Homeದಲಿತ್ ಫೈಲ್ಸ್ಕೇರಳ| ನಿರ್ಗಮಿತ ದಲಿತ ಪಂಚಾಯತ್ ಅಧ್ಯಕ್ಷರ ವಿರುದ್ಧ 'ಶುದ್ಧೀಕರಣ ಆಚರಣೆ'; ವರದಿ ಕೇಳಿದ ಎಸ್‌ಸಿ/ಎಸ್‌ಟಿ ಆಯೋಗ

ಕೇರಳ| ನಿರ್ಗಮಿತ ದಲಿತ ಪಂಚಾಯತ್ ಅಧ್ಯಕ್ಷರ ವಿರುದ್ಧ ‘ಶುದ್ಧೀಕರಣ ಆಚರಣೆ’; ವರದಿ ಕೇಳಿದ ಎಸ್‌ಸಿ/ಎಸ್‌ಟಿ ಆಯೋಗ

- Advertisement -
- Advertisement -

ಕೋಝಿಕ್ಕೋಡ್‌ನ ಪೆರಂಬ್ರಾದ ಚಂಗರೋತ್ ಪಂಚಾಯತ್ ಕಚೇರಿಯ ಮುಂದೆ ದಲಿತ ಸಮುದಾಯಕ್ಕೆ ಸೇರಿದ ನಿರ್ಗಮಿತ ಅಧ್ಯಕ್ಷ ಉನ್ನಿ ವೆಂಗೇರಿ ಅವರನ್ನು ಅವಮಾನಿಸಲು “ಶುದ್ಧೀಕರಣ ಆಚರಣೆ” ನಡೆಸಲಾಗಿದೆ ಎಂಬ ಆರೋಪದ ಮೇಲೆ ಕೇರಳ ರಾಜ್ಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಆಯೋಗವು 10 ದಿನಗಳಲ್ಲಿ ವರದಿ ನೀಡುವಂತೆ ಜಿಲ್ಲಾ ಪೊಲೀಸ್ ಮುಖ್ಯಸ್ಥರಿಗೆ ಸೂಚಿಸಿದೆ.

ಪಂಚಾಯತ್ ಕಚೇರಿಯ ಹೊರಗೆ ಸಗಣಿ ನೀರು ಸಿಂಪಡಿಸಿ, ಅವಮಾನಕರ ರೀತಿಯಲ್ಲಿ ಆಚರಣೆ ನಡೆಸಲಾಗಿದೆ ಎಂಬ ಮಾಧ್ಯಮ ವರದಿಗಳ ಆಧಾರದ ಮೇಲೆ ಆಯೋಗವು ಕ್ರಮ ಕೈಗೊಂಡಿದೆ. ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿ ತನಿಖೆ ನಡೆಸಲು ಮತ್ತು ಸೂಕ್ತ ಕಾನೂನು ಕ್ರಮ ಕೈಗೊಳ್ಳಲು ಪೊಲೀಸರಿಗೆ ನಿರ್ದೇಶನ ನೀಡಲಾಗಿದೆ ಎಂದು ಆಯೋಗದ ಅಧ್ಯಕ್ಷರು ತಿಳಿಸಿದ್ದಾರೆ.

ಸೋಮವಾರ ನಡೆದ ವಿಜಯೋತ್ಸವದ ಸಂದರ್ಭದಲ್ಲಿ, ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ ಕಾರ್ಯಕರ್ತರ ಗುಂಪು ಪಂಚಾಯತ್ ಕಚೇರಿಯ ಹೊರಗೆ ನೀರು ಸಿಂಪಡಿಸಿ ಆವರಣವನ್ನು ಗುಡಿಸಿ ಸ್ವಚ್ಛಗೊಳಿಸಿದೆ ಎಂದು ಪೆರಂಬ್ರಾ ಪೊಲೀಸರುತಿಳಿಸಿದ್ದಾರೆ ಎಂದು ‘ಆನ್‌ಮನೋರಮಾ’ ವರದಿ ಮಾಡಿದೆ. “ಘಟನೆಯ ಬಗ್ಗೆ ಇನ್ನೂ ಯಾವುದೇ ಔಪಚಾರಿಕ ದೂರು ದಾಖಲಾಗಿಲ್ಲವಾದ್ದರಿಂದ ನಾವು ಪ್ರಕರಣ ದಾಖಲಿಸಿಲ್ಲ” ಎಂದು ಪೊಲೀಸರು ತಿಳಿಸಿದ್ದಾರೆ.

ಈ ನಡುವೆ, ಈ ಕೃತ್ಯದ ಹಿಂದೆ ಐಯುಎಂಎಲ್ ಕಾರ್ಯಕರ್ತರು ಇದ್ದಾರೆ ಎಂದು ವೆಂಗೇರಿ ಆರೋಪಿಸಿದ್ದಾರೆ. ಎಲ್‌ಡಿಎಫ್‌ ವಿರುದ್ಧ ಯುಡಿಎಫ್ ಗೆದ್ದ ಇತರ ಮೂರು ಪಂಚಾಯತ್‌ಗಳಲ್ಲಿ ಈ ರೀತಿಯ ಯಾವುದೇ ಆಚರಣೆಗಳು ನಡೆದಿಲ್ಲ ಎಂದು ಅವರು ಹೇಳಿದರು. ಅವರು ದಲಿತ ಪಂಚಾಯತ್ ಅಧ್ಯಕ್ಷರಾಗಿದ್ದ ಕಾರಣ ಚಂಗರೋತ್‌ನಲ್ಲಿ ನಡೆದ ಘಟನೆ ಎದ್ದು ಕಾಣುತ್ತದೆ ಎಂದು ಹೇಳಿದರು.

ಆದರೆ, ಐಯುಎಂಎಲ್ ನಾಯಕರು ಆರೋಪಗಳನ್ನು ನಿರಾಕರಿಸಿದರು. ಪಂಚಾಯತ್ ಭ್ರಷ್ಟಾಚಾರವನ್ನು ತೊಡೆದುಹಾಕುತ್ತಿದೆ ಎಂದು ಸಾಂಕೇತಿಕವಾಗಿ ತಿಳಿಸಲು ಯುವಕರು ನೀರು ಮತ್ತು ಪೊರಕೆಯನ್ನು ಬಳಸಿ ಪ್ರದೇಶವನ್ನು ಸ್ವಚ್ಛಗೊಳಿಸಿದ್ದಾರೆ ಎಂದು ಹೇಳಿದರು.

ಈ ಘಟನೆಯು ಜಿಲ್ಲೆಯಲ್ಲಿ ರಾಜಕೀಯ ಪ್ರತಿಭಟನೆಗಳನ್ನು ಹುಟ್ಟುಹಾಕಿದೆ. ಸಿಪಿಎಂನ ಯುವ ವಿಭಾಗವಾದ ಡಿವೈಎಫ್‌ಐ ಮಂಗಳವಾರ ಚಂಗರೋತ್ ಪಂಚಾಯತ್ ಕಚೇರಿಗೆ ಮೆರವಣಿಗೆ ನಡೆಸಿ, ಆಪಾದಿತ ಕೃತ್ಯವನ್ನು ಖಂಡಿಸಿತು. ಪ್ರತಿಭಟನೆ ಶಾಂತಿಯುತವಾಗಿತ್ತು, ಈ ಪ್ರದೇಶದಲ್ಲಿ ಯಾವುದೇ ಉದ್ವಿಗ್ನತೆ ಇಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಎಡ ಪ್ರಜಾಸತ್ತಾತ್ಮಕ ರಂಗವು ಆ ಒಂದು ದಿನದ ನಂತರ ಮತ್ತೊಂದು ಪ್ರತಿಭಟನಾ ಮೆರವಣಿಗೆ ನಡೆಸಲಿದೆ ಎಂದು ಅವರು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...