Homeಮುಖಪುಟಎಸ್‌ಐಆರ್‌ ಬಳಿಕ ಕರಡು ಮತದಾರರ ಪಟ್ಟಿ ಪ್ರಕಟ : ತಮಿಳುನಾಡಿನಲ್ಲಿ 97 ಲಕ್ಷ, ಗುಜರಾತ್‌ನಲ್ಲಿ 73...

ಎಸ್‌ಐಆರ್‌ ಬಳಿಕ ಕರಡು ಮತದಾರರ ಪಟ್ಟಿ ಪ್ರಕಟ : ತಮಿಳುನಾಡಿನಲ್ಲಿ 97 ಲಕ್ಷ, ಗುಜರಾತ್‌ನಲ್ಲಿ 73 ಲಕ್ಷ ಹೆಸರು ಡಿಲೀಟ್

- Advertisement -
- Advertisement -

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ ತಮಿಳುನಾಡು ಮತ್ತು ಗುಜರಾತ್‌ನ ಕರಡು ಮತದಾರರ ಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಪ್ರಕಟಿಸಿದ್ದು, ಕ್ರಮವಾಗಿ 97.3 ಮತ್ತು 73.7 ಲಕ್ಷ ಮತದಾರರ ಹೆಸರುಗಳನ್ನು ತೆಗೆದುಹಾಕಿದೆ.

ತಮಿಳುನಾಡಿನಲ್ಲಿ ಕೈಬಿಡಲಾದ 97 ಲಕ್ಷ ಹೆಸರುಗಳಲ್ಲಿ 66.4 ಲಕ್ಷ ಜನರು ತಮ್ಮ ವಾಸಸ್ಥಳಗಳನ್ನು ಬದಲಾಯಿಸಿದ್ದಾರೆ, 26.9 ಲಕ್ಷ ಜನರು ಸಾವನ್ನಪ್ಪಿದ್ದಾರೆ ಮತ್ತು 3.9 ಲಕ್ಷ ಜನರ ಹೆಸರುಗಳು ಒಂದಕ್ಕಿಂತ ಹೆಚ್ಚು ಬಾರಿ ದಾಖಲಾಗಿತ್ತು ಎಂದು ಚುನಾವಣಾ ಆಯೋಗ ಹೇಳಿದೆ.

ಹೆಸರು ತೆಗೆದು ಹಾಕಲಾದ ಜನರು ತಮ್ಮ ಆಕ್ಷೇಪಣೆಗಳನ್ನು ಸಲ್ಲಿಸಿ ಹೆಸರು ಸೇರ್ಪಡೆಗೆ ಜನವರಿ 18ರವರೆಗೆ ಅವಕಾಶ ನೀಡಲಾಗಿದೆ.

ಚುನಾವಣಾ ಆಯೋಗ ಪ್ರಕಟಿಸಿರುವ ತಮಿಳುನಾಡಿನ ಕರಡು ಮತದಾರರ ಪಟ್ಟಿಯಲ್ಲಿ 2.6 ಕೋಟಿ ಪುರುಷರು ಮತ್ತು 2.7 ಕೋಟಿ ಮಹಿಳಾ ಮತದಾರರಿದ್ದಾರೆ ಎಂದು ವರದಿಗಳು ಹೇಳಿವೆ.

ಚೆನ್ನೈ ನಗರದ ಸುಮಾರು 14.2 ಲಕ್ಷ ಮತದಾರರ ಹೆಸರುಗಳನ್ನು ಕರಡು ಪಟ್ಟಿಯಿಂದ ತೆಗೆದುಹಾಕಲಾಗಿದ್ದು, ಇದರಿಂದ ಅತಿ ಹೆಚ್ಚು , ಅಂದರೆ ಶೇಕಡ 35ರಷ್ಟು ಮತದಾರರ ಪ್ರಮಾಣ ಕಡಿಮೆಯಾಗಿದೆ ವರದಿಗಳು ವಿವರಿಸಿವೆ.

ಎಸ್‌ಐಆರ್‌ ಬಳಿಕ ಗುಜರಾತ್‌ನ ಕರಡು ಪಟ್ಟಿಯಲ್ಲಿದ್ದ ಮತದಾರರ ಸಂಖ್ಯೆ 5 ಕೋಟಿಯಿಂದ 4.3 ಕೋಟಿಗೆ ಇಳಿದಿದೆ.

ತೆಗೆದು ಹಾಕಲಾದ ಒಟ್ಟು 73.7 ಲಕ್ಷ ಹೆಸರುಗಳಲ್ಲಿ 51.8 ಲಕ್ಷ ಜನರು ತಮ್ಮ ವಾಸಸ್ಥಳಗಳನ್ನು ಬದಲಾಯಿಸಿದ್ದಾರೆ. 18 ಲಕ್ಷ ಜನರು ಸಾವನ್ನಪ್ಪಿದ್ದಾರೆ ಮತ್ತು 3.8 ಲಕ್ಷ ಜನರ ಹೆಸರುಗಳು ಒಂದಕ್ಕಿಂತ ಹೆಚ್ಚು ಬಾರಿ ಇತ್ತು ಎಂದು ಚುನಾವಣಾ ಆಯೋಗ ಹೇಳಿದೆ.

ತಮಿಳುನಾಡು ಮತ್ತು ಗುಜರಾತ್‌ನಲ್ಲಿ ಪರಿಷ್ಕೃತ ಎಣಿಕೆ ಅವಧಿ ಡಿಸೆಂಬರ್ 14 ರಂದು ಕೊನೆಗೊಂಡಿತ್ತು.

2026ರ ಮೊದಲಾರ್ಧದಲ್ಲಿ ತಮಿಳುನಾಡು ಮತ್ತು 2027ರ ಕೊನೆಯಲ್ಲಿ ಗುಜರಾತ್ ವಿಧಾನಸಭಾ ಚುನಾವಣೆಗಳು ನಡೆಯುವ ನಿರೀಕ್ಷೆಯಿದೆ.

ಎಸ್‌ಐಆರ್‌ ಬಳಿಕ, ಮಂಗಳವಾರ ಚುನಾವಣಾ ಆಯೋಗವು ಪಶ್ಚಿಮ ಬಂಗಾಳದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದೆ. 58 ಲಕ್ಷಕ್ಕೂ ಹೆಚ್ಚು ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಲಾಗಿದೆ.

ತಮಿಳುನಾಡು, ಗುಜರಾತ್ ಮತ್ತು ಪಶ್ಚಿಮ ಬಂಗಾಳದ ಜೊತೆಗೆ, ಇತರ ಒಂಬತ್ತು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ನಡೆಯುತ್ತಿದೆ.

ನವೆಂಬರ್‌ನಲ್ಲಿ ನಡೆದ ವಿಧಾನಸಭಾ ಚುನಾವಣೆಗೆ ಮುನ್ನ ಪರಿಷ್ಕರಣೆ ಪೂರ್ಣಗೊಂಡ ಬಿಹಾರದಲ್ಲಿ, ಕನಿಷ್ಠ 47 ಲಕ್ಷ ಮತದಾರರನ್ನು ಅಂತಿಮ ಮತದಾರರ ಪಟ್ಟಿಯಿಂದ ಹೊರಗಿಡಲಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...

ಹನೂರು ಶೂಟೌಟ್ ಪ್ರಕರಣ: ಮೂವರು ಅರಣ್ಯ ಸಿಬ್ಬಂದಿಗೆ ನಿರೀಕ್ಷಣಾ ಜಾಮೀನು.!

ಕಾವೇರಿ ವನ್ಯಜೀವಿ ಅಭಯಾರಣ್ಯದ ಹನೂರು ವ್ಯಾಪ್ತಿಯಲ್ಲಿ ಮೂವರು ಮೃತಪಟ್ಟಿದ್ದ ವಿವಾದಾತ್ಮಕ ಗುಂಡಿನ ದಾಳಿ ಪ್ರಕರಣಕ್ಕೆ ಇದೀಗ ಕಾನೂನು ತಿರುವು ಸಿಕ್ಕಿದೆ. ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಮೂವರು ಅರಣ್ಯ ಸಿಬ್ಬಂದಿಗೆ ಕೊಳ್ಳೇಗಾಲದ ಮೊದಲ ಹೆಚ್ಚುವರಿ...

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...