Homeಕರ್ನಾಟಕಬೆಂಗಳೂರು : ಜಿಬಿಎ ಅಧಿಕಾರಿಗಳಿಂದ 200ರಷ್ಟು ಮನೆಗಳ ನೆಲಸಮ : ಬೀದಿಗೆ ಬಿದ್ದ ಬಡ ಜನರು

ಬೆಂಗಳೂರು : ಜಿಬಿಎ ಅಧಿಕಾರಿಗಳಿಂದ 200ರಷ್ಟು ಮನೆಗಳ ನೆಲಸಮ : ಬೀದಿಗೆ ಬಿದ್ದ ಬಡ ಜನರು

- Advertisement -
- Advertisement -

ಅತಿಕ್ರಮಣ ಆರೋಪದ ಮೇಲೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಅಧಿಕಾರಿಗಳು ಬೆಂಗಳೂರು ಉತ್ತರ ನಗರ ಪಾಲಿಕೆ ವ್ಯಾಪ್ತಿಯ ಕೋಗಿಲು ಬಂಡೆ ಬಳಿಯ 5 ಎಕರೆ ಜಾಗದಲ್ಲಿದ್ದ ಸುಮಾರು 200ರಷ್ಟು ಮನೆಗಳನ್ನು ಶನಿವಾರ (ಡಿ.20) ತೆರವುಗೊಳಿಸಿದ್ದು, ಬಡ ಜನರು ಬೀದಿಗೆ ಬಿದ್ದಿದ್ದಾರೆ.

ಯಲಹಂಕ ಹೋಬಳಿ ಕೋಗಿಲು ಗ್ರಾಮದ ಸರ್ವೆ ನಂ. 99ರಲ್ಲಿ ಒಟ್ಟು 14 ಎಕರೆ 36 ಗುಂಟೆ ವಿಸ್ತೀರ್ಣದ ಜಮೀನಿನಲ್ಲಿ, ಬಿಎಸ್‌ಡಬ್ಲ್ಯುಎಂಎಲ್‌ ವತಿಯಿಂದ ಪ್ರಸ್ತಾವಿತ ಬಯೋ ಮೆಥನೈಸೇಶನ್ ಪ್ಲಾಂಟ್, ಅನಿಮಲ್ ರೆಂಡರಿಂಗ್, ಎಳನೀರು ಬುರುಡೆ ಸಂಸ್ಕರಣಾ ಮತ್ತು ಸ್ಯಾನಿಟರಿ ತ್ಯಾಜ್ಯ ಸಂಸ್ಕರಣಾ ಸೌಲಭ್ಯಗಳನ್ನು ಕಾರ್ಯಗತಗೊಳಿಸಲು ಯೋಜಿಸಲಾಗಿತ್ತು.

ಬಿಎಸ್‌ಡಬ್ಲ್ಯುಎಂಎಲ್‌ಗೆ ಮೀಸಲಿರಿಸಿದ್ದ ಜಾಗದಲ್ಲಿ ಜನರು 200ರಷ್ಟು ಶೆಡ್/ ಮನೆಗಳನ್ನು ನಿರ್ಮಾಣ ಮಾಡಿಕೊಂಡಿದ್ದರು. ಹಾಗಾಗಿ, ನಿಯಮನುಸಾರ ತೆರವುಗೊಳಿಸಿದ್ದೇವೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಮುಂಜಾನೆ 4 ಗಂಟೆಗೆ ಅಧಿಕಾರಿಗಳು ಬುಲ್ಡೋಝರ್‌ಗಳನ್ನು ತಂದು ಮನೆಗಳನ್ನು ಕೆಡವಲು ಶುರು ಮಾಡಿದರು. ತಕ್ಷಣ ಮನೆಗಳನ್ನು ಕಾಲಿ ಮಾಡುವಂತೆ ಸೂಚಿಸಿದರು. ನಮಗೆ ನಮ್ಮ ದಾಖಲೆ ಪತ್ರಗಳು ಸೇರಿದಂತೆ ಅಗತ್ಯ ವಸ್ತುಗಳನ್ನು ತೆಗೆದುಕೊಳ್ಳಲೂ ಸಮಯ ನೀಡಿಲ್ಲ ಎಂದು ನಿರಾಶ್ರಿತರಾದ ಜನರು ಆರೋಪಿಸಿದ್ದಾರೆ.

ಆದರೆ, ಅಧಿಕಾರಿಗಳು ನಾವು ಒಂದು ತಿಂಗಳಲ್ಲಿ ಎರಡು ಬಾರಿ ನೋಟಿಸ್ ಕೊಟ್ಟು ಮನೆಗಳನ್ನು ತೆರವುಗೊಳಿಸುವಂತೆ ಸೂಚಿಸಿದ್ದೆವು. ಅದರ ನಂತರ ಕಾನೂನಿನಂತೆ ತೆರವು ಕಾರ್ಯಚರಣೆ ನಡೆಸಿದ್ದೇವೆ ಎಂದು ಸಮರ್ಥಿಸಿಕೊಂಡಿದ್ದಾರೆ.

ಕೋಗಿಲು ಗ್ರಾಮದ ಫಕೀರ್ ಕಾಲೋನಿ ಮತ್ತು ವಸೀಮ್ ಲೇಔಟ್‌ನಲ್ಲಿದ್ದ ಮನೆಗಳನ್ನು ತೆರವುಗೊಳಿಸಲಾಗಿದೆ.

ಕೋಗಿಲು ಗ್ರಾಮದ ಸರ್ಕಾರಿ ಉರ್ದು ಶಾಲೆಯ ಬಳಿಯ ಸಣ್ಣ ಕೊಳದ ಪಕ್ಕದಲ್ಲಿರುವ ಭೂಮಿಯನ್ನು ಅತಿಕ್ರಮಣ ಮಾಡಿಕೊಂಡು ಜನರು ಮನೆಗಳನ್ನು ಕಟ್ಟಿಕೊಂಡಿದ್ದರು ಎಂದು ಅಧಿಕಾರಿಗಳು ಹೇಳಿದ್ದಾರೆ.

ಮನೆಗಳಲ್ಲಿದ್ದ ಎಲ್‌ಪಿಜಿ ಸಿಲಿಂಡರ್, ಗ್ಯಾಸ್ ಸ್ಟವ್ ಸೇರಿದಂತೆ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ತೆರವುಗೊಳಿಸಿದ ಬಳಿಕ ಅಧಿಕಾರಿಗಳು ಮನೆಗಳನ್ನು ಕೆಡವಲು ಪ್ರಾರಂಭಿಸಿದರು. ಸ್ಥಳದಲ್ಲಿ 150ಕ್ಕೂ ಹೆಚ್ಚು ಪೊಲೀಸರು, ಜೊತೆಗೆ ಜಿಬಿಎ ಮಾರ್ಷಲ್‌ಗಳನ್ನು ನಿಯೋಜಿಸಲಾಗಿತ್ತು. ಹಿರಿಯ ಅಧಿಕಾರಿಗಳೂ ಸ್ಥಳದಲ್ಲಿ ಇದ್ದರು. ತೆರವು ಕಾರ್ಯಾಚರಣೆಗೆ ತೀವ್ರ ಅಡ್ಡಿಪಡಿಸಿದ ಕೆಲವರನ್ನು ಪೊಲೀಸರು ವಶಕ್ಕೆ ಪಡೆದರು ಎಂದು ವರದಿಗಳು ಹೇಳಿವೆ.

ಜನರು ಅನಧಿಕೃತವಾಗಿ ಸರ್ಕಾರಿ ಜಾಗದಲ್ಲಿ ಮನೆಗಳನ್ನು ಕಟ್ಟಿಕೊಂಡಿದ್ದರು. ಅವರಲ್ಲಿ ಹೆಚ್ಚಿನವರು ಹೈದರಾಬಾದ್ ಮತ್ತು ಆಂಧ್ರಪ್ರದೇಶದ ವಿವಿಧ ಭಾಗಗಳಿಂದ ವಲಸೆ ಬಂದ ಅಲ್ಪಸಂಖ್ಯಾತ ದರ್ವೇಶ್ ಸಮುದಾಯಕ್ಕೆ ಸೇರಿದವರು ಎಂದು ಅಧಿಕಾರಿಗಳು ಹೇಳಿದ್ದಾರೆ. ಆದರೆ, ನಿರಾಶ್ರಿತರಾದ ಜನರು ನಾವು 25 ವರ್ಷಗಳಿಂದ ಇಲ್ಲೇ ಇದ್ದೇವೆ ಎಂದು ಹೇಳಿಕೊಂಡಿದ್ದಾರೆ.

ಮಾಧ್ಯಮಗಳ ಜೊತೆ ಮಾತನಾಡಿರುವ ದುಡಿಯುವ ಜನರ ವೇದಿಕೆಯ ಸದಸ್ಯೆ ಪೂಜಾ ಹೆಚ್.ಎಂ, “ನಿರಾಶ್ರಿತರಾದ ಕುಟುಂಬಗಳು ಆಧಾರ್‌ ಕಾರ್ಡ್‌, ವೋಟರ್ ಐಡಿ ಸೇರಿದಂತೆ ಮಾನ್ಯ ದಾಖಲೆಗಳನ್ನು ಹೊಂದಿದ್ದು, ಭಿಕ್ಷಾಟನೆ ಮತ್ತು ಸಣ್ಣಪುಟ್ಟ ಕೆಲಸಗಳ ಮೂಲಕ ತಮ್ಮ ಜೀವನೋಪಾಯವನ್ನು ಗಳಿಸುತ್ತಿದ್ದರು” ಎಂದು ಹೇಳಿದ್ದಾರೆ.

“ಹಲವು ಕುಟುಂಬಗಳು ಬ್ಯಾಂಕ್‌ಗಳಿಂದ ಸಾಲ ಪಡೆದಿವೆ. ಮನೆಗಳನ್ನು ಕೆಡವುವ ಮೊದಲು ಯಾವುದೇ ಪೂರ್ವ ಸೂಚನೆ ನೀಡಿರಲಿಲ್ಲ. ಹಲವು ಮಹಿಳೆಯರು ಗರ್ಭಿಣಿಯರಾಗಿದ್ದಾರೆ. ಅಧಿಕಾರಿಗಳು ಅವರ ಸ್ಥಿತಿಯ ಬಗ್ಗೆ ಯಾವುದೇ ಕಾಳಜಿ ತೋರಿಸಿಲ್ಲ” ಎಂದು ತಿಳಿಸಿದ್ದಾರೆ.

ಕಾರ್ಯಾಚರಣೆಯ ಸಮಯದಲ್ಲಿ ಜಿಲ್ಲಾಡಳಿತದ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಆದರೆ, ಅವರು ನಮಗೆ ಯಾವುದೇ ಸ್ಪಷ್ಟೀಕರಣ ನೀಡಿಲ್ಲ. ನಮ್ಮ ಕಳವಳಗಳನ್ನು ಪರಿಹರಿಸಿಲ್ಲ ಎಂದು ಜನರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...