Homeಕರ್ನಾಟಕಬೆಂಗಳೂರು : ಜಿಬಿಎ ಅಧಿಕಾರಿಗಳಿಂದ 200ರಷ್ಟು ಮನೆಗಳ ನೆಲಸಮ : ಬೀದಿಗೆ ಬಿದ್ದ ಬಡ ಜನರು

ಬೆಂಗಳೂರು : ಜಿಬಿಎ ಅಧಿಕಾರಿಗಳಿಂದ 200ರಷ್ಟು ಮನೆಗಳ ನೆಲಸಮ : ಬೀದಿಗೆ ಬಿದ್ದ ಬಡ ಜನರು

- Advertisement -
- Advertisement -

ಅತಿಕ್ರಮಣ ಆರೋಪದ ಮೇಲೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಅಧಿಕಾರಿಗಳು ಬೆಂಗಳೂರು ಉತ್ತರ ನಗರ ಪಾಲಿಕೆ ವ್ಯಾಪ್ತಿಯ ಕೋಗಿಲು ಬಂಡೆ ಬಳಿಯ 5 ಎಕರೆ ಜಾಗದಲ್ಲಿದ್ದ ಸುಮಾರು 200ರಷ್ಟು ಮನೆಗಳನ್ನು ಶನಿವಾರ (ಡಿ.20) ತೆರವುಗೊಳಿಸಿದ್ದು, ಬಡ ಜನರು ಬೀದಿಗೆ ಬಿದ್ದಿದ್ದಾರೆ.

ಯಲಹಂಕ ಹೋಬಳಿ ಕೋಗಿಲು ಗ್ರಾಮದ ಸರ್ವೆ ನಂ. 99ರಲ್ಲಿ ಒಟ್ಟು 14 ಎಕರೆ 36 ಗುಂಟೆ ವಿಸ್ತೀರ್ಣದ ಜಮೀನಿನಲ್ಲಿ, ಬಿಎಸ್‌ಡಬ್ಲ್ಯುಎಂಎಲ್‌ ವತಿಯಿಂದ ಪ್ರಸ್ತಾವಿತ ಬಯೋ ಮೆಥನೈಸೇಶನ್ ಪ್ಲಾಂಟ್, ಅನಿಮಲ್ ರೆಂಡರಿಂಗ್, ಎಳನೀರು ಬುರುಡೆ ಸಂಸ್ಕರಣಾ ಮತ್ತು ಸ್ಯಾನಿಟರಿ ತ್ಯಾಜ್ಯ ಸಂಸ್ಕರಣಾ ಸೌಲಭ್ಯಗಳನ್ನು ಕಾರ್ಯಗತಗೊಳಿಸಲು ಯೋಜಿಸಲಾಗಿತ್ತು.

ಬಿಎಸ್‌ಡಬ್ಲ್ಯುಎಂಎಲ್‌ಗೆ ಮೀಸಲಿರಿಸಿದ್ದ ಜಾಗದಲ್ಲಿ ಜನರು 200ರಷ್ಟು ಶೆಡ್/ ಮನೆಗಳನ್ನು ನಿರ್ಮಾಣ ಮಾಡಿಕೊಂಡಿದ್ದರು. ಹಾಗಾಗಿ, ನಿಯಮನುಸಾರ ತೆರವುಗೊಳಿಸಿದ್ದೇವೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಮುಂಜಾನೆ 4 ಗಂಟೆಗೆ ಅಧಿಕಾರಿಗಳು ಬುಲ್ಡೋಝರ್‌ಗಳನ್ನು ತಂದು ಮನೆಗಳನ್ನು ಕೆಡವಲು ಶುರು ಮಾಡಿದರು. ತಕ್ಷಣ ಮನೆಗಳನ್ನು ಕಾಲಿ ಮಾಡುವಂತೆ ಸೂಚಿಸಿದರು. ನಮಗೆ ನಮ್ಮ ದಾಖಲೆ ಪತ್ರಗಳು ಸೇರಿದಂತೆ ಅಗತ್ಯ ವಸ್ತುಗಳನ್ನು ತೆಗೆದುಕೊಳ್ಳಲೂ ಸಮಯ ನೀಡಿಲ್ಲ ಎಂದು ನಿರಾಶ್ರಿತರಾದ ಜನರು ಆರೋಪಿಸಿದ್ದಾರೆ.

ಆದರೆ, ಅಧಿಕಾರಿಗಳು ನಾವು ಒಂದು ತಿಂಗಳಲ್ಲಿ ಎರಡು ಬಾರಿ ನೋಟಿಸ್ ಕೊಟ್ಟು ಮನೆಗಳನ್ನು ತೆರವುಗೊಳಿಸುವಂತೆ ಸೂಚಿಸಿದ್ದೆವು. ಅದರ ನಂತರ ಕಾನೂನಿನಂತೆ ತೆರವು ಕಾರ್ಯಚರಣೆ ನಡೆಸಿದ್ದೇವೆ ಎಂದು ಸಮರ್ಥಿಸಿಕೊಂಡಿದ್ದಾರೆ.

ಕೋಗಿಲು ಗ್ರಾಮದ ಫಕೀರ್ ಕಾಲೋನಿ ಮತ್ತು ವಸೀಮ್ ಲೇಔಟ್‌ನಲ್ಲಿದ್ದ ಮನೆಗಳನ್ನು ತೆರವುಗೊಳಿಸಲಾಗಿದೆ.

ಕೋಗಿಲು ಗ್ರಾಮದ ಸರ್ಕಾರಿ ಉರ್ದು ಶಾಲೆಯ ಬಳಿಯ ಸಣ್ಣ ಕೊಳದ ಪಕ್ಕದಲ್ಲಿರುವ ಭೂಮಿಯನ್ನು ಅತಿಕ್ರಮಣ ಮಾಡಿಕೊಂಡು ಜನರು ಮನೆಗಳನ್ನು ಕಟ್ಟಿಕೊಂಡಿದ್ದರು ಎಂದು ಅಧಿಕಾರಿಗಳು ಹೇಳಿದ್ದಾರೆ.

ಮನೆಗಳಲ್ಲಿದ್ದ ಎಲ್‌ಪಿಜಿ ಸಿಲಿಂಡರ್, ಗ್ಯಾಸ್ ಸ್ಟವ್ ಸೇರಿದಂತೆ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ತೆರವುಗೊಳಿಸಿದ ಬಳಿಕ ಅಧಿಕಾರಿಗಳು ಮನೆಗಳನ್ನು ಕೆಡವಲು ಪ್ರಾರಂಭಿಸಿದರು. ಸ್ಥಳದಲ್ಲಿ 150ಕ್ಕೂ ಹೆಚ್ಚು ಪೊಲೀಸರು, ಜೊತೆಗೆ ಜಿಬಿಎ ಮಾರ್ಷಲ್‌ಗಳನ್ನು ನಿಯೋಜಿಸಲಾಗಿತ್ತು. ಹಿರಿಯ ಅಧಿಕಾರಿಗಳೂ ಸ್ಥಳದಲ್ಲಿ ಇದ್ದರು. ತೆರವು ಕಾರ್ಯಾಚರಣೆಗೆ ತೀವ್ರ ಅಡ್ಡಿಪಡಿಸಿದ ಕೆಲವರನ್ನು ಪೊಲೀಸರು ವಶಕ್ಕೆ ಪಡೆದರು ಎಂದು ವರದಿಗಳು ಹೇಳಿವೆ.

ಜನರು ಅನಧಿಕೃತವಾಗಿ ಸರ್ಕಾರಿ ಜಾಗದಲ್ಲಿ ಮನೆಗಳನ್ನು ಕಟ್ಟಿಕೊಂಡಿದ್ದರು. ಅವರಲ್ಲಿ ಹೆಚ್ಚಿನವರು ಹೈದರಾಬಾದ್ ಮತ್ತು ಆಂಧ್ರಪ್ರದೇಶದ ವಿವಿಧ ಭಾಗಗಳಿಂದ ವಲಸೆ ಬಂದ ಅಲ್ಪಸಂಖ್ಯಾತ ದರ್ವೇಶ್ ಸಮುದಾಯಕ್ಕೆ ಸೇರಿದವರು ಎಂದು ಅಧಿಕಾರಿಗಳು ಹೇಳಿದ್ದಾರೆ. ಆದರೆ, ನಿರಾಶ್ರಿತರಾದ ಜನರು ನಾವು 25 ವರ್ಷಗಳಿಂದ ಇಲ್ಲೇ ಇದ್ದೇವೆ ಎಂದು ಹೇಳಿಕೊಂಡಿದ್ದಾರೆ.

ಮಾಧ್ಯಮಗಳ ಜೊತೆ ಮಾತನಾಡಿರುವ ದುಡಿಯುವ ಜನರ ವೇದಿಕೆಯ ಸದಸ್ಯೆ ಪೂಜಾ ಹೆಚ್.ಎಂ, “ನಿರಾಶ್ರಿತರಾದ ಕುಟುಂಬಗಳು ಆಧಾರ್‌ ಕಾರ್ಡ್‌, ವೋಟರ್ ಐಡಿ ಸೇರಿದಂತೆ ಮಾನ್ಯ ದಾಖಲೆಗಳನ್ನು ಹೊಂದಿದ್ದು, ಭಿಕ್ಷಾಟನೆ ಮತ್ತು ಸಣ್ಣಪುಟ್ಟ ಕೆಲಸಗಳ ಮೂಲಕ ತಮ್ಮ ಜೀವನೋಪಾಯವನ್ನು ಗಳಿಸುತ್ತಿದ್ದರು” ಎಂದು ಹೇಳಿದ್ದಾರೆ.

“ಹಲವು ಕುಟುಂಬಗಳು ಬ್ಯಾಂಕ್‌ಗಳಿಂದ ಸಾಲ ಪಡೆದಿವೆ. ಮನೆಗಳನ್ನು ಕೆಡವುವ ಮೊದಲು ಯಾವುದೇ ಪೂರ್ವ ಸೂಚನೆ ನೀಡಿರಲಿಲ್ಲ. ಹಲವು ಮಹಿಳೆಯರು ಗರ್ಭಿಣಿಯರಾಗಿದ್ದಾರೆ. ಅಧಿಕಾರಿಗಳು ಅವರ ಸ್ಥಿತಿಯ ಬಗ್ಗೆ ಯಾವುದೇ ಕಾಳಜಿ ತೋರಿಸಿಲ್ಲ” ಎಂದು ತಿಳಿಸಿದ್ದಾರೆ.

ಕಾರ್ಯಾಚರಣೆಯ ಸಮಯದಲ್ಲಿ ಜಿಲ್ಲಾಡಳಿತದ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಆದರೆ, ಅವರು ನಮಗೆ ಯಾವುದೇ ಸ್ಪಷ್ಟೀಕರಣ ನೀಡಿಲ್ಲ. ನಮ್ಮ ಕಳವಳಗಳನ್ನು ಪರಿಹರಿಸಿಲ್ಲ ಎಂದು ಜನರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಸ್ರೇಲ್ ಸಂಸತ್ತಿನಲ್ಲಿ ಭಾಷಣದ ವೇಳೆ ಪ್ರಧಾನಿ ಮೋದಿ ಗಾಝಾ ನರಮೇಧ ಉಲ್ಲೇಖಿಸಲಿ : ಪ್ರಿಯಾಂಕಾ ಗಾಂಧಿ ಆಗ್ರಹ

ಇಸ್ರೇಲ್‌ಗೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ, ಅಲ್ಲಿನ ಸಂಸತ್ತಾದ ನೆಸೆಟ್ ಅನ್ನು ಉದ್ದೇಶಿಸಿ ಮಾತನಾಡುವಾಗ ಗಾಝಾ ನರಮೇಧವನ್ನು ಉಲ್ಲೇಖಿಸಿ ನ್ಯಾಯಕ್ಕಾಗಿ ಆಗ್ರಹಿಸಬೇಕು ಎಂದು ಎಐಸಿಸಿ ಕಾರ್ಯದರ್ಶಿ ಹಾಗೂ ವಯನಾಡ್ ಸಂಸದೆ ಪ್ರಿಯಾಂಕಾ...

ಕೇಂದ್ರ ಸಚಿವರ ಸಮ್ಮುಖದಲ್ಲಿ ‘ಮುಸ್ಲಿಂ ವಿರೋಧಿ ಹೇಳಿಕೆ’ ನೀಡಿದ ಹಿಂದುತ್ವವಾದಿ ವ್ಯಕ್ತಿ

ಉತ್ತರಾಖಂಡದಲ್ಲಿ ನಡೆದ ಸಾರ್ವಜನಿಕ ಹಿಂದೂ ಧಾರ್ಮಿಕ ಕಾರ್ಯಕ್ರಮದಲ್ಲಿ, ಕೇಂದ್ರ ಸಚಿವರ ಸಮ್ಮುಖದಲ್ಲಿಯೇ ಹಿಂದುತ್ವವಾದಿ ಮುಖಂಡನೊಬ್ಬ ಮುಸ್ಲಿಮರ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ್ದು ರಾಜಕೀಯ ಮತ್ತು ಸಾಮಾಜಿಕ ವಿವಾದಕ್ಕೆ ಕಾರಣವಾಗಿದೆ. ಇದು ಪೊಲೀಸ್ ಕ್ರಮ...

ಎನ್‌ಸಿಇಆರ್‌ಟಿ ಪಠ್ಯಪುಸ್ತಕದ ‘ನ್ಯಾಯಾಂಗದಲ್ಲಿನ ಭ್ರಷ್ಟಾಚಾರ’ ವಿಷಯಕ್ಕೆ ಸುಪ್ರೀಂ ಕೋರ್ಟ್ ತೀವ್ರ ಆಕ್ಷೇಪ

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಪ್ರಕಟಿಸಿದ 8ನೇ ತರಗತಿಯ ಹೊಸ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ "ನ್ಯಾಯಾಂಗದಲ್ಲಿನ ಭ್ರಷ್ಟಾಚಾರ" ಎಂಬ ವಿಷಯ ಉಲ್ಲೇಖಿಸಿರುವುದಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಫೆ.25) ತೀವ್ರ...

ಮಧ್ಯಪ್ರದೇಶ: ಡಾ. ಹರಿಸಿಂಗ್ ಗೌರ್ ವಿವಿಯಲ್ಲಿ ಎಬಿವಿಪಿ-ಆರ್‌ಎಸ್‌ಎಸ್‌ ದುಷ್ಕರ್ಮಿಗಳಿಂದ ವಿದ್ಯಾರ್ಥಿಗಳ ಮೇಲೆ ದಾಳಿ, ಜೀವಬೆದರಿಕೆ;  ಎಫ್‌ಐಆರ್ ದಾಖಲು

ಮಧ್ಯಪ್ರದೇಶದ ಸಾಗರ್‌ನಲ್ಲಿರುವ ಡಾ. ಹರಿ ಸಿಂಗ್ ಗೌರ್ ವಿಶ್ವವಿದ್ಯಾಲಯದಲ್ಲಿ ನಡೆದ ಸರಣಿ ಹಿಂಸಾತ್ಮಕ ಘಟನೆಗಳು ಕ್ಯಾಂಪಸ್ ಸುರಕ್ಷತೆಯ ಬಗ್ಗೆ ಗಂಭೀರ ಕಳವಳವನ್ನು ಉಂಟುಮಾಡಿವೆ. ಐದು ದಿನಗಳಲ್ಲಿ ಎಬಿವಿಪಿ-ಆರ್‌ಎಸ್‌ಎಸ್‌ಗೆ ಸಂಬಂಧಿಸಿದ ವ್ಯಕ್ತಿಗಳಿಂದ ಎರಡು ಜೀವ...

ಅಜೀಂ ಪ್ರೇಮ್‌ ಜಿ ವಿವಿಯಲ್ಲಿ ದಾಂಧಲೆ : ಎಬಿವಿಪಿ ಸದಸ್ಯರ ವಿರುದ್ಧ ಕಠಿಣ ಕ್ರಮಕ್ಕೆ ಕೆವಿಎಸ್‌ ಆಗ್ರಹ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ ನುಗ್ಗಿ ದಾಂಧಲೆ ನಡೆಸಿದ ಎಬಿವಿಪಿ ಸದಸ್ಯರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವಂತೆ ಕರ್ನಾಟಕ ವಿದ್ಯಾರ್ಥಿ ಸಂಘಟನೆ (ಕೆವಿಎಸ್‌) ಆಗ್ರಹಿಸಿದೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಸಂಘಟನೆಯ ರಾಜ್ಯ...

ಗೋಣಿ ತುಮಕೂರು ಅಸ್ಪೃಶ್ಯತೆ ಆಚರಣೆ ಪ್ರಕರಣ: ತಹಶೀಲ್ದಾರ್ ಸಮ್ಮುಖದಲ್ಲಿ ದೇಗುಲ ಪ್ರವೇಶಿಸಿದ ನವ ದಂಪತಿ

ಕಳೆದ ವಾರ ಭಾರಿ ಚರ್ಚೆಗೆ ಗ್ರಾಸವಾಗಿದ್ದ ದಲಿತ ನವ ದಂಪತಿ ದೇಗುಲ  ಪ್ರವೇಶ ಹಾಗೂ ದಲಿತ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ತುರುವೇಕೆರೆ ತಾಲೂಕು ಗೋಣಿ ತುಮಕೂರು ಗ್ರಾಮದಲ್ಲಿರುವ ಸವರ್ಣೀಯ ಮತ್ತು ದಲಿತ ಜನಾಂಗದ ನಡುವೆ...

ದ್ವೇಷ ಭಾಷಣ ಆರೋಪ: ವಿಜಯಪುರ ಶಾಸಕ ಬಸನಗೌಡ ಯತ್ನಾಳ್ ವಿರುದ್ಧ ಎಫ್ಐಆರ್ 

ಯಾದಗಿರಿ ಜಿಲ್ಲೆಯಲ್ಲಿ ನಡೆದ ಶಿವಾಜಿ ಜಯಂತಿ ಆಚರಣೆಯ ಸಂದರ್ಭದಲ್ಲಿ ದ್ವೇಷಪೂರಿತ ಭಾಷಣ ಮಾಡಿದ ಆರೋಪದ ಮೇಲೆ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಪ್ರಕರಣ ದಾಖಲಾಗಿದೆ. ಈ ಜಿಲ್ಲೆಯ ಗುರ್ಮಿತ್ಕಲ್ ಪಟ್ಟಣದಲ್ಲಿ ಈ...

ಅಜೀಂ ಪ್ರೇಮ್‌ ಜಿ ವಿವಿಯಲ್ಲಿ ದಾಂಧಲೆ : ಎಬಿವಿಪಿ ಸದಸ್ಯರ ಬಂಧನ, ವಿವಿ ವಿದ್ಯಾರ್ಥಿಗಳಿಂದ ಕೌಂಟರ್ ಪ್ರೊಟೆಸ್ಟ್

ಬೆಂಗಳೂರಿನ ಸರ್ಜಾಪುರದಲ್ಲಿರುವ ಅಜೀಂ ಪ್ರೇಮ್ ಜಿ ವಿಶ್ವವಿದ್ಯಾಲಯದಲ್ಲಿ ಎಬಿವಿಪಿ ಸದಸ್ಯರು ಮಂಗಳವಾರ (ಫೆ.24) ಸಂಜೆ ದಾಂಧಲೆ ನಡೆಸಿರುವ ಕುರಿತು ವರದಿಯಾಗಿದೆ. ಆಲ್ ಇಂಡಿಯಾ ಸ್ಟೂಡೆಂಟ್ ಅಸೋಸಿಯೇಷನ್ (ಎಐಎಸ್‌ಎ) ಜೊತೆ ಸಂಯೋಜಿತವಾಗಿರುವ ವಿವಿಯ ವಿದ್ಯಾರ್ಥಿ ಸಂಘಟನೆ...

ಹೈಕೋರ್ಟ್ ನ್ಯಾಯಾಧೀಶರಿಗೆ ಸಿನಿಮಾ ತೋರಿಸಲು ಹಿಂದೇಟು ಹಾಕಿದ ‘ಕೇರಳ ಸ್ಟೋರಿ-2’ ತಂಡ

'ದಿ ಕೇರಳ ಸ್ಟೋರಿ-2 ಗೋಸ್ ಬಿಯಾಂಡ್' ತಂಡ ಕೇರಳ ಹೈಕೋರ್ಟ್ ನ್ಯಾಯಾಧೀಶರಿಗೆ ಸಿನಿಮಾ ತೋರಿಸಲು ಹಿಂದೇಟು ಹಾಕಿದೆ. ಮಂಗಳವಾರ (ಫೆ.24) ಬೆಳಗ್ಗಿನ ಅವಧಿಯ ವಿಚಾರಣೆಯ ವೇಳೆ ನ್ಯಾಯಮೂರ್ತಿ ಬಿಚು ಕುರಿಯನ್ ಥಾಮಸ್ ಅವರು, "ಸಿನಿಮಾದ...

ಸ್ಥಳಾಂತರಗೊಂಡ ಅಕ್ಬರ್ ನಗರ ನಿವಾಸಿಗಳನ್ನು SIR ನಿಂದ ಹೊರಗಿಟ್ಟಿರುವ ಬಗ್ಗೆ ಪರಿಶೀಲಿಸಲು ಲಕ್ನೋ ಚುನಾವಣಾ ಅಧಿಕಾರಿಗೆ ಸುಪ್ರೀಂ ಸೂಚನೆ

ಉತ್ತರ ಪ್ರದೇಶದಲ್ಲಿ ತಮ್ಮ ಮನೆಗಳನ್ನು ನೆಲಸಮಗೊಳಿಸಿ, ಸ್ಥಳಾಂತರದ ನಂತರ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ನಿಂದ ತಮ್ಮನ್ನು ಹೊರಗಿಡಲಾಗಿದೆ ಎಂದು ಆರೋಪಿಸಿ ಅಕ್ಬರ್ ನಗರದ ಮಾಜಿ ನಿವಾಸಿಗಳು ಎತ್ತಿರುವ ದೂರುಗಳನ್ನು...