Homeಮುಖಪುಟಅಸ್ಸಾಂ : 15 ಮಂದಿಗೆ 24 ಗಂಟೆಯೊಳಗೆ ದೇಶ ತೊರೆಯಲು ಆದೇಶ : ಮಾಧ್ಯಮಗಳ ಮೂಲಕ...

ಅಸ್ಸಾಂ : 15 ಮಂದಿಗೆ 24 ಗಂಟೆಯೊಳಗೆ ದೇಶ ತೊರೆಯಲು ಆದೇಶ : ಮಾಧ್ಯಮಗಳ ಮೂಲಕ ವಿಷಯ ತಿಳಿದುಕೊಂಡ ಕುಟುಂಬಸ್ಥರು

- Advertisement -
- Advertisement -

ಅಸ್ಸಾಂನ ನಾಗಾಂವ್ ಜಿಲ್ಲಾಡಳಿತವು 15 ಘೋಷಿತ ವಿದೇಶಿಯರಿಗೆ 24 ಗಂಟೆಗಳ ಒಳಗೆ ರಾಜ್ಯ ತೊರೆಯುವಂತೆ ಆದೇಶಿಸಿದ ಬಗ್ಗೆ ವರದಿಯಾಗಿದೆ.

ಬುಧವಾರ (ಡಿ.17) ಜಿಲ್ಲಾಡಳಿತ ಈ ಆದೇಶ ನೀಡಿತ್ತು. ಆದರೆ, ಇದುವರೆಗೆ (ಡಿ.20) ಈ 15 ಜನರನ್ನು ಗಡಿಯಾಚೆಗೆ ತಳ್ಳಿರುವ ಬಗ್ಗೆ ಖಚಿತ ಮಾಹಿತಿ ದೊರೆತಿಲ್ಲ.

ಗಮನಾರ್ಹ ವಿಷಯವೆಂದರೆ, ಬಂಧನ ಕೇಂದ್ರಗಳಲ್ಲಿದ್ದ ತಮ್ಮ ಸಂಬಂಧಿಕರನ್ನು ದೇಶ ತೊರೆಯಲು ಆದೇಶಿಸಲಾಗಿದೆ ಎಂಬುವುದು ಅವರ ಕುಟುಂಬಸ್ಥರಿಗೆ ಮಾಧ್ಯಮಗಳ ಮೂಲಕ ಗೊತ್ತಾಗಿದೆ ಎಂದು ವರದಿಗಳು ಹೇಳಿವೆ.

1950ರ ಅಸ್ಸಾಂನಿಂದ ವಲಸಿಗರನ್ನು ಹೊರಹಾಕುವ ಕಾಯ್ದೆಯಡಿಯಲ್ಲಿ ನಾಗಾಂವ್ ಜಿಲ್ಲಾಧಿಕಾರಿ ದೇವಶಿಶ್ ಶರ್ಮಾ ಅವರು ದೇಶ ತೊರೆಯುವಂತೆ ಆದೇಶಗ ಹೊರಡಿಸಿದ್ದಾರೆ.

ವಿದೇಶಿಯರ ನ್ಯಾಯಮಂಡಳಿಗಳನ್ನು ಬೈಪಾಸ್ ಮಾಡುವ ಮೂಲಕ ರಾಜ್ಯದಿಂದ ‘ಅಕ್ರಮ ವಲಸಿಗರನ್ನು’ ಹೊರಹಾಕಲು ಈ ಕಾಯ್ದೆಯು ಜಿಲ್ಲಾಧಿಕಾರಿಗಳು ಮತ್ತು ಹಿರಿಯ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಅಧಿಕಾರ ನೀಡುತ್ತದೆ.

ಝಹೂರ ಖಾತೂನ್, ಅಬ್ದುಲ್ ಅಝೀಝ್, ಅಹೇದಾ ಖಾತೂನ್, ಅಜುಫಾ ಖಾತೂನ್, ಹುಸೇನ್ ಅಲಿ, ಫಾಝಿಲಾ ಖಾತೂನ್, ಅನುರಾ ಬೇಗಂ, ಆಶಾ ಖಾತೂನ್, ನಝ್ರುಲ್ ಇಸ್ಲಾಂ, ರಹೀಮ್ ಶೇಖ್, ಬುರೆಕ್ ಅಲಿ, ಇದ್ರಿಸ್ ಅಲಿ, ರುಸ್ತಮ್ ಅಲಿ, ಅನ್ವರ್ ಖಾನ್ ಮತ್ತು ತಾಹೆರ್ ಅಲಿ ಅವರಿಗೆ 24 ಗಂಟೆಯೊಳಗೆ ಭಾರತ ತೊರೆಯುವಂತೆ ಸೂಚಿಸಲಾಗಿತ್ತು.

ಈ 15 ಜನರನ್ನು ವಿದೇಶಿಯರು ಎಂದು ಘೋಷಿಸಲಾಗಿದೆ. ಅವರು ಭಾರತದೊಳಗೆ ಇರುವುದು ಸಾರ್ವಜನಿಕ ಹಿತಾಸಕ್ತಿ ಮತ್ತು ರಾಜ್ಯದ ಆಂತರಿಕ ಭದ್ರತೆಗೆ ಅಪಾಯಕಾರಿ ಎಂದು ಜಿಲ್ಲಾಧಿಕಾರಿ ಆದೇಶ ಹೇಳಿದೆ.

ಜಿಲ್ಲಾಧಿಕಾರಿ ಅವರು ಧುಬ್ರಿ, ಶ್ರೀಭೂಮಿ ಅಥವಾ ದಕ್ಷಿಣ ಸಲ್ಮಾರ-ಮಂಕಚಾರ್ ಮಾರ್ಗಗಳ ಮೂಲಕ ರಾಜ್ಯವನ್ನು ತೊರೆಯುವಂತೆ ಸೂಚಿಸಿದ್ದರು.

ಆದೇಶಗಳನ್ನು ಪಾಲಿಸಲು ವಿಫಲರಾದರೆ, ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ಸರ್ಕಾರ ನಿಮ್ಮನ್ನು ರಾಜ್ಯದಿಂದ ಹೊರಗಟ್ಟಲು ಸೂಕ್ತ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಆದೇಶದಲ್ಲಿ ಎಚ್ಚರಿಸಲಾಗಿತ್ತು.

ಬುಧವಾರ ಆದೇಶ ಹೊರಡಿಸುವ ವೇಳೆ, 15 ಜನರನ್ನು ಗೋಲ್‌ಪಾರ ಜಿಲ್ಲೆಯ ಮಾಟಿಯಾ ಟ್ರಾನ್ಸಿಟ್ ಕ್ಯಾಂಪ್‌ನಲ್ಲಿ ಮತ್ತು ಕೊಕ್ರಝಾರ್ ಜಿಲ್ಲೆಯ ಅಸ್ಸಾಂ ಪೊಲೀಸ್ ಬೆಟಾಲಿಯನ್ ಸೌಲಭ್ಯದಲ್ಲಿ ಇರಿಸಲಾಗಿತ್ತು ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಒಟ್ಟು 19 ಪ್ರಕರಣಗಳು ದಾಖಲಾಗಿವೆ. ಉಳಿದ ನಾಲ್ಕು ಪ್ರಕರಣಗಳು ನ್ಯಾಯಾಲಯದಲ್ಲಿ ಬಾಕಿ ಇರುವುದರಿಂದ ಕೇವಲ 15 ಪ್ರಕರಣಗಳಲ್ಲಿ ಮಾತ್ರ ಗಡಿಪಾರು ಆದೇಶಗಳನ್ನು ನೀಡಲಾಗಿದೆ ಎಂದು ನಾಗಾಂವ್ ಪೊಲೀಸ್ ವರಿಷ್ಠಾಧಿಕಾರಿ ಸ್ವಪ್ನನೀಲ್ ದೇಕಾ ಹೇಳಿರುವುದಾಗಿ ವರದಿ ಉಲ್ಲೇಖಿಸಿದೆ.

ನವೆಂಬರ್‌ನಲ್ಲಿ, ಅಸ್ಸಾಂನ ಸೋನಿತ್‌ಪುರ ಜಿಲ್ಲೆಯಲ್ಲಿ ಐವರ ವಿರುದ್ಧ ಇದೇ ರೀತಿಯ ಆದೇಶಗಳನ್ನು ಹೊರಡಿಸಲಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...