Homeಅಂತರಾಷ್ಟ್ರೀಯಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

- Advertisement -
- Advertisement -

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ.

ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಮೃತಪಟ್ಟಿದ್ದಾನೆ. ಈ ಸುದ್ದಿ ಹರಡುತ್ತಿದ್ದಂತೆ ಬಾಂಗ್ಲಾದೇಶದಲ್ಲಿ ಪ್ರತಿಭಟನೆ ಮತ್ತೆ ತೀವ್ರಗೊಂಡಿದೆ. 

ಸಾವಿರಾರು ಪ್ರತಿಭಟನಾಕಾರರು ಬಾಂಗ್ಲಾದೇಶದ ರಾಜಧಾನಿ ಢಾಕಾದ ಬೀದಿಗಳಲ್ಲಿ ಪ್ರತಿಭಟನೆ ನಡೆಸಿ, ಹಂತಕರನ್ನು ತಕ್ಷಣ ಬಂಧಿಸಬೇಕೆಂದು ಆಗ್ರಹಿಸಿ, ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರತಿಭಟನೆ ವೇಳೆ ಅವಾಮಿ ಲೀಗ್ ಪಕ್ಷದ ಕಚೇರಿ, ದೇಶದ ಎರಡು ಪ್ರಮುಖ ಪತ್ರಿಕೆಗಳಾದ ಡೈಲಿ ಸ್ಟಾರ್ ಮತ್ತು ಪ್ರಥಮ್ ಆಲೋ ಕಚೇರಿಗಳಿಗೆ ಬೆಂಕಿ ಹೆಚ್ಚಿದ್ದು, ಕಚೇರಿಗೊಳಗೆ ಸಿಬ್ಬಂದಿಗಳು ಸಿಲುಕಿಕೊಂಡಿದ್ದಾರೆಂದು ತಿಳಿದುಬಂದಿದೆ.

ಷರೀಫ್ ಉಸ್ಮಾನ್ ಹಾದಿ ಅವರು ಮಾಜಿ ಪ್ರಧಾನಿ ಶೇಖ್‌ ಹಸೀನಾ ಅವರ ಸರ್ಕಾರ ಉರುಳಿಸುವಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದರು. ವಿದ್ಯಾರ್ಥಿ ಹೋರಾಟಕ್ಕೆ ನಾಯಕತ್ವ ನೀಡಿದ್ದ ಅವರು, ತಮ್ಮ ಅನೇಕ ಭಾಷಣಗಳಲಿ ಭಾರತವನ್ನು ಕುಟುವಾಗಿ ಟೀಕಿಸುತ್ತಿದ್ದರು. ಫೆಬ್ರವರಿ 2026ರಲ್ಲಿ ನಡೆಯಲಿರುವ ಬಾಂಗ್ಲಾದೇಶ ಸಾರ್ವತ್ರಿಕ ಚುನಾವಣೆಯಲ್ಲಿ ಹಾದಿ ಅವರು ಅಭ್ಯರ್ಥಿಯಾಗಿ ಸ್ಪರ್ಧೆ ಕೂಡ ಮಾಡಿದ್ದರು.

ಆದರೆ, ಕಳೆದ ವಾರದ ಪ್ರಾರ್ಥನೆ ಮುಗಿಸಿ ಮಸೀದಿಯಿಂದ ಹೊರಬರುತ್ತಿದ್ದಾಗ, ಷರೀಫ್ ಉಸ್ಮಾನ್ ಹಾದಿ ಅವರ ಮೇಲೆ ಗುಂಡಿನ ದಾಳಿ ನಡೆದಿತ್ತು. ಹಾದಿ ಅವರನ್ನು ಚಿಕಿತ್ಸೆಗಾಗಿ ಸಿಂಗಾಪುರಕ್ಕೆ ಕರೆದೊಯ್ಯಲಾಗಿತ್ತು. ಆದರೆ. ಚಿಕಿತ್ಸೆ ಫಲಕಾರಿಯಾಗದೇ ಗುರುವಾರ ಕೊನೆಯುಸಿರೆಳೆದಿದ್ದಾರೆ. ಹಾದಿ ಅವರ ಸಾವು ಬಾಂಗ್ಲಾದೇಶದಲ್ಲಿ ಹಿಂಸಾತ್ಮಕ ಪ್ರತಿಭಟನೆಗಳಿಗೆ ಕಾರಣವಾಗಿದೆ.

ಉಸ್ಮಾನ್ ಹಾದಿಯ ಸಾವಿನ ಸುದ್ದಿ ಹರಡುತ್ತಿದ್ದಂತೆ ಢಾಕಾದಲ್ಲಿ ಕನಿಷ್ಠ ಮೂರು ಕಟ್ಟಡಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಲಾಗಿದ್ದು, ಘಟನೆ ಬೆನ್ನಲ್ಲೇ ಅಗ್ನಿಶಾಮಕ ಹಾಗೂ ನಾಗರಿಕ ರಕ್ಷಣಾ ಇಲಾಖೆಯ ವಕ್ತಾರರು ಕಾರ್ಯಾಚರಣೆ ಆರಂಭಿಸಿದ್ದಾರೆ.

ಡೈಲಿ ಸ್ಟಾರ್ ಕಟ್ಟಡದಲ್ಲಿ ಉಂಟಾದ ಬೆಂಕಿಯನ್ನು ಶುಕ್ರವಾರ ಬೆಳಗಿನ 1.40ರ ವೇಳೆಗೆ ನಿಯಂತ್ರಣಕ್ಕೆ ತರಲಾಗಿದೆ. ಆದರೂ 27 ಸಿಬ್ಬಂದಿ ಕಟ್ಟಡದ ಒಳಗೇ ಸಿಲುಕಿದ್ದಾರೆಂದು ವರದಿಗಳು ತಿಳಿಸಿವೆ.

ಡೈಲಿ ಸ್ಟಾರ್ ಪತ್ರಿಕೆಯ ವರದಿಗಾರ್ತಿ ಝೈಮಾ ಇಸ್ಲಾಂ, “ನಾನು ಉಸಿರಾಡಲು ಸಾಧ್ಯವಾಗುತ್ತಿಲ್ಲ. ಇಲ್ಲಿ ತುಂಬಾ ಹೊಗೆ ಇದೆ. ನಾನು ಒಳಗಿದ್ದೇನೆ ಎಂದು ಫೇಸ್‌ಬುಕ್‌ನಲ್ಲಿ ಬರೆಯುವ ಮೂಲಕ ತಮ್ಮ ಸಂಕಷ್ಟವನ್ನು ಹೇಳಿಕೊಂಡಿದ್ದಾರೆ.

ಪ್ರತಿಭಟನಾಕಾರರು ಪತ್ರಿಕೆಗಳು ಭಾರತ ಪರವಾಗಿವೆ ಎಂದು ಆರೋಪಿಸಿದ್ದು, ಮಾಜಿ ಪ್ರಧಾನಿ ಶೇಖ್ ಹಸೀನಾ ಭಾರತದಲ್ಲಿ ಆಶ್ರಯ ಪಡೆದಿರುವುದನ್ನು ಉಲ್ಲೇಖಿಸಿದ್ದಾರೆ.

ಇದೇ ವೇಳೆ, ಬಾಂಗ್ಲಾದೇಶದಲ್ಲಿನ ಭಾರತದ ರಾಯಭಾರಿ ಕಚೇರಿಯನ್ನು ನುಗ್ಗಲು ನೂರಾರು ಪ್ರತಿಭಟನಾಕಾರರು ಯತ್ನಿಸಿದ್ದು, ಪೊಲೀಸರು ಅಶ್ರುವಾಯ ಪ್ರಯೋಗಿಸಿ ಗುಂಪನ್ನು ಚದುರಿಸಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಈ ನಡುವೆ ಢಾಕಾದಿಂದ ಹೊರ ಹೋಗುವ ಪ್ರಮುಖ ಹೆದ್ದಾರಿಯನ್ನೂ ಪ್ರತಿಭಟನಾಕಾರರು ತಡೆದಿದ್ದು, ಢಾಕಾದಲ್ಲಿರುವ ಬೆಂಗಾಳಿ ಸಂಸ್ಕೃತಿಗೆ ಸಮರ್ಪಿತ ಕೇಂದ್ರವಾದ ಛಾಯನಾಟ್ ಮೇಲೂ ದಾಳಿ ನಡೆಸಿದ್ದಾರೆಂದು ತಿಳಿದು ಬಂದಿದೆ.

ಉಸ್ಮಾನ್ ಹಾದಿ ಸಾವು ಕುರಿತು ಬಾಂಗ್ಲಾದೇಶದ ಮಧ್ಯಂತರ ಸರ್ಕಾರದ ಮುಖ್ಯ ಸಲಹೆಗಾರ ಮುಹಮ್ಮದ್ ಯೂನಸ್ ಅವರು ಪ್ರತಿಕ್ರಿಯೆ ನೀಡಿದ್ದು, ಹಾದಿ ಸಾವು ದೇಶಕ್ಕೆ ತುಂಬಲಾರದ ನಷ್ಟವಾಗಿದೆ. ಭಯ, ಭೀತಿ ಅಥವಾ ರಕ್ತಪಾತದ ಮೂಲಕ ಪ್ರಜಾಪ್ರಭುತ್ವದ ಪಯಣವನ್ನು ತಡೆಯಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...