Homeಮುಖಪುಟಅಣು ವಿದ್ಯುತ್ ಯೋಜನೆ ಕುರಿತು ಯುಪಿ ಸರ್ಕಾರದೊಂದಿಗೆ ಅದಾನಿ ಗ್ರೂಪ್ ಮಾತುಕತೆ: ವರದಿ

ಅಣು ವಿದ್ಯುತ್ ಯೋಜನೆ ಕುರಿತು ಯುಪಿ ಸರ್ಕಾರದೊಂದಿಗೆ ಅದಾನಿ ಗ್ರೂಪ್ ಮಾತುಕತೆ: ವರದಿ

ಅಣು ಶಕ್ತಿಯ ಖಾಸಗೀಕರಣ ಮಸೂದೆ ಅಂಗೀಕಾರ ಬೆನ್ನಲ್ಲೇ ಬೆಳವಣಿಗೆ

- Advertisement -
- Advertisement -

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, ‘ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿದೆ.

ಈ ಬೆನ್ನಲ್ಲೇ ಅದಾನಿ ಗ್ರೂಪ್ ವಾಣಿಜ್ಯ ಪರಮಾಣು ವಿದ್ಯುತ್ ಯೋಜನೆಯ ಕುರಿತು ಉತ್ತರ ಪ್ರದೇಶ ಸರ್ಕಾರದೊಂದಿಗೆ ಮಾತುಕತೆ ನಡೆಸುತ್ತಿದೆ ಎಂದು ವರದಿಯಾಗಿದೆ.

ಅದಾನಿ ಗ್ರೂಪ್ ಒಂದು ಹೊಸ ನ್ಯೂಕ್ಲಿಯರ್ ವಿದ್ಯುತ್ ಯೋಜನೆಯ ಬಗ್ಗೆ ಆಲೋಚಿಸುತ್ತಿದೆ. ಒಟ್ಟು 8 ಸಣ್ಣ ಆಕಾರದ ನ್ಯೂಕ್ಲಿಯರ್ ರಿಯಾಕ್ಟರ್‌ಗಳನ್ನು (ಎಸ್‌ಎಂಆರ್‌) ಸ್ಥಾಪಿಸುವ ಯೋಜನೆ ಇದಾಗಿದೆ. ಪ್ರತಿಯೊಂದು ರಿಯಾಕ್ಟರ್‌ನ ಸಾಮರ್ಥ್ಯ 300 ಮೆಗಾವ್ಯಾಟ್ ಆಗಿರುತ್ತದೆ.ಒಟ್ಟು 8 ರಿಯಾಕ್ಟರ್‌ಗಳಿಂದ ಅದಾನಿ ಗ್ರೂಪ್‌ಗೆ ಸುಮಾರು 1,600 ಮೆಗಾವ್ಯಾಟ್ ನ್ಯೂಕ್ಲಿಯರ್ ವಿದ್ಯುತ್ ಉತ್ಪಾದನಾ ಸಾಮರ್ಥ್ಯ ಸಿಗಲಿದೆ.ಈ ಮಾಹಿತಿಯನ್ನು ತಿಳಿಸಿದವರು ತಮ್ಮ ಹೆಸರನ್ನು ಬಹಿರಂಗಪಡಿಸದಂತೆ ಕೇಳಿಕೊಂಡಿದ್ದಾರೆ. ಏಕೆಂದರೆ ಈ ಯೋಜನೆಯ ಬಗ್ಗೆ ಇನ್ನೂ ಖಾಸಗಿ ಚರ್ಚೆಗಳು ನಡೆಯುತ್ತಿವೆ ಎಂದು ಸುದ್ದಿ ಸಂಸ್ಥೆ ಬ್ಲೂಮ್‌ಬರ್ಗ್ ವರದಿ ಮಾಡಿದೆ.

ಬ್ಲೂಮ್‌ಬರ್ಗ್ ಪ್ರಕಾರ, ರಿಯಾಕ್ಟರ್‌ಗಳಿಗೆ ಸ್ಥಿರವಾದ ನೀರಿನ ಪೂರೈಕೆಯನ್ನು ಖಚಿತಪಡಿಸಿಜಕೊಳ್ಳುವುದು ಅಗತ್ಯವಾಗಿದೆ. ಹಾಗಾಗಿ, ಯೋಜನೆಗೆ ಉತ್ತರ ಪ್ರದೇಶ ಸರ್ಕಾರ ಇನ್ನೂ ಸೂಕ್ತವಾದ ನದಿ ತೀರದ ಸ್ಥಳವನ್ನು ಗುರುತಿಸಿಲ್ಲ.

ದತ್ತಾಂಶ ಕೇಂದ್ರ ವಿಸ್ತರಣೆ ಮತ್ತು ಕೃತಕ ಬುದ್ಧಿಮತ್ತೆ-ಚಾಲಿತ ವ್ಯವಸ್ಥೆಗಳ ಹೆಚ್ಚುತ್ತಿರುವ ಬಳಕೆಯಿಂದಾಗಿ ಭಾರತದ ವಿದ್ಯುತ್ ಬೇಡಿಕೆ ತೀವ್ರವಾಗಿ ಏರುತ್ತಿರುವ ಸಮಯದಲ್ಲಿ, ತನ್ನ ನವೀಕರಿಸಬಹುದಾದ ಮತ್ತು ಕಡಿಮೆ-ಇಂಗಾಲದ ಇಂಧನ ಬಂಡವಾಳವನ್ನು ವಿಸ್ತರಿಸುವ ಅದಾನಿಯ ಪ್ರಯತ್ನಗಳ ಒಂದು ಭಾಗವಾಗಿ ಈ ಯೋಜನೆಗೆ ಮುಂದಾಗಿದೆ ಎಂದು ವರದಿ ಹೇಳಿದೆ.

ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಅಂಗೀಕಾರಗೊಂಡ ಬೆನ್ನಲ್ಲೇ ಅದಾನಿ ಗ್ರೂಪ್ ಅಣು ವಿದ್ಯುತ್ ಯೋಜನೆ ಕುರಿತು ಚರ್ಚೆಗೆ ಮುಂದಾಗಿರುವುದು ಗಮನಾರ್ಹವಾಗಿದೆ.

ಖಾಸಗಿ ಗ್ರೂಪ್ ಒಂದು ಅಣು ವಿದ್ಯುತ್ ಯೋಜನೆಗೆ ಪ್ರವೇಶಿಸುವ ಇಂಗಿತ ವ್ಯಕ್ತಪಡಿಸಿದ ಬೆನ್ನಲ್ಲೇ ಮಸೂದೆ ಮಂಡಿಸಲಾಗಿದೆ ಎಂದು ಸಂಸತ್ತಿನಲ್ಲಿ ಚರ್ಚೆಯ ವೇಳೆ ಕಾಂಗ್ರೆಸ್ ಸಂಸದ ಮನೀಶ್ ತಿವಾರಿ ಹೇಳಿದ್ದರು.

ಫೆಬ್ರವರಿಯ ಮಂಡಿಸಿದ ಕೇಂದ್ರ ಬಜೆಟ್‌ನಲ್ಲಿ ಘೋಷಿಸಲಾದ ಪರಮಾಣು ಇಂಧನ ಮಿಷನ್ ಅಡಿಯಲ್ಲಿ, ಕೇಂದ್ರ ಸರ್ಕಾರವು ಸಣ್ಣ ಮಾಡ್ಯುಲರ್ ರಿಯಾಕ್ಟರ್‌ಗಳ ಸಂಶೋಧನೆ ಮತ್ತು ಅಭಿವೃದ್ಧಿಗೆ 200 ಬಿಲಿಯನ್ ರೂ.ಗಳನ್ನು ಖರ್ಚು ಮಾಡುವುದಾಗಿ ಹೇಳಿದೆ.

ಸಾರ್ವಜನಿಕ-ಖಾಸಗಿ ಪಾಲುದಾರಿಕೆ ಮಾದರಿ

ಅದಾನಿ ಗ್ರೂಪ್ ಮತ್ತು ಉತ್ತರ ಪ್ರದೇಶ ಸರ್ಕಾರದ ನಡುವಿನ ಚರ್ಚೆಗಳು ಸಾರ್ವಜನಿಕ-ಖಾಸಗಿ ಪಾಲುದಾರಿಕೆ ಮಾದರಿಯ ಸುತ್ತ ಕೇಂದ್ರೀಕೃತವಾಗಿವೆ. ಪ್ರಸ್ತಾವಿತ ಯೋಜನೆಯ ಪ್ರಕಾರ, ಸರ್ಕಾರಿ ಸ್ವಾಮ್ಯದ ಭಾರತೀಯ ಪರಮಾಣು ವಿದ್ಯುತ್ ನಿಗಮ ಲಿಮಿಟೆಡ್ (ಎನ್‌ಪಿಸಿಐಎಲ್) ಅದಾನಿ ಗ್ರೂಪ್ ಪರವಾಗಿ ಸ್ಥಾವರವನ್ನು ನಿರ್ವಹಿಸುತ್ತದೆ ಎಂದು ಮೂಲಗಳನ್ನು ಉಲ್ಲೇಖಿಸಿ ಬ್ಲೂಮ್‌ಬರ್ಗ್ ವರದಿ ಮಾಡಿದೆ.

ಬ್ಲೂಮ್‌ಬರ್ಗ್ ಪ್ರಕಾರ, ಅದಾನಿ ಸ್ಥಾಪಿಸಲು ಯೋಜಿಸಿರುವ 200 ಮೆಗಾವ್ಯಾಟ್ ಸಾಮರ್ಥ್ಯದ ಎಸ್‌ಎಂಆರ್‌ಗಳ ವಿನ್ಯಾಸ ಮತ್ತು ಅಭಿವೃದ್ಧಿಯ ಕುರಿತು ಸರ್ಕಾರಿ ಸ್ವಾಮ್ಯದ ಭಾಭಾ ಪರಮಾಣು ಸಂಶೋಧನಾ ಕೇಂದ್ರ (ಬಿಎಆರ್‌ಸಿ) ಕೆಲಸ ಮಾಡುತ್ತಿದೆ.

ಸರ್ಕಾರದ ಅನುಮೋದನೆಗಳನ್ನು ಪಡೆದ ನಂತರ ಈ ಯೋಜನೆ ಪೂರ್ಣಗೊಳ್ಳಲು ಐದರಿಂದ ಆರು ವರ್ಷಗಳು ಬೇಕಾಗುತ್ತದೆ ಎಂದು ನಿರೀಕ್ಷಿಸಲಾಗಿದೆ. ಅದಾನಿ ಪರಮಾಣು ವಲಯಕ್ಕೆ ಮೊದಲ ಬಾರಿಗೆ ಪ್ರವೇಶಿಸುವುದರಿಂದ ಸಮಯ ಮಿತಿಯನ್ನು ಭಾಗಶಃ ವಿಸ್ತರಿಸಲಾಗಿದೆ.

ಇತರ ಕಂಪನಿಗಳಿಂದ ಪರಮಾಣು ಕ್ಷೇತ್ರದ ಮೇಲೆ ಕಣ್ಣು

ಟಾಟಾ ಗ್ರೂಪ್, ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಮತ್ತು ಜೆಎಸ್‌ಡಬ್ಲ್ಯೂ ಗ್ರೂಪ್ ಸೇರಿದಂತೆ ಇತರ ಭಾರತೀಯ ಉದ್ಯಮ ಸಮೂಹಗಳು ಕೂಡ ಪರಮಾಣು ವಿದ್ಯುತ್ ವಲಯಕ್ಕೆ ಪ್ರವೇಶವನ್ನು ಬಯಸುತ್ತಿವೆ ಎಂದು ಪಿಟಿಐ ಈ ಹಿಂದೆ ವರದಿ ಮಾಡಿತ್ತು.

ಭಾರತವು ಪ್ರಸ್ತುತ ಏಳು ಸ್ಥಳಗಳಲ್ಲಿ ಸುಮಾರು ಎರಡು ಡಜನ್ ಪರಮಾಣು ರಿಯಾಕ್ಟರ್‌ಗಳನ್ನು ನಿರ್ವಹಿಸುತ್ತಿದ್ದು, ಇದು ದೇಶದ ವಿದ್ಯುತ್ ಉತ್ಪಾದನೆಗೆ ಸರಿಸುಮಾರು ಶೇಕಡ 3ರಷ್ಟು ಕೊಡುಗೆ ನೀಡುತ್ತಿದೆ. ಈ ರಿಯಾಕ್ಟರ್‌ಗಳು ಸುಮಾರು 8,780 ಮೆಗಾವ್ಯಾಟ್ ಸ್ಥಾಪಿತ ಸಾಮರ್ಥ್ಯವನ್ನು ಹೊಂದಿದ್ದು, ಅನುಷ್ಠಾನದ ವಿವಿಧ ಹಂತಗಳಲ್ಲಿರುವ ಯೋಜನೆಗಳ ಮೂಲಕ ಸಾಮರ್ಥ್ಯವನ್ನು 13,600 ಮೆಗಾವ್ಯಾಟ್‌ಗೆ ಹೆಚ್ಚಿಸುವ ಯೋಜನೆಗಳು ನಡೆಯುತ್ತಿವೆ. 2047 ರ ವೇಳೆಗೆ 100 ಗಿಗಾವ್ಯಾಟ್ ಪರಮಾಣು ವಿದ್ಯುತ್ ಸಾಮರ್ಥ್ಯವನ್ನು ಸಾಧಿಸುವ ಗುರಿಯನ್ನು ಸರ್ಕಾರ ಹೊಂದಿದೆ.

ಪರಮಾಣು ಕ್ಷೇತ್ರಕ್ಕೆ ಅದಾನಿ ಪ್ರವೇಶದ ಕುರಿತು ಉತ್ತರ ಪ್ರದೇಶ ಸರ್ಕಾರ, ಅದಾನಿ ಗ್ರೂಪ್ ಮತ್ತು ಪರಮಾಣು ಇಂಧನ ಇಲಾಖೆಯ ಪ್ರತಿನಿಧಿಗಳು, ಯಾರೂ ಕೂಡ ತಕ್ಷಣಕ್ಕೆ ಪ್ರತಿಕ್ರಿಯಿಸಿಲ್ಲ ಎಂದು ಬ್ಲೂಮ್‌ಬರ್ಗ್‌ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...