Homeಮುಖಪುಟವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ 'ವಿಬಿ-ಜಿ ರಾಮ್ ಜಿ ಮಸೂದೆ' ಅಂಗೀಕಾರ

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

- Advertisement -
- Advertisement -

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ ‘ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು.

ಈ ಮಸೂದೆ 2005ರಲ್ಲಿ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಜಾರಿಗೆ ತಂದಿದ್ದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ-ನರೇಗಾ) ಮತ್ತು ಯೋಜನೆಯ ಹೆಸರು ಮತ್ತು ನಿಬಂಧನೆಗಳನ್ನು ಬದಲಿಸಲಿದೆ.

ಮಸೂದೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ ಪ್ರತಿಪಕ್ಷಗಳ ಸಂಸದರು ಸದನದ ಬಾವಿಗಿಳಿದು ಪ್ರತಿಭಟಿಸಿದರು. ಈ ವೇಳೆ ಸ್ಪೀಕರ್ ಸದನವನ್ನು ಮುಂದೂಡಿದರು.

ಮಸೂದೆಯನ್ನು ಪರಿಗಣನೆ ಮತ್ತು ಅಂಗೀಕಾರಕ್ಕಾಗಿ ಮಂಡಿಸಿದ, ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವ ಶಿವರಾಜ್ ಸಿಂಗ್ ಚೌಹಾಣ್, “ಈ ಶಾಸನವು ಗ್ರಾಮೀಣ ಜನರಿಗೆ ಉದ್ಯೋಗವನ್ನು ಖಚಿತಪಡಿಸುತ್ತದೆ ಮತ್ತು ಮಹಾತ್ಮ ಗಾಂಧಿಯವರ ಸ್ವಾವಲಂಬಿ ಗ್ರಾಮಗಳ ದೃಷ್ಟಿಕೋನವನ್ನು ಈಡೇರಿಸಲು ಸಹಾಯ ಮಾಡುತ್ತದೆ ಎಂದು ಹೇಳಿದರು. ವಿಬಿ-ಜಿ ರಾಮ್ ಜಿ ಮಸೂದೆಯು ಗ್ರಾಮಗಳ ಸರ್ವತೋಮುಖ ಅಭಿವೃದ್ಧಿಯನ್ನು ಖಚಿತಪಡಿಸುತ್ತದೆ, ಅವುಗಳನ್ನು ಬಡತನ ಮುಕ್ತಗೊಳಿಸುತ್ತದೆ ಮತ್ತು ಅವುಗಳ ಬೆಳವಣಿಗೆಯ ಪ್ರಯಾಣಕ್ಕೆ ಇಂಧನ ನೀಡುತ್ತದೆ” ಎಂದು ಸಮರ್ಥಿಸಿಕೊಂಡರು.

ವಿಪಕ್ಷಗಳ ಸದಸ್ಯರು ಕಾಯ್ದೆ ಮತ್ತು ಯೋಜನೆಯಿಂದ ಮಹಾತ್ಮ ಗಾಂಧಿಯ ಹೆಸರು ಕೈಬಿಟ್ಟು ಮರುನಾಮಕರಣ ಮಾಡುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದರು. ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ಅವರು ಸರ್ಕಾರ ಗಾಂಧಿಯವರ ಪರಂಪರೆಯನ್ನು ದುರ್ಬಲಗೊಳಿಸುತ್ತಿದೆ ಎಂದು ಆರೋಪಿಸಿದರು. ನರೇಗಾ ಎಂಬ ಹೆಸರು ತೆಗೆದುಹಾಕಿ ಯೋಜನೆಗೆ ಮರುನಾಮಕರಣ ಮಾಡುವ ಮೂಲಕ ಮಸೂದೆಯು ರಾಮರಾಜ್ಯದ ಕಲ್ಪನೆಯನ್ನು ಅಕ್ಷರಶಃ ನಾಶಪಡಿಸುತ್ತಿದೆ ಎಂದು ಹೇಳಿದರು.

ಯೋಜನೆಯಿಂದ ಗಾಂಧಿಯವರ ಹೆಸರನ್ನು ತೆಗೆದುಹಾಕುವ ಮೂಲಕ ಸರ್ಕಾರ ಮಹಾತ್ಮ ಗಾಂಧಿ ಮತ್ತು ರವೀಂದ್ರನಾಥ ಟ್ಯಾಗೋರ್ ಅವರನ್ನು ‘ಅವಮಾನಿಸಿದೆ. ಸರ್ಕಾರ “ನ ಕಿಸಿ ಕಾ ಸಾಥ್, ನ ಕಿಸಿ ಕಾ ವಿಕಾಸ್, ನ ರಹೀಮ್ ಕಾ, ನ ರಾಮ್ ಕಾ” ದಲ್ಲಿ ನಂಬಿಕೆ ಇಟ್ಟಿದೆ ಎಂಬುವುದನ್ನು ಈ ಮಸೂದೆ ತೋರಿಸಿದೆ ಎಂದರು.

ಮಸೂದೆಯನ್ನು ವಿರೋಧಿಸಿದ ಅವರು, 2005ರ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆಯು ಗ್ರಾಮೀಣ ಭಾರತದ ಜೀವನೋಪಾಯ ಭದ್ರತೆಯ ಪರಿಕಲ್ಪನೆಯಲ್ಲಿ ಕ್ರಾಂತಿಯನ್ನುಂಟು ಮಾಡಿದೆ ಎಂದು ಹೇಳಿದರು.

ಕಾಂಗ್ರೆಸ್ ಸಂಸದ ಜೈ ಪ್ರಕಾಶ್, ರಾಷ್ಟ್ರಪಿತನ ಹೆಸರನ್ನು ಶಾಸನದಿಂದ ತೆಗೆದುಹಾಕುವುದು ‘ಅತಿದೊಡ್ಡ ಅಪರಾಧ’ ಎಂದು ಹೇಳಿದರು. ಪ್ರಸ್ತಾವಿತ ಕಾನೂನು ರಾಜ್ಯಗಳಿಗೆ ಹೊಸ ಆರ್ಥಿಕ ಹೊರೆಯನ್ನು ಹೇರುತ್ತದೆ. ಗ್ರಾಮ ಸಭೆಗಳಂತಹ ತಳಮಟ್ಟದ ಸಂಸ್ಥೆಗಳಿಗೆ ಯೋಜನೆಯಡಿ ಕೆಲಸಗಳನ್ನು ನಿರ್ಧರಿಸುವ ಹಕ್ಕನ್ನು ಕಸಿದುಕೊಳ್ಳುತ್ತದೆ ಎಂದು ಹೇಳಿದರು. ಮಸೂದೆ ಬಡವರ ವಿರೋಧಿ, ದಲಿತ ವಿರೋಧಿ ಶ್ರೀಮಂತರ ಪರ ಎಂದರು.

ಮಸೂದೆಯ ಮೇಲಿನ ಚರ್ಚೆ ಬುಧವಾರ ನಡೆಯಲಿದೆ ಎಂದು ಸ್ಪೀಕರ್ ಓಂ ಬಿರ್ಲಾ ಈ ಹಿಂದೆ ಹೇಳಿದ್ದರು. ಗುರುವಾರ ಸಚಿವರು ಅದಕ್ಕೆ ಉತ್ತರ ನೀಡಿ ನಂತರ ಅದನ್ನು ಅಂಗೀಕಾರಕ್ಕೆ ತೆಗೆದುಕೊಳ್ಳಲಾಯಿತು.

ಮಸೂದೆಯನ್ನು ಸಮರ್ಥಿಸಿಕೊಂಡ ಬಿಜೆಪಿ ಸಂಸದ ಬ್ರಿಜ್‌ಮೋಹನ್ ಅಗರ್ವಾಲ್, ಈ ಹಿಂದಿನ ಕಾಂಗ್ರೆಸ್ ಸರ್ಕಾರ ನರೇಗಾ ಯೋಜನೆಯನ್ನು ‘ಗುಂಡಿ ತೋಡಿ ಗುಂಡಿ ಮುಚ್ಚುವುದಕ್ಕೆ’ ಸೀಮಿತಗೊಳಿಸಿತ್ತು. ಅದು ಗ್ರಾಮೀಣ ಆರ್ಥಿಕತೆಯನ್ನು ಬಲಪಡಿಸುವಲ್ಲಿ ವಿಫಲವಾಗಿತ್ತು ಮತ್ತು ದೊಡ್ಡ ಪ್ರಮಾಣದ ಭ್ರಷ್ಟಾಚಾರಕ್ಕೆ ಕಾರಣವಾಗಿತ್ತು. ಹೊಸ ಕಾನೂನಿನಲ್ಲಿ ‘ರಾಮ್’ ಎಂದು ಸೇರಿಸುವುದರಿಂದ ಭ್ರಷ್ಟಾಚಾರವನ್ನು ತಡೆಯಬಹುದು ಎಂದು ಅಗರ್ವಾಲ್ ಹೇಳಿದರು.

ಮಸೂದೆಯ ಪ್ರಕಾರ, ಕಾಯ್ದೆ ಜಾರಿಗೆ ಬಂದ ಆರು ತಿಂಗಳೊಳಗೆ ರಾಜ್ಯಗಳು ಹೊಸ ಕಾನೂನಿಗೆ ಅನುಗುಣವಾಗಿ ಯೋಜನೆಗಳನ್ನು ರೂಪಿಸಬೇಕಾಗುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...

ಹನೂರು ಶೂಟೌಟ್ ಪ್ರಕರಣ: ಮೂವರು ಅರಣ್ಯ ಸಿಬ್ಬಂದಿಗೆ ನಿರೀಕ್ಷಣಾ ಜಾಮೀನು.!

ಕಾವೇರಿ ವನ್ಯಜೀವಿ ಅಭಯಾರಣ್ಯದ ಹನೂರು ವ್ಯಾಪ್ತಿಯಲ್ಲಿ ಮೂವರು ಮೃತಪಟ್ಟಿದ್ದ ವಿವಾದಾತ್ಮಕ ಗುಂಡಿನ ದಾಳಿ ಪ್ರಕರಣಕ್ಕೆ ಇದೀಗ ಕಾನೂನು ತಿರುವು ಸಿಕ್ಕಿದೆ. ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಮೂವರು ಅರಣ್ಯ ಸಿಬ್ಬಂದಿಗೆ ಕೊಳ್ಳೇಗಾಲದ ಮೊದಲ ಹೆಚ್ಚುವರಿ...

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...