Homeಮುಖಪುಟಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

- Advertisement -
- Advertisement -

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು ಬುಧವಾರ (ಡಿ.17) ನಿರ್ಧರಿಸಿದ್ದಾರೆ.

ವರದಿಗಳ ಪ್ರಕಾರ, ವಿರೋಧ ಪಕ್ಷಗಳ ಸಂಸದರು ಮಸೂದೆಯ ಚರ್ಚೆಗೆ ಹಾಜರಾಗಲಿದ್ದಾರೆ. ಆದರೆ, ಅಂಗೀಕಾರದ ಸಮಯದಲ್ಲಿ ಸಭಾತ್ಯಾಗ ಮಾಡಲಿದ್ದಾರೆ. ಬುಧವಾರ ನಡೆದ ಇಂಡಿಯಾದ ಒಕ್ಕೂಟದ ನಾಯಕರ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಮಮತಾ ಬ್ಯಾನರ್ಜಿ ಅವರ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಹೊರತುಪಡಿಸಿ, ಇಂಡಿಯಾದ ಮೈತ್ರಿಕೂಟದ ಎಲ್ಲಾ ಪಕ್ಷಗಳ ಪ್ರತಿನಿಧಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.

ಬಿಗಿಯಾಗಿ ನಿಯಂತ್ರಿಸಲ್ಪಡುವ ನಾಗರಿಕ ಪರಮಾಣು ವಲಯವನ್ನು ಖಾಸಗಿ ಭಾಗವಹಿಸುವಿಕೆಗೆ ಮುಕ್ತಗೊಳಿಸಲು ಅವಕಾಶ ನೀಡುವ ಸಸ್ಟೈನೇಬಲ್ ಹಾರ್ನೆಸ್ಸಿಂಗ್ ಅಂಡ್ ಅಡ್ವಾನ್ಸ್‌ಮೆಂಟ್ ಆಫ್ ನ್ಯೂಕ್ಲಿಯರ್ ಎನರ್ಜಿ ಫಾರ್ ಟ್ರಾನ್ಸ್‌ಫಾರ್ಮಿಂಗ್ ಇಂಡಿಯಾ (ಎಸ್‌ಹೆಚ್‌ಎಎನ್‌ಟಿಐ-ಶಾಂತಿ) ಮಸೂದೆಯ ಚರ್ಚೆಯಲ್ಲೂ ಭಾಗವಹಿಸಿ, ತಮ್ಮ ಭಿನ್ನಾಭಿಪ್ರಾಯ ವ್ಯಕ್ತಪಡಿಸಲು ವಿರೋಧ ಪಕ್ಷಗಳು ತೀರ್ಮಾನಿಸಿವೆ.

ಈ ಮಸೂದೆಗಳು ದೂರಗಾಮಿ ಪರಿಣಾಮಗಳನ್ನು ಬೀರಬಹುದು, ಗ್ರಾಮೀಣ ಜೀವನೋಪಾಯವನ್ನು ದುರ್ಬಲಗೊಳಿಸುವ ಮತ್ತು ಕಾರ್ಯತಂತ್ರದ ವಲಯಗಳನ್ನು ಕಾರ್ಪೊರೇಟ್ ಹಿತಾಸಕ್ತಿಗಳಿಗೆ ಹಸ್ತಾಂತರಿಸುವ ಸಾಧ್ಯತೆ ಇದೆ ಎಂದು ವಿರೋಧ ಪಕ್ಷಗಳ ನಾಯಕರು ಎಚ್ಚರಿಸಿದ್ದಾರೆ.

ಮಂಗಳವಾರ ಸರ್ಕಾರ ವಿಬಿ–ಜಿ ರಾಮ್ ಜಿ ಮಸೂದೆಯನ್ನು ಲೋಕಸಭೆಯಲ್ಲಿ ಮಂಡಿಸಿದ್ದು, ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ವ್ಯಕ್ತಪಡಿಸಿವೆ.

ಕೇಂದ್ರವು ಹಕ್ಕು ಆಧಾರಿತ ಕಲ್ಯಾಣ ಯೋಜನೆಯನ್ನು ರದ್ದುಗೊಳಿಸುತ್ತಿದೆ ಮತ್ತು ಮಹಾತ್ಮ ಗಾಂಧಿಯವರ ಪರಂಪರೆಯನ್ನು ದುರ್ಬಲಗೊಳಿಸುತ್ತಿದೆ ಎಂದು ಹಲವಾರು ಸಂಸದರು ಆರೋಪಿಸಿದ್ದಾರೆ. ಎರಡು ದಶಕಗಳಷ್ಟು ಹಳೆಯದಾದ ನರೇಗಾ (ಎಂಜಿಎನ್‌ಆರ್‌ಇಜಿಎ) ಕಾಯ್ದೆಯನ್ನು ಬದಲಿಸಲು ಪ್ರಯತ್ನಿಸುವ ಮಸೂದೆಯನ್ನು ಸ್ಥಾಯಿ ಸಮಿತಿಗೆ ಕಳಿಸಬೇಕೆಂದು ವಿಪಕ್ಷ ಸಂಸದರು ಒತ್ತಾಯಿಸಿದ್ದಾರೆ.

ವಿಪಕ್ಷಗಳ ತಂಡದ ನೇತೃತ್ವದ ವಹಿಸಿದ್ದ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ಮಾತನಾಡಿ, ಪ್ರಸ್ತಾವಿತ ಕಾನೂನು ಉದ್ಯೋಗದ ಕಾನೂನು ಖಾತರಿಯನ್ನು ದುರ್ಬಲಗೊಳಿಸುತ್ತದೆ ಮತ್ತು ರಾಜ್ಯಗಳ ಮೇಲೆ ಹೆಚ್ಚಿನ ಆರ್ಥಿಕ ಹೊರೆಯನ್ನು ಹೇರುತ್ತದೆ ಎಂದು ಹೇಳಿದ್ದಾರೆ.

ಈ ಮಸೂದೆಯು ಕೇಂದ್ರಕ್ಕೆ ನಿಧಿ ಹಂಚಿಕೆಯನ್ನು ಮೊದಲೇ ನಿರ್ಧರಿಸುವ ಅಧಿಕಾರವನ್ನು ನೀಡುತ್ತದೆ. ಇದು ಯೋಜನೆಯ ಬೇಡಿಕೆ ಆಧಾರಿತ ಸ್ವರೂಪವನ್ನು ಪರಿಣಾಮಕಾರಿಯಾಗಿ ಕೊನೆಗೊಳಿಸುತ್ತದೆ ಮತ್ತು 73ನೇ ಸಾಂವಿಧಾನಿಕ ತಿದ್ದುಪಡಿಯ ಉದ್ದೇಶವನ್ನು ಉಲ್ಲಂಘಿಸುತ್ತದೆ ಎಂದು ಪ್ರಿಯಾಂಕಾ ಗಾಂಧಿ ತಿಳಿಸಿದ್ದಾರೆ.

ಟಿಎಂಸಿ ಮತ್ತು ಡಿಎಂಕೆ ಸಂಸದರೂ ಕೂಡ ಪ್ರಿಯಾಂಕಾ ಗಾಂಧಿಯ ಹೇಳಿಕೆಗೆ ಧನಿಗೂಡಿಸಿದ್ದಾರೆ. ಯೋಜನೆಯಿಂದ ಮಹಾತ್ಮ ಗಾಂಧಿಯ ಹೆಸರು ಕೈಬಿಟ್ಟಿರುವುದಕ್ಕೆ ಮತ್ತು ಮತ್ತು ಬೇಡಿಕೆ-ಚಾಲಿತ ವ್ಯವಸ್ಥೆಯಿಂದ ಪೂರೈಕೆ-ಚಾಲಿತ ವ್ಯವಸ್ಥೆಗೆ ಬದಲಾಯಿಸಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಸಭಾತ್ಯಾಗ ಮಾಡಿದ ನಂತರ, ಪ್ರಿಯಾಂಕಾ ಗಾಂಧಿ, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಮತ್ತು ಡಿಎಂಕೆ ಸಂಸದ ಟಿ.ಆರ್. ಬಾಲು ಸೇರಿದಂತೆ ವಿರೋಧ ಪಕ್ಷದ ನಾಯಕರು ಸಂಸತ್ತಿನ ಸಂಕೀರ್ಣದಲ್ಲಿರುವ ಮಹಾತ್ಮ ಗಾಂಧಿಯವರ ಪ್ರತಿಮೆಯ ಬಳಿ ಪ್ರತಿಭಟನೆ ನಡೆಸಿದ್ದರು. “ಮಹಾತ್ಮ ಗಾಂಧಿಯವರಿಗೆ ಮಾಡುವ ಈ ಅವಮಾನವನ್ನು ದೇಶ ಸಹಿಸುವುದಿಲ್ಲ” ಎಂಬ ಘೋಷಣೆಗಳನ್ನು ಕೂಗಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...