Homeಮುಖಪುಟಅಣು ವಿದ್ಯುತ್ ಯೋಜನೆ ಕುರಿತು ಯುಪಿ ಸರ್ಕಾರದೊಂದಿಗೆ ಅದಾನಿ ಗ್ರೂಪ್ ಮಾತುಕತೆ: ವರದಿ

ಅಣು ವಿದ್ಯುತ್ ಯೋಜನೆ ಕುರಿತು ಯುಪಿ ಸರ್ಕಾರದೊಂದಿಗೆ ಅದಾನಿ ಗ್ರೂಪ್ ಮಾತುಕತೆ: ವರದಿ

ಅಣು ಶಕ್ತಿಯ ಖಾಸಗೀಕರಣ ಮಸೂದೆ ಅಂಗೀಕಾರ ಬೆನ್ನಲ್ಲೇ ಬೆಳವಣಿಗೆ

- Advertisement -
- Advertisement -

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, ‘ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿದೆ.

ಈ ಬೆನ್ನಲ್ಲೇ ಅದಾನಿ ಗ್ರೂಪ್ ವಾಣಿಜ್ಯ ಪರಮಾಣು ವಿದ್ಯುತ್ ಯೋಜನೆಯ ಕುರಿತು ಉತ್ತರ ಪ್ರದೇಶ ಸರ್ಕಾರದೊಂದಿಗೆ ಮಾತುಕತೆ ನಡೆಸುತ್ತಿದೆ ಎಂದು ವರದಿಯಾಗಿದೆ.

ಅದಾನಿ ಗ್ರೂಪ್ ಒಂದು ಹೊಸ ನ್ಯೂಕ್ಲಿಯರ್ ವಿದ್ಯುತ್ ಯೋಜನೆಯ ಬಗ್ಗೆ ಆಲೋಚಿಸುತ್ತಿದೆ. ಒಟ್ಟು 8 ಸಣ್ಣ ಆಕಾರದ ನ್ಯೂಕ್ಲಿಯರ್ ರಿಯಾಕ್ಟರ್‌ಗಳನ್ನು (ಎಸ್‌ಎಂಆರ್‌) ಸ್ಥಾಪಿಸುವ ಯೋಜನೆ ಇದಾಗಿದೆ. ಪ್ರತಿಯೊಂದು ರಿಯಾಕ್ಟರ್‌ನ ಸಾಮರ್ಥ್ಯ 300 ಮೆಗಾವ್ಯಾಟ್ ಆಗಿರುತ್ತದೆ.ಒಟ್ಟು 8 ರಿಯಾಕ್ಟರ್‌ಗಳಿಂದ ಅದಾನಿ ಗ್ರೂಪ್‌ಗೆ ಸುಮಾರು 1,600 ಮೆಗಾವ್ಯಾಟ್ ನ್ಯೂಕ್ಲಿಯರ್ ವಿದ್ಯುತ್ ಉತ್ಪಾದನಾ ಸಾಮರ್ಥ್ಯ ಸಿಗಲಿದೆ.ಈ ಮಾಹಿತಿಯನ್ನು ತಿಳಿಸಿದವರು ತಮ್ಮ ಹೆಸರನ್ನು ಬಹಿರಂಗಪಡಿಸದಂತೆ ಕೇಳಿಕೊಂಡಿದ್ದಾರೆ. ಏಕೆಂದರೆ ಈ ಯೋಜನೆಯ ಬಗ್ಗೆ ಇನ್ನೂ ಖಾಸಗಿ ಚರ್ಚೆಗಳು ನಡೆಯುತ್ತಿವೆ ಎಂದು ಸುದ್ದಿ ಸಂಸ್ಥೆ ಬ್ಲೂಮ್‌ಬರ್ಗ್ ವರದಿ ಮಾಡಿದೆ.

ಬ್ಲೂಮ್‌ಬರ್ಗ್ ಪ್ರಕಾರ, ರಿಯಾಕ್ಟರ್‌ಗಳಿಗೆ ಸ್ಥಿರವಾದ ನೀರಿನ ಪೂರೈಕೆಯನ್ನು ಖಚಿತಪಡಿಸಿಜಕೊಳ್ಳುವುದು ಅಗತ್ಯವಾಗಿದೆ. ಹಾಗಾಗಿ, ಯೋಜನೆಗೆ ಉತ್ತರ ಪ್ರದೇಶ ಸರ್ಕಾರ ಇನ್ನೂ ಸೂಕ್ತವಾದ ನದಿ ತೀರದ ಸ್ಥಳವನ್ನು ಗುರುತಿಸಿಲ್ಲ.

ದತ್ತಾಂಶ ಕೇಂದ್ರ ವಿಸ್ತರಣೆ ಮತ್ತು ಕೃತಕ ಬುದ್ಧಿಮತ್ತೆ-ಚಾಲಿತ ವ್ಯವಸ್ಥೆಗಳ ಹೆಚ್ಚುತ್ತಿರುವ ಬಳಕೆಯಿಂದಾಗಿ ಭಾರತದ ವಿದ್ಯುತ್ ಬೇಡಿಕೆ ತೀವ್ರವಾಗಿ ಏರುತ್ತಿರುವ ಸಮಯದಲ್ಲಿ, ತನ್ನ ನವೀಕರಿಸಬಹುದಾದ ಮತ್ತು ಕಡಿಮೆ-ಇಂಗಾಲದ ಇಂಧನ ಬಂಡವಾಳವನ್ನು ವಿಸ್ತರಿಸುವ ಅದಾನಿಯ ಪ್ರಯತ್ನಗಳ ಒಂದು ಭಾಗವಾಗಿ ಈ ಯೋಜನೆಗೆ ಮುಂದಾಗಿದೆ ಎಂದು ವರದಿ ಹೇಳಿದೆ.

ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಅಂಗೀಕಾರಗೊಂಡ ಬೆನ್ನಲ್ಲೇ ಅದಾನಿ ಗ್ರೂಪ್ ಅಣು ವಿದ್ಯುತ್ ಯೋಜನೆ ಕುರಿತು ಚರ್ಚೆಗೆ ಮುಂದಾಗಿರುವುದು ಗಮನಾರ್ಹವಾಗಿದೆ.

ಖಾಸಗಿ ಗ್ರೂಪ್ ಒಂದು ಅಣು ವಿದ್ಯುತ್ ಯೋಜನೆಗೆ ಪ್ರವೇಶಿಸುವ ಇಂಗಿತ ವ್ಯಕ್ತಪಡಿಸಿದ ಬೆನ್ನಲ್ಲೇ ಮಸೂದೆ ಮಂಡಿಸಲಾಗಿದೆ ಎಂದು ಸಂಸತ್ತಿನಲ್ಲಿ ಚರ್ಚೆಯ ವೇಳೆ ಕಾಂಗ್ರೆಸ್ ಸಂಸದ ಮನೀಶ್ ತಿವಾರಿ ಹೇಳಿದ್ದರು.

ಫೆಬ್ರವರಿಯ ಮಂಡಿಸಿದ ಕೇಂದ್ರ ಬಜೆಟ್‌ನಲ್ಲಿ ಘೋಷಿಸಲಾದ ಪರಮಾಣು ಇಂಧನ ಮಿಷನ್ ಅಡಿಯಲ್ಲಿ, ಕೇಂದ್ರ ಸರ್ಕಾರವು ಸಣ್ಣ ಮಾಡ್ಯುಲರ್ ರಿಯಾಕ್ಟರ್‌ಗಳ ಸಂಶೋಧನೆ ಮತ್ತು ಅಭಿವೃದ್ಧಿಗೆ 200 ಬಿಲಿಯನ್ ರೂ.ಗಳನ್ನು ಖರ್ಚು ಮಾಡುವುದಾಗಿ ಹೇಳಿದೆ.

ಸಾರ್ವಜನಿಕ-ಖಾಸಗಿ ಪಾಲುದಾರಿಕೆ ಮಾದರಿ

ಅದಾನಿ ಗ್ರೂಪ್ ಮತ್ತು ಉತ್ತರ ಪ್ರದೇಶ ಸರ್ಕಾರದ ನಡುವಿನ ಚರ್ಚೆಗಳು ಸಾರ್ವಜನಿಕ-ಖಾಸಗಿ ಪಾಲುದಾರಿಕೆ ಮಾದರಿಯ ಸುತ್ತ ಕೇಂದ್ರೀಕೃತವಾಗಿವೆ. ಪ್ರಸ್ತಾವಿತ ಯೋಜನೆಯ ಪ್ರಕಾರ, ಸರ್ಕಾರಿ ಸ್ವಾಮ್ಯದ ಭಾರತೀಯ ಪರಮಾಣು ವಿದ್ಯುತ್ ನಿಗಮ ಲಿಮಿಟೆಡ್ (ಎನ್‌ಪಿಸಿಐಎಲ್) ಅದಾನಿ ಗ್ರೂಪ್ ಪರವಾಗಿ ಸ್ಥಾವರವನ್ನು ನಿರ್ವಹಿಸುತ್ತದೆ ಎಂದು ಮೂಲಗಳನ್ನು ಉಲ್ಲೇಖಿಸಿ ಬ್ಲೂಮ್‌ಬರ್ಗ್ ವರದಿ ಮಾಡಿದೆ.

ಬ್ಲೂಮ್‌ಬರ್ಗ್ ಪ್ರಕಾರ, ಅದಾನಿ ಸ್ಥಾಪಿಸಲು ಯೋಜಿಸಿರುವ 200 ಮೆಗಾವ್ಯಾಟ್ ಸಾಮರ್ಥ್ಯದ ಎಸ್‌ಎಂಆರ್‌ಗಳ ವಿನ್ಯಾಸ ಮತ್ತು ಅಭಿವೃದ್ಧಿಯ ಕುರಿತು ಸರ್ಕಾರಿ ಸ್ವಾಮ್ಯದ ಭಾಭಾ ಪರಮಾಣು ಸಂಶೋಧನಾ ಕೇಂದ್ರ (ಬಿಎಆರ್‌ಸಿ) ಕೆಲಸ ಮಾಡುತ್ತಿದೆ.

ಸರ್ಕಾರದ ಅನುಮೋದನೆಗಳನ್ನು ಪಡೆದ ನಂತರ ಈ ಯೋಜನೆ ಪೂರ್ಣಗೊಳ್ಳಲು ಐದರಿಂದ ಆರು ವರ್ಷಗಳು ಬೇಕಾಗುತ್ತದೆ ಎಂದು ನಿರೀಕ್ಷಿಸಲಾಗಿದೆ. ಅದಾನಿ ಪರಮಾಣು ವಲಯಕ್ಕೆ ಮೊದಲ ಬಾರಿಗೆ ಪ್ರವೇಶಿಸುವುದರಿಂದ ಸಮಯ ಮಿತಿಯನ್ನು ಭಾಗಶಃ ವಿಸ್ತರಿಸಲಾಗಿದೆ.

ಇತರ ಕಂಪನಿಗಳಿಂದ ಪರಮಾಣು ಕ್ಷೇತ್ರದ ಮೇಲೆ ಕಣ್ಣು

ಟಾಟಾ ಗ್ರೂಪ್, ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಮತ್ತು ಜೆಎಸ್‌ಡಬ್ಲ್ಯೂ ಗ್ರೂಪ್ ಸೇರಿದಂತೆ ಇತರ ಭಾರತೀಯ ಉದ್ಯಮ ಸಮೂಹಗಳು ಕೂಡ ಪರಮಾಣು ವಿದ್ಯುತ್ ವಲಯಕ್ಕೆ ಪ್ರವೇಶವನ್ನು ಬಯಸುತ್ತಿವೆ ಎಂದು ಪಿಟಿಐ ಈ ಹಿಂದೆ ವರದಿ ಮಾಡಿತ್ತು.

ಭಾರತವು ಪ್ರಸ್ತುತ ಏಳು ಸ್ಥಳಗಳಲ್ಲಿ ಸುಮಾರು ಎರಡು ಡಜನ್ ಪರಮಾಣು ರಿಯಾಕ್ಟರ್‌ಗಳನ್ನು ನಿರ್ವಹಿಸುತ್ತಿದ್ದು, ಇದು ದೇಶದ ವಿದ್ಯುತ್ ಉತ್ಪಾದನೆಗೆ ಸರಿಸುಮಾರು ಶೇಕಡ 3ರಷ್ಟು ಕೊಡುಗೆ ನೀಡುತ್ತಿದೆ. ಈ ರಿಯಾಕ್ಟರ್‌ಗಳು ಸುಮಾರು 8,780 ಮೆಗಾವ್ಯಾಟ್ ಸ್ಥಾಪಿತ ಸಾಮರ್ಥ್ಯವನ್ನು ಹೊಂದಿದ್ದು, ಅನುಷ್ಠಾನದ ವಿವಿಧ ಹಂತಗಳಲ್ಲಿರುವ ಯೋಜನೆಗಳ ಮೂಲಕ ಸಾಮರ್ಥ್ಯವನ್ನು 13,600 ಮೆಗಾವ್ಯಾಟ್‌ಗೆ ಹೆಚ್ಚಿಸುವ ಯೋಜನೆಗಳು ನಡೆಯುತ್ತಿವೆ. 2047 ರ ವೇಳೆಗೆ 100 ಗಿಗಾವ್ಯಾಟ್ ಪರಮಾಣು ವಿದ್ಯುತ್ ಸಾಮರ್ಥ್ಯವನ್ನು ಸಾಧಿಸುವ ಗುರಿಯನ್ನು ಸರ್ಕಾರ ಹೊಂದಿದೆ.

ಪರಮಾಣು ಕ್ಷೇತ್ರಕ್ಕೆ ಅದಾನಿ ಪ್ರವೇಶದ ಕುರಿತು ಉತ್ತರ ಪ್ರದೇಶ ಸರ್ಕಾರ, ಅದಾನಿ ಗ್ರೂಪ್ ಮತ್ತು ಪರಮಾಣು ಇಂಧನ ಇಲಾಖೆಯ ಪ್ರತಿನಿಧಿಗಳು, ಯಾರೂ ಕೂಡ ತಕ್ಷಣಕ್ಕೆ ಪ್ರತಿಕ್ರಿಯಿಸಿಲ್ಲ ಎಂದು ಬ್ಲೂಮ್‌ಬರ್ಗ್‌ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...

ಹನೂರು ಶೂಟೌಟ್ ಪ್ರಕರಣ: ಮೂವರು ಅರಣ್ಯ ಸಿಬ್ಬಂದಿಗೆ ನಿರೀಕ್ಷಣಾ ಜಾಮೀನು.!

ಕಾವೇರಿ ವನ್ಯಜೀವಿ ಅಭಯಾರಣ್ಯದ ಹನೂರು ವ್ಯಾಪ್ತಿಯಲ್ಲಿ ಮೂವರು ಮೃತಪಟ್ಟಿದ್ದ ವಿವಾದಾತ್ಮಕ ಗುಂಡಿನ ದಾಳಿ ಪ್ರಕರಣಕ್ಕೆ ಇದೀಗ ಕಾನೂನು ತಿರುವು ಸಿಕ್ಕಿದೆ. ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಮೂವರು ಅರಣ್ಯ ಸಿಬ್ಬಂದಿಗೆ ಕೊಳ್ಳೇಗಾಲದ ಮೊದಲ ಹೆಚ್ಚುವರಿ...