಮ್ಮ ಕುಟುಂಬದ ಕರುಳ ಕುಡಿಗಳನ್ನ ಕಳೆದುಕೊಂಡ ತಾಯಂದಿರು ಇಲ್ಲಿದ್ದಾರೆ..ನಮಗೆ ನ್ಯಾಯ ಖಾತರಿ ಪಡಿಸುವಂತವರು ಯಾರು. ನಿಮಗೆ ಜವಾಬ್ದಾರಿ ಇಲ್ಲವಾ ನಮಗೆ ನ್ಯಾಯ ಕೊಡುವಂತಾದ್ದು, ಈ ನೆಲದ ಹೆಣ್ಣು ಮಕ್ಕಳಿಗೆ ನೀವು ಉತ್ತರದಾಯಿಗಳು ಅಲ್ಲವಾ, ನೀವು ಹೊಣೆಗಾರರು ಅಲ್ಲವಾ ಎಂದು ಪ್ರಶ್ನಿಸಿದ ಅವರು ಈ ವೇಳೆ ಎಸ್.ಐ.ಟಿ ಲೋಪದೋಷಗಳ ಬಗ್ಗೆಯೂ ಮಾತನಾಡಿದರು. 

‘ಧರ್ಮಸ್ಥಳ ಪ್ರಕರಣದಲ್ಲಿ ಒಂದು ಎಸ್ಐಟಿ ರಚನೆಯಾಯಿತು. ಇಂದಲ್ಲಾ ನಾಳೆ ನಮಗೆ ನ್ಯಾಯ ಸಿಗುತ್ತದೆ ಎಂಬ ನಂಬಿಕೆಯಲ್ಲಿ ನಾವು ಅದನ್ನು ಸ್ವಾಗತಿಸಿದೆವು, ತನಿಖೆಯಲ್ಲಿ ನೀವು ಮಾಡಿದ್ದೇನು, ಎಲ್ಲಿ ಹೋಯಿತು ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯ ವಿಚಾರ’ ಎಂದು ಗುಡುಗಿದರು. 

‘ಇಂದು ನಾವು ಇಲ್ಲಿಗೆ ಯಾಕೆ ಬಂದಿದ್ದೇವೆ ಎಂದರೆ ನಮಗೆ ಗೊತ್ತಿರುವ ವೇದವಲ್ಲಿ, ಪದ್ಮಲತಾ, ಸೌಜನ್ಯ, ಯಮುನಾ, ಹೇಮಾವತಿ ಇಂಥ ಹತ್ತಾರು ಹೆಣ್ಣು ಮಕ್ಕಳು ಮಾತ್ರವಲ್ಲ, ಆರ್.ಟಿ.ಐ ಅರ್ಜಿಗಳ ಅಂಕಿಅಂಶಗಳಲ್ಲಿ ಬಂದತಹ ಮಾಹಿತಿಯಲ್ಲಿ 2001 ರಿಂದ 2012ರ ತನಕ, ಕೇವಲ 12ವರ್ಷಗಳಲ್ಲಿ 452 ಅಸಹಜ ಸಾವುಗಳು ನಡೆದಿವೆ. ಆತ್ಮಹತ್ಯೆ ಪ್ರಕರಣಗಳು ನಡೆದಿವೆ. ಅದರಲ್ಲಿ ಮಹಿಳೆಯರ ಸಾವುಗಳು 96, ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಒಂದು ವರ್ಷದಲ್ಲಿ ಮಹಿಳೆಯರ ಅಸಹಜ ಸಾವುಗಳು ಸಂಭವಿಸುವ ಸರಾಸರಿ ಮೊತ್ತ 37, ಆದರೆ ಇಲ್ಲಿ ಇದಕ್ಕೆ ಮೂರು ಪಟ್ಟು ಹೆಚ್ಚು ಹೆಣ್ಣು ಮಕ್ಕಳ ಅಸಹಜ ಸಾವು ಸಂಭವಿಸುತ್ತವೆ. ಇದಕ್ಕೆ ನ್ಯಾಯ ಕೇಳುವುದು ಈ ಹೋರಾಟ ಮುಖ್ಯ ಅಂಶ. ಇಷ್ಟು ಮಾತ್ರವಲ್ಲ ಈ ಎಲ್ಲಾ ಪ್ರಕರಣಗಳಿಗೆ ಸಂಬಂಧಿಸಿದಂತೆ ಎಸ್.ಐ.ಟಿ ಸಮಗ್ರ ತನಿಖೆ ನಡೆಸಬೇಕು.

‘ಅದಕ್ಕಿಂತಲೂ ಮುಖ್ಯವಾದ ಪ್ರಶ್ನೆ ಇಷ್ಟೆಲ್ಲಾ ದೌರ್ಜನ್ಯ ನಡೆಯುತ್ತಿರುವಾಗ ವ್ಯವಸ್ಥೆ ಏನು ಮಾಡುತ್ತಿತ್ತು. ಈ ವ್ಯವಸ್ಥೆ ಇಂಥಹ ದೌರ್ಜನ್ಯ ನಡೆಯಲು ಹೇಗೆ ಅವಕಾಶ ಮಾಡಿಕೊಟ್ಟಿತು. ಇಂತಹ ಸರಣಿ ಹತ್ಯೆಗಳು ನಡೆದವು, ಅಪರಾಧಿಗಳು ಅಂತಾ ಬಂಧಿಸಿದ ಎಲ್ಲರನ್ನ ನಿರಪರಾಧಿಗಳು ಅಂತಾ ಸರ್ಕಾರವೇ ಬಿಡುಗಡೆ ಮಾಡಿತ್ತು. ಆದರೆ ಇಲ್ಲಿ ನಡೆದ ಹತ್ಯೆ, ಅತ್ಯಾಚಾರ, ಭೀಕರ ಹತ್ಯೆ ಪ್ರಕರಣಗಳಲ್ಲಿ ನಿಜವಾಗಲೂ ಕೊಂದವರು ಯಾರು ಅನ್ನುವುದಕ್ಕೆ ಉತ್ತರ ಕೊಡಬೇಕು’ ಎಂದು ಹೇಳಿದರು. 

ಸಮಾವೇಶದ ಸಂಪೂರ್ಣ ವಿಡಿಯೋ ಇಲ್ಲಿದೆ:

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...