Homeಮುಖಪುಟಕೋಮು ಸಾಮರಸ್ಯಕ್ಕಾಗಿ ಭಾರತದ ಮುಸ್ಲಿಮರು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು: ಜಮಾಅತ್ ಅಧ್ಯಕ್ಷ

ಕೋಮು ಸಾಮರಸ್ಯಕ್ಕಾಗಿ ಭಾರತದ ಮುಸ್ಲಿಮರು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು: ಜಮಾಅತ್ ಅಧ್ಯಕ್ಷ

- Advertisement -
- Advertisement -

‘ಭಾರತದ ಮುಸ್ಲಿಮರು, ದೇಶದಲ್ಲಿ ಕೋಮು ಸಾಮರಸ್ಯಕ್ಕಾಗಿ ವೈಯಕ್ತಿಕ ಮತ್ತು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು’ ಎಂದು ಜಮಾಅತೆ-ಇ-ಇಸ್ಲಾಮಿ ಹಿಂದ್ ಅಧ್ಯಕ್ಷ ಸೈಯದ್ ಸಾದತುಲ್ಲಾ ಹುಸೈನಿ ಅವರು ಒತ್ತಾಯಿಸಿದರು.

ಕೋಮು ಸಾಮರಸ್ಯ ಇಲಾಖೆಯು ಆಯೋಜಿಸಿದ್ದ ‘ಅಖಿಲ ಭಾರತ ಕೋಮು ಸಾಮರಸ್ಯ ಸಂಯೋಜಕರ ಸಭೆ’ ಎಂಬ ಎರಡು ದಿನಗಳ ಕಾರ್ಯಕ್ರಮದಲ್ಲಿ ಹುಸೈನಿ ಮಾತನಾಡಿದರು. ದೇಶದಾದ್ಯಂತ ಸುಮಾರು 20 ರಾಜ್ಯಗಳಿಂದ ಕೋಮು ಸಾಮರಸ್ಯಕ್ಕಾಗಿ ತಳಮಟ್ಟದಲ್ಲಿ ಕೆಲಸ ಮಾಡುತ್ತಿರುವ ಪುರುಷರು ಮತ್ತು ಮಹಿಳೆಯರು ಭಾಗವಹಿಸಿದ್ದರು. ವಿವಿಧ ರಾಜ್ಯಗಳಲ್ಲಿನ ಕೋಮು ಸಾಮರಸ್ಯದ ಪರಿಸ್ಥಿತಿಯನ್ನು ಅರ್ಥಮಾಡಿಕೊಳ್ಳುವುದು, ಇಲ್ಲಿಯವರೆಗೆ ನಡೆಸಲಾದ ಕೆಲಸವನ್ನು ಪರಿಶೀಲಿಸುವುದು ಮತ್ತು ಭವಿಷ್ಯದ ಪ್ರಯತ್ನಗಳಿಗೆ ಮಾರ್ಗದರ್ಶನ ನೀಡುವುದು ಸಭೆಯ ಉದ್ದೇಶವಾಗಿತ್ತು ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಕೋಮು ಸಾಮರಸ್ಯಕ್ಕಾಗಿ ನಾವು ಮಾಡುವ ಕೆಲಸವು ತಾತ್ಕಾಲಿಕವಲ್ಲ. ಆದರೆ, ಶಾಶ್ವತ ಸ್ವರೂಪದ್ದಾಗಿದೆ ಎಂದು ಜಮಾಅತ್ ಮುಖ್ಯಸ್ಥರು ಹೇಳಿದರು. “ಇಸ್ಲಾಂ, ಜನರ ನಡುವಿನ ಸಂಬಂಧಗಳನ್ನು ಸರಿಪಡಿಸುವುದು ಮತ್ತು ಅವರನ್ನು ಸರಿಯಾದ ದಿಕ್ಕಿನಲ್ಲಿ ಮಾರ್ಗದರ್ಶನ ಮಾಡುವುದರ ಮೇಲೆ ಸ್ಥಾಪಿತವಾಗಿದೆ. ಕುರಾನ್ ಇದಕ್ಕೆ ಹೆಚ್ಚಿನ ಒತ್ತು ನೀಡುತ್ತದೆ. ಪ್ರವಾದಿ ಮುಹಮ್ಮದ್ ತಮ್ಮ ಇಡೀ ಜೀವನವನ್ನು ಈ ಕಾರಣಕ್ಕಾಗಿ ಮುಡಿಪಾಗಿಟ್ಟರು” ಎಂದು ಅವರು ಹೇಳಿದರು.

ಸಂಘಟನೆಯ ಪ್ರಧಾನ ಕಾರ್ಯದರ್ಶಿ ಟಿ. ಆರಿಫ್ ಅಲಿ ಮಾತನಾಡಿ, “ಕೋಮು ಸಾಮರಸ್ಯಕ್ಕಾಗಿ ಪ್ರಯತ್ನಗಳು ಸನ್ನಿವೇಶದ ಒತ್ತಡಕ್ಕೆ ಪ್ರತಿಕ್ರಿಯೆಯಲ್ಲ, ಬದಲಾಗಿ ಜವಾಬ್ದಾರಿಯಾಗಿದೆ. ನಮ್ಮ ಒfರಯತ್ನಗಳು ಯಾವಾಗಲೂ ಜಮಾಅತೆ-ಇ-ಇಸ್ಲಾಮಿ ಹಿಂದ್‌ನ ನೀತಿಯ ಭಾಗವಾಗಿದೆ. ದೇವರ ಸೃಷ್ಟಿಯ ಪ್ರತಿಯೊಂದು ಅಂಶದಲ್ಲೂ ಸಾಮರಸ್ಯ ಇರುವಂತೆಯೇ, ಮಾನವರ ನಡುವೆ ಸಾಮರಸ್ಯವೂ ಅತ್ಯಗತ್ಯ” ಎಂದು ಅವರು ಪ್ರತಿಪಾದಿಸಿದರು.

ಈ ಸಂದರ್ಭದಲ್ಲಿ, ಸ್ವಾಮಿ ಸರ್ವಲೋಕ್ ಆನಂದ್ ಜಿ ಮಹಾರಾಜ್ ಅವರು ಕೋಮು ಸಾಮರಸ್ಯಕ್ಕಾಗಿ ಅಂತರಧರ್ಮೀಯ ಸಂವಾದದ ಮಹತ್ವದ ಕುರಿತು ಮಾತನಾಡಿದರು. “ಜನರು ತಮ್ಮ ಸ್ವಂತ ನಂಬಿಕೆಗಳನ್ನು ಮತ್ತು ಇತರರ ನಂಬಿಕೆಗಳನ್ನು ಅರ್ಥಮಾಡಿಕೊಂಡು ಗೌರವಿಸಬೇಕು” ಎಂದರು.

ಗ್ಯಾನಿ ಮಂಗಲ್ ಸಿಂಗ್ ಅವರು, ಎಲ್ಲಾ ಸಮುದಾಯಗಳ ನಡುವೆ ಸೇತುವೆಗಳನ್ನು ನಿರ್ಮಿಸುವ ಮಹತ್ವದ ಕುರಿತು ಮಾತನಾಡಿದರು. ಜನರಿಗೆ ನಿಸ್ವಾರ್ಥ ಸೇವೆಯು ಇದನ್ನು ಸಾಧಿಸಲು ಅತ್ಯಂತ ಪರಿಣಾಮಕಾರಿ ಮಾರ್ಗವಾಗಿದೆ ಎಂದು ಹೇಳಿದರು.

ಜಮಾಅತೆ-ಇ-ಇಸ್ಲಾಮಿ ಹಿಂದ್‌ನ ರಾಷ್ಟ್ರೀಯ ಕಾರ್ಯದರ್ಶಿ ಶೈಸ್ತಾ ರಿಫತ್ ಅವರು ‘ಕೋಮು ಸಾಮರಸ್ಯದಲ್ಲಿ ಮಹಿಳೆಯರ ಪಾತ್ರ’ದ ಕುರಿತು ಮಾತನಾಡಿದರು. “ವಿಶ್ವದ ಜನಸಂಖ್ಯೆಯ ಅರ್ಧದಷ್ಟು ಜನರನ್ನು (ಮಹಿಳೆಯರು) ಈ ಪ್ರಯತ್ನದಿಂದ ಹೊರಗಿಡಲು ಸಾಧ್ಯವಿಲ್ಲ. ಮಹಿಳೆಯರು ಮುಂದೆ ಬಂದು ಸಕ್ರಿಯ ಪಾತ್ರ ವಹಿಸಬೇಕು. ಈ ನಿಟ್ಟಿನಲ್ಲಿ ಸಮಾಜ ಮತ್ತು ರಾಷ್ಟ್ರವು ಅವರಿಗೆ ಗರಿಷ್ಠ ಅವಕಾಶಗಳನ್ನು ಒದಗಿಸಬೇಕು” ಎಂದು ಅವರು ಹೇಳಿದರು.

ಕಾರ್ಯಕ್ರಮದ ಸಮಯದಲ್ಲಿ, ಧರಮಿಕ್ ಜನ ಮೋರ್ಚಾ ಮತ್ತು ಸದ್ಭಾವನಾ ಮಂಚ್ ಅನ್ನು ದೇಶಾದ್ಯಂತ ಹೆಚ್ಚು ಸಕ್ರಿಯ ಮತ್ತು ಪರಿಣಾಮಕಾರಿಯಾಗಿಸಲು ವಿವಿಧ ವಿಚಾರಗಳ ಕುರಿತು ಭಾಗವಹಿಸುವವರು ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡರು. ಜಮಾತೆ-ಇ-ಇಸ್ಲಾಮಿ ಹಿಂದ್‌ನ ಉಪಾಧ್ಯಕ್ಷ ಪ್ರೊ. ಸಲೀಂ ಎಂಜಿನಿಯರ್, ಕಾರ್ಯಕರ್ತರು ಆತ್ಮವಿಶ್ವಾಸದಿಂದ ಮತ್ತು ತಾರತಮ್ಯವಿಲ್ಲದೆ ಕೆಲಸ ಮಾಡಬೇಕೆಂದು ಸಲಹೆ ನೀಡಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...

ಹನೂರು ಶೂಟೌಟ್ ಪ್ರಕರಣ: ಮೂವರು ಅರಣ್ಯ ಸಿಬ್ಬಂದಿಗೆ ನಿರೀಕ್ಷಣಾ ಜಾಮೀನು.!

ಕಾವೇರಿ ವನ್ಯಜೀವಿ ಅಭಯಾರಣ್ಯದ ಹನೂರು ವ್ಯಾಪ್ತಿಯಲ್ಲಿ ಮೂವರು ಮೃತಪಟ್ಟಿದ್ದ ವಿವಾದಾತ್ಮಕ ಗುಂಡಿನ ದಾಳಿ ಪ್ರಕರಣಕ್ಕೆ ಇದೀಗ ಕಾನೂನು ತಿರುವು ಸಿಕ್ಕಿದೆ. ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಮೂವರು ಅರಣ್ಯ ಸಿಬ್ಬಂದಿಗೆ ಕೊಳ್ಳೇಗಾಲದ ಮೊದಲ ಹೆಚ್ಚುವರಿ...

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...