Homeಮುಖಪುಟತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಕಾಂಗ್ರೆಸ್‌ಗೆ ನಿಷ್ಠೆ ಬದಲಿಸಿದ 10 ಶಾಸಕರ ಅನರ್ಹತೆ ಕೋರಿದ ಬಿಆರ್‌ಎಸ್‌. 5 ಅರ್ಜಿಗಳ ನಿರ್ಧಾರ ಪ್ರಕಟ

- Advertisement -
- Advertisement -

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ.

ಶಾಸಕರ ಅನರ್ಹತೆ ಅರ್ಜಿಗಳ ಮೇಲಿನ ಆದೇಶಗಳನ್ನು ಪ್ರಕಟಿಸಿದ ಸ್ಪೀಕರ್, ಐವರು ಶಾಸಕರು ಬಿಆರ್‌ಎಸ್‌ನಿಂದ ಕಾಂಗ್ರೆಸ್‌ಗೆ ಔಪಚಾರಿಕವಾಗಿ ಪಕ್ಷಾಂತರಗೊಂಡಿದ್ದಾರೆ ಎಂಬುದಕ್ಕೆ ಅರ್ಜಿದಾರರು ಪುರಾವೆಗಳನ್ನು ಒದಗಿಸಲು ವಿಫಲರಾಗಿದ್ದಾರೆ ಎಂದು ಹೇಳಿದ್ದಾರೆ.

ಹಾಗಾಗಿ, ಪಕ್ಷಾಂತರ ನಿಷೇಧ ಕಾನೂನು ಶಾಸಕರಾದ ತೆಲ್ಲಂ ವೆಂಕಟ್ ರಾವ್, ಬಂಡ್ಲಾ ಕೃಷ್ಣ ಮೋಹನ್ ರೆಡ್ಡಿ, ಟಿ ಪ್ರಕಾಶ್ ಗೌಡ್, ಗುಡೆಮ್ ಮಹಿಪಾಲ್ ರೆಡ್ಡಿ ಮತ್ತು ಅರೆಕಪುಡಿ ಗಾಂಧಿ ಅವರಿಗೆ ಅನ್ವಯಿಸುವುದಿಲ್ಲ ಎಂದು ಸ್ಪೀಕರ್ ತೀರ್ಪು ನೀಡಿದ್ದಾರೆ.

ಶಾಸಕರು ತಾಂತ್ರಿಕವಾಗಿ ಇನ್ನೂ ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್)ನಲ್ಲಿದ್ದಾರೆ ಎಂದು ಹೇಳಿದ್ದಾರೆ.

ಆಡಳಿತ ಪಕ್ಷಕ್ಕೆ ನಿಷ್ಠೆಯನ್ನು ಬದಲಾಯಿಸಿದ ಆರೋಪದ ಮೇಲೆ 10 ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಲಾಗಿತ್ತು. ಈ ಪೈಕಿ ಐವರ ಕುರಿತು ಸ್ಪೀಕರ್ ಆದೇಶ ಪ್ರಕಟಿಸಿದ್ದಾರೆ. ಒಟ್ಟು ಎಂಟು ಶಾಸಕರ ಅನರ್ಹತೆ ಅರ್ಜಿಗಳ ವಿಚಾರಣೆಯನ್ನು ಪೂರ್ಣಗೊಳಿಸಿದ್ದ ಸ್ಪೀಕರ್ ಆದೇಶಗಳನ್ನು ಕಾಯ್ದಿರಿಸಿದ್ದರು.

ಇತರ ಇಬ್ಬರು ಶಾಸಕರಾದ ದಾನಂ ನಾಗೇಂದರ್ ಮತ್ತು ಕಡಿಯಂ ಶ್ರೀಹರಿ ಅವರಿಗೆ ನೀಡಲಾದ ನೋಟಿಸ್‌ಗಳಿಗೆ ಉತ್ತರಗಳನ್ನು ಸಲ್ಲಿಸಿದ ನಂತರ, ಅವರ ಅನರ್ಹತೆಯ ಬಗ್ಗೆ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆಯಿದೆ.

ಕಳೆದ ತಿಂಗಳು ಸ್ಪೀಕರ್ ಕಳುಹಿಸಿದ್ದ ನೋಟಿಸ್‌ಗೆ ಉತ್ತರಿಸಲು ಅವರು ಹೆಚ್ಚಿನ ಸಮಯ ಕೋರಿದ್ದರು.

2023ರ ಚುನಾವಣೆಯಲ್ಲಿ ತನ್ನ ಟಿಕೆಟ್‌ನಿಂದ ವಿಧಾನಸಭೆಗೆ ಆಯ್ಕೆಯಾಗಿ 2024ರಲ್ಲಿ ಕಾಂಗ್ರೆಸ್‌ಗೆ ನಿಷ್ಠೆ ಬದಲಿಸಿದ 10 ಶಾಸಕರನ್ನು ಅನರ್ಹಗೊಳಿಸುವಂತೆ ಬಿಆರ್‌ಎಸ್ ಅರ್ಜಿಗಳನ್ನು ಸಲ್ಲಿಸಿತ್ತು.

ಈ ಶಾಸಕರು ಬಹಿರಂಗವಾಗಿ ಕಾಂಗ್ರೆಸ್ ಸೇರಿದ್ದಾರೆ ಮತ್ತು ವಿಧಾನಸಭೆಯಲ್ಲೂ ಅವರ ಜೊತೆ ಕುಳಿತಿದ್ದಾರೆ ಎಂದು ಬಿಆರ್‌ಎಸ್ ದೂರಿದೆ. ಆದರೆ, ಶಾಸಕರು ಆಡಳಿತ ಪಕ್ಷ ಸೇರಿರುವುದನ್ನು ನಿರಾಕರಿಸಿದ್ದಾರೆ. ತಮ್ಮ ಕ್ಷೇತ್ರಗಳ ಅಭಿವೃದ್ಧಿಗೆ ನಿಧಿ ಕೇಳಲು ಮಾತ್ರ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರನ್ನು ಭೇಟಿಯಾಗಿದ್ದಾಗಿ ವಾದಿಸಿದ್ದಾರೆ.

ಶಾಸಕ ನಾಗೇಂದರ್ ಕಾಂಗ್ರೆಸ್ ಸೇರಿದ್ದಲ್ಲದೆ, 2024ರ ಲೋಕಸಭಾ ಚುನಾವಣೆಯಲ್ಲಿ ಸಿಕಂದರಾಬಾದ್‌ನಿಂದ ಕಾಂಗ್ರೆಸ್ ಟಿಕೆಟ್‌ನಲ್ಲಿ ಸ್ಪರ್ಧಿಸಿದ್ದರು ಎಂದು ಬಿಆರ್‌ಎಸ್ ಸ್ಪೀಕರ್ ಗಮನಕ್ಕೆ ತಂದಿತ್ತು.

ಕಾಂಗ್ರೆಸ್ ಅಭ್ಯರ್ಥಿಯಾಗಿ ವಾರಂಗಲ್ ಕ್ಷೇತ್ರದಿಂದ ಲೋಕಸಭೆಗೆ ಸ್ಪರ್ಧಿಸಿದ್ದ ತಮ್ಮ ಪುತ್ರಿ ಕಡಿಯಂ ಕವಿಯಾ ಪರ ಕಡಿಯಂ ಶ್ರೀಹರಿ ಬಹಿರಂಗ ಪ್ರಚಾರ ನಡೆಸಿದ್ದಾರೆ ಎಂದು ಆರೋಪಿಸಿತ್ತು.

10 ಶಾಸಕರ ವಿರುದ್ಧದ ಅನರ್ಹತೆ ಅರ್ಜಿಗಳ ಕುರಿತು ನಿರ್ಧರಿಸಲು ತಾನು ನೀಡಿದ್ದ ನಿರ್ದೇಶನವನ್ನು ಪಾಲಿಸದಿದ್ದಕ್ಕಾಗಿ ನವೆಂಬರ್ 17 ರಂದು ಸುಪ್ರೀಂ ಕೋರ್ಟ್ ತೆಲಂಗಾಣ ಸ್ಪೀಕರ್‌ಗೆ ನ್ಯಾಯಾಂಗ ನಿಂದನೆ ನೋಟಿಸ್ ಜಾರಿ ಮಾಡಿತ್ತು.

ಜುಲೈ 31ರಂದು, ಆಗಿನ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ನೇತೃತ್ವದ ಪೀಠವು 10 ಶಾಸಕರ ಅನರ್ಹತೆಯ ವಿಷಯವನ್ನು ಮೂರು ತಿಂಗಳಲ್ಲಿ ನಿರ್ಧರಿಸುವಂತೆ ಸ್ಪೀಕರ್‌ಗೆ ಸೂಚಿಸಿತ್ತು.

ಬಿಆರ್‌ಎಸ್ ನಾಯಕರು ಸಲ್ಲಿಸಿದ ಅರ್ಜಿಗಳ ಕುರಿತು ಸ್ಪೀಕರ್ ಮತ್ತು ಇತರರಿಗೆ ನೋಟಿಸ್ ನೀಡುವಾಗ, ಪೀಠವು ತನ್ನ ಹಿಂದಿನ ನಿರ್ದೇಶನಗಳನ್ನು ಪಾಲಿಸದಿರುವುದನ್ನು ಅತ್ಯಂತ ಗಂಭೀರವಾದ ನ್ಯಾಯಾಂಗ ನಿಂದನೆ ಎಂದು ಹೇಳಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...