Homeಮುಖಪುಟಅಸ್ಸಾಂ : 15 ಮಂದಿಗೆ 24 ಗಂಟೆಯೊಳಗೆ ದೇಶ ತೊರೆಯಲು ಆದೇಶ : ಮಾಧ್ಯಮಗಳ ಮೂಲಕ...

ಅಸ್ಸಾಂ : 15 ಮಂದಿಗೆ 24 ಗಂಟೆಯೊಳಗೆ ದೇಶ ತೊರೆಯಲು ಆದೇಶ : ಮಾಧ್ಯಮಗಳ ಮೂಲಕ ವಿಷಯ ತಿಳಿದುಕೊಂಡ ಕುಟುಂಬಸ್ಥರು

- Advertisement -
- Advertisement -

ಅಸ್ಸಾಂನ ನಾಗಾಂವ್ ಜಿಲ್ಲಾಡಳಿತವು 15 ಘೋಷಿತ ವಿದೇಶಿಯರಿಗೆ 24 ಗಂಟೆಗಳ ಒಳಗೆ ರಾಜ್ಯ ತೊರೆಯುವಂತೆ ಆದೇಶಿಸಿದ ಬಗ್ಗೆ ವರದಿಯಾಗಿದೆ.

ಬುಧವಾರ (ಡಿ.17) ಜಿಲ್ಲಾಡಳಿತ ಈ ಆದೇಶ ನೀಡಿತ್ತು. ಆದರೆ, ಇದುವರೆಗೆ (ಡಿ.20) ಈ 15 ಜನರನ್ನು ಗಡಿಯಾಚೆಗೆ ತಳ್ಳಿರುವ ಬಗ್ಗೆ ಖಚಿತ ಮಾಹಿತಿ ದೊರೆತಿಲ್ಲ.

ಗಮನಾರ್ಹ ವಿಷಯವೆಂದರೆ, ಬಂಧನ ಕೇಂದ್ರಗಳಲ್ಲಿದ್ದ ತಮ್ಮ ಸಂಬಂಧಿಕರನ್ನು ದೇಶ ತೊರೆಯಲು ಆದೇಶಿಸಲಾಗಿದೆ ಎಂಬುವುದು ಅವರ ಕುಟುಂಬಸ್ಥರಿಗೆ ಮಾಧ್ಯಮಗಳ ಮೂಲಕ ಗೊತ್ತಾಗಿದೆ ಎಂದು ವರದಿಗಳು ಹೇಳಿವೆ.

1950ರ ಅಸ್ಸಾಂನಿಂದ ವಲಸಿಗರನ್ನು ಹೊರಹಾಕುವ ಕಾಯ್ದೆಯಡಿಯಲ್ಲಿ ನಾಗಾಂವ್ ಜಿಲ್ಲಾಧಿಕಾರಿ ದೇವಶಿಶ್ ಶರ್ಮಾ ಅವರು ದೇಶ ತೊರೆಯುವಂತೆ ಆದೇಶಗ ಹೊರಡಿಸಿದ್ದಾರೆ.

ವಿದೇಶಿಯರ ನ್ಯಾಯಮಂಡಳಿಗಳನ್ನು ಬೈಪಾಸ್ ಮಾಡುವ ಮೂಲಕ ರಾಜ್ಯದಿಂದ ‘ಅಕ್ರಮ ವಲಸಿಗರನ್ನು’ ಹೊರಹಾಕಲು ಈ ಕಾಯ್ದೆಯು ಜಿಲ್ಲಾಧಿಕಾರಿಗಳು ಮತ್ತು ಹಿರಿಯ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಅಧಿಕಾರ ನೀಡುತ್ತದೆ.

ಝಹೂರ ಖಾತೂನ್, ಅಬ್ದುಲ್ ಅಝೀಝ್, ಅಹೇದಾ ಖಾತೂನ್, ಅಜುಫಾ ಖಾತೂನ್, ಹುಸೇನ್ ಅಲಿ, ಫಾಝಿಲಾ ಖಾತೂನ್, ಅನುರಾ ಬೇಗಂ, ಆಶಾ ಖಾತೂನ್, ನಝ್ರುಲ್ ಇಸ್ಲಾಂ, ರಹೀಮ್ ಶೇಖ್, ಬುರೆಕ್ ಅಲಿ, ಇದ್ರಿಸ್ ಅಲಿ, ರುಸ್ತಮ್ ಅಲಿ, ಅನ್ವರ್ ಖಾನ್ ಮತ್ತು ತಾಹೆರ್ ಅಲಿ ಅವರಿಗೆ 24 ಗಂಟೆಯೊಳಗೆ ಭಾರತ ತೊರೆಯುವಂತೆ ಸೂಚಿಸಲಾಗಿತ್ತು.

ಈ 15 ಜನರನ್ನು ವಿದೇಶಿಯರು ಎಂದು ಘೋಷಿಸಲಾಗಿದೆ. ಅವರು ಭಾರತದೊಳಗೆ ಇರುವುದು ಸಾರ್ವಜನಿಕ ಹಿತಾಸಕ್ತಿ ಮತ್ತು ರಾಜ್ಯದ ಆಂತರಿಕ ಭದ್ರತೆಗೆ ಅಪಾಯಕಾರಿ ಎಂದು ಜಿಲ್ಲಾಧಿಕಾರಿ ಆದೇಶ ಹೇಳಿದೆ.

ಜಿಲ್ಲಾಧಿಕಾರಿ ಅವರು ಧುಬ್ರಿ, ಶ್ರೀಭೂಮಿ ಅಥವಾ ದಕ್ಷಿಣ ಸಲ್ಮಾರ-ಮಂಕಚಾರ್ ಮಾರ್ಗಗಳ ಮೂಲಕ ರಾಜ್ಯವನ್ನು ತೊರೆಯುವಂತೆ ಸೂಚಿಸಿದ್ದರು.

ಆದೇಶಗಳನ್ನು ಪಾಲಿಸಲು ವಿಫಲರಾದರೆ, ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ಸರ್ಕಾರ ನಿಮ್ಮನ್ನು ರಾಜ್ಯದಿಂದ ಹೊರಗಟ್ಟಲು ಸೂಕ್ತ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಆದೇಶದಲ್ಲಿ ಎಚ್ಚರಿಸಲಾಗಿತ್ತು.

ಬುಧವಾರ ಆದೇಶ ಹೊರಡಿಸುವ ವೇಳೆ, 15 ಜನರನ್ನು ಗೋಲ್‌ಪಾರ ಜಿಲ್ಲೆಯ ಮಾಟಿಯಾ ಟ್ರಾನ್ಸಿಟ್ ಕ್ಯಾಂಪ್‌ನಲ್ಲಿ ಮತ್ತು ಕೊಕ್ರಝಾರ್ ಜಿಲ್ಲೆಯ ಅಸ್ಸಾಂ ಪೊಲೀಸ್ ಬೆಟಾಲಿಯನ್ ಸೌಲಭ್ಯದಲ್ಲಿ ಇರಿಸಲಾಗಿತ್ತು ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಒಟ್ಟು 19 ಪ್ರಕರಣಗಳು ದಾಖಲಾಗಿವೆ. ಉಳಿದ ನಾಲ್ಕು ಪ್ರಕರಣಗಳು ನ್ಯಾಯಾಲಯದಲ್ಲಿ ಬಾಕಿ ಇರುವುದರಿಂದ ಕೇವಲ 15 ಪ್ರಕರಣಗಳಲ್ಲಿ ಮಾತ್ರ ಗಡಿಪಾರು ಆದೇಶಗಳನ್ನು ನೀಡಲಾಗಿದೆ ಎಂದು ನಾಗಾಂವ್ ಪೊಲೀಸ್ ವರಿಷ್ಠಾಧಿಕಾರಿ ಸ್ವಪ್ನನೀಲ್ ದೇಕಾ ಹೇಳಿರುವುದಾಗಿ ವರದಿ ಉಲ್ಲೇಖಿಸಿದೆ.

ನವೆಂಬರ್‌ನಲ್ಲಿ, ಅಸ್ಸಾಂನ ಸೋನಿತ್‌ಪುರ ಜಿಲ್ಲೆಯಲ್ಲಿ ಐವರ ವಿರುದ್ಧ ಇದೇ ರೀತಿಯ ಆದೇಶಗಳನ್ನು ಹೊರಡಿಸಲಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಧ್ಯಪ್ರದೇಶದ ಕಟ್ನಿಯಲ್ಲಿ ಮಹಾರಾಷ್ಟ್ರಕ್ಕೆ ರೈಲಿನಲ್ಲಿ ಕಳ್ಳಸಾಗಣೆ ಮಾಡುತ್ತಿದ್ದ 163 ಅಪ್ರಾಪ್ತ ಬಾಲಕರ ರಕ್ಷಣೆ; 8 ಮಂದಿ ಬಂಧನ

ಕಟ್ನಿ: ಬಿಹಾರದಿಂದ ಮಹಾರಾಷ್ಟ್ರಕ್ಕೆ ಕಳ್ಳಸಾಗಣೆ ಮಾಡಲಾಗುತ್ತಿತ್ತು ಎನ್ನಲಾದ 163 ಅಪ್ರಾಪ್ತ ಬಾಲಕರನ್ನು ಮಧ್ಯಪ್ರದೇಶದ ಕಟ್ನಿ ಜಿಲ್ಲೆಯಲ್ಲಿ ಎಕ್ಸ್‌ಪ್ರೆಸ್ ರೈಲಿನಿಂದ ರೈಲ್ವೆ ಪೊಲೀಸರು ರಕ್ಷಿಸಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ಆರು ರಿಂದ 13 ವರ್ಷದೊಳಗಿನ...

ನಗರಪಾಲಿಕೆ ಚುನಾವಣೆಯಲ್ಲಿ ನಮಗೆ ಅಧಿಕಾರಕ್ಕೆ ಬರಲು ಒಂದು ಅವಕಾಶ ನೀಡಿ: ಬೆಂಗಳೂರಿಗರಿಗೆ ಎಚ್‌.ಡಿ ಕುಮಾರಸ್ವಾಮಿ ಮನವಿ

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಅಡಿಯಲ್ಲಿರುವ ಐದು ಮಹಾನಗರ ಪಾಲಿಕೆಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ತಮ್ಮನ್ನು ಬೆಂಬಲಿಸುವ ಮೂಲಕ ಅಧಿಕಾರಕ್ಕೆ ಬರುವ ಅವಕಾಶ ನೀಡುವಂತೆ ದೇವೇಗೌಡ ನೇತೃತ್ವದ ಜೆಡಿಎಸ್ ಶನಿವಾರ ಬೆಂಗಳೂರಿನ ಜನರನ್ನು...

ಅಬ್ದುಲ್ ಜಬ್ಬಾರ್ ರಾಜೀನಾಮೆ ಅಂಗೀಕರಿಸಿದ ಡಿ.ಕೆ ಶಿವಕುಮಾರ್; ಕೆಪಿಸಿಸಿ ಅಲ್ಪಸಂಖ್ಯಾತ ಘಟಕ ಸಮಿತಿ ವಿಸರ್ಜನೆ

ವಿಧಾನಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರು ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗಕ್ಕೆ ನೀಡಿದ ರಾಜೀನಾಮೆಯನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅಂಗೀಕರಿಸಿದ್ದಾರೆ, ಜೊತೆಗೆ ಅಲ್ಪಸಂಖ್ಯಾತ ಘಟಕ ಸಮಿತಿಯನ್ನೂ ವಿಸರ್ಜಿಸಿದ್ದಾರೆ ಎಂದು ವರದಿಯಾಗಿದೆ. ಕೆಪಿಸಿಸಿ ಅಲ್ಪಸಂಖ್ಯಾತ...

‘ಯುದ್ಧ ಭುಗಿಲೆದ್ದು ಪಾಕಿಸ್ತಾನ ಶಾಂತಿ ಸ್ಥಾಪಿಸಲು ವಿಫಲವಾದರೆ, ಇಸ್ರೇಲ್ ಮೇಲೆ ದಾಳಿ ಮಾಡುವುದು ನಮ್ಮ ಕರ್ತವ್ಯ’: ಟರ್ಕಿ ಅಧ್ಯಕ್ಷ ಎರ್ಡೋಗನ್

ಟರ್ಕಿ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ಡೊಗನ್ ಇಸ್ರೇಲ್ ವಿರುದ್ಧ ತೀಕ್ಷ್ಣ ಎಚ್ಚರಿಕೆ ನೀಡಿದ್ದು, ನಡೆಯುತ್ತಿರುವ ಸಂಘರ್ಷವನ್ನು ಶಮನಗೊಳಿಸಲು ರಾಜತಾಂತ್ರಿಕ ಪ್ರಯತ್ನಗಳು ವಿಫಲವಾದರೆ ಸಂಭಾವ್ಯ ಕ್ರಮ ಕೈಗೊಳ್ಳುವುದಾಗಿ ಪ್ರತಿಜ್ಞೆ ಮಾಡಿದ್ದಾರೆ. ಕಠಿಣ ಪದಗಳ ಹೇಳಿಕೆಯಲ್ಲಿ,...

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ ನಿಧನ

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ (92) ಅವರು ಭಾನುವಾರ (ಏ.12) ನಿಧನರಾಗಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ. ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ವೈದ್ಯ ಡಾ. ಪ್ರತೀತ್ ಸಮ್ದಾನಿ...

‘ಸಂವಿಧಾನವನ್ನು ಕೊನೆಗೊಳಿಸುವುದು ಆರ್‌ಎಸ್‌ಎಸ್-ಬಿಜೆಪಿಯ ಮುಖ್ಯ ಉದ್ದೇಶ’: ರಾಹುಲ್ ಗಾಂಧಿ ಆರೋಪ

ನವದೆಹಲಿ: ಆರ್‌ಎಸ್‌ಎಸ್ - ಬಿಜೆಪಿ ವಿರುದ್ಧ ಭಾನುವಾರ ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಭಾರತದಲ್ಲಿ ಎಲ್ಲರನ್ನೂ ಸಮಾನರು ಎಂದು ಪರಿಗಣಿಸಲು ಬಯಸದ ಕಾರಣ ಸಂವಿಧಾನವನ್ನು ಕೊನೆಗೊಳಿಸುವುದು ಅವರ ಮುಖ್ಯ...

ಗಾಝಾಗೆ ಜೀವರಕ್ಷಕ ನೆರವಿಗಾಗಿ ಗ್ಲೋಬಲ್ ಸುಮುದ್ ಫ್ಲೋಟಿಲ್ಲಾ ನೌಕಾಯಾನ; ನಾಗರಿಕರ ರಕ್ಷಣೆಗೆ ಕರೆ ನೀಡಿದ ಯುನೈಟೆಡ್ ಸ್ಟಾಫ್ ಫಾರ್ ಗಾಝಾ

ಗ್ಲೋಬಲ್ ಸುಮುದ್ ಫ್ಲೋಟಿಲ್ಲಾ ಭಾನುವಾರ ನೌಕಾಯಾನ ಮಾಡಲು ಸಿದ್ಧವಾಗುತ್ತಿದ್ದಂತೆ, ಗಾಝಾದ ಯುನೈಟೆಡ್ ಸ್ಟಾಫ್ ಅಂತರರಾಷ್ಟ್ರೀಯ ಕಾನೂನಿನ ಅಡಿಯಲ್ಲಿ ಕಾರ್ಯಾಚರಣೆಯಲ್ಲಿರುವ ನಾಗರಿಕರ ರಕ್ಷಣೆಗಾಗಿ ಕರೆ ನೀಡಿತು ಮತ್ತು ಗಾಝಾಗೆ ಮಾನವೀಯ ನೆರವು ಪ್ರಯತ್ನಗಳಿಗೆ ಬೆಂಬಲವನ್ನು...

ಲೆಬನಾನ್ ಮೇಲೆ ದಾಳಿ ಮುಂದುವರಿಸಿದ ಇಸ್ರೇಲ್ : 2 ಸಾವಿರ ದಾಟಿದ ಮೃತರ ಸಂಖ್ಯೆ

ಮಾರ್ಚ್ 2ರಿಂದ ಇಸ್ರೇಲ್ ನಡೆಸಿದ ದಾಳಿಯಲ್ಲಿ ಕನಿಷ್ಠ 2,020 ಜನರು ಸಾವನ್ನಪ್ಪಿದ್ದಾರೆ ಮತ್ತು 6,436 ಜನರು ಗಾಯಗೊಂಡಿದ್ದಾರೆ ಎಂದು ಲೆಬನಾನ್ ಆರೋಗ್ಯ ಸಚಿವಾಲಯ ತಿಳಿಸಿದೆ. ಸಾವನ್ನಪ್ಪಿದವರಲ್ಲಿ 165 ಮಕ್ಕಳು, 248 ಮಹಿಳೆಯರು ಮತ್ತು 85...

ಪ. ಬಂಗಾಳ ಚುನಾವಣೆ | ಭವಾನಿಪುರದಲ್ಲಿ ನನ್ನ ನಾಮಪತ್ರ ರದ್ದತಿಗೆ ಪಿತೂರಿ ನಡೆದಿತ್ತು : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳದ ಭವಾನಿಪುರ ವಿಧಾನಸಭಾ ಕ್ಷೇತ್ರದಲ್ಲಿ ತನ್ನ ನಾಮಪತ್ರವನ್ನು ರದ್ದುಗೊಳಿಸಲು ಉದ್ದೇಶಪೂರ್ವಕ ಪಿತೂರಿ ನಡೆದಿತ್ತು ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ. "ನಮ್ಮ ಹೋರಾಟ ಬಿಜೆಪಿ ವಿರುದ್ಧವಲ್ಲ; ವ್ಯವಸ್ಥೆಯಲ್ಲಿರುವ ದೋಷಗಳ ವಿರುದ್ಧ. ನನ್ನ ಸ್ವಂತ...

ಇಸ್ರೇಲ್‌ನಾದ್ಯಂತ ಯುದ್ಧ ವಿರೋಧಿ ಪ್ರತಿಭಟನೆ : ನೆತನ್ಯಾಹು ಆಡಳಿತ ವಿರುದ್ಧ ಬೀದಿಗಿಳಿದ ಜನ

ಗಾಝಾದಲ್ಲಿ ಸುಮಾರು 80 ಸಾವಿರದಷ್ಟು ಜನರನ್ನು ಹತ್ಯೆಗೈದ ಬಳಿಕ, ಈಗ ಲೆಬನಾನ್ ಮತ್ತು ಇರಾನ್ ಮೇಲೆ ದಾಳಿ ನಡೆಸುತ್ತಿರುವ ಇಸ್ರೇಲ್‌ನ ಬೆಂಜಮಿನ್ ನೆತನ್ಯಾಹು ಸರ್ಕಾರದ ವಿರುದ್ದ ಅಲ್ಲಿನ ನಾಗರಿಕರು ಬೀದಿಗಿಳಿದಿದ್ದಾರೆ. ನೆತನ್ಯಾಹು ಆಡಳಿತದ...