Homeಕರ್ನಾಟಕಪೊಲೀಸ್ ಕಾರ್ಯಾಚರಣೆ ತಡೆದು ಕೋಳಿ ಅಂಕ : ಪುತ್ತೂರು ಶಾಸಕ ಅಶೋಕ್ ರೈ ಸೇರಿ 17...

ಪೊಲೀಸ್ ಕಾರ್ಯಾಚರಣೆ ತಡೆದು ಕೋಳಿ ಅಂಕ : ಪುತ್ತೂರು ಶಾಸಕ ಅಶೋಕ್ ರೈ ಸೇರಿ 17 ಮಂದಿ ವಿರುದ್ಧ ಪ್ರಕರಣ ದಾಖಲು

- Advertisement -
- Advertisement -

ಶಾಸಕರೇ ಮುಂದೆ ನಿಂತು ಕಾನೂನುಬಾಹಿರ ಚಟುವಟಿಕೆ ನಡೆಸಲು ಜನರನ್ನು ಪ್ರೋತ್ಸಾಹಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲ ಬಳಿ ಶನಿವಾರ (ಡಿ.20) ನಡೆದಿದೆ.

ಕೇಪು ಶ್ರೀ ಉಳ್ಳಾಲ್ತಿ ದೈವಸ್ಥಾನದ ವಠಾರದಲ್ಲಿ ನಡೆಯುತ್ತಿದ್ದ ಕೋಳಿ ಅಂಕಕ್ಕೆ ಪೊಲೀಸರು ಶನಿವಾರ ದಾಳಿ ನಡೆಸಿದ್ದರು. ಆದರೆ, ಪುತ್ತೂರು ಶಾಸಕ ಅಶೋಕ್ ರೈ ಖುದ್ದು ಮುಂದೆ ನಿಂತು ಸಂಪ್ರದಾಯದ ಹೆಸರಿನಲ್ಲಿ ಕೋಳಿ ಅಂಕ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಕೋಳಿ ಅಂಕಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನುಮತಿ ನೀಡಿರಲಿಲ್ಲ. ಹಾಗಾಗಿ, ಶನಿವಾರ ಮಧ್ಯಾಹ್ನ ಕೋಳಿ ಅಂಕ ಆರಂಭವಾಗುತ್ತಿದ್ದಂತೆ ಸ್ಥಳಕ್ಕೆ ವಿಟ್ಲ ಪೊಲೀಸರು ತೆರಳಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಪೊಲೀಸರು ಅಡ್ಡಿಪಡಿಸಿದ ಹಿನ್ನೆಲೆ, ಸ್ಥಳಕ್ಕೆ ತೆರಳಿದ ಶಾಸಕ ಅಶೋಕ್ ಕುಮಾರ್ ರೈ, “ಯಾರೂ ಓಡಬೇಡಿ ಕೋಳಿ ಅಂಕ ಸಂಜೆಯವರೆಗೆ ನಡೆದೇ ನಡೆಯುತ್ತದೆ. ನಾನು ಕೂಡ ನಿಮ್ಮ ಜೊತೆಗೆ ಇರುತ್ತೇನೆ” ಎಂದು ಹೇಳಿ ಸಂಜೆ 5 ಗಂಟೆಯವರೆಗೆ ಸ್ಥಳದಲ್ಲಿ ನಿಂತು ಕೋಳಿ ಅಂಕ ನಡೆಸಿದ್ದಾರೆ.

https://www.facebook.com/share/v/1CLEbhH6oj/

ಮಾಧ್ಯಮಗಳ ಜೊತೆ ಮಾತನಾಡಿರುವ ಅಶೋಕ್ ರೈ,”800 ವರ್ಷಗಳ ಇತಿಹಾಸವಿರುವ ಈ ಕ್ಷೇತ್ರದಲ್ಲಿ ಪ್ರತಿ ವರ್ಷ ಕೋಳಿ ಅಂಕ ನಡೆಯುತ್ತದೆ. ಇದು ಧಾರ್ಮಿಕ ಭಾವನೆ. ಇಲ್ಲಿ ಯಾವುದೇ ಜೂಜು ನಡೆಯುವುದಿಲ್ಲ. ಜನರು ಪ್ರೀತಿಯಿಂದ ಸಾಕಿದ ಕೋಳಿಯನ್ನು ಹರಕೆ ರೂಪದಲ್ಲಿ ತಂದು ಕೋಳಿ ಅಂಕ ನಡೆಸಿ, ಅದನ್ನು ರೈತರು ತೆಗೆದುಕೊಂಡು ಹೋಗುತ್ತಾರೆ. ಇದಕ್ಕೆ ಕಾನೂನಿನಲ್ಲಿ ಅವಕಾಶ ಇಲ್ಲ ಎಂಬುವುದ ನಮಗೆ ಗೊತ್ತಿದೆ. ಆದರೆ, ಜನರ ಧಾರ್ಮಿಕ ಭಾವನೆಗಳನ್ನು ಮನಗಂಡು ಅಧಿಕಾರಿಗಳಿಗೆ ಮನವಿ ಮಾಡಿದ್ದೇವೆ. ಆದರೂ ಪೊಲೀಸರು ಬಂದು ಚದುರಿಸುವಂತ ಪ್ರಯತ್ನ ಮಾಡಿದ್ದಾರೆ. ನಾವು ಕಾನೂನು ಬಾಹಿರ ಕೆಲಸ ಮಾಡಿಲ್ಲ” ಎಂದು ಸಮರ್ಥಿಸಿಕೊಂಡಿದ್ದಾರೆ.

ಅಶೋಕ್ ರೈ ಸೇರಿ 17 ಮಂದಿಯ ವಿರುದ್ದ ಪ್ರಕರಣ

ಯಾವುದೇ ಸೂಕ್ತ ಪರವಾನಿಗೆ ಪಡೆಯದೇ ಕಾನೂನುಬಾಹಿರವಾಗಿ ಕೋಳಿ ಅಂಕ ಆಯೋಜಿಸಿದ ವಿಚಾರಕ್ಕೆ ಸಂಬಂಧಿಸಿ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಸಹಿತ 17 ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಡಿ.20ರಂದು ಮಧ್ಯಾಹ್ನ ಕೇಪುವಿನ ಮುರಳೀಧರ ರೈ ಎಂಬವರ ಗದ್ದೆಯಲ್ಲಿ ಕಾನೂನುಬಾಹಿರವಾಗಿ ಕೋಳಿ ಅಂಕ ಆಡಲು ಮುಂದಾಗುತ್ತಿರುವ ಬಗ್ಗೆ ಮಾಹಿತಿ ಬಂದಿತ್ತು. ಈ ಹಿನ್ನೆಲೆಯಲ್ಲಿ ವಿಟ್ಲ ಠಾಣಾ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ ಹಲವು ಮಂದಿ ಕೋಳಿ ಅಂಕಕ್ಕೆ ಸಿದ್ಧರಾಗಿ ಗುಂಪು ಸೇರಿದ್ದರು. ಪೊಲೀಸರು ಅಲ್ಲಿದ್ದವರಿಗೆ ಕಾನೂನುಬಾಹಿರ ಕೋಳಿ ಅಂಕದ ಬಗ್ಗೆ ಕಾನೂನು ತಿಳುವಳಿಕೆ ನೀಡಿದ್ದಾರೆ. ಆದರೆ ಈ ವೇಳೆ ಸ್ಥಳದಲ್ಲಿ ಹಾಜರಿದ್ದ ಪುತ್ತೂರು ಶಾಸಕ ಅಶೋಕ್ ರೈ ಸೇರಿದ್ದ ಜನರಿಗೆ ಕಾನೂನುಬಾಹಿರವಾಗಿ ಕೋಳಿ ಅಂಕವನ್ನು ಮುಂದುವರಿಸುವಂತೆ ಪ್ರಚೋದನೆ ಮತ್ತು ದುಷ್ಪ್ರೇರಣೆ ನೀಡಿದ್ದಾರೆ. ಅದರಂತೆ ಸ್ಥಳದಲ್ಲಿ ಸೇರಿದ್ದ ಜನರು ಕೋಳಿ ಅಂಕ ಆರಂಭಿಸಿದ್ದಾರೆ ಎಂದು ಪೊಲೀಸ್ ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಈ ವೇಳೆ ಪೊಲೀಸರು ಕೋಳಿ ಅಂಕ ಆಟವಾಡುತ್ತಿದ್ದ 16 ಮಂದಿಯನ್ನು ವಶಕ್ಕೆ ಪಡೆದು, 22 ಹುಂಜ ಕೋಳಿಗಳನ್ನು ಹಾಗೂ ಕೋಳಿ ಅಂಕಕ್ಕೆ ಬಳಸುವ ಬಾಳು(ಕತ್ತಿ)ಗಳನ್ನು ವಶಕ್ಕೆ ಪಡೆದಿದ್ದಾರೆ.

ಪರವಾನಿಗೆ ಪಡೆಯದೆ ಕಾನೂನು ಬಾಹಿರವಾಗಿ ಕೋಳಿ ಅಂಕಕ್ಕೆ ಅವಕಾಶ ಮಾಡಿಕೊಟ್ಟ ಜಾಗದ ಮಾಲಕ ಮುರಳೀಧರ ರೈ, ಕಾನೂನುಬಾಹಿರ ಕೃತ್ಯವನ್ನು ನಡೆಸಲು ಪ್ರಚೋದನೆ-ದುಷ್ಪ್ರೇರಣೆ ನೀಡಿದ ಆರೋಪದಲ್ಲಿ ಶಾಸಕ ಅಶೋಕ್ ರೈ ವಿರುದ್ಧ ಹಾಗೂ ಕೋಳಿ ಅಂಕದಲ್ಲಿ ತೊಡಗಿದ್ದ 16 ಮಂದಿಯ ವಿರುದ್ಧ ವಿಟ್ಲ ಠಾಣೆಯಲ್ಲಿ ಅ.ಕ್ರ: 190/2025, ಕಲಂ:189(2),49, 221,223,190)BNS-2023, PREVENTION OF CRUELTY TO ANIMALS ACT, 1960 (U/s-3,11) ರಂತೆ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...