Homeಕರ್ನಾಟಕಬೆಂಗಳೂರು : ಜಿಬಿಎ ಅಧಿಕಾರಿಗಳಿಂದ 200ರಷ್ಟು ಮನೆಗಳ ನೆಲಸಮ : ಬೀದಿಗೆ ಬಿದ್ದ ಬಡ ಜನರು

ಬೆಂಗಳೂರು : ಜಿಬಿಎ ಅಧಿಕಾರಿಗಳಿಂದ 200ರಷ್ಟು ಮನೆಗಳ ನೆಲಸಮ : ಬೀದಿಗೆ ಬಿದ್ದ ಬಡ ಜನರು

- Advertisement -
- Advertisement -

ಅತಿಕ್ರಮಣ ಆರೋಪದ ಮೇಲೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಅಧಿಕಾರಿಗಳು ಬೆಂಗಳೂರು ಉತ್ತರ ನಗರ ಪಾಲಿಕೆ ವ್ಯಾಪ್ತಿಯ ಕೋಗಿಲು ಬಂಡೆ ಬಳಿಯ 5 ಎಕರೆ ಜಾಗದಲ್ಲಿದ್ದ ಸುಮಾರು 200ರಷ್ಟು ಮನೆಗಳನ್ನು ಶನಿವಾರ (ಡಿ.20) ತೆರವುಗೊಳಿಸಿದ್ದು, ಬಡ ಜನರು ಬೀದಿಗೆ ಬಿದ್ದಿದ್ದಾರೆ.

ಯಲಹಂಕ ಹೋಬಳಿ ಕೋಗಿಲು ಗ್ರಾಮದ ಸರ್ವೆ ನಂ. 99ರಲ್ಲಿ ಒಟ್ಟು 14 ಎಕರೆ 36 ಗುಂಟೆ ವಿಸ್ತೀರ್ಣದ ಜಮೀನಿನಲ್ಲಿ, ಬಿಎಸ್‌ಡಬ್ಲ್ಯುಎಂಎಲ್‌ ವತಿಯಿಂದ ಪ್ರಸ್ತಾವಿತ ಬಯೋ ಮೆಥನೈಸೇಶನ್ ಪ್ಲಾಂಟ್, ಅನಿಮಲ್ ರೆಂಡರಿಂಗ್, ಎಳನೀರು ಬುರುಡೆ ಸಂಸ್ಕರಣಾ ಮತ್ತು ಸ್ಯಾನಿಟರಿ ತ್ಯಾಜ್ಯ ಸಂಸ್ಕರಣಾ ಸೌಲಭ್ಯಗಳನ್ನು ಕಾರ್ಯಗತಗೊಳಿಸಲು ಯೋಜಿಸಲಾಗಿತ್ತು.

ಬಿಎಸ್‌ಡಬ್ಲ್ಯುಎಂಎಲ್‌ಗೆ ಮೀಸಲಿರಿಸಿದ್ದ ಜಾಗದಲ್ಲಿ ಜನರು 200ರಷ್ಟು ಶೆಡ್/ ಮನೆಗಳನ್ನು ನಿರ್ಮಾಣ ಮಾಡಿಕೊಂಡಿದ್ದರು. ಹಾಗಾಗಿ, ನಿಯಮನುಸಾರ ತೆರವುಗೊಳಿಸಿದ್ದೇವೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಮುಂಜಾನೆ 4 ಗಂಟೆಗೆ ಅಧಿಕಾರಿಗಳು ಬುಲ್ಡೋಝರ್‌ಗಳನ್ನು ತಂದು ಮನೆಗಳನ್ನು ಕೆಡವಲು ಶುರು ಮಾಡಿದರು. ತಕ್ಷಣ ಮನೆಗಳನ್ನು ಕಾಲಿ ಮಾಡುವಂತೆ ಸೂಚಿಸಿದರು. ನಮಗೆ ನಮ್ಮ ದಾಖಲೆ ಪತ್ರಗಳು ಸೇರಿದಂತೆ ಅಗತ್ಯ ವಸ್ತುಗಳನ್ನು ತೆಗೆದುಕೊಳ್ಳಲೂ ಸಮಯ ನೀಡಿಲ್ಲ ಎಂದು ನಿರಾಶ್ರಿತರಾದ ಜನರು ಆರೋಪಿಸಿದ್ದಾರೆ.

ಆದರೆ, ಅಧಿಕಾರಿಗಳು ನಾವು ಒಂದು ತಿಂಗಳಲ್ಲಿ ಎರಡು ಬಾರಿ ನೋಟಿಸ್ ಕೊಟ್ಟು ಮನೆಗಳನ್ನು ತೆರವುಗೊಳಿಸುವಂತೆ ಸೂಚಿಸಿದ್ದೆವು. ಅದರ ನಂತರ ಕಾನೂನಿನಂತೆ ತೆರವು ಕಾರ್ಯಚರಣೆ ನಡೆಸಿದ್ದೇವೆ ಎಂದು ಸಮರ್ಥಿಸಿಕೊಂಡಿದ್ದಾರೆ.

ಕೋಗಿಲು ಗ್ರಾಮದ ಫಕೀರ್ ಕಾಲೋನಿ ಮತ್ತು ವಸೀಮ್ ಲೇಔಟ್‌ನಲ್ಲಿದ್ದ ಮನೆಗಳನ್ನು ತೆರವುಗೊಳಿಸಲಾಗಿದೆ.

ಕೋಗಿಲು ಗ್ರಾಮದ ಸರ್ಕಾರಿ ಉರ್ದು ಶಾಲೆಯ ಬಳಿಯ ಸಣ್ಣ ಕೊಳದ ಪಕ್ಕದಲ್ಲಿರುವ ಭೂಮಿಯನ್ನು ಅತಿಕ್ರಮಣ ಮಾಡಿಕೊಂಡು ಜನರು ಮನೆಗಳನ್ನು ಕಟ್ಟಿಕೊಂಡಿದ್ದರು ಎಂದು ಅಧಿಕಾರಿಗಳು ಹೇಳಿದ್ದಾರೆ.

ಮನೆಗಳಲ್ಲಿದ್ದ ಎಲ್‌ಪಿಜಿ ಸಿಲಿಂಡರ್, ಗ್ಯಾಸ್ ಸ್ಟವ್ ಸೇರಿದಂತೆ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ತೆರವುಗೊಳಿಸಿದ ಬಳಿಕ ಅಧಿಕಾರಿಗಳು ಮನೆಗಳನ್ನು ಕೆಡವಲು ಪ್ರಾರಂಭಿಸಿದರು. ಸ್ಥಳದಲ್ಲಿ 150ಕ್ಕೂ ಹೆಚ್ಚು ಪೊಲೀಸರು, ಜೊತೆಗೆ ಜಿಬಿಎ ಮಾರ್ಷಲ್‌ಗಳನ್ನು ನಿಯೋಜಿಸಲಾಗಿತ್ತು. ಹಿರಿಯ ಅಧಿಕಾರಿಗಳೂ ಸ್ಥಳದಲ್ಲಿ ಇದ್ದರು. ತೆರವು ಕಾರ್ಯಾಚರಣೆಗೆ ತೀವ್ರ ಅಡ್ಡಿಪಡಿಸಿದ ಕೆಲವರನ್ನು ಪೊಲೀಸರು ವಶಕ್ಕೆ ಪಡೆದರು ಎಂದು ವರದಿಗಳು ಹೇಳಿವೆ.

ಜನರು ಅನಧಿಕೃತವಾಗಿ ಸರ್ಕಾರಿ ಜಾಗದಲ್ಲಿ ಮನೆಗಳನ್ನು ಕಟ್ಟಿಕೊಂಡಿದ್ದರು. ಅವರಲ್ಲಿ ಹೆಚ್ಚಿನವರು ಹೈದರಾಬಾದ್ ಮತ್ತು ಆಂಧ್ರಪ್ರದೇಶದ ವಿವಿಧ ಭಾಗಗಳಿಂದ ವಲಸೆ ಬಂದ ಅಲ್ಪಸಂಖ್ಯಾತ ದರ್ವೇಶ್ ಸಮುದಾಯಕ್ಕೆ ಸೇರಿದವರು ಎಂದು ಅಧಿಕಾರಿಗಳು ಹೇಳಿದ್ದಾರೆ. ಆದರೆ, ನಿರಾಶ್ರಿತರಾದ ಜನರು ನಾವು 25 ವರ್ಷಗಳಿಂದ ಇಲ್ಲೇ ಇದ್ದೇವೆ ಎಂದು ಹೇಳಿಕೊಂಡಿದ್ದಾರೆ.

ಮಾಧ್ಯಮಗಳ ಜೊತೆ ಮಾತನಾಡಿರುವ ದುಡಿಯುವ ಜನರ ವೇದಿಕೆಯ ಸದಸ್ಯೆ ಪೂಜಾ ಹೆಚ್.ಎಂ, “ನಿರಾಶ್ರಿತರಾದ ಕುಟುಂಬಗಳು ಆಧಾರ್‌ ಕಾರ್ಡ್‌, ವೋಟರ್ ಐಡಿ ಸೇರಿದಂತೆ ಮಾನ್ಯ ದಾಖಲೆಗಳನ್ನು ಹೊಂದಿದ್ದು, ಭಿಕ್ಷಾಟನೆ ಮತ್ತು ಸಣ್ಣಪುಟ್ಟ ಕೆಲಸಗಳ ಮೂಲಕ ತಮ್ಮ ಜೀವನೋಪಾಯವನ್ನು ಗಳಿಸುತ್ತಿದ್ದರು” ಎಂದು ಹೇಳಿದ್ದಾರೆ.

“ಹಲವು ಕುಟುಂಬಗಳು ಬ್ಯಾಂಕ್‌ಗಳಿಂದ ಸಾಲ ಪಡೆದಿವೆ. ಮನೆಗಳನ್ನು ಕೆಡವುವ ಮೊದಲು ಯಾವುದೇ ಪೂರ್ವ ಸೂಚನೆ ನೀಡಿರಲಿಲ್ಲ. ಹಲವು ಮಹಿಳೆಯರು ಗರ್ಭಿಣಿಯರಾಗಿದ್ದಾರೆ. ಅಧಿಕಾರಿಗಳು ಅವರ ಸ್ಥಿತಿಯ ಬಗ್ಗೆ ಯಾವುದೇ ಕಾಳಜಿ ತೋರಿಸಿಲ್ಲ” ಎಂದು ತಿಳಿಸಿದ್ದಾರೆ.

ಕಾರ್ಯಾಚರಣೆಯ ಸಮಯದಲ್ಲಿ ಜಿಲ್ಲಾಡಳಿತದ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಆದರೆ, ಅವರು ನಮಗೆ ಯಾವುದೇ ಸ್ಪಷ್ಟೀಕರಣ ನೀಡಿಲ್ಲ. ನಮ್ಮ ಕಳವಳಗಳನ್ನು ಪರಿಹರಿಸಿಲ್ಲ ಎಂದು ಜನರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...