Homeಕರ್ನಾಟಕಬೆಂಗಳೂರು : ಜಿಬಿಎ ಅಧಿಕಾರಿಗಳಿಂದ 200ರಷ್ಟು ಮನೆಗಳ ನೆಲಸಮ : ಬೀದಿಗೆ ಬಿದ್ದ ಬಡ ಜನರು

ಬೆಂಗಳೂರು : ಜಿಬಿಎ ಅಧಿಕಾರಿಗಳಿಂದ 200ರಷ್ಟು ಮನೆಗಳ ನೆಲಸಮ : ಬೀದಿಗೆ ಬಿದ್ದ ಬಡ ಜನರು

- Advertisement -
- Advertisement -

ಅತಿಕ್ರಮಣ ಆರೋಪದ ಮೇಲೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಅಧಿಕಾರಿಗಳು ಬೆಂಗಳೂರು ಉತ್ತರ ನಗರ ಪಾಲಿಕೆ ವ್ಯಾಪ್ತಿಯ ಕೋಗಿಲು ಬಂಡೆ ಬಳಿಯ 5 ಎಕರೆ ಜಾಗದಲ್ಲಿದ್ದ ಸುಮಾರು 200ರಷ್ಟು ಮನೆಗಳನ್ನು ಶನಿವಾರ (ಡಿ.20) ತೆರವುಗೊಳಿಸಿದ್ದು, ಬಡ ಜನರು ಬೀದಿಗೆ ಬಿದ್ದಿದ್ದಾರೆ.

ಯಲಹಂಕ ಹೋಬಳಿ ಕೋಗಿಲು ಗ್ರಾಮದ ಸರ್ವೆ ನಂ. 99ರಲ್ಲಿ ಒಟ್ಟು 14 ಎಕರೆ 36 ಗುಂಟೆ ವಿಸ್ತೀರ್ಣದ ಜಮೀನಿನಲ್ಲಿ, ಬಿಎಸ್‌ಡಬ್ಲ್ಯುಎಂಎಲ್‌ ವತಿಯಿಂದ ಪ್ರಸ್ತಾವಿತ ಬಯೋ ಮೆಥನೈಸೇಶನ್ ಪ್ಲಾಂಟ್, ಅನಿಮಲ್ ರೆಂಡರಿಂಗ್, ಎಳನೀರು ಬುರುಡೆ ಸಂಸ್ಕರಣಾ ಮತ್ತು ಸ್ಯಾನಿಟರಿ ತ್ಯಾಜ್ಯ ಸಂಸ್ಕರಣಾ ಸೌಲಭ್ಯಗಳನ್ನು ಕಾರ್ಯಗತಗೊಳಿಸಲು ಯೋಜಿಸಲಾಗಿತ್ತು.

ಬಿಎಸ್‌ಡಬ್ಲ್ಯುಎಂಎಲ್‌ಗೆ ಮೀಸಲಿರಿಸಿದ್ದ ಜಾಗದಲ್ಲಿ ಜನರು 200ರಷ್ಟು ಶೆಡ್/ ಮನೆಗಳನ್ನು ನಿರ್ಮಾಣ ಮಾಡಿಕೊಂಡಿದ್ದರು. ಹಾಗಾಗಿ, ನಿಯಮನುಸಾರ ತೆರವುಗೊಳಿಸಿದ್ದೇವೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಮುಂಜಾನೆ 4 ಗಂಟೆಗೆ ಅಧಿಕಾರಿಗಳು ಬುಲ್ಡೋಝರ್‌ಗಳನ್ನು ತಂದು ಮನೆಗಳನ್ನು ಕೆಡವಲು ಶುರು ಮಾಡಿದರು. ತಕ್ಷಣ ಮನೆಗಳನ್ನು ಕಾಲಿ ಮಾಡುವಂತೆ ಸೂಚಿಸಿದರು. ನಮಗೆ ನಮ್ಮ ದಾಖಲೆ ಪತ್ರಗಳು ಸೇರಿದಂತೆ ಅಗತ್ಯ ವಸ್ತುಗಳನ್ನು ತೆಗೆದುಕೊಳ್ಳಲೂ ಸಮಯ ನೀಡಿಲ್ಲ ಎಂದು ನಿರಾಶ್ರಿತರಾದ ಜನರು ಆರೋಪಿಸಿದ್ದಾರೆ.

ಆದರೆ, ಅಧಿಕಾರಿಗಳು ನಾವು ಒಂದು ತಿಂಗಳಲ್ಲಿ ಎರಡು ಬಾರಿ ನೋಟಿಸ್ ಕೊಟ್ಟು ಮನೆಗಳನ್ನು ತೆರವುಗೊಳಿಸುವಂತೆ ಸೂಚಿಸಿದ್ದೆವು. ಅದರ ನಂತರ ಕಾನೂನಿನಂತೆ ತೆರವು ಕಾರ್ಯಚರಣೆ ನಡೆಸಿದ್ದೇವೆ ಎಂದು ಸಮರ್ಥಿಸಿಕೊಂಡಿದ್ದಾರೆ.

ಕೋಗಿಲು ಗ್ರಾಮದ ಫಕೀರ್ ಕಾಲೋನಿ ಮತ್ತು ವಸೀಮ್ ಲೇಔಟ್‌ನಲ್ಲಿದ್ದ ಮನೆಗಳನ್ನು ತೆರವುಗೊಳಿಸಲಾಗಿದೆ.

ಕೋಗಿಲು ಗ್ರಾಮದ ಸರ್ಕಾರಿ ಉರ್ದು ಶಾಲೆಯ ಬಳಿಯ ಸಣ್ಣ ಕೊಳದ ಪಕ್ಕದಲ್ಲಿರುವ ಭೂಮಿಯನ್ನು ಅತಿಕ್ರಮಣ ಮಾಡಿಕೊಂಡು ಜನರು ಮನೆಗಳನ್ನು ಕಟ್ಟಿಕೊಂಡಿದ್ದರು ಎಂದು ಅಧಿಕಾರಿಗಳು ಹೇಳಿದ್ದಾರೆ.

ಮನೆಗಳಲ್ಲಿದ್ದ ಎಲ್‌ಪಿಜಿ ಸಿಲಿಂಡರ್, ಗ್ಯಾಸ್ ಸ್ಟವ್ ಸೇರಿದಂತೆ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ತೆರವುಗೊಳಿಸಿದ ಬಳಿಕ ಅಧಿಕಾರಿಗಳು ಮನೆಗಳನ್ನು ಕೆಡವಲು ಪ್ರಾರಂಭಿಸಿದರು. ಸ್ಥಳದಲ್ಲಿ 150ಕ್ಕೂ ಹೆಚ್ಚು ಪೊಲೀಸರು, ಜೊತೆಗೆ ಜಿಬಿಎ ಮಾರ್ಷಲ್‌ಗಳನ್ನು ನಿಯೋಜಿಸಲಾಗಿತ್ತು. ಹಿರಿಯ ಅಧಿಕಾರಿಗಳೂ ಸ್ಥಳದಲ್ಲಿ ಇದ್ದರು. ತೆರವು ಕಾರ್ಯಾಚರಣೆಗೆ ತೀವ್ರ ಅಡ್ಡಿಪಡಿಸಿದ ಕೆಲವರನ್ನು ಪೊಲೀಸರು ವಶಕ್ಕೆ ಪಡೆದರು ಎಂದು ವರದಿಗಳು ಹೇಳಿವೆ.

ಜನರು ಅನಧಿಕೃತವಾಗಿ ಸರ್ಕಾರಿ ಜಾಗದಲ್ಲಿ ಮನೆಗಳನ್ನು ಕಟ್ಟಿಕೊಂಡಿದ್ದರು. ಅವರಲ್ಲಿ ಹೆಚ್ಚಿನವರು ಹೈದರಾಬಾದ್ ಮತ್ತು ಆಂಧ್ರಪ್ರದೇಶದ ವಿವಿಧ ಭಾಗಗಳಿಂದ ವಲಸೆ ಬಂದ ಅಲ್ಪಸಂಖ್ಯಾತ ದರ್ವೇಶ್ ಸಮುದಾಯಕ್ಕೆ ಸೇರಿದವರು ಎಂದು ಅಧಿಕಾರಿಗಳು ಹೇಳಿದ್ದಾರೆ. ಆದರೆ, ನಿರಾಶ್ರಿತರಾದ ಜನರು ನಾವು 25 ವರ್ಷಗಳಿಂದ ಇಲ್ಲೇ ಇದ್ದೇವೆ ಎಂದು ಹೇಳಿಕೊಂಡಿದ್ದಾರೆ.

ಮಾಧ್ಯಮಗಳ ಜೊತೆ ಮಾತನಾಡಿರುವ ದುಡಿಯುವ ಜನರ ವೇದಿಕೆಯ ಸದಸ್ಯೆ ಪೂಜಾ ಹೆಚ್.ಎಂ, “ನಿರಾಶ್ರಿತರಾದ ಕುಟುಂಬಗಳು ಆಧಾರ್‌ ಕಾರ್ಡ್‌, ವೋಟರ್ ಐಡಿ ಸೇರಿದಂತೆ ಮಾನ್ಯ ದಾಖಲೆಗಳನ್ನು ಹೊಂದಿದ್ದು, ಭಿಕ್ಷಾಟನೆ ಮತ್ತು ಸಣ್ಣಪುಟ್ಟ ಕೆಲಸಗಳ ಮೂಲಕ ತಮ್ಮ ಜೀವನೋಪಾಯವನ್ನು ಗಳಿಸುತ್ತಿದ್ದರು” ಎಂದು ಹೇಳಿದ್ದಾರೆ.

“ಹಲವು ಕುಟುಂಬಗಳು ಬ್ಯಾಂಕ್‌ಗಳಿಂದ ಸಾಲ ಪಡೆದಿವೆ. ಮನೆಗಳನ್ನು ಕೆಡವುವ ಮೊದಲು ಯಾವುದೇ ಪೂರ್ವ ಸೂಚನೆ ನೀಡಿರಲಿಲ್ಲ. ಹಲವು ಮಹಿಳೆಯರು ಗರ್ಭಿಣಿಯರಾಗಿದ್ದಾರೆ. ಅಧಿಕಾರಿಗಳು ಅವರ ಸ್ಥಿತಿಯ ಬಗ್ಗೆ ಯಾವುದೇ ಕಾಳಜಿ ತೋರಿಸಿಲ್ಲ” ಎಂದು ತಿಳಿಸಿದ್ದಾರೆ.

ಕಾರ್ಯಾಚರಣೆಯ ಸಮಯದಲ್ಲಿ ಜಿಲ್ಲಾಡಳಿತದ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಆದರೆ, ಅವರು ನಮಗೆ ಯಾವುದೇ ಸ್ಪಷ್ಟೀಕರಣ ನೀಡಿಲ್ಲ. ನಮ್ಮ ಕಳವಳಗಳನ್ನು ಪರಿಹರಿಸಿಲ್ಲ ಎಂದು ಜನರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಣು ವಿದ್ಯುತ್ ಯೋಜನೆ ಕುರಿತು ಯುಪಿ ಸರ್ಕಾರದೊಂದಿಗೆ ಅದಾನಿ ಗ್ರೂಪ್ ಮಾತುಕತೆ: ವರದಿ

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, ‘ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿದೆ. ಈ ಬೆನ್ನಲ್ಲೇ...

ಅನಧಿಕೃತ ಬುದ್ಧಿಮಾಂದ್ಯ ಶಾಲೆಯಲ್ಲಿ ಬುದ್ಧಿಮಾಂದ್ಯ ಬಾಲಕನ ಮೇಲೆ ಅಮಾನವೀಯ ಹಲ್ಲೆ: ದಂಪತಿಯನ್ನು ವಶಕ್ಕೆ ಪಡೆದ ಪೊಲೀಸರು

ಬಾಗಲಕೋಟೆ: ಬಾಗಲಕೋಟೆಯ ಅನಧಿಕೃತ ದಿವ್ಯಜ್ಯೋತಿ ಬುದ್ಧಿಮಾಂದ್ಯ ಶಾಲೆಯಲ್ಲಿ ಶಿಕ್ಷಕ ದಂಪತಿ ಬುದ್ಧಿಮಾಂದ್ಯನ ಮೇಲೆ ಅಮಾನವೀಯವಾಗಿ ಹಲ್ಲೆ ನಡೆಸಿದ್ದು, ವೀಡಿಯೋ ವೈರಲ್ ಆದ ಬೆನ್ನಲ್ಲೇ ಘಟನೆಗೆ ಆಕ್ರೋಶಗಳು ವ್ಯಕ್ತವಾಗುತ್ತಿವೆ. ಮುಧೋಳ ತಾಲೂಕಿನ ಮಂಟೂರು ಗ್ರಾಮದ 16...

ಜೆಫ್ರಿ ಎಪ್‌ಸ್ಟೀನ್ ಫೈಲ್ಸ್: ನ್ಯಾಯಾಂಗ ಇಲಾಖೆಯ ವೆಬ್ ಪುಟದಿಂದ ಟ್ರಂಪ್ ಫೋಟೋ ಸೇರಿದಂತೆ 16 ದಾಖಲೆಗಳು ಕಣ್ಮರೆ 

ನ್ಯೂಯಾರ್ಕ್: ಜೆಫ್ರಿ ಎಪ್‌ಸ್ಟೀನ್ ಗೆ ಸಂಬಂಧಿಸಿದ ದಾಖಲೆಗಳಿರುವ ಅಮೆರಿಕದ ನ್ಯಾಯ ಇಲಾಖೆಯ (Justice Department) ಸಾರ್ವಜನಿಕ ವೆಬ್‌ಪುಟದಿಂದ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಫೋಟೋ ಸೇರಿದಂತೆ ಕನಿಷ್ಟ 16 ದಾಖಲೆಗಳು ನಾಪತ್ತೆಯಾಗಿರುವುದಾಗಿ ತಿಳಿದುಬಂದಿದೆ. ಅಪ್ರಾಪ್ತ...

ಬಾಂಗ್ಲಾದೇಶದಲ್ಲಿ ಮುಂದುವರಿದ ಹಿಂಸಾಚಾರ| ಬಿಎನ್‌ಪಿ ನಾಯಕನ ಮನೆಗೆ ಬೆಂಕಿ : 7 ವರ್ಷದ ಮಗಳು ಸಜೀವ ದಹನ

ವಿದ್ಯಾರ್ಥಿ ನಾಯಕ ಹಾಗೂ ಸ್ವತಂತ್ರ ರಾಜಕಾರಣಿ ಷರೀಫ್ ಉಸ್ಮಾನ್ ಹಾದಿ ಅವರ ಸಾವಿನ ಬಳಿಕ ಬಾಂಗ್ಲಾ ದೇಶದಲ್ಲಿ ಭುಗಿಲೆದ್ದಿರುವ ಹಿಂಸಾಚಾರ ತೀವ್ರ ಸ್ವರೂಪ ಪಡೆದುಕೊಂಡಿದೆ. ಹಿಂಸಾತ್ಮಕ ಪ್ರತಿಭಟನೆಯ ಮೂರನೇ ದಿನವಾದ ಶನಿವಾರ, ಪ್ರತಿಭಟನಾಕಾರರು ಬಾಂಗ್ಲಾದೇಶ್...

ದಕ್ಷಿಣ ಆಫ್ರಿಕಾದಲ್ಲಿ ಸಾರ್ವಜನಿಕರ ಮೇಲೆ ದಾಳಿಕೋರರು ನಡೆಸಿದ ಗುಂಡಿನ ದಾಳಿಯಲ್ಲಿ 9 ಜನರ ಸಾವು 

ಜೋಹಾನ್ಸ್‌ಬರ್ಗ್‌ನ ಹೊರಗಿನ ಬಾರ್‌ನಲ್ಲಿ ಭಾನುವಾರ ಮುಂಜಾನೆ ಅಪರಿಚಿತ ಬಂದೂಕುಧಾರಿಗಳು ನಡೆಸಿದ ಗುಂಡಿನ ದಾಳಿಯಲ್ಲಿ ಒಂಬತ್ತು ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ತಿಂಗಳು ದಕ್ಷಿಣ ಆಫ್ರಿಕಾದಲ್ಲಿ ನಡೆದ ಎರಡನೇ ಗುಂಡಿನ ದಾಳಿ...

ಕೇರಳ ದಲಿತ ಕಾರ್ಮಿಕನ ಗುಂಪುಹತ್ಯೆ: ನನ್ನ ವೃತ್ತಿ ಬದುಕಿನಲ್ಲೇ ಇಂತಹ ಹಿಂಸಾಚಾರ ನೋಡಿಲ್ಲ ಎಂದ ವೈದ್ಯರು

ಕೇರಳದ ಪಾಲಕ್ಕಾಡ್ ಜಿಲ್ಲೆಯ ವಲಯಾರ್‌ನಲ್ಲಿ ಗುಂಪೊಂದು ಹಲ್ಲೆ ನಡೆಸಿ ಹತ್ಯೆ ಮಾಡಿದ ಛತ್ತೀಸ್‌ಗಢದ ದಲಿತ ವಲಸೆ ಕಾರ್ಮಿಕ ರಾಮ್ ನಾರಾಯಣ್ ಅವರ ಮರಣೋತ್ತರ ಪರೀಕ್ಷೆಯು ದಾಳಿಯ ತೀವ್ರ ಕ್ರೌರ್ಯವನ್ನು ಬಹಿರಂಗಪಡಿಸಿದೆ, ದೇಹದ ಒಂದು...

ಪೊಲೀಸ್ ಕಾರ್ಯಾಚರಣೆ ತಡೆದು ಕೋಳಿ ಅಂಕ : ಪುತ್ತೂರು ಶಾಸಕ ಅಶೋಕ್ ರೈ ಸೇರಿ 17 ಮಂದಿ ವಿರುದ್ಧ ಪ್ರಕರಣ ದಾಖಲು

ಶಾಸಕರೇ ಮುಂದೆ ನಿಂತು ಕಾನೂನುಬಾಹಿರ ಚಟುವಟಿಕೆ ನಡೆಸಲು ಜನರನ್ನು ಪ್ರೋತ್ಸಾಹಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲ ಬಳಿ ಶನಿವಾರ (ಡಿ.20) ನಡೆದಿದೆ. ಕೇಪು ಶ್ರೀ ಉಳ್ಳಾಲ್ತಿ ದೈವಸ್ಥಾನದ ವಠಾರದಲ್ಲಿ ನಡೆಯುತ್ತಿದ್ದ...

ನಾಲ್ವರು ಬಾಲಕರಿಂದ ಬಾಲಕಿಗೆ ಕಿರುಕುಳ ಆರೋಪ : ‘ಉತ್ತಮ ಸಂಸ್ಕಾರ ಕಲಿಸಿಲ್ಲ’ ಎಂದು ತಾಯಂದಿರನ್ನು ಬಂಧಿಸಿದ ಪೊಲೀಸರು!

ಉತ್ತರ ಪ್ರದೇಶದ ಬದೌನ್ ಜಿಲ್ಲೆಯಲ್ಲಿ ನಾಲ್ವರು ಬಾಲಕರ ವಿರುದ್ಧ ಬಾಲಕಿಗೆ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದ್ದು, ಪೊಲೀಸರು ಬಾಲಕರ ತಾಯಂದಿರನ್ನು 'ಪ್ರಿವೆಂಟಿವ್ ಅರೆಸ್ಟ್' ಮಾಡಿದ್ದಾರೆ ಎಂದು indianexpress.com ಶನಿವಾರ (ಡಿ.20) ವರದಿ...

ಎಸ್‌ಐಆರ್‌: ಸ್ಟಾಲಿನ್ ಅವರ ಕೊಳತ್ತೂರು ಕ್ಷೇತ್ರದಲ್ಲಿ 1 ಲಕ್ಷ ಮತದಾರ ಹೆಸರು ಕರಡು ಮತದಾರರ ಪಟ್ಟಿಯಲ್ಲಿ ಡಿಲೀಟ್

ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರ ಕೊಳತ್ತೂರು ಕ್ಷೇತ್ರದಿಂದ 1,03,812 ಕ್ಕೂ ಹೆಚ್ಚು ಮತದಾರರ ಹೆಸರು ತೆಗೆದುಹಾಕಲಾಗಿದೆ. ಇದು ತಮಿಳುನಾಡಿನಲ್ಲಿ ರಾಜ್ಯಾದ್ಯಂತ ನಡೆದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಮತದಾರರ ಪಟ್ಟಿಯಲ್ಲಿನ ಅತಿದೊಡ್ಡ ಮತದಾರರ...

ಅಸ್ಸಾಂ : 15 ಮಂದಿಗೆ 24 ಗಂಟೆಯೊಳಗೆ ದೇಶ ತೊರೆಯಲು ಆದೇಶ : ಮಾಧ್ಯಮಗಳ ಮೂಲಕ ವಿಷಯ ತಿಳಿದುಕೊಂಡ ಕುಟುಂಬಸ್ಥರು

ಅಸ್ಸಾಂನ ನಾಗಾಂವ್ ಜಿಲ್ಲಾಡಳಿತವು 15 ಘೋಷಿತ ವಿದೇಶಿಯರಿಗೆ 24 ಗಂಟೆಗಳ ಒಳಗೆ ರಾಜ್ಯ ತೊರೆಯುವಂತೆ ಆದೇಶಿಸಿದ ಬಗ್ಗೆ ವರದಿಯಾಗಿದೆ. ಬುಧವಾರ (ಡಿ.17) ಜಿಲ್ಲಾಡಳಿತ ಈ ಆದೇಶ ನೀಡಿತ್ತು. ಆದರೆ, ಇದುವರೆಗೆ (ಡಿ.20) ಈ 15...