Homeಮುಖಪುಟಅಣು ಶಕ್ತಿಯ ಖಾಸಗೀಕರಣ : 'ಶಾಂತಿ' ಮಸೂದೆಗೆ ಲೋಕಸಭೆ ಅಸ್ತು

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಖಾಸಗಿ ಕಂಪನಿಯೊಂದು ಪರಮಾಣು ಇಂಧನ ವಲಯ ಪ್ರವೇಶಿಸುವ ಯೋಜನೆ ಘೋಷಿಸಿದ ಬೆನ್ನಲ್ಲೇ ಮಸೂದೆ ಮಂಡನೆ- ಕಾಂಗ್ರೆಸ್ ಸಂಸದ ಮನೀಶ್ ತಿವಾರಿ

- Advertisement -
- Advertisement -

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, ‘ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು.

ವಿಪಕ್ಷಗಳ ಸದಸ್ಯರು ಮಸೂದೆಗೆ ತೀವ್ರ ವಿರೋಧ ವ್ಯಕ್ತಪಡಿಸಿದರು. ಭಾರತೀಯ ಪರಮಾಣು ಇಂಧನ ವಲಯದಲ್ಲಿ ಖಾಸಗಿ ಕಂಪನಿಗಳ ಪ್ರವೇಶವು ಅವುಗಳ ಲಾಭಗಳಿಕೆಗೆ ಮಾತ್ರ ಸಹಾಯ ಮಾಡುತ್ತದೆ. ಹೆಚ್ಚಿನ ವಿದ್ಯುತ್ ಬೆಲೆಗಳ ಹೊರೆಯನ್ನು ಹೊರುತ್ತಿರುವ ಸಾಮಾನ್ಯ ಜನರಿಗೆ ಇದರಿಂದ ಯಾವುದೇ ಉಪಯೋಗ ಇಲ್ಲ ಎಂದು ಹೆಚ್ಚಿನ ಸಂಸದರು ಹೇಳಿದರು.

ಮಸೂದೆಯನ್ನು ಜಂಟಿ ಸಂಸದೀಯ ಸಮಿತಿ (ಜೆಪಿಸಿ) ಅಥವಾ ಸ್ಥಾಯಿ ಸಮಿತಿಗೆ ಕಳುಹಿಸಬೇಕೆಂಬ ಬೇಡಿಕೆಯನ್ನು ಪುರಸ್ಕರಿಸದ ಕಾರಣ, ಮಸೂದೆ ಅಂಗೀಕಾರವಾದಾಗ ಇಂಡಿಯಾ ಒಕ್ಕೂಟದ ಸಂಸದರು ಸಭಾತ್ಯಾಗ ಮಾಡಿದರು.

ಕಾಂಗ್ರೆಸ್ ಸಂಸದ ಮನೀಶ್ ತಿವಾರಿ ಮಾತನಾಡಿ, ಶಾಂತಿ ಮಸೂದೆಯು ಅಸ್ತಿತ್ವದಲ್ಲಿರುವ ಎರಡು ಪ್ರಗತಿಪರ ಶಾಸನಗಳನ್ನು ಬದಲಾಯಿಸುತ್ತಿದೆ ಎಂದು ವಿವರಿಸುತ್ತಾ ಮಸೂದೆಯ ವಿರೋಧಕ್ಕೆ ಮುಕ್ತವಾಗಿ ಧ್ವನಿಗೂಡಿಸಿದರು.

ಸ್ವಾವಲಂಬನೆಯ ಕಡೆಗೆ ಭಾರತದ ಪರಮಾಣು ಕಾರ್ಯಕ್ರಮವನ್ನು ಮೊದಲು ಪರಿಚಯಿಸಿದ್ದು ಜವಾಹರಲಾಲ್ ನೆಹರು ಎಂದು ಅವರು ನೆನಪಿಸಿಕೊಂಡರು.

ಪರಮಾಣು ಅಪಘಾತಗಳಿಗೆ ಪೂರೈಕೆದಾರರನ್ನು ಹೊಣೆಗಾರರನ್ನಾಗಿ ಮಾಡುವ ಪರಮಾಣು ಹೊಣೆಗಾರಿಕೆ ಆಡಳಿತದ ಕುರಿತು 2010ರ ಒಪ್ಪಂದವನ್ನು ಮುರಿಯುವ ಮೂಲಕ ಬಿಜೆಪಿ ನೇತೃತ್ವದ ಸರ್ಕಾರವು ಭಾರತದ ಇಂಧನ ಸ್ವಾತಂತ್ರ್ಯ ಮತ್ತು ಶುದ್ಧ ಇಂಧನ ಗುರಿಗಳನ್ನು ದುರ್ಬಲಗೊಳಿಸುತ್ತಿದೆ ಎಂದು ಹೇಳಿದರು.

“ಪರಮಾಣು ಶಕ್ತಿ ನಿಯಂತ್ರಕದ ಪಾತ್ರದ ಬಗ್ಗೆ ಸ್ಪಷ್ಟತೆಯನ್ನು ನೀಡದಿದ್ದಕ್ಕಾಗಿ” ಅವರು ಕರಡು ಮಸೂದೆಯ ಪ್ರತಿಯನ್ನು ಹರಿದು ಹಾಕಿದರು.

ಪರಮಾಣು ಇಂಧನ ವಲಯದಲ್ಲಿ ವಿದೇಶಿ ಕಂಪನಿಗಳ ಪ್ರವೇಶವನ್ನು ತಿವಾರಿ ವಿರೋಧಿಸದಿದ್ದರೂ, ಪೂರೈಕೆದಾರರ ಹೊಣೆಗಾರಿಕೆಯನ್ನು ನಿಗದಿಪಡಿಸಬೇಕು ಮತ್ತು ಮುಖ್ಯವಾಗಿ, ಪರಮಾಣು ಇಂಧನ ನಿಯಂತ್ರಣ ಮಂಡಳಿಯ ಸ್ವಾತಂತ್ರ್ಯವನ್ನು ಖಚಿತಪಡಿಸಿಕೊಳ್ಳಬೇಕು ಎಂದು ಅವರು ಆಗ್ರಹಿಸಿದರು. ಈ ಎರಡೂ ಕಳವಳಗಳನ್ನು ಮಸೂದೆ ಪರಿಹರಿಸಿಲ್ಲ ಎಂದು ತಿವಾರಿ ಅಸಮಾಧಾನ ವ್ಯಕ್ತಪಡಿಸಿದರು.

“ನಾವು ವಿದೇಶಿ ಪೂರೈಕೆದಾರರ ಮೇಲೆ ಅವಲಂಬಿತರಾಗಿರುವುದರಿಂದ ಪರಮಾಣು ಅಪಘಾತ ಸಂಭವಿಸಿದರೆ… ಪೂರೈಕೆದಾರರು ಹೊಣೆಗಾರರಾಗಬೇಕಲ್ಲವೇ?” ಎಂದು ಅವರು ಕೇಳಿದರು.

ಮಸೂದೆಯಲ್ಲಿ ನಿಗದಿಪಡಿಸಿದ ಹೊಣೆಗಾರಿಕೆಯ ಮೇಲಿನ 410 ಮಿಲಿಯನ್ ಡಾಲರ್ ಮಿತಿಯನ್ನು ಅವರು ಟೀಕಿಸಿದರು. ಭೋಪಾಲ್ ಅನಿಲ ದುರಂತದ ಸಮಯದಲ್ಲಿ ಮಿತಿ 470 ಮಿಲಿಯನ್ ಡಾಲರ್ ಆಗಿತ್ತು ಎಂದ ಅವರು, 10,000 ಕೋಟಿ ರೂ.ಗಳ ಮಿತಿಗೆ ಒತ್ತಾಯಿಸಿದರು.

ಸರ್ಕಾರ ನಡೆಸುವ ಸಂಸ್ಥೆಗಳಿಗೆ ವಿಮಾ ರಕ್ಷಣೆಯಿಂದ ವಿನಾಯಿತಿ ನೀಡಲಾಗುವುದು ಎಂಬ ಷರತ್ತನ್ನು ಅವರು ವಿರೋಧಿಸಿದರು. ದುರಂತದ ಸಂದರ್ಭದಲ್ಲಿ ಪರಿಹಾರವನ್ನು ಸಂಪೂರ್ಣವಾಗಿ ಸರ್ಕಾರವೇ ಭರಿಸುತ್ತದೆಯೇ ಎಂದು ಕೇಳಿದರು. ಮಸೂದೆಯಲ್ಲಿ ಪರಮಾಣು ತ್ಯಾಜ್ಯ ವಿಲೇವಾರಿಗೆ ಬಲವಾದ ಕಾರ್ಯವಿಧಾನದ ಕೊರತೆಯ ಬಗ್ಗೆಯೂ ಅವರು ಕಳವಳ ವ್ಯಕ್ತಪಡಿಸಿದರು.

“ಮನಮೋಹನ್ ಸಿಂಗ್ ತಾರತಮ್ಯ ನೀತಿಯನ್ನು ಮುರಿಯಲು ಪ್ರಯತ್ನಿಸಿದ್ದರು. ನೀವು (ಬಿಜೆಪಿ) ಆ ಕಾರ್ಯಕ್ರಮವನ್ನು ಹಳಿತಪ್ಪಿಸಲು ಪ್ರಯತ್ನಿಸಿದ್ದೀರಿ” ಎಂದು ತಿವಾರಿ ಹೇಳಿದರು. ಮಸೂದೆಯನ್ನು ಜೆಪಿಸಿ ಅಥವಾ ಸ್ಥಾಯಿ ಸಮಿತಿಗೆ ಕಳುಹಿಸಬೇಕು ಎಂದು ಒತ್ತಾಯಿಸಿದರು.

“ಖಾಸಗಿ ಸಮೂಹವೊಂದು ಭಾರತದಲ್ಲಿ ಪರಮಾಣು ಇಂಧನ ವಲಯವನ್ನು ಪ್ರವೇಶಿಸುವ ಯೋಜನೆಯನ್ನು ಘೋಷಿಸಿದ ಒಂದು ತಿಂಗಳ ನಂತರ ಈ ಮಸೂದೆಯನ್ನು ಅಂಗೀಕರಿಸಲಾಗಿದೆ ಎಂದು ತಿವಾರಿ ಆರೋಪಿಸಿದರು. ಇದು ಕಾಕತಾಳೀಯವೇ? ಎಂದು ಪ್ರಶ್ನಿಸಿದರು. ಇದಕ್ಕೆ ಆಡಳಿತ ಪಕ್ಷದವರು ಆಕ್ಷೇಪ ವ್ಯಕ್ತಪಡಿಸಿದರು. ಮಸೂದೆ ಮಂಡಿಸಿದ ಕೇಂದ್ರ ಸಚಿವ ಜಿತೇಂದ್ರ ಸಿಂಗ್, ಈ ಆರೋಪವನ್ನು ‘ಆಧಾರರಹಿತ ಮತ್ತು ರಾಜಕೀಯ ಪ್ರೇರಿತ’ ಎಂದು ಹೇಳಿದರು.

ತೃಣಮೂಲ ಕಾಂಗ್ರೆಸ್ ಸಂಸದ ಸೌಗತ ರೇ ಅವರು ಭಾರತದ ಪರಮಾಣು ಇಂಧನ ಕ್ಷೇತ್ರದಲ್ಲಿ ಪ್ರಮುಖ ಖಾಸಗಿ ಕಂಪನಿಗಳ ಪ್ರವೇಶವನ್ನು ವಿರೋಧಿಸಿದರು ಮತ್ತು ಹೊಣೆಗಾರಿಕೆ ಮಿತಿಯನ್ನು ಹೆಚ್ಚಿಸಬೇಕೆಂದು ಒತ್ತಾಯಿಸಿದರು.

ಸಿಪಿಐ(ಎಂಎಲ್) ಸಂಸದ ಸುದಾಮ ಪ್ರಸಾದ್, ಶಾಂತಿ ಮಸೂದೆ “ಸಾರ್ವಜನಿಕ ವಿರೋಧಿ, ಪರಿಸರ ವಿರೋಧಿ” ಮತ್ತು “ಖಾಸಗಿ ಸಂಸ್ಥೆಗಳಿಗೆ ಲಾಭ ಮಾಡಿಕೊಡುವ ಪ್ರಯತ್ತ ಎಂದರು. ಸರ್ಕಾರ ಭಾರತದ ಇಂಧನ ಅವಶ್ಯಕತೆಗಳನ್ನು ಪೂರೈಸಲು ಅಸಮರ್ಥವಾಗಿದೆಯೇ? ಎಂದು ಪ್ರಶ್ನಿಸಿದರು. ಇಂತಹ ಸೂಕ್ಷ್ಮ ಇಂಧನ ಮೂಲವನ್ನು ಖಾಸಗಿ ವಲಯಕ್ಕೆ ಹಸ್ತಾಂತರಿಸುವುದು ‘ಏಕಸ್ವಾಮ್ಯ’ಕ್ಕೆ ಕಾರಣವಾಗಬಹುದು ಎಂದು ಆತಂಕ ವ್ಯಕ್ತಪಡಿಸಿದರು.

ಬಿಜು ಜನತಾದಳದ (ಬಿಜೆಡಿ) ಸಂಸದ ರವೀಂದ್ರ ನಾರಾಯಣ್ ಬೆಹೆರಾ ಮಸೂದೆಯನ್ನು ಬೆಂಬಲಿಸಿದರು. “ಬಲವಾದ ಸಂಶೋಧನೆ ಮತ್ತು ಅಭಿವೃದ್ಧಿಯೊಂದಿಗೆ, ಭಾರತವು ಪರಮಾಣು ತಂತ್ರಜ್ಞಾನದಲ್ಲಿ ಸ್ವಾವಲಂಬನೆಯನ್ನು ಸಾಧಿಸಲು ಸಾಧ್ಯವಾಗಿದೆ ಮತ್ತು ಪರಮಾಣು ಕಾರ್ಯಕ್ರಮವನ್ನು ಜವಾಬ್ದಾರಿಯುತ ರೀತಿಯಲ್ಲಿ ನಿರ್ವಹಿಸುತ್ತಿದೆ” ಎಂದು ಅವರು ಹೇಳಿದರು. ಇಂಧನ ಕ್ಷೇತ್ರದ ವೈವಿಧ್ಯೀಕರಣವು ಗ್ರಾಹಕರಿಗೆ ವಿದ್ಯುತ್ ಬೆಲೆಗಳನ್ನು ಕಡಿಮೆ ಮಾಡಲು ಕಾರಣವಾಗಬಹುದು ಎಂದರು. ಈ ಮಸೂದೆ ಖಂಡಿತವಾಗಿಯೂ ನವ ಭಾರತ ನಿರ್ಮಾಣಕ್ಕೆ ಸಹಾಯ ಮಾಡುತ್ತದೆ ಎಂದು ಹೇಳಿದರು.

ಸಮಾಜವಾದಿ ಪಕ್ಷದ ಸಂಸದರಾದ ಆದಿತ್ಯ ಯಾದವ್ ಮತ್ತು ಪುಷ್ಪೇಂದ್ರ ಸರೋಜ್ ಅವರು ಮಸೂದೆಯು ಸರಿಯಾದ ತ್ಯಾಜ್ಯ ವಿಲೇವಾರಿಗೆ ಬದ್ಧವಾಗಿಲ್ಲ ಎಂಬಂತಹ ವಿವಿಧ ಆಧಾರದ ಮೇಲೆ ಮಸೂದೆಯನ್ನು ವಿರೋಧಿಸಿದರು ಮತ್ತು 2008ರಲ್ಲಿ ಬಿಜೆಪಿ ವಿರೋಧ ಪಕ್ಷದಲ್ಲಿದ್ದಾಗ ಭಾರತ-ಯುಎಸ್ ಪರಮಾಣು ಒಪ್ಪಂದವನ್ನು ವಿರೋಧಿಸಿತ್ತು ಎಂದು ಗಮನಸೆಳೆದರು.

ಕಾಂಗ್ರೆಸ್ ಸಂಸದ ಶಶಿ ತರೂರ್ ಅವರು ಕೇಂದ್ರ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದರು. ಈ ಮಸೂದೆ ‘ನ್ಯೂಕ್ಲಿಯರ್ ಅಲ್ಲ, ಅನ್‌ಕ್ಲಿಯರ್’ ಮತ್ತು ಅಪಾಯಕಾರಿ ಮಸೂದೆ ಎಂದರು. ಮಸೂದೆಯನ್ನು ಸ್ಥಾಯಿ ಸಮಿತಿ ಅಥವಾ ಜೆಪಿಸಿಗೆ ಕಳುಹಿಸಬೇಕೆಂದು ಆಗ್ರಹಿಸಿದರು.

ಮಸೂದೆ ಮಂಡಿಸಿದ ವಿಜ್ಞಾನ ಮತ್ತು ತಂತ್ರಜ್ಞಾನ ರಾಜ್ಯ ಸಚಿವ ಜಿತೇಂದ್ರ ಸಿಂಗ್, ಹೊಸ ಮಸೂದೆಯು 1962ರ ಪರಮಾಣು ಶಕ್ತಿ ಕಾಯ್ದೆ ಮತ್ತು 2010ರ ಪರಮಾಣು ಹಾನಿಗೆ ನಾಗರಿಕ ಹೊಣೆಗಾರಿಕೆ ಕಾಯ್ದೆಯನ್ನು ರದ್ದುಗೊಳಿಸುತ್ತದೆ. ಅವುಗಳನ್ನು ‘ಭಾರತದ ಪ್ರಸ್ತುತ ಮತ್ತು ಭವಿಷ್ಯದ ಇಂಧನ ಅವಶ್ಯಕತೆಗಳಿಗೆ ಹೊಂದಿಕೆಯಾಗುವ ಒಂದೇ, ಸಮಗ್ರ ಕಾನೂನೊಂದಿಗೆ’ ಬದಲಾಯಿಸಲು ಪ್ರಯತ್ನಿಸುತ್ತದೆ ಎಂದು ಹೇಳಿದರು.

ಮಸೂದೆಯು “ಪರಮಾಣು ಹಾನಿಗೆ ಪ್ರಾಯೋಗಿಕ ನಾಗರಿಕ ಹೊಣೆಗಾರಿಕೆ ಆಡಳಿತವನ್ನು ಮತ್ತು ಪರಮಾಣು ಶಕ್ತಿ ನಿಯಂತ್ರಣ ಮಂಡಳಿಗೆ ಶಾಸನಬದ್ಧ ಸ್ಥಾನಮಾನವನ್ನು ನೀಡಲು” ಅನುಮತಿಸುತ್ತದೆ ಎಂದು ಪ್ರತಿಪಾದಿಸಿದರು.

ಶಾಂತಿ ಮಸೂದೆಯು ಖಾಸಗಿ ಕಂಪನಿ ಅಥವಾ ಸರ್ಕಾರಿ ಉದ್ಯಮ ಅಥವಾ ಜಂಟಿ ಉದ್ಯಮಕ್ಕೆ ಪರಮಾಣು ವಿದ್ಯುತ್ ಯೋಜನೆ ಅಥವಾ ರಿಯಾಕ್ಟರ್ ನಿರ್ಮಿಸಲು, ಹೊಂದಲು, ನಿರ್ವಹಿಸಲು ಅಥವಾ ರದ್ದುಗೊಳಿಸಲು, ಸಾಗಿಸಬಹುದಾದ ಯುರೇನಿಯಂ -235 ರ ಪರಿವರ್ತನೆ, ಸಂಸ್ಕರಣೆ ಮತ್ತು ಪುಷ್ಟೀಕರಣ ಸೇರಿದಂತೆ ಪರಮಾಣು ಇಂಧನ ತಯಾರಿಕೆ, ಪರಮಾಣು ಇಂಧನದ ಆಮದು, ರಫ್ತು, ಸ್ವಾಧೀನ ಅಥವಾ ಸ್ವಾಧೀನಕ್ಕಾಗಿ ಪರವಾನಗಿಗಳನ್ನು ನೀಡಲು ಕೇಂದ್ರಕ್ಕೆ ಅವಕಾಶ ನೀಡುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...

ಹನೂರು ಶೂಟೌಟ್ ಪ್ರಕರಣ: ಮೂವರು ಅರಣ್ಯ ಸಿಬ್ಬಂದಿಗೆ ನಿರೀಕ್ಷಣಾ ಜಾಮೀನು.!

ಕಾವೇರಿ ವನ್ಯಜೀವಿ ಅಭಯಾರಣ್ಯದ ಹನೂರು ವ್ಯಾಪ್ತಿಯಲ್ಲಿ ಮೂವರು ಮೃತಪಟ್ಟಿದ್ದ ವಿವಾದಾತ್ಮಕ ಗುಂಡಿನ ದಾಳಿ ಪ್ರಕರಣಕ್ಕೆ ಇದೀಗ ಕಾನೂನು ತಿರುವು ಸಿಕ್ಕಿದೆ. ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಮೂವರು ಅರಣ್ಯ ಸಿಬ್ಬಂದಿಗೆ ಕೊಳ್ಳೇಗಾಲದ ಮೊದಲ ಹೆಚ್ಚುವರಿ...

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...