Homeಮುಖಪುಟಅಸ್ಸಾಂ : 15 ಮಂದಿಗೆ 24 ಗಂಟೆಯೊಳಗೆ ದೇಶ ತೊರೆಯಲು ಆದೇಶ : ಮಾಧ್ಯಮಗಳ ಮೂಲಕ...

ಅಸ್ಸಾಂ : 15 ಮಂದಿಗೆ 24 ಗಂಟೆಯೊಳಗೆ ದೇಶ ತೊರೆಯಲು ಆದೇಶ : ಮಾಧ್ಯಮಗಳ ಮೂಲಕ ವಿಷಯ ತಿಳಿದುಕೊಂಡ ಕುಟುಂಬಸ್ಥರು

- Advertisement -
- Advertisement -

ಅಸ್ಸಾಂನ ನಾಗಾಂವ್ ಜಿಲ್ಲಾಡಳಿತವು 15 ಘೋಷಿತ ವಿದೇಶಿಯರಿಗೆ 24 ಗಂಟೆಗಳ ಒಳಗೆ ರಾಜ್ಯ ತೊರೆಯುವಂತೆ ಆದೇಶಿಸಿದ ಬಗ್ಗೆ ವರದಿಯಾಗಿದೆ.

ಬುಧವಾರ (ಡಿ.17) ಜಿಲ್ಲಾಡಳಿತ ಈ ಆದೇಶ ನೀಡಿತ್ತು. ಆದರೆ, ಇದುವರೆಗೆ (ಡಿ.20) ಈ 15 ಜನರನ್ನು ಗಡಿಯಾಚೆಗೆ ತಳ್ಳಿರುವ ಬಗ್ಗೆ ಖಚಿತ ಮಾಹಿತಿ ದೊರೆತಿಲ್ಲ.

ಗಮನಾರ್ಹ ವಿಷಯವೆಂದರೆ, ಬಂಧನ ಕೇಂದ್ರಗಳಲ್ಲಿದ್ದ ತಮ್ಮ ಸಂಬಂಧಿಕರನ್ನು ದೇಶ ತೊರೆಯಲು ಆದೇಶಿಸಲಾಗಿದೆ ಎಂಬುವುದು ಅವರ ಕುಟುಂಬಸ್ಥರಿಗೆ ಮಾಧ್ಯಮಗಳ ಮೂಲಕ ಗೊತ್ತಾಗಿದೆ ಎಂದು ವರದಿಗಳು ಹೇಳಿವೆ.

1950ರ ಅಸ್ಸಾಂನಿಂದ ವಲಸಿಗರನ್ನು ಹೊರಹಾಕುವ ಕಾಯ್ದೆಯಡಿಯಲ್ಲಿ ನಾಗಾಂವ್ ಜಿಲ್ಲಾಧಿಕಾರಿ ದೇವಶಿಶ್ ಶರ್ಮಾ ಅವರು ದೇಶ ತೊರೆಯುವಂತೆ ಆದೇಶಗ ಹೊರಡಿಸಿದ್ದಾರೆ.

ವಿದೇಶಿಯರ ನ್ಯಾಯಮಂಡಳಿಗಳನ್ನು ಬೈಪಾಸ್ ಮಾಡುವ ಮೂಲಕ ರಾಜ್ಯದಿಂದ ‘ಅಕ್ರಮ ವಲಸಿಗರನ್ನು’ ಹೊರಹಾಕಲು ಈ ಕಾಯ್ದೆಯು ಜಿಲ್ಲಾಧಿಕಾರಿಗಳು ಮತ್ತು ಹಿರಿಯ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಅಧಿಕಾರ ನೀಡುತ್ತದೆ.

ಝಹೂರ ಖಾತೂನ್, ಅಬ್ದುಲ್ ಅಝೀಝ್, ಅಹೇದಾ ಖಾತೂನ್, ಅಜುಫಾ ಖಾತೂನ್, ಹುಸೇನ್ ಅಲಿ, ಫಾಝಿಲಾ ಖಾತೂನ್, ಅನುರಾ ಬೇಗಂ, ಆಶಾ ಖಾತೂನ್, ನಝ್ರುಲ್ ಇಸ್ಲಾಂ, ರಹೀಮ್ ಶೇಖ್, ಬುರೆಕ್ ಅಲಿ, ಇದ್ರಿಸ್ ಅಲಿ, ರುಸ್ತಮ್ ಅಲಿ, ಅನ್ವರ್ ಖಾನ್ ಮತ್ತು ತಾಹೆರ್ ಅಲಿ ಅವರಿಗೆ 24 ಗಂಟೆಯೊಳಗೆ ಭಾರತ ತೊರೆಯುವಂತೆ ಸೂಚಿಸಲಾಗಿತ್ತು.

ಈ 15 ಜನರನ್ನು ವಿದೇಶಿಯರು ಎಂದು ಘೋಷಿಸಲಾಗಿದೆ. ಅವರು ಭಾರತದೊಳಗೆ ಇರುವುದು ಸಾರ್ವಜನಿಕ ಹಿತಾಸಕ್ತಿ ಮತ್ತು ರಾಜ್ಯದ ಆಂತರಿಕ ಭದ್ರತೆಗೆ ಅಪಾಯಕಾರಿ ಎಂದು ಜಿಲ್ಲಾಧಿಕಾರಿ ಆದೇಶ ಹೇಳಿದೆ.

ಜಿಲ್ಲಾಧಿಕಾರಿ ಅವರು ಧುಬ್ರಿ, ಶ್ರೀಭೂಮಿ ಅಥವಾ ದಕ್ಷಿಣ ಸಲ್ಮಾರ-ಮಂಕಚಾರ್ ಮಾರ್ಗಗಳ ಮೂಲಕ ರಾಜ್ಯವನ್ನು ತೊರೆಯುವಂತೆ ಸೂಚಿಸಿದ್ದರು.

ಆದೇಶಗಳನ್ನು ಪಾಲಿಸಲು ವಿಫಲರಾದರೆ, ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ಸರ್ಕಾರ ನಿಮ್ಮನ್ನು ರಾಜ್ಯದಿಂದ ಹೊರಗಟ್ಟಲು ಸೂಕ್ತ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಆದೇಶದಲ್ಲಿ ಎಚ್ಚರಿಸಲಾಗಿತ್ತು.

ಬುಧವಾರ ಆದೇಶ ಹೊರಡಿಸುವ ವೇಳೆ, 15 ಜನರನ್ನು ಗೋಲ್‌ಪಾರ ಜಿಲ್ಲೆಯ ಮಾಟಿಯಾ ಟ್ರಾನ್ಸಿಟ್ ಕ್ಯಾಂಪ್‌ನಲ್ಲಿ ಮತ್ತು ಕೊಕ್ರಝಾರ್ ಜಿಲ್ಲೆಯ ಅಸ್ಸಾಂ ಪೊಲೀಸ್ ಬೆಟಾಲಿಯನ್ ಸೌಲಭ್ಯದಲ್ಲಿ ಇರಿಸಲಾಗಿತ್ತು ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಒಟ್ಟು 19 ಪ್ರಕರಣಗಳು ದಾಖಲಾಗಿವೆ. ಉಳಿದ ನಾಲ್ಕು ಪ್ರಕರಣಗಳು ನ್ಯಾಯಾಲಯದಲ್ಲಿ ಬಾಕಿ ಇರುವುದರಿಂದ ಕೇವಲ 15 ಪ್ರಕರಣಗಳಲ್ಲಿ ಮಾತ್ರ ಗಡಿಪಾರು ಆದೇಶಗಳನ್ನು ನೀಡಲಾಗಿದೆ ಎಂದು ನಾಗಾಂವ್ ಪೊಲೀಸ್ ವರಿಷ್ಠಾಧಿಕಾರಿ ಸ್ವಪ್ನನೀಲ್ ದೇಕಾ ಹೇಳಿರುವುದಾಗಿ ವರದಿ ಉಲ್ಲೇಖಿಸಿದೆ.

ನವೆಂಬರ್‌ನಲ್ಲಿ, ಅಸ್ಸಾಂನ ಸೋನಿತ್‌ಪುರ ಜಿಲ್ಲೆಯಲ್ಲಿ ಐವರ ವಿರುದ್ಧ ಇದೇ ರೀತಿಯ ಆದೇಶಗಳನ್ನು ಹೊರಡಿಸಲಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...