Homeಮುಖಪುಟನಾಲ್ವರು ಬಾಲಕರಿಂದ ಬಾಲಕಿಗೆ ಕಿರುಕುಳ ಆರೋಪ : 'ಉತ್ತಮ ಸಂಸ್ಕಾರ ಕಲಿಸಿಲ್ಲ' ಎಂದು ತಾಯಂದಿರನ್ನು ಬಂಧಿಸಿದ...

ನಾಲ್ವರು ಬಾಲಕರಿಂದ ಬಾಲಕಿಗೆ ಕಿರುಕುಳ ಆರೋಪ : ‘ಉತ್ತಮ ಸಂಸ್ಕಾರ ಕಲಿಸಿಲ್ಲ’ ಎಂದು ತಾಯಂದಿರನ್ನು ಬಂಧಿಸಿದ ಪೊಲೀಸರು!

- Advertisement -
- Advertisement -

ಉತ್ತರ ಪ್ರದೇಶದ ಬದೌನ್ ಜಿಲ್ಲೆಯಲ್ಲಿ ನಾಲ್ವರು ಬಾಲಕರ ವಿರುದ್ಧ ಬಾಲಕಿಗೆ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದ್ದು, ಪೊಲೀಸರು ಬಾಲಕರ ತಾಯಂದಿರನ್ನು ‘ಪ್ರಿವೆಂಟಿವ್ ಅರೆಸ್ಟ್’ ಮಾಡಿದ್ದಾರೆ ಎಂದು indianexpress.com ಶನಿವಾರ (ಡಿ.20) ವರದಿ ಮಾಡಿದೆ.

ಆರೋಪಿತ ಬಾಲಕರನ್ನು ಅವರ ತಾಯಂದಿರು ಸರಿಯಾಗಿ ಬೆಳೆಸಿಲ್ಲ, ಉತ್ತಮ ಸಂಸ್ಕಾರ ಕೊಟ್ಟಿಲ್ಲ. ಹಾಗಾಗಿ, ಅವರಿಗೆ ಪಾಠ ಕಲಿಸಲು ಬಂಧಿಸಿರುವುದಾಗಿ ಪೊಲೀಸ್ ಠಾಣೆಯ ಠಾಣಾಧಿಕಾರಿ (ಎಸ್‌ಹೆಚ್‌ಒ) ಸಮರ್ಥಿಸಿಕೊಂಡಿರುವುದಾಗಿ ವರದಿ ಉಲ್ಲೇಖಿಸಿದೆ.

ಈ ಬಗ್ಗೆ ಮಾಹಿತಿ ಪಡೆಯಲು ನಾವು ಬದೌನ್ ಎಸ್‌ಎಸ್‌ಪಿ ಬ್ರಿಜೇಶ್ ಕುಮಾರ್ ಸಿಂಗ್ ಅವರನ್ನು ಸಂಪರ್ಕಿಸಿದ್ದೇವೆ. ಅವರ ಅಧಿಕೃತ ಸಂಖ್ಯೆಗೆ ಕರೆ ಮಾಡಿದಾಗ ಪಿಆರ್‌ಒ ಕರೆ ಸ್ವೀಕರಿಸಿದ್ದಾರೆ. ಆದರೆ, ಪಿಆರ್‌ಒಗೆ ಈ ಪ್ರಕರಣದ ಬಗ್ಗೆ ಗೊತ್ತಿರಲಿಲ್ಲ. ಬರೇಲಿ ಡಿಐಜಿ ಅಜಯ್ ಕುಮಾರ್ ಸಾಹ್ನಿ ಅವರಿಗೂ ನಾವು ಕರೆ ಮಾಡಿದ್ದೇವೆ ಮತ್ತು ಮಾಹಿತಿ ಕೋರಿ ಮೆಸೇಜ್ ಕಳುಹಿಸಿದ್ದೇವೆ. ಆದರೆ, ಅವರಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ವರದಿ ಹೇಳಿದೆ.

ಪೊಲೀಸ್ ಠಾಣೆಯ ಎಸ್‌ಹೆಚ್‌ಒ ಅಜಯ್ ಪಾಲ್ ಸಿಂಗ್, ಬುಧವಾರ ಅಪ್ರಾಪ್ತ ಹುಡುಗಿಯ ಪೋಷಕರು ಒಂದೇ ಗ್ರಾಮದ ನಾಲ್ವರು ಹುಡುಗರು ಶಾಲೆಗೆ ಹೋಗಿ ಹಿಂತಿರುಗುವಾಗ ಅಶ್ಲೀಲವಾಗಿ ಮಾತನಾಡುತ್ತಾ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿದ ನಂತರ ಪ್ರಕರಣ ದಾಖಲಿಸಲಾಗಿದೆ ಎಂದು ಹೇಳಿದ್ದಾರೆ ಎಂದು ವರದಿ ತಿಳಿಸಿದೆ.

ಬಿಎನ್‌ಎಸ್ ಮತ್ತು ಪೋಕ್ಸೊ ಕಾಯ್ದೆಯ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. 13 ವರ್ಷದೊಳಗಿನ ಬಾಲಕರು ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದವರು ಎಂದು ಎಸ್‌ಎಚ್‌ಒ ಹೇಳಿರುವುದಾಗಿ ವರದಿ ಉಲ್ಲೇಖಿಸಿದೆ.

ಬಾಲಕರು ಅಪ್ರಾಪ್ತ ವಯಸ್ಕರಾಗಿರುವುದರಿಂದ, ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ಮನೆಗಳಿಗೆ ನೋಟಿಸ್ ನೀಡಿದ ನಂತರ ಶುಕ್ರವಾರ ಅವರ ತಾಯಂದಿರನ್ನು ಬಿಎನ್‌ಎಸ್‌ಎಸ್ ಸೆಕ್ಷನ್‌ಗಳ ಅಡಿಯಲ್ಲಿ ಬಂಧಿಸಲಾಗಿದೆ. ಅಪರಾಧ ಎದುರಿಸುತ್ತಿರುವ ಅಪ್ರಾಪ್ತ ವಯಸ್ಕರ ಪ್ರಕರಣಗಳಲ್ಲಿ ಪೋಷಕರಿಗೆ ನೋಟಿಸ್ ನೀಡಲಾಗುತ್ತದೆ ಎಂದು ಠಾಣಾಧಿಕಾರಿ ಸಿಂಗ್ ಹೇಳಿದ್ದಾರೆ ಎಂದು ವರದಿ ತಿಳಿಸಿದೆ.

ತಾಯಂದಿರನ್ನು ಏಕೆ ಬಂಧಿಸಲಾಗಿದೆ? ಎಂದು ಕೇಳಿದಾಗ, “ಆ ನಾಲ್ವರು ಹುಡುಗರು ಅಸಭ್ಯ ವರ್ತನೆಯುಳ್ಳವರು ಮತ್ತು ದುಷ್ಕೃತ್ಯಗಳಲ್ಲಿ ತೊಡಗಿಸಿಕೊಳ್ಳುವುದರಲ್ಲಿ ಹೆಸರುವಾಸಿಯಾಗಿದ್ದಾರೆ. ಹಾಗಾಗಿ, ಉತ್ತಮ ಮೌಲ್ಯಗಳನ್ನು ಕಲಿಸದ ಮತ್ತು ತಮ್ಮ ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡದ ಕಾರಣ ಅವರು ಇಂತಹ ಅಪರಾಧಗಳನ್ನು ಮಾಡುತ್ತಾರೆ ಎಂದು ಪೋಷಕರಿಗೆ ಸಂದೇಶ ಕಳುಹಿಸಬೇಕಿದೆ ಮತ್ತು ಪಾಠ ಕಲಿಸಬೇಕಿದೆ ಎಸ್‌ಎಚ್‌ಒ ಸಿಂಗ್ ಹೇಳಿದ್ದಾರೆ ಎಂದು ವರದಿ ವಿವರಿಸಿದೆ.

ನಾಲ್ವರ ತಂದೆಯಂದಿರು ಉತ್ತರ ಪ್ರದೇಶದ ಹೊರಗೆ ಉದ್ಯೋಗದಲ್ಲಿದ್ದು, ಮನೆಗೆ ಬಂದ ನಂತರ ಅವರನ್ನೂ ಬಂಧಿಸಲಾಗುವುದು.ಕಳೆದ ಹಲವು ದಿನಗಳಿಂದ ಬಾಲಕಿ ಹುಡುಗರಿಂದ ಕಿರುಕುಳಕ್ಕೊಳಗಾಗುತ್ತಿದ್ದಳು ಎಂದು ಸಿಂಗ್ ತಿಳಿಸಿದ್ದಾರೆ.

ಉಪ-ವಿಭಾಗೀಯ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಮುಂದೆ ವೈಯಕ್ತಿಕ ಬಾಂಡ್‌ಗಳನ್ನು ಸಲ್ಲಿಸಿದ ನಂತರ ತಾಯಂದಿರನ್ನು ಬಿಡುಗಡೆ ಮಾಡಲಾಗಿದೆ. ಬಂಧನದ ದಿನವೇ ಅವರನ್ನು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಗಿತ್ತು ಎಂದು ವರದಿ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ: ಕಣ್ಣೂರು ದಂತ ಕಾಲೇಜಿನಲ್ಲಿ ದಲಿತ ಬಿಡಿಎಸ್ ವಿದ್ಯಾರ್ಥಿ ಆತ್ಮಹತ್ಯೆ, ಕ್ರೂರ ಜಾತಿ ನಿಂದನೆ, ಅವಮಾನ ಆರೋಪ

ಕೇರಳದಲ್ಲಿ ನಡೆದ ಜಾತಿ ಆಧಾರಿತ ಕಿರುಕುಳದ ಆಘಾತಕಾರಿ ಪ್ರಕರಣದಲ್ಲಿ, ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ಶರಣಾಗಿದ್ದಾನೆ.   ಆರ್‌.ಎಲ್ ನಿತಿನ್ ರಾಜ್ ಅವರ ಕುಟುಂಬವು...

ಜಬ್ಬಾರ್​ರನ್ನು ಎಂಎಲ್‌ಸಿ ಮಾಡಿದ್ದು ನಾವು, ಪಕ್ಷದ ಅನ್ನ ತಿಂದ ಮೇಲೆ ಕೆಲಸ ಮಾಡಬೇಕಿತ್ತು : ಸಚಿವ ಎಸ್.ಎಸ್ ಮಲ್ಲಿಕಾರ್ಜುನ್

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಜನರ ಪ್ರತಿಕ್ರಿಯೆ ಚೆನ್ನಾಗಿತ್ತು, ನಾವು ಗೆಲುವು ಸಾಧಿಸುತ್ತೇವೆ ಎಂಬ ವಿಶ್ವಾಸವಿದೆ. ನಮ್ಮ ಮತದಾರ ಬಂಧುಗಳು ಉತ್ತಮವಾಗಿ ಮತದಾನ ಮಾಡಿದ್ದಾರೆ. ಒಳ್ಳೆಯ ಅಂತರದಲ್ಲಿ ಕಾಂಗ್ರೆಸ್‌ ಪಕ್ಷ ಗೆಲ್ಲುತ್ತೆ,...

ಧಾರವಾಡ: ಯುವ ಕಾಂಗ್ರೆಸ್ ನಾಯಕ ಫೈರೋಜ್ ಖಾನ್ ಪಠಾಣ್ ಹತ್ಯೆ; ಮೂವರು ಆರೋಪಿಗಳ ಬಂಧನ

ಧಾರವಾಡದಲ್ಲಿ ಶುಕ್ರವಾರ ತಡರಾತ್ರಿ ಯುವ ಕಾಂಗ್ರೆಸ್ ನಾಯಕನೊಬ್ಬನನ್ನು ಅವರ ನಿವಾಸದೊಳಗೆ ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ನಗರದಾದ್ಯಂತ ಆಘಾತದ ಅಲೆಗಳನ್ನು ಸೃಷ್ಟಿಸಿದೆ. ಮೃತ ವ್ಯಕ್ತಿಯನ್ನು ಫೈರೋಜ್ ಖಾನ್ ಪಠಾಣ್ (34) ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ,...

ಮಧ್ಯಪ್ರದೇಶದ ಕಟ್ನಿಯಲ್ಲಿ ಮಹಾರಾಷ್ಟ್ರಕ್ಕೆ ರೈಲಿನಲ್ಲಿ ಕಳ್ಳಸಾಗಣೆ ಮಾಡುತ್ತಿದ್ದ 163 ಅಪ್ರಾಪ್ತ ಬಾಲಕರ ರಕ್ಷಣೆ; 8 ಮಂದಿ ಬಂಧನ

ಕಟ್ನಿ: ಬಿಹಾರದಿಂದ ಮಹಾರಾಷ್ಟ್ರಕ್ಕೆ ಕಳ್ಳಸಾಗಣೆ ಮಾಡಲಾಗುತ್ತಿತ್ತು ಎನ್ನಲಾದ 163 ಅಪ್ರಾಪ್ತ ಬಾಲಕರನ್ನು ಮಧ್ಯಪ್ರದೇಶದ ಕಟ್ನಿ ಜಿಲ್ಲೆಯಲ್ಲಿ ಎಕ್ಸ್‌ಪ್ರೆಸ್ ರೈಲಿನಿಂದ ರೈಲ್ವೆ ಪೊಲೀಸರು ರಕ್ಷಿಸಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ಆರು ರಿಂದ 13 ವರ್ಷದೊಳಗಿನ...

ನಗರಪಾಲಿಕೆ ಚುನಾವಣೆಯಲ್ಲಿ ನಮಗೆ ಅಧಿಕಾರಕ್ಕೆ ಬರಲು ಒಂದು ಅವಕಾಶ ನೀಡಿ: ಬೆಂಗಳೂರಿಗರಿಗೆ ಎಚ್‌.ಡಿ ಕುಮಾರಸ್ವಾಮಿ ಮನವಿ

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಅಡಿಯಲ್ಲಿರುವ ಐದು ಮಹಾನಗರ ಪಾಲಿಕೆಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ತಮ್ಮನ್ನು ಬೆಂಬಲಿಸುವ ಮೂಲಕ ಅಧಿಕಾರಕ್ಕೆ ಬರುವ ಅವಕಾಶ ನೀಡುವಂತೆ ದೇವೇಗೌಡ ನೇತೃತ್ವದ ಜೆಡಿಎಸ್ ಶನಿವಾರ ಬೆಂಗಳೂರಿನ ಜನರನ್ನು...

ಅಬ್ದುಲ್ ಜಬ್ಬಾರ್ ರಾಜೀನಾಮೆ ಅಂಗೀಕರಿಸಿದ ಡಿ.ಕೆ ಶಿವಕುಮಾರ್; ಕೆಪಿಸಿಸಿ ಅಲ್ಪಸಂಖ್ಯಾತ ಘಟಕ ಸಮಿತಿ ವಿಸರ್ಜನೆ

ವಿಧಾನಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರು ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗಕ್ಕೆ ನೀಡಿದ ರಾಜೀನಾಮೆಯನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅಂಗೀಕರಿಸಿದ್ದಾರೆ, ಜೊತೆಗೆ ಅಲ್ಪಸಂಖ್ಯಾತ ಘಟಕ ಸಮಿತಿಯನ್ನೂ ವಿಸರ್ಜಿಸಿದ್ದಾರೆ ಎಂದು ವರದಿಯಾಗಿದೆ. ಕೆಪಿಸಿಸಿ ಅಲ್ಪಸಂಖ್ಯಾತ...

‘ಯುದ್ಧ ಭುಗಿಲೆದ್ದು ಪಾಕಿಸ್ತಾನ ಶಾಂತಿ ಸ್ಥಾಪಿಸಲು ವಿಫಲವಾದರೆ, ಇಸ್ರೇಲ್ ಮೇಲೆ ದಾಳಿ ಮಾಡುವುದು ನಮ್ಮ ಕರ್ತವ್ಯ’: ಟರ್ಕಿ ಅಧ್ಯಕ್ಷ ಎರ್ಡೋಗನ್

ಟರ್ಕಿ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ಡೊಗನ್ ಇಸ್ರೇಲ್ ವಿರುದ್ಧ ತೀಕ್ಷ್ಣ ಎಚ್ಚರಿಕೆ ನೀಡಿದ್ದು, ನಡೆಯುತ್ತಿರುವ ಸಂಘರ್ಷವನ್ನು ಶಮನಗೊಳಿಸಲು ರಾಜತಾಂತ್ರಿಕ ಪ್ರಯತ್ನಗಳು ವಿಫಲವಾದರೆ ಸಂಭಾವ್ಯ ಕ್ರಮ ಕೈಗೊಳ್ಳುವುದಾಗಿ ಪ್ರತಿಜ್ಞೆ ಮಾಡಿದ್ದಾರೆ. ಕಠಿಣ ಪದಗಳ ಹೇಳಿಕೆಯಲ್ಲಿ,...

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ ನಿಧನ

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ (92) ಅವರು ಭಾನುವಾರ (ಏ.12) ನಿಧನರಾಗಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ. ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ವೈದ್ಯ ಡಾ. ಪ್ರತೀತ್ ಸಮ್ದಾನಿ...

‘ಸಂವಿಧಾನವನ್ನು ಕೊನೆಗೊಳಿಸುವುದು ಆರ್‌ಎಸ್‌ಎಸ್-ಬಿಜೆಪಿಯ ಮುಖ್ಯ ಉದ್ದೇಶ’: ರಾಹುಲ್ ಗಾಂಧಿ ಆರೋಪ

ನವದೆಹಲಿ: ಆರ್‌ಎಸ್‌ಎಸ್ - ಬಿಜೆಪಿ ವಿರುದ್ಧ ಭಾನುವಾರ ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಭಾರತದಲ್ಲಿ ಎಲ್ಲರನ್ನೂ ಸಮಾನರು ಎಂದು ಪರಿಗಣಿಸಲು ಬಯಸದ ಕಾರಣ ಸಂವಿಧಾನವನ್ನು ಕೊನೆಗೊಳಿಸುವುದು ಅವರ ಮುಖ್ಯ...

ಗಾಝಾಗೆ ಜೀವರಕ್ಷಕ ನೆರವಿಗಾಗಿ ಗ್ಲೋಬಲ್ ಸುಮುದ್ ಫ್ಲೋಟಿಲ್ಲಾ ನೌಕಾಯಾನ; ನಾಗರಿಕರ ರಕ್ಷಣೆಗೆ ಕರೆ ನೀಡಿದ ಯುನೈಟೆಡ್ ಸ್ಟಾಫ್ ಫಾರ್ ಗಾಝಾ

ಗ್ಲೋಬಲ್ ಸುಮುದ್ ಫ್ಲೋಟಿಲ್ಲಾ ಭಾನುವಾರ ನೌಕಾಯಾನ ಮಾಡಲು ಸಿದ್ಧವಾಗುತ್ತಿದ್ದಂತೆ, ಗಾಝಾದ ಯುನೈಟೆಡ್ ಸ್ಟಾಫ್ ಅಂತರರಾಷ್ಟ್ರೀಯ ಕಾನೂನಿನ ಅಡಿಯಲ್ಲಿ ಕಾರ್ಯಾಚರಣೆಯಲ್ಲಿರುವ ನಾಗರಿಕರ ರಕ್ಷಣೆಗಾಗಿ ಕರೆ ನೀಡಿತು ಮತ್ತು ಗಾಝಾಗೆ ಮಾನವೀಯ ನೆರವು ಪ್ರಯತ್ನಗಳಿಗೆ ಬೆಂಬಲವನ್ನು...