Homeಮುಖಪುಟಅಣು ಶಕ್ತಿಯ ಖಾಸಗೀಕರಣ : 'ಶಾಂತಿ' ಮಸೂದೆಗೆ ಲೋಕಸಭೆ ಅಸ್ತು

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಖಾಸಗಿ ಕಂಪನಿಯೊಂದು ಪರಮಾಣು ಇಂಧನ ವಲಯ ಪ್ರವೇಶಿಸುವ ಯೋಜನೆ ಘೋಷಿಸಿದ ಬೆನ್ನಲ್ಲೇ ಮಸೂದೆ ಮಂಡನೆ- ಕಾಂಗ್ರೆಸ್ ಸಂಸದ ಮನೀಶ್ ತಿವಾರಿ

- Advertisement -
- Advertisement -

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, ‘ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು.

ವಿಪಕ್ಷಗಳ ಸದಸ್ಯರು ಮಸೂದೆಗೆ ತೀವ್ರ ವಿರೋಧ ವ್ಯಕ್ತಪಡಿಸಿದರು. ಭಾರತೀಯ ಪರಮಾಣು ಇಂಧನ ವಲಯದಲ್ಲಿ ಖಾಸಗಿ ಕಂಪನಿಗಳ ಪ್ರವೇಶವು ಅವುಗಳ ಲಾಭಗಳಿಕೆಗೆ ಮಾತ್ರ ಸಹಾಯ ಮಾಡುತ್ತದೆ. ಹೆಚ್ಚಿನ ವಿದ್ಯುತ್ ಬೆಲೆಗಳ ಹೊರೆಯನ್ನು ಹೊರುತ್ತಿರುವ ಸಾಮಾನ್ಯ ಜನರಿಗೆ ಇದರಿಂದ ಯಾವುದೇ ಉಪಯೋಗ ಇಲ್ಲ ಎಂದು ಹೆಚ್ಚಿನ ಸಂಸದರು ಹೇಳಿದರು.

ಮಸೂದೆಯನ್ನು ಜಂಟಿ ಸಂಸದೀಯ ಸಮಿತಿ (ಜೆಪಿಸಿ) ಅಥವಾ ಸ್ಥಾಯಿ ಸಮಿತಿಗೆ ಕಳುಹಿಸಬೇಕೆಂಬ ಬೇಡಿಕೆಯನ್ನು ಪುರಸ್ಕರಿಸದ ಕಾರಣ, ಮಸೂದೆ ಅಂಗೀಕಾರವಾದಾಗ ಇಂಡಿಯಾ ಒಕ್ಕೂಟದ ಸಂಸದರು ಸಭಾತ್ಯಾಗ ಮಾಡಿದರು.

ಕಾಂಗ್ರೆಸ್ ಸಂಸದ ಮನೀಶ್ ತಿವಾರಿ ಮಾತನಾಡಿ, ಶಾಂತಿ ಮಸೂದೆಯು ಅಸ್ತಿತ್ವದಲ್ಲಿರುವ ಎರಡು ಪ್ರಗತಿಪರ ಶಾಸನಗಳನ್ನು ಬದಲಾಯಿಸುತ್ತಿದೆ ಎಂದು ವಿವರಿಸುತ್ತಾ ಮಸೂದೆಯ ವಿರೋಧಕ್ಕೆ ಮುಕ್ತವಾಗಿ ಧ್ವನಿಗೂಡಿಸಿದರು.

ಸ್ವಾವಲಂಬನೆಯ ಕಡೆಗೆ ಭಾರತದ ಪರಮಾಣು ಕಾರ್ಯಕ್ರಮವನ್ನು ಮೊದಲು ಪರಿಚಯಿಸಿದ್ದು ಜವಾಹರಲಾಲ್ ನೆಹರು ಎಂದು ಅವರು ನೆನಪಿಸಿಕೊಂಡರು.

ಪರಮಾಣು ಅಪಘಾತಗಳಿಗೆ ಪೂರೈಕೆದಾರರನ್ನು ಹೊಣೆಗಾರರನ್ನಾಗಿ ಮಾಡುವ ಪರಮಾಣು ಹೊಣೆಗಾರಿಕೆ ಆಡಳಿತದ ಕುರಿತು 2010ರ ಒಪ್ಪಂದವನ್ನು ಮುರಿಯುವ ಮೂಲಕ ಬಿಜೆಪಿ ನೇತೃತ್ವದ ಸರ್ಕಾರವು ಭಾರತದ ಇಂಧನ ಸ್ವಾತಂತ್ರ್ಯ ಮತ್ತು ಶುದ್ಧ ಇಂಧನ ಗುರಿಗಳನ್ನು ದುರ್ಬಲಗೊಳಿಸುತ್ತಿದೆ ಎಂದು ಹೇಳಿದರು.

“ಪರಮಾಣು ಶಕ್ತಿ ನಿಯಂತ್ರಕದ ಪಾತ್ರದ ಬಗ್ಗೆ ಸ್ಪಷ್ಟತೆಯನ್ನು ನೀಡದಿದ್ದಕ್ಕಾಗಿ” ಅವರು ಕರಡು ಮಸೂದೆಯ ಪ್ರತಿಯನ್ನು ಹರಿದು ಹಾಕಿದರು.

ಪರಮಾಣು ಇಂಧನ ವಲಯದಲ್ಲಿ ವಿದೇಶಿ ಕಂಪನಿಗಳ ಪ್ರವೇಶವನ್ನು ತಿವಾರಿ ವಿರೋಧಿಸದಿದ್ದರೂ, ಪೂರೈಕೆದಾರರ ಹೊಣೆಗಾರಿಕೆಯನ್ನು ನಿಗದಿಪಡಿಸಬೇಕು ಮತ್ತು ಮುಖ್ಯವಾಗಿ, ಪರಮಾಣು ಇಂಧನ ನಿಯಂತ್ರಣ ಮಂಡಳಿಯ ಸ್ವಾತಂತ್ರ್ಯವನ್ನು ಖಚಿತಪಡಿಸಿಕೊಳ್ಳಬೇಕು ಎಂದು ಅವರು ಆಗ್ರಹಿಸಿದರು. ಈ ಎರಡೂ ಕಳವಳಗಳನ್ನು ಮಸೂದೆ ಪರಿಹರಿಸಿಲ್ಲ ಎಂದು ತಿವಾರಿ ಅಸಮಾಧಾನ ವ್ಯಕ್ತಪಡಿಸಿದರು.

“ನಾವು ವಿದೇಶಿ ಪೂರೈಕೆದಾರರ ಮೇಲೆ ಅವಲಂಬಿತರಾಗಿರುವುದರಿಂದ ಪರಮಾಣು ಅಪಘಾತ ಸಂಭವಿಸಿದರೆ… ಪೂರೈಕೆದಾರರು ಹೊಣೆಗಾರರಾಗಬೇಕಲ್ಲವೇ?” ಎಂದು ಅವರು ಕೇಳಿದರು.

ಮಸೂದೆಯಲ್ಲಿ ನಿಗದಿಪಡಿಸಿದ ಹೊಣೆಗಾರಿಕೆಯ ಮೇಲಿನ 410 ಮಿಲಿಯನ್ ಡಾಲರ್ ಮಿತಿಯನ್ನು ಅವರು ಟೀಕಿಸಿದರು. ಭೋಪಾಲ್ ಅನಿಲ ದುರಂತದ ಸಮಯದಲ್ಲಿ ಮಿತಿ 470 ಮಿಲಿಯನ್ ಡಾಲರ್ ಆಗಿತ್ತು ಎಂದ ಅವರು, 10,000 ಕೋಟಿ ರೂ.ಗಳ ಮಿತಿಗೆ ಒತ್ತಾಯಿಸಿದರು.

ಸರ್ಕಾರ ನಡೆಸುವ ಸಂಸ್ಥೆಗಳಿಗೆ ವಿಮಾ ರಕ್ಷಣೆಯಿಂದ ವಿನಾಯಿತಿ ನೀಡಲಾಗುವುದು ಎಂಬ ಷರತ್ತನ್ನು ಅವರು ವಿರೋಧಿಸಿದರು. ದುರಂತದ ಸಂದರ್ಭದಲ್ಲಿ ಪರಿಹಾರವನ್ನು ಸಂಪೂರ್ಣವಾಗಿ ಸರ್ಕಾರವೇ ಭರಿಸುತ್ತದೆಯೇ ಎಂದು ಕೇಳಿದರು. ಮಸೂದೆಯಲ್ಲಿ ಪರಮಾಣು ತ್ಯಾಜ್ಯ ವಿಲೇವಾರಿಗೆ ಬಲವಾದ ಕಾರ್ಯವಿಧಾನದ ಕೊರತೆಯ ಬಗ್ಗೆಯೂ ಅವರು ಕಳವಳ ವ್ಯಕ್ತಪಡಿಸಿದರು.

“ಮನಮೋಹನ್ ಸಿಂಗ್ ತಾರತಮ್ಯ ನೀತಿಯನ್ನು ಮುರಿಯಲು ಪ್ರಯತ್ನಿಸಿದ್ದರು. ನೀವು (ಬಿಜೆಪಿ) ಆ ಕಾರ್ಯಕ್ರಮವನ್ನು ಹಳಿತಪ್ಪಿಸಲು ಪ್ರಯತ್ನಿಸಿದ್ದೀರಿ” ಎಂದು ತಿವಾರಿ ಹೇಳಿದರು. ಮಸೂದೆಯನ್ನು ಜೆಪಿಸಿ ಅಥವಾ ಸ್ಥಾಯಿ ಸಮಿತಿಗೆ ಕಳುಹಿಸಬೇಕು ಎಂದು ಒತ್ತಾಯಿಸಿದರು.

“ಖಾಸಗಿ ಸಮೂಹವೊಂದು ಭಾರತದಲ್ಲಿ ಪರಮಾಣು ಇಂಧನ ವಲಯವನ್ನು ಪ್ರವೇಶಿಸುವ ಯೋಜನೆಯನ್ನು ಘೋಷಿಸಿದ ಒಂದು ತಿಂಗಳ ನಂತರ ಈ ಮಸೂದೆಯನ್ನು ಅಂಗೀಕರಿಸಲಾಗಿದೆ ಎಂದು ತಿವಾರಿ ಆರೋಪಿಸಿದರು. ಇದು ಕಾಕತಾಳೀಯವೇ? ಎಂದು ಪ್ರಶ್ನಿಸಿದರು. ಇದಕ್ಕೆ ಆಡಳಿತ ಪಕ್ಷದವರು ಆಕ್ಷೇಪ ವ್ಯಕ್ತಪಡಿಸಿದರು. ಮಸೂದೆ ಮಂಡಿಸಿದ ಕೇಂದ್ರ ಸಚಿವ ಜಿತೇಂದ್ರ ಸಿಂಗ್, ಈ ಆರೋಪವನ್ನು ‘ಆಧಾರರಹಿತ ಮತ್ತು ರಾಜಕೀಯ ಪ್ರೇರಿತ’ ಎಂದು ಹೇಳಿದರು.

ತೃಣಮೂಲ ಕಾಂಗ್ರೆಸ್ ಸಂಸದ ಸೌಗತ ರೇ ಅವರು ಭಾರತದ ಪರಮಾಣು ಇಂಧನ ಕ್ಷೇತ್ರದಲ್ಲಿ ಪ್ರಮುಖ ಖಾಸಗಿ ಕಂಪನಿಗಳ ಪ್ರವೇಶವನ್ನು ವಿರೋಧಿಸಿದರು ಮತ್ತು ಹೊಣೆಗಾರಿಕೆ ಮಿತಿಯನ್ನು ಹೆಚ್ಚಿಸಬೇಕೆಂದು ಒತ್ತಾಯಿಸಿದರು.

ಸಿಪಿಐ(ಎಂಎಲ್) ಸಂಸದ ಸುದಾಮ ಪ್ರಸಾದ್, ಶಾಂತಿ ಮಸೂದೆ “ಸಾರ್ವಜನಿಕ ವಿರೋಧಿ, ಪರಿಸರ ವಿರೋಧಿ” ಮತ್ತು “ಖಾಸಗಿ ಸಂಸ್ಥೆಗಳಿಗೆ ಲಾಭ ಮಾಡಿಕೊಡುವ ಪ್ರಯತ್ತ ಎಂದರು. ಸರ್ಕಾರ ಭಾರತದ ಇಂಧನ ಅವಶ್ಯಕತೆಗಳನ್ನು ಪೂರೈಸಲು ಅಸಮರ್ಥವಾಗಿದೆಯೇ? ಎಂದು ಪ್ರಶ್ನಿಸಿದರು. ಇಂತಹ ಸೂಕ್ಷ್ಮ ಇಂಧನ ಮೂಲವನ್ನು ಖಾಸಗಿ ವಲಯಕ್ಕೆ ಹಸ್ತಾಂತರಿಸುವುದು ‘ಏಕಸ್ವಾಮ್ಯ’ಕ್ಕೆ ಕಾರಣವಾಗಬಹುದು ಎಂದು ಆತಂಕ ವ್ಯಕ್ತಪಡಿಸಿದರು.

ಬಿಜು ಜನತಾದಳದ (ಬಿಜೆಡಿ) ಸಂಸದ ರವೀಂದ್ರ ನಾರಾಯಣ್ ಬೆಹೆರಾ ಮಸೂದೆಯನ್ನು ಬೆಂಬಲಿಸಿದರು. “ಬಲವಾದ ಸಂಶೋಧನೆ ಮತ್ತು ಅಭಿವೃದ್ಧಿಯೊಂದಿಗೆ, ಭಾರತವು ಪರಮಾಣು ತಂತ್ರಜ್ಞಾನದಲ್ಲಿ ಸ್ವಾವಲಂಬನೆಯನ್ನು ಸಾಧಿಸಲು ಸಾಧ್ಯವಾಗಿದೆ ಮತ್ತು ಪರಮಾಣು ಕಾರ್ಯಕ್ರಮವನ್ನು ಜವಾಬ್ದಾರಿಯುತ ರೀತಿಯಲ್ಲಿ ನಿರ್ವಹಿಸುತ್ತಿದೆ” ಎಂದು ಅವರು ಹೇಳಿದರು. ಇಂಧನ ಕ್ಷೇತ್ರದ ವೈವಿಧ್ಯೀಕರಣವು ಗ್ರಾಹಕರಿಗೆ ವಿದ್ಯುತ್ ಬೆಲೆಗಳನ್ನು ಕಡಿಮೆ ಮಾಡಲು ಕಾರಣವಾಗಬಹುದು ಎಂದರು. ಈ ಮಸೂದೆ ಖಂಡಿತವಾಗಿಯೂ ನವ ಭಾರತ ನಿರ್ಮಾಣಕ್ಕೆ ಸಹಾಯ ಮಾಡುತ್ತದೆ ಎಂದು ಹೇಳಿದರು.

ಸಮಾಜವಾದಿ ಪಕ್ಷದ ಸಂಸದರಾದ ಆದಿತ್ಯ ಯಾದವ್ ಮತ್ತು ಪುಷ್ಪೇಂದ್ರ ಸರೋಜ್ ಅವರು ಮಸೂದೆಯು ಸರಿಯಾದ ತ್ಯಾಜ್ಯ ವಿಲೇವಾರಿಗೆ ಬದ್ಧವಾಗಿಲ್ಲ ಎಂಬಂತಹ ವಿವಿಧ ಆಧಾರದ ಮೇಲೆ ಮಸೂದೆಯನ್ನು ವಿರೋಧಿಸಿದರು ಮತ್ತು 2008ರಲ್ಲಿ ಬಿಜೆಪಿ ವಿರೋಧ ಪಕ್ಷದಲ್ಲಿದ್ದಾಗ ಭಾರತ-ಯುಎಸ್ ಪರಮಾಣು ಒಪ್ಪಂದವನ್ನು ವಿರೋಧಿಸಿತ್ತು ಎಂದು ಗಮನಸೆಳೆದರು.

ಕಾಂಗ್ರೆಸ್ ಸಂಸದ ಶಶಿ ತರೂರ್ ಅವರು ಕೇಂದ್ರ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದರು. ಈ ಮಸೂದೆ ‘ನ್ಯೂಕ್ಲಿಯರ್ ಅಲ್ಲ, ಅನ್‌ಕ್ಲಿಯರ್’ ಮತ್ತು ಅಪಾಯಕಾರಿ ಮಸೂದೆ ಎಂದರು. ಮಸೂದೆಯನ್ನು ಸ್ಥಾಯಿ ಸಮಿತಿ ಅಥವಾ ಜೆಪಿಸಿಗೆ ಕಳುಹಿಸಬೇಕೆಂದು ಆಗ್ರಹಿಸಿದರು.

ಮಸೂದೆ ಮಂಡಿಸಿದ ವಿಜ್ಞಾನ ಮತ್ತು ತಂತ್ರಜ್ಞಾನ ರಾಜ್ಯ ಸಚಿವ ಜಿತೇಂದ್ರ ಸಿಂಗ್, ಹೊಸ ಮಸೂದೆಯು 1962ರ ಪರಮಾಣು ಶಕ್ತಿ ಕಾಯ್ದೆ ಮತ್ತು 2010ರ ಪರಮಾಣು ಹಾನಿಗೆ ನಾಗರಿಕ ಹೊಣೆಗಾರಿಕೆ ಕಾಯ್ದೆಯನ್ನು ರದ್ದುಗೊಳಿಸುತ್ತದೆ. ಅವುಗಳನ್ನು ‘ಭಾರತದ ಪ್ರಸ್ತುತ ಮತ್ತು ಭವಿಷ್ಯದ ಇಂಧನ ಅವಶ್ಯಕತೆಗಳಿಗೆ ಹೊಂದಿಕೆಯಾಗುವ ಒಂದೇ, ಸಮಗ್ರ ಕಾನೂನೊಂದಿಗೆ’ ಬದಲಾಯಿಸಲು ಪ್ರಯತ್ನಿಸುತ್ತದೆ ಎಂದು ಹೇಳಿದರು.

ಮಸೂದೆಯು “ಪರಮಾಣು ಹಾನಿಗೆ ಪ್ರಾಯೋಗಿಕ ನಾಗರಿಕ ಹೊಣೆಗಾರಿಕೆ ಆಡಳಿತವನ್ನು ಮತ್ತು ಪರಮಾಣು ಶಕ್ತಿ ನಿಯಂತ್ರಣ ಮಂಡಳಿಗೆ ಶಾಸನಬದ್ಧ ಸ್ಥಾನಮಾನವನ್ನು ನೀಡಲು” ಅನುಮತಿಸುತ್ತದೆ ಎಂದು ಪ್ರತಿಪಾದಿಸಿದರು.

ಶಾಂತಿ ಮಸೂದೆಯು ಖಾಸಗಿ ಕಂಪನಿ ಅಥವಾ ಸರ್ಕಾರಿ ಉದ್ಯಮ ಅಥವಾ ಜಂಟಿ ಉದ್ಯಮಕ್ಕೆ ಪರಮಾಣು ವಿದ್ಯುತ್ ಯೋಜನೆ ಅಥವಾ ರಿಯಾಕ್ಟರ್ ನಿರ್ಮಿಸಲು, ಹೊಂದಲು, ನಿರ್ವಹಿಸಲು ಅಥವಾ ರದ್ದುಗೊಳಿಸಲು, ಸಾಗಿಸಬಹುದಾದ ಯುರೇನಿಯಂ -235 ರ ಪರಿವರ್ತನೆ, ಸಂಸ್ಕರಣೆ ಮತ್ತು ಪುಷ್ಟೀಕರಣ ಸೇರಿದಂತೆ ಪರಮಾಣು ಇಂಧನ ತಯಾರಿಕೆ, ಪರಮಾಣು ಇಂಧನದ ಆಮದು, ರಫ್ತು, ಸ್ವಾಧೀನ ಅಥವಾ ಸ್ವಾಧೀನಕ್ಕಾಗಿ ಪರವಾನಗಿಗಳನ್ನು ನೀಡಲು ಕೇಂದ್ರಕ್ಕೆ ಅವಕಾಶ ನೀಡುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...