Homeಮುಖಪುಟಪ್ರೀತಿಸಿ ಮದುವೆಯಾಗಿ ಕೇವಲ 8 ತಿಂಗಳು : ವರದಕ್ಷಿಣೆಗಾಗಿ ಹೆಂಡತಿಯನ್ನು ಹೊಡೆದು ಕೊಂದ ಗಂಡ!

ಪ್ರೀತಿಸಿ ಮದುವೆಯಾಗಿ ಕೇವಲ 8 ತಿಂಗಳು : ವರದಕ್ಷಿಣೆಗಾಗಿ ಹೆಂಡತಿಯನ್ನು ಹೊಡೆದು ಕೊಂದ ಗಂಡ!

ವೈವಾಹಿಕ ಜೀವನದ ಎರಡೇ ತಿಂಗಳಿಗೆ ಗಂಡನ ಮನೆಯವರ ದನ ದಾಹಕ್ಕೆ ನಲುಗಿದ ಹೆಣ್ಣು ಮಗಳು

- Advertisement -
- Advertisement -

ಮದುವೆಯಾಗಿ ಎಂಟು ತಿಂಗಳಿಗೆ ಗಂಡ ಹೆಂಡತಿಯನ್ನು ಮನೆ ಅಂಗಳದಲ್ಲೇ ಹೊಡೆದು ಕೊಂದ ಹೃದಯವಿದ್ರಾವಕ ಘಟನೆ ತೆಲಂಗಾಣದ ವಿಕಾರಬಾದ್ ಜಿಲ್ಲೆಯ ತಂಡೂರ್‌ನಲ್ಲಿ ನಡೆದಿದೆ.

ಅನುಷಾ (22) ಕೊಲೆಯಾದ ಹೆಣ್ಣು ಮಗಳು. ಗಂಡ ಪರಮೇಶ್ (28) ವಿರುದ್ದ ಕೊಲೆ ಆರೋಪ ಕೇಳಿ ಬಂದಿದೆ. ಹತ್ಯೆಗೂ ಮುನ್ನ ವಾರಗಟ್ಟಲೆ ಪರಮೇಶ್ ಆಕೆಗೆ ಚಿತ್ರಹಿಂಸೆ ನೀಡಿದ್ದ ಎಂದು ವರದಿಗಳು ಹೇಳಿವೆ.

ವರದಕ್ಷಿಣೆ ತರುವಂತೆ ಅನುಷಾಳನ್ನು ಪೀಡಿಸಿದ ಪರಮೇಶ್, ಕೊನೆಗೆ ಹೊಡೆದು ಕೊಂದಿದ್ದಾನೆ ಎಂದು ಆರೋಪಿಸಲಾಗಿದೆ. ಮದುವೆಯಾಗಿ ಎರಡೇ ತಿಂಗಳಿಗೆ ಆತ ವರದಕ್ಷಿಣೆಗಾಗಿ ಆಕೆಗೆ ಕಿರುಕುಳ ನೀಡಲು ಆರಂಭಿಸಿದ್ದ ಎಂದು ವರದಿಯಾಗಿದೆ.

ಹೆಚ್ಚು ಅನ್ನ ಮಾಡಿದ ಕ್ಷುಲ್ಲಕ ವಿಚಾರ ಮುಂದಿಟ್ಟುಕೊಂಡು ಪರಮೇಶ್‌ನ ತಾಯಿ ಲಾಲಮ್ಮ ಡಿಸೆಂಬರ್ 15ರಂದು ಅನುಷಾಗೆ ಬೈದಿದ್ದರು. ಅಮ್ಮನ ಜೊತೆ ಪರಮೇಶ್ ಕೂಡ ಸೇರಿಕೊಂಡು ತನ್ನ ಹೆಂಡತಿಯನ್ನು ಹಿಂಸಿಸಲು ಪ್ರಾರಂಭಿಸಿದ್ದ. ಅಮ್ಮ-ಮಗ ಇಬ್ಬರು ಸೇರಿ ಅನುಷಾಗೆ ಥಳಿಸಿದ್ದರು. ಇದನ್ನು ನೋಡಿದ ಪರಮೇಶ್‌ನ ತಂದೆ ಮೊಗಿಲಯ್ಯ ಅನುಷಾಳನ್ನು ಆಕೆಯ ತವರು ಮನೆಗೆ ಬಿಟ್ಟು ಬಂದಿದ್ದರು ಎಂದು ತಂಡೂರ್ ಉಪ ಪೊಲೀಸ್ ವರಿಷ್ಠಾಧಿಕಾರಿ (ಡಿವೈಎಸ್ಪಿ) ನರಸಿಂಗ್ ಯಡಯ್ಯ ತಿಳಿಸಿದ್ದಾರೆ.

ಡಿಸೆಂಬರ್ 18ರಂದು ಅನುಷಾಳನ್ನು ಆಕೆಯ ತಾಯಿ ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗ ಮಧ್ಯೆ ಅಡ್ಡಗಟ್ಟಿದ ಪರಮೇಶ್, “ನಾನು ಆಸ್ಪತ್ರೆಗೆ ಕರೆದೊಯ್ಯುತ್ತೇನೆ” ಎಂದು ಹೇಳಿದ್ದಾನೆ. ಇದಕ್ಕೆ ಅಮ್ಮ-ಮಗಳು ಒಪ್ಪದಿದ್ದಾಗ, ಪರಮೇಶ್ ಬಲವಂತವಾಗಿ ಅನುಷಾಳನ್ನು ಕರೆದೊಯ್ದಿದ್ದ.

ಪರಮೇಶ್ ಅನುಷಾಳನ್ನು ಎರಡು ಆಸ್ಪತ್ರೆಗಳಿಗೆ ಕರೆದೊಯ್ದಿದ್ದ. ಆದರೆ, ಆಸ್ಪತ್ರೆಯವರು ಇದು ವೈದ್ಯಕೀಯ-ಕಾನೂನು ಪ್ರಕರಣ, ಪೊಲೀಸರು ಮಧ್ಯಪ್ರವೇಶಿಸದೆ ಚಿಕಿತ್ಸೆ ನೀಡುವುದಿಲ್ಲ ಎಂದಿದ್ದಾರೆ.

ಹಾಗಾಗಿ, ಪರಮೇಶ್ ಅನುಷಾಳನ್ನು ವಾಪಸ್ ಆತನ ಮನೆಗೆ ಕರೆದೊಯ್ದಿದ್ದ. ಮನೆ ತಲುಪಿದಾಗ, ಬಾಗಿಲು ತೆರೆಯುವಂತೆ ಅನುಷಾಳಿಗೆ ಸೂಚಿಸಿದ್ದ. ಇದಕ್ಕೆ ಅನುಷಾ ನಿರಾಕರಿಸಿದಾಗ, ಇಬ್ಬರ ನಡುವೆ ವಾಗ್ವಾದ ನಡೆದಿದೆ. ಅದು ತಾರಕಕ್ಕೇರಿ ಪರಮೇಶ್ ಅನುಷಾಳಿಗೆ ಥಳಿಸಿದ್ದಾನೆ. ನಂತರ ಆಕೆಯನ್ನು ಒದ್ದು ಮನೆಯ ಅಂಗಳಕ್ಕೆ ತಳ್ಳಿದ್ದಾನೆ. ಬಳಿಕ ಕಟ್ಟಿಗೆ ತಂದು ಅನುಷಾಳಿಗೆ ಹೊಡೆಯಲು ಶುರು ಮಾಡಿದ್ದಾನೆ. ಆಕೆ ನೆಲಕ್ಕೆ ಬೀಳುವವರೆಗೆ ಸುಮಾರು 6 ಬಾರಿ ತಲೆಗೆ ಬಲವಾಗಿ ಹೊಡೆದಿದ್ದಾನೆ ಎಂದು ಡಿವೈಎಸ್ಪಿ ವಿವರಿಸಿದ್ದಾರೆ.

ಆಸ್ಪತ್ರೆಯಿಂದ ಬೈಕ್‌ನಲ್ಲಿ ಪರಮೇಶ್‌ನ ಮನೆ ತಲುಪಿದಾಗ, ಅನುಷಾ ಅಲ್ಲಿಂದ ಓಡಿ ಹೋಗಲು ನೋಡಿದ್ದಳು. ಆದರೆ, ಪರಮೇಶ್ ಆಕೆಯನ್ನು ವರಾಂಡಕ್ಕೆ ಎಳೆದೊಯ್ದಿದ್ದ. ನಂತರ ಆಕೆಯ ತಲೆಯನ್ನು ಬಾಗಿಲಿಗೆ ಬಡಿಯುವುದು, ಕಪಾಳಮೋಕ್ಷ ಮಾಡುವುದು ಸೇರಿದಂತೆ ವಿವಿಧ ರೀತಿಯಲ್ಲಿ ಹಿಂಸಿಸಿದ್ದಾನೆ. ಕೊನೆಗೆ ಕಟ್ಟಿಗೆಯಿಂದ ಆಕೆಗೆ ಹೊಡೆಯಲು ಪ್ರಾರಂಭಿಸಿದ್ದಾನೆ. ಇದನ್ನು ನೋಡಿದ ದಾರಿ ಹೋಕ ಮಹಿಳೆಯೊಬ್ಬರು ತಡೆಯಲು ಪ್ರಯತ್ನಿಸಿದ್ದರು. ಆದರೆ, ಅನುಷಾ ಕುಸಿದು ಬೀಳುವವರೆಗೆ ಪರಮೇಶ್ ಹೊಡೆಯುವುದನ್ನು ನಿಲ್ಲಿಸಿಲ್ಲ ಎಂದು ಡಿವೈಎಸ್ಪಿ ಹೇಳಿದ್ದಾರೆ.

ಘಟನೆಯ ದೃಶ್ಯಗಳು ಪರಮೇಶ್‌ನ ಮನೆಯ ಸಿಸಿಟಿವಿಯಲ್ಲಿ ದಾಖಲಾಗಿದೆ ಎಂದು ಹೇಳಿದ್ದಾರೆ.

ಮದುವೆಗೂ ಮುಂಚೆ ಕೆಲ ಸಮಯದಿಂದ ಅನುಷಾ ಮತ್ತು ಪರಮೇಶ್ ಪರಸ್ಪರ ಪ್ರೀತಿಸುತ್ತಿದ್ದರು. ಕಳೆದ ಮಾರ್ಚ್‌ನಲ್ಲಿ ಕುಟುಂಬಸ್ಥರ ಸಮ್ಮುಖದಲ್ಲಿ ಇಬ್ಬರ ಮದುವೆ ನಡೆದಿತ್ತು. ಮದುವೆ ಸಂದರ್ಭದಲ್ಲಿ 1.11 ಲಕ್ಷ ರೂಪಾಯಿ ಹಣ ಮತ್ತು ಇತರ ಕೆಲ ವಸ್ತುಗಳನ್ನು ವರದಕ್ಷಿಣೆಯಾಗಿ ಅನುಷಾಳ ಪೋಷಕರು ನೀಡಿದ್ದರು ಎಂದು ಡಿವೈಎಸ್ಪಿ ಮಾಹಿತಿ ನೀಡಿದ್ದಾರೆ.

ಮದುವೆಯಾಗಿ ಎರಡೇ ತಿಂಗಳಿಗೆ ಹೆಚ್ಚಿನ ವರದಕ್ಷಿಣೆ ತರುವಂತೆ ಪರಮೇಶ್ ಅನುಷಾಳಿಗೆ ಕಿರುಕುಳ ನೀಡಲು ಶುರು ಮಾಡಿದ್ದ. ಆತನ ಕುಟುಂಬಕ್ಕೆ 10 ಎಕರೆ ಭೂಮಿ ಇದ್ದು, ಆರ್ಥಿಕ ವಿಚಾರದಲ್ಲಿ ಚೆನ್ನಾಗಿದ್ದಾರೆ. ಪರಮೇಶ್‌ನ ತಾಯಿ ಆಗಾಗ, “ಅನುಷಾಳ ಬದಲು ಬೇರೆ ಹುಡುಗಿಯನ್ನು ಮದುವೆಯಾಗಿದ್ದರೆ ಇನ್ನೂ ಹೆಚ್ಚಿನ ವರದಕ್ಷಿಣೆ ಸಿಗುತ್ತಿತ್ತು” ಎಂದು ಹೇಳುತ್ತಿದ್ದರು.

ಅನುಷಾಳ ಮೇಲೆ ಡಿಸೆಂಬರ್ 15ರಂದು ಹಲ್ಲೆ ನಡೆದಾಗ, ಆಸ್ಪತ್ರೆಯ ಅಧಿಕಾರಿಗಳು ಪೊಲೀಸ್ ದೂರು ನೀಡುವಂತೆ ಸಲಹೆ ಕೊಟ್ಟಿದ್ದರು. ಆದರೆ, ತನ್ನ ವೈವಾಹಿಕ ಜೀವನಕ್ಕೆ ಹೆಚ್ಚಿನ ಸಮಸ್ಯೆ ಆಗಬಹುದು ಎಂದು ಅನುಷಾ ದೂರು ನೀಡಲು ನಿರಾಕರಿಸಿದ್ದಳು ಎಂದು ಆಕೆಯ ತಾಯಿ ಮಾಧ್ಯಮಗಳಿಗೆ ಹೇಳಿದ್ದಾರೆ.

ವಿಕಾರಾಬಾದ್ ಪೊಲೀಸರು ಪರಮೇಶ್ ಮತ್ತು ಆತನ ಪೋಷಕರನ್ನು ಬಂಧಿಸಿದ್ದಾರೆ. ಪರಮೇಶ್ ವಿರುದ್ಧ ಕೊಲೆ, ವರದಕ್ಷಿಣೆ ಹತ್ಯೆ ಮತ್ತು ಮಹಿಳೆಯರ ಮೇಲಿನ ಕ್ರೌರ್ಯಕ್ಕೆ ಸಂಬಂಧಿಸಿದ ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಬಿ-ಜಿ ರಾಮ್ ಜಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಕಾಯ್ದೆಯ (ಎಂಜಿಎನ್‌ಆರ್‌ಇಜಿಎ) ಹೆಸರು ಮತ್ತು ನಿಬಂಧನಗೆಳನ್ನು ಬದಲಿಸುವ ವಿಕಸಿತ್ ಭಾರತ್ ಗ್ಯಾರಂಟಿ ಫಾರ್ ರೋಝ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್),2025 (ವಿಬಿ-ಜಿ ರಾಮ್‌ ಜಿ) ಮಸೂದೆಗೆ...

ಬಾಂಗ್ಲಾದೇಶದ ಚಿತ್ತಗಾಂಗ್‌ನಲ್ಲಿ ಭಾರತೀಯ ವೀಸಾ ಅರ್ಜಿಗಳನ್ನು ಅನಿರ್ದಿಷ್ಟಾವಧಿಗೆ ಸ್ಥಗಿತಗೊಳಿಸಲಾಗಿದೆ

ಢಾಕಾ: ಬಾಂಗ್ಲಾದೇಶದ ಪ್ರಮುಖ ಯುವ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ನಂತರ ಹೆಚ್ಚಿದ ಉದ್ವಿಗ್ನತೆಯ ಹಿನ್ನೆಲೆಯಲ್ಲಿ, ಬಾಂಗ್ಲಾದೇಶದ ಎರಡನೇ ಅತಿದೊಡ್ಡ ನಗರ ಚಿತ್ತಗಾಂಗ್‌ನಲ್ಲಿರುವ ಭಾರತೀಯ ವೀಸಾ ಅರ್ಜಿ ಕೇಂದ್ರದಲ್ಲಿ ವೀಸಾ...

ತೀವ್ರ ವಿರೋಧಗಳ ನಡುವೆ ಗಣರಾಜ್ಯೋತ್ಸವ ಆಚರಣೆಯಲ್ಲಿ ‘ವಂದೇ ಮಾತರಂ’ ಹಾಡಲು ನಿರ್ಧರಿಸಿದ ಕೇಂದ್ರ ಸರ್ಕಾರ 

ಗಣರಾಜ್ಯೋತ್ಸವದ ಸಂದರ್ಭದಲ್ಲಿ 'ವಂದೇ ಮಾತರಂ' ಗೀತೆಯನ್ನು ಪ್ರಧಾನವಾಗಿ ಹಾಡಲು ಕೇಂದ್ರ ಸರ್ಕಾರ ನಿರ್ಧರಿಸಿದ್ದು, ಯುರೋಪಿಯನ್ ಒಕ್ಕೂಟದ ನಾಯಕರಾದ ಉರ್ಸುಲಾ ವಾನ್ ಡೆರ್ ಲೇಯೆನ್ ಮತ್ತು ಆಂಟೋನಿಯೊ ಕೋಸ್ಟಾ ಮುಂದಿನ ತಿಂಗಳು ಭಾರತಕ್ಕೆ ಆಗಮಿಸುವ...

ಅಣು ವಿದ್ಯುತ್ ಯೋಜನೆ ಕುರಿತು ಯುಪಿ ಸರ್ಕಾರದೊಂದಿಗೆ ಅದಾನಿ ಗ್ರೂಪ್ ಮಾತುಕತೆ: ವರದಿ

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, ‘ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿದೆ. ಈ ಬೆನ್ನಲ್ಲೇ...

ಅನಧಿಕೃತ ಬುದ್ಧಿಮಾಂದ್ಯ ಶಾಲೆಯಲ್ಲಿ ಬುದ್ಧಿಮಾಂದ್ಯ ಬಾಲಕನ ಮೇಲೆ ಅಮಾನವೀಯ ಹಲ್ಲೆ: ದಂಪತಿಯನ್ನು ವಶಕ್ಕೆ ಪಡೆದ ಪೊಲೀಸರು

ಬಾಗಲಕೋಟೆ: ಬಾಗಲಕೋಟೆಯ ಅನಧಿಕೃತ ದಿವ್ಯಜ್ಯೋತಿ ಬುದ್ಧಿಮಾಂದ್ಯ ಶಾಲೆಯಲ್ಲಿ ಶಿಕ್ಷಕ ದಂಪತಿ ಬುದ್ಧಿಮಾಂದ್ಯನ ಮೇಲೆ ಅಮಾನವೀಯವಾಗಿ ಹಲ್ಲೆ ನಡೆಸಿದ್ದು, ವೀಡಿಯೋ ವೈರಲ್ ಆದ ಬೆನ್ನಲ್ಲೇ ಘಟನೆಗೆ ಆಕ್ರೋಶಗಳು ವ್ಯಕ್ತವಾಗುತ್ತಿವೆ. ಮುಧೋಳ ತಾಲೂಕಿನ ಮಂಟೂರು ಗ್ರಾಮದ 16...

ಜೆಫ್ರಿ ಎಪ್‌ಸ್ಟೀನ್ ಫೈಲ್ಸ್: ನ್ಯಾಯಾಂಗ ಇಲಾಖೆಯ ವೆಬ್ ಪುಟದಿಂದ ಟ್ರಂಪ್ ಫೋಟೋ ಸೇರಿದಂತೆ 16 ದಾಖಲೆಗಳು ಕಣ್ಮರೆ 

ನ್ಯೂಯಾರ್ಕ್: ಜೆಫ್ರಿ ಎಪ್‌ಸ್ಟೀನ್ ಗೆ ಸಂಬಂಧಿಸಿದ ದಾಖಲೆಗಳಿರುವ ಅಮೆರಿಕದ ನ್ಯಾಯ ಇಲಾಖೆಯ (Justice Department) ಸಾರ್ವಜನಿಕ ವೆಬ್‌ಪುಟದಿಂದ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಫೋಟೋ ಸೇರಿದಂತೆ ಕನಿಷ್ಟ 16 ದಾಖಲೆಗಳು ನಾಪತ್ತೆಯಾಗಿರುವುದಾಗಿ ತಿಳಿದುಬಂದಿದೆ. ಅಪ್ರಾಪ್ತ...

ಬಾಂಗ್ಲಾದೇಶದಲ್ಲಿ ಮುಂದುವರಿದ ಹಿಂಸಾಚಾರ| ಬಿಎನ್‌ಪಿ ನಾಯಕನ ಮನೆಗೆ ಬೆಂಕಿ : 7 ವರ್ಷದ ಮಗಳು ಸಜೀವ ದಹನ

ವಿದ್ಯಾರ್ಥಿ ನಾಯಕ ಹಾಗೂ ಸ್ವತಂತ್ರ ರಾಜಕಾರಣಿ ಷರೀಫ್ ಉಸ್ಮಾನ್ ಹಾದಿ ಅವರ ಸಾವಿನ ಬಳಿಕ ಬಾಂಗ್ಲಾ ದೇಶದಲ್ಲಿ ಭುಗಿಲೆದ್ದಿರುವ ಹಿಂಸಾಚಾರ ತೀವ್ರ ಸ್ವರೂಪ ಪಡೆದುಕೊಂಡಿದೆ. ಹಿಂಸಾತ್ಮಕ ಪ್ರತಿಭಟನೆಯ ಮೂರನೇ ದಿನವಾದ ಶನಿವಾರ, ಪ್ರತಿಭಟನಾಕಾರರು ಬಾಂಗ್ಲಾದೇಶ್...

ದಕ್ಷಿಣ ಆಫ್ರಿಕಾದಲ್ಲಿ ಸಾರ್ವಜನಿಕರ ಮೇಲೆ ದಾಳಿಕೋರರು ನಡೆಸಿದ ಗುಂಡಿನ ದಾಳಿಯಲ್ಲಿ 9 ಜನರ ಸಾವು 

ಜೋಹಾನ್ಸ್‌ಬರ್ಗ್‌ನ ಹೊರಗಿನ ಬಾರ್‌ನಲ್ಲಿ ಭಾನುವಾರ ಮುಂಜಾನೆ ಅಪರಿಚಿತ ಬಂದೂಕುಧಾರಿಗಳು ನಡೆಸಿದ ಗುಂಡಿನ ದಾಳಿಯಲ್ಲಿ ಒಂಬತ್ತು ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ತಿಂಗಳು ದಕ್ಷಿಣ ಆಫ್ರಿಕಾದಲ್ಲಿ ನಡೆದ ಎರಡನೇ ಗುಂಡಿನ ದಾಳಿ...

ಬೆಂಗಳೂರು : ಜಿಬಿಎ ಅಧಿಕಾರಿಗಳಿಂದ 200ರಷ್ಟು ಮನೆಗಳ ನೆಲಸಮ : ಬೀದಿಗೆ ಬಿದ್ದ ಬಡ ಜನರು

ಅತಿಕ್ರಮಣ ಆರೋಪದ ಮೇಲೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಅಧಿಕಾರಿಗಳು ಬೆಂಗಳೂರು ಉತ್ತರ ನಗರ ಪಾಲಿಕೆ ವ್ಯಾಪ್ತಿಯ ಕೋಗಿಲು ಬಂಡೆ ಬಳಿಯ 5 ಎಕರೆ ಜಾಗದಲ್ಲಿದ್ದ ಸುಮಾರು 200ರಷ್ಟು ಮನೆಗಳನ್ನು ಶನಿವಾರ (ಡಿ.20)...

ಕೇರಳ ದಲಿತ ಕಾರ್ಮಿಕನ ಗುಂಪುಹತ್ಯೆ: ನನ್ನ ವೃತ್ತಿ ಬದುಕಿನಲ್ಲೇ ಇಂತಹ ಹಿಂಸಾಚಾರ ನೋಡಿಲ್ಲ ಎಂದ ವೈದ್ಯರು

ಕೇರಳದ ಪಾಲಕ್ಕಾಡ್ ಜಿಲ್ಲೆಯ ವಲಯಾರ್‌ನಲ್ಲಿ ಗುಂಪೊಂದು ಹಲ್ಲೆ ನಡೆಸಿ ಹತ್ಯೆ ಮಾಡಿದ ಛತ್ತೀಸ್‌ಗಢದ ದಲಿತ ವಲಸೆ ಕಾರ್ಮಿಕ ರಾಮ್ ನಾರಾಯಣ್ ಅವರ ಮರಣೋತ್ತರ ಪರೀಕ್ಷೆಯು ದಾಳಿಯ ತೀವ್ರ ಕ್ರೌರ್ಯವನ್ನು ಬಹಿರಂಗಪಡಿಸಿದೆ, ದೇಹದ ಒಂದು...