Homeಮುಖಪುಟಅಸ್ಸಾಂ : 15 ಮಂದಿಗೆ 24 ಗಂಟೆಯೊಳಗೆ ದೇಶ ತೊರೆಯಲು ಆದೇಶ : ಮಾಧ್ಯಮಗಳ ಮೂಲಕ...

ಅಸ್ಸಾಂ : 15 ಮಂದಿಗೆ 24 ಗಂಟೆಯೊಳಗೆ ದೇಶ ತೊರೆಯಲು ಆದೇಶ : ಮಾಧ್ಯಮಗಳ ಮೂಲಕ ವಿಷಯ ತಿಳಿದುಕೊಂಡ ಕುಟುಂಬಸ್ಥರು

- Advertisement -
- Advertisement -

ಅಸ್ಸಾಂನ ನಾಗಾಂವ್ ಜಿಲ್ಲಾಡಳಿತವು 15 ಘೋಷಿತ ವಿದೇಶಿಯರಿಗೆ 24 ಗಂಟೆಗಳ ಒಳಗೆ ರಾಜ್ಯ ತೊರೆಯುವಂತೆ ಆದೇಶಿಸಿದ ಬಗ್ಗೆ ವರದಿಯಾಗಿದೆ.

ಬುಧವಾರ (ಡಿ.17) ಜಿಲ್ಲಾಡಳಿತ ಈ ಆದೇಶ ನೀಡಿತ್ತು. ಆದರೆ, ಇದುವರೆಗೆ (ಡಿ.20) ಈ 15 ಜನರನ್ನು ಗಡಿಯಾಚೆಗೆ ತಳ್ಳಿರುವ ಬಗ್ಗೆ ಖಚಿತ ಮಾಹಿತಿ ದೊರೆತಿಲ್ಲ.

ಗಮನಾರ್ಹ ವಿಷಯವೆಂದರೆ, ಬಂಧನ ಕೇಂದ್ರಗಳಲ್ಲಿದ್ದ ತಮ್ಮ ಸಂಬಂಧಿಕರನ್ನು ದೇಶ ತೊರೆಯಲು ಆದೇಶಿಸಲಾಗಿದೆ ಎಂಬುವುದು ಅವರ ಕುಟುಂಬಸ್ಥರಿಗೆ ಮಾಧ್ಯಮಗಳ ಮೂಲಕ ಗೊತ್ತಾಗಿದೆ ಎಂದು ವರದಿಗಳು ಹೇಳಿವೆ.

1950ರ ಅಸ್ಸಾಂನಿಂದ ವಲಸಿಗರನ್ನು ಹೊರಹಾಕುವ ಕಾಯ್ದೆಯಡಿಯಲ್ಲಿ ನಾಗಾಂವ್ ಜಿಲ್ಲಾಧಿಕಾರಿ ದೇವಶಿಶ್ ಶರ್ಮಾ ಅವರು ದೇಶ ತೊರೆಯುವಂತೆ ಆದೇಶಗ ಹೊರಡಿಸಿದ್ದಾರೆ.

ವಿದೇಶಿಯರ ನ್ಯಾಯಮಂಡಳಿಗಳನ್ನು ಬೈಪಾಸ್ ಮಾಡುವ ಮೂಲಕ ರಾಜ್ಯದಿಂದ ‘ಅಕ್ರಮ ವಲಸಿಗರನ್ನು’ ಹೊರಹಾಕಲು ಈ ಕಾಯ್ದೆಯು ಜಿಲ್ಲಾಧಿಕಾರಿಗಳು ಮತ್ತು ಹಿರಿಯ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಅಧಿಕಾರ ನೀಡುತ್ತದೆ.

ಝಹೂರ ಖಾತೂನ್, ಅಬ್ದುಲ್ ಅಝೀಝ್, ಅಹೇದಾ ಖಾತೂನ್, ಅಜುಫಾ ಖಾತೂನ್, ಹುಸೇನ್ ಅಲಿ, ಫಾಝಿಲಾ ಖಾತೂನ್, ಅನುರಾ ಬೇಗಂ, ಆಶಾ ಖಾತೂನ್, ನಝ್ರುಲ್ ಇಸ್ಲಾಂ, ರಹೀಮ್ ಶೇಖ್, ಬುರೆಕ್ ಅಲಿ, ಇದ್ರಿಸ್ ಅಲಿ, ರುಸ್ತಮ್ ಅಲಿ, ಅನ್ವರ್ ಖಾನ್ ಮತ್ತು ತಾಹೆರ್ ಅಲಿ ಅವರಿಗೆ 24 ಗಂಟೆಯೊಳಗೆ ಭಾರತ ತೊರೆಯುವಂತೆ ಸೂಚಿಸಲಾಗಿತ್ತು.

ಈ 15 ಜನರನ್ನು ವಿದೇಶಿಯರು ಎಂದು ಘೋಷಿಸಲಾಗಿದೆ. ಅವರು ಭಾರತದೊಳಗೆ ಇರುವುದು ಸಾರ್ವಜನಿಕ ಹಿತಾಸಕ್ತಿ ಮತ್ತು ರಾಜ್ಯದ ಆಂತರಿಕ ಭದ್ರತೆಗೆ ಅಪಾಯಕಾರಿ ಎಂದು ಜಿಲ್ಲಾಧಿಕಾರಿ ಆದೇಶ ಹೇಳಿದೆ.

ಜಿಲ್ಲಾಧಿಕಾರಿ ಅವರು ಧುಬ್ರಿ, ಶ್ರೀಭೂಮಿ ಅಥವಾ ದಕ್ಷಿಣ ಸಲ್ಮಾರ-ಮಂಕಚಾರ್ ಮಾರ್ಗಗಳ ಮೂಲಕ ರಾಜ್ಯವನ್ನು ತೊರೆಯುವಂತೆ ಸೂಚಿಸಿದ್ದರು.

ಆದೇಶಗಳನ್ನು ಪಾಲಿಸಲು ವಿಫಲರಾದರೆ, ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ಸರ್ಕಾರ ನಿಮ್ಮನ್ನು ರಾಜ್ಯದಿಂದ ಹೊರಗಟ್ಟಲು ಸೂಕ್ತ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಆದೇಶದಲ್ಲಿ ಎಚ್ಚರಿಸಲಾಗಿತ್ತು.

ಬುಧವಾರ ಆದೇಶ ಹೊರಡಿಸುವ ವೇಳೆ, 15 ಜನರನ್ನು ಗೋಲ್‌ಪಾರ ಜಿಲ್ಲೆಯ ಮಾಟಿಯಾ ಟ್ರಾನ್ಸಿಟ್ ಕ್ಯಾಂಪ್‌ನಲ್ಲಿ ಮತ್ತು ಕೊಕ್ರಝಾರ್ ಜಿಲ್ಲೆಯ ಅಸ್ಸಾಂ ಪೊಲೀಸ್ ಬೆಟಾಲಿಯನ್ ಸೌಲಭ್ಯದಲ್ಲಿ ಇರಿಸಲಾಗಿತ್ತು ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಒಟ್ಟು 19 ಪ್ರಕರಣಗಳು ದಾಖಲಾಗಿವೆ. ಉಳಿದ ನಾಲ್ಕು ಪ್ರಕರಣಗಳು ನ್ಯಾಯಾಲಯದಲ್ಲಿ ಬಾಕಿ ಇರುವುದರಿಂದ ಕೇವಲ 15 ಪ್ರಕರಣಗಳಲ್ಲಿ ಮಾತ್ರ ಗಡಿಪಾರು ಆದೇಶಗಳನ್ನು ನೀಡಲಾಗಿದೆ ಎಂದು ನಾಗಾಂವ್ ಪೊಲೀಸ್ ವರಿಷ್ಠಾಧಿಕಾರಿ ಸ್ವಪ್ನನೀಲ್ ದೇಕಾ ಹೇಳಿರುವುದಾಗಿ ವರದಿ ಉಲ್ಲೇಖಿಸಿದೆ.

ನವೆಂಬರ್‌ನಲ್ಲಿ, ಅಸ್ಸಾಂನ ಸೋನಿತ್‌ಪುರ ಜಿಲ್ಲೆಯಲ್ಲಿ ಐವರ ವಿರುದ್ಧ ಇದೇ ರೀತಿಯ ಆದೇಶಗಳನ್ನು ಹೊರಡಿಸಲಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...