Homeಕರ್ನಾಟಕಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

- Advertisement -
- Advertisement -

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು.

ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್.ಸಿ.ಮಹದೇಪ್ಪ ಸಭೆಯ ಅಂಗೀಕಾರ ಕೋರಿ ವಿಧೇಯಕವನ್ನು ಪರ್ಯಾಲೋಚನೆಗೆ ತಂದರು.

ಅಸಂವಿಧಾನಿಕ ಆಚರಣೆಗಳಾದ ಜಾತಿ ಪಂಚಾಯಿತಿಗಳು ಹೇರುವ ಸಾಮಾಜಿಕ ಬಹಿಷ್ಕಾರ, ಕಿರುಕುಳ, ವಿವಿಧ ರೀತಿಯ ಶಿಕ್ಷೆಗಳನ್ನು ತಡೆಗಟ್ಟಿ ಸಾಮಾಜಿಕ ಬಹಿಷ್ಕಾರ ಪದ್ದತಿಯನ್ನು ಸಮಾಜದಿಂದ ನಿರ್ಮೂಲನೆ ಮಾಡುವುದಕ್ಕಾಗಿ ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025ನ್ನು ಸರ್ಕಾರ ಜಾರಿಗೆ ತರುತ್ತಿದೆ ಎಂದು ತಿಳಿಸಿದರು.

ದ್ವೇಷ ಭಾಷಣ ವಿಧೇಯ ಅಂಗೀಕಾರ

ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ (ಪ್ರತಿಬಂಧಕ) ವಿಧೇಯಕ-2025 ಕೂಡ ಗುರುವಾರ ವಿಧಾನಸಭೆಯಲ್ಲಿ ಅಂಗೀಕಾರ ಪಡೆಯಿತು.

ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಈ ವಿಧೇಯಕವು ವ್ಯಕ್ತಿಗಳ, ಸಮೂಹ, ಸಂಸ್ಥೆಗಳ ವಿರುದ್ಧ ಸಮಾಜದಲ್ಲಿ ಅಸಾಮರಸ್ಯ ದ್ವೇಷವನ್ನುಂಟು ಮಾಡುವ ದ್ವೇಷ ಭಾಷಣದ ಪ್ರಸರಣೆ, ಪ್ರಕಟಣೆ ಅಥವಾ ಪ್ರಚಾರವನ್ನು ಹಾಗೂ ಅಪರಾಧಗಳನ್ನು ತಡೆಗಟ್ಟಲು ಮತ್ತು ಪ್ರತಿಬಂಧಿಸಲು, ಅಂತಹ ಅಪರಾಧಗಳಿಗೆ ದಂಡನೆಯನ್ನು ಉಪಬಂದಿಸಲು ಹಾಗೂ ಹಾನಿಗೊಳಗಾದ ಸಂತ್ರಸ್ತರಿಗೆ ತಕ್ಕಷ್ಟು ಪರಿಹಾರವನ್ನು ಒದಗಿಸಲು ಈ ಶಾಸನವನ್ನು ಅಧಿನಿಯಮಿಸುವುದು ಅವಶ್ಯಕವೆಂದು ಪರಿಗಣಿಸಿ ಈ ವಿಧೇಯಕವನ್ನು ತರಲಾಗಿದೆ ಎಂದು ತಿಳಿಸಿದರು.

ದ್ವೇಷ ಭಾಷಣ ಪುನರಾವರ್ತನೆಗೆ ಗರಿಷ್ಠ ಶಿಕ್ಷೆ 10 ವರ್ಷದ ಬದಲಾಗಿ 7 ವರ್ಷ ಜೈಲು ಶಿಕ್ಷೆ ಎಂದು ತಿದ್ದುಪಡಿ ಮಾಡಲಾಗಿದೆ ಎಂದು ಗೃಹ ಸಚಿವರು ಸ್ಪಷ್ಟಪಡಿಸಿದರು.

ಈಗಾಗಲೇ ಮುದ್ರಿತ ಪುಸ್ತಕಗಳಿಗೂ ಅನ್ವಯ

ವಿಧೇಯಕದ ಕುರಿತು ಚರ್ಚಿಸುವಾಗ, ಈಗಾಗಲೇ ಮುದ್ರಿತವಾಗಿರುವ ಪುಸ್ತಕ, ಗ್ರಂಥದಲ್ಲಿ ದ್ವೇಷದ ಮಾತುಗಳು ಇವೆ ಎಂದಾದರೆ ಏನು ಕ್ರಮ? ಎಂದು ಬಿಜೆಪಿ ಶಾಸಕ ಸುನೀಲ್ ಕುಮಾರ್ ಪ್ರಶ್ನಿಸಿದರು. ಇದಕ್ಕೆ ಸ್ಪಷ್ಟನೆ ಕೊಟ್ಟ ಸಚಿವ ಪರಮೇಶ್ವರ್, “ಹಳೆ ಪುಸ್ತಕದಲ್ಲಿ ಇಂತಹ ಅಂಶ ಇದ್ದರೆ, ಅದು ಕೂಡಾ ಈ ಕಾನೂನಿನ ವ್ಯಾಪ್ತಿಯಲ್ಲಿ ಬರಲಿದೆ. ಅಂತವನ್ನು ಬ್ಯಾನ್ ಮಾಡುವ ಪ್ರಕ್ರಿಯೆಗೆ ಅವಕಾಶ ಇದೆ ಎಂದು ತಿಳಿಸಿದರು.

ವಿಧೇಯಕವನ್ನು ಪರ್ಯಾಲೋಚಿಸಿ ಅನುಮೋದನೆ ನೀಡುವಂತೆ ಕೋರಿದರು. ವಿಧೇಯಕವು ವಿಧಾನಸಭೆಯಲ್ಲಿ ಅಂಗೀಕಾರವಾಯಿತು.

ಪ್ರತಿಪಕ್ಷ ಸದಸ್ಯರು ವಿಧೇಯಕ ಪ್ರತಿಗಳನ್ನು ಹರಿದು ತೀವ್ರ ವಿರೋಧ ವ್ಯಕ್ತಪಡಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...

ಹನೂರು ಶೂಟೌಟ್ ಪ್ರಕರಣ: ಮೂವರು ಅರಣ್ಯ ಸಿಬ್ಬಂದಿಗೆ ನಿರೀಕ್ಷಣಾ ಜಾಮೀನು.!

ಕಾವೇರಿ ವನ್ಯಜೀವಿ ಅಭಯಾರಣ್ಯದ ಹನೂರು ವ್ಯಾಪ್ತಿಯಲ್ಲಿ ಮೂವರು ಮೃತಪಟ್ಟಿದ್ದ ವಿವಾದಾತ್ಮಕ ಗುಂಡಿನ ದಾಳಿ ಪ್ರಕರಣಕ್ಕೆ ಇದೀಗ ಕಾನೂನು ತಿರುವು ಸಿಕ್ಕಿದೆ. ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಮೂವರು ಅರಣ್ಯ ಸಿಬ್ಬಂದಿಗೆ ಕೊಳ್ಳೇಗಾಲದ ಮೊದಲ ಹೆಚ್ಚುವರಿ...

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...