Homeಮುಖಪುಟಪ್ರೀತಿಸಿ ಮದುವೆಯಾಗಿ ಕೇವಲ 8 ತಿಂಗಳು : ವರದಕ್ಷಿಣೆಗಾಗಿ ಹೆಂಡತಿಯನ್ನು ಹೊಡೆದು ಕೊಂದ ಗಂಡ!

ಪ್ರೀತಿಸಿ ಮದುವೆಯಾಗಿ ಕೇವಲ 8 ತಿಂಗಳು : ವರದಕ್ಷಿಣೆಗಾಗಿ ಹೆಂಡತಿಯನ್ನು ಹೊಡೆದು ಕೊಂದ ಗಂಡ!

ವೈವಾಹಿಕ ಜೀವನದ ಎರಡೇ ತಿಂಗಳಿಗೆ ಗಂಡನ ಮನೆಯವರ ದನ ದಾಹಕ್ಕೆ ನಲುಗಿದ ಹೆಣ್ಣು ಮಗಳು

- Advertisement -
- Advertisement -

ಮದುವೆಯಾಗಿ ಎಂಟು ತಿಂಗಳಿಗೆ ಗಂಡ ಹೆಂಡತಿಯನ್ನು ಮನೆ ಅಂಗಳದಲ್ಲೇ ಹೊಡೆದು ಕೊಂದ ಹೃದಯವಿದ್ರಾವಕ ಘಟನೆ ತೆಲಂಗಾಣದ ವಿಕಾರಬಾದ್ ಜಿಲ್ಲೆಯ ತಂಡೂರ್‌ನಲ್ಲಿ ನಡೆದಿದೆ.

ಅನುಷಾ (22) ಕೊಲೆಯಾದ ಹೆಣ್ಣು ಮಗಳು. ಗಂಡ ಪರಮೇಶ್ (28) ವಿರುದ್ದ ಕೊಲೆ ಆರೋಪ ಕೇಳಿ ಬಂದಿದೆ. ಹತ್ಯೆಗೂ ಮುನ್ನ ವಾರಗಟ್ಟಲೆ ಪರಮೇಶ್ ಆಕೆಗೆ ಚಿತ್ರಹಿಂಸೆ ನೀಡಿದ್ದ ಎಂದು ವರದಿಗಳು ಹೇಳಿವೆ.

ವರದಕ್ಷಿಣೆ ತರುವಂತೆ ಅನುಷಾಳನ್ನು ಪೀಡಿಸಿದ ಪರಮೇಶ್, ಕೊನೆಗೆ ಹೊಡೆದು ಕೊಂದಿದ್ದಾನೆ ಎಂದು ಆರೋಪಿಸಲಾಗಿದೆ. ಮದುವೆಯಾಗಿ ಎರಡೇ ತಿಂಗಳಿಗೆ ಆತ ವರದಕ್ಷಿಣೆಗಾಗಿ ಆಕೆಗೆ ಕಿರುಕುಳ ನೀಡಲು ಆರಂಭಿಸಿದ್ದ ಎಂದು ವರದಿಯಾಗಿದೆ.

ಹೆಚ್ಚು ಅನ್ನ ಮಾಡಿದ ಕ್ಷುಲ್ಲಕ ವಿಚಾರ ಮುಂದಿಟ್ಟುಕೊಂಡು ಪರಮೇಶ್‌ನ ತಾಯಿ ಲಾಲಮ್ಮ ಡಿಸೆಂಬರ್ 15ರಂದು ಅನುಷಾಗೆ ಬೈದಿದ್ದರು. ಅಮ್ಮನ ಜೊತೆ ಪರಮೇಶ್ ಕೂಡ ಸೇರಿಕೊಂಡು ತನ್ನ ಹೆಂಡತಿಯನ್ನು ಹಿಂಸಿಸಲು ಪ್ರಾರಂಭಿಸಿದ್ದ. ಅಮ್ಮ-ಮಗ ಇಬ್ಬರು ಸೇರಿ ಅನುಷಾಗೆ ಥಳಿಸಿದ್ದರು. ಇದನ್ನು ನೋಡಿದ ಪರಮೇಶ್‌ನ ತಂದೆ ಮೊಗಿಲಯ್ಯ ಅನುಷಾಳನ್ನು ಆಕೆಯ ತವರು ಮನೆಗೆ ಬಿಟ್ಟು ಬಂದಿದ್ದರು ಎಂದು ತಂಡೂರ್ ಉಪ ಪೊಲೀಸ್ ವರಿಷ್ಠಾಧಿಕಾರಿ (ಡಿವೈಎಸ್ಪಿ) ನರಸಿಂಗ್ ಯಡಯ್ಯ ತಿಳಿಸಿದ್ದಾರೆ.

ಡಿಸೆಂಬರ್ 18ರಂದು ಅನುಷಾಳನ್ನು ಆಕೆಯ ತಾಯಿ ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗ ಮಧ್ಯೆ ಅಡ್ಡಗಟ್ಟಿದ ಪರಮೇಶ್, “ನಾನು ಆಸ್ಪತ್ರೆಗೆ ಕರೆದೊಯ್ಯುತ್ತೇನೆ” ಎಂದು ಹೇಳಿದ್ದಾನೆ. ಇದಕ್ಕೆ ಅಮ್ಮ-ಮಗಳು ಒಪ್ಪದಿದ್ದಾಗ, ಪರಮೇಶ್ ಬಲವಂತವಾಗಿ ಅನುಷಾಳನ್ನು ಕರೆದೊಯ್ದಿದ್ದ.

ಪರಮೇಶ್ ಅನುಷಾಳನ್ನು ಎರಡು ಆಸ್ಪತ್ರೆಗಳಿಗೆ ಕರೆದೊಯ್ದಿದ್ದ. ಆದರೆ, ಆಸ್ಪತ್ರೆಯವರು ಇದು ವೈದ್ಯಕೀಯ-ಕಾನೂನು ಪ್ರಕರಣ, ಪೊಲೀಸರು ಮಧ್ಯಪ್ರವೇಶಿಸದೆ ಚಿಕಿತ್ಸೆ ನೀಡುವುದಿಲ್ಲ ಎಂದಿದ್ದಾರೆ.

ಹಾಗಾಗಿ, ಪರಮೇಶ್ ಅನುಷಾಳನ್ನು ವಾಪಸ್ ಆತನ ಮನೆಗೆ ಕರೆದೊಯ್ದಿದ್ದ. ಮನೆ ತಲುಪಿದಾಗ, ಬಾಗಿಲು ತೆರೆಯುವಂತೆ ಅನುಷಾಳಿಗೆ ಸೂಚಿಸಿದ್ದ. ಇದಕ್ಕೆ ಅನುಷಾ ನಿರಾಕರಿಸಿದಾಗ, ಇಬ್ಬರ ನಡುವೆ ವಾಗ್ವಾದ ನಡೆದಿದೆ. ಅದು ತಾರಕಕ್ಕೇರಿ ಪರಮೇಶ್ ಅನುಷಾಳಿಗೆ ಥಳಿಸಿದ್ದಾನೆ. ನಂತರ ಆಕೆಯನ್ನು ಒದ್ದು ಮನೆಯ ಅಂಗಳಕ್ಕೆ ತಳ್ಳಿದ್ದಾನೆ. ಬಳಿಕ ಕಟ್ಟಿಗೆ ತಂದು ಅನುಷಾಳಿಗೆ ಹೊಡೆಯಲು ಶುರು ಮಾಡಿದ್ದಾನೆ. ಆಕೆ ನೆಲಕ್ಕೆ ಬೀಳುವವರೆಗೆ ಸುಮಾರು 6 ಬಾರಿ ತಲೆಗೆ ಬಲವಾಗಿ ಹೊಡೆದಿದ್ದಾನೆ ಎಂದು ಡಿವೈಎಸ್ಪಿ ವಿವರಿಸಿದ್ದಾರೆ.

ಆಸ್ಪತ್ರೆಯಿಂದ ಬೈಕ್‌ನಲ್ಲಿ ಪರಮೇಶ್‌ನ ಮನೆ ತಲುಪಿದಾಗ, ಅನುಷಾ ಅಲ್ಲಿಂದ ಓಡಿ ಹೋಗಲು ನೋಡಿದ್ದಳು. ಆದರೆ, ಪರಮೇಶ್ ಆಕೆಯನ್ನು ವರಾಂಡಕ್ಕೆ ಎಳೆದೊಯ್ದಿದ್ದ. ನಂತರ ಆಕೆಯ ತಲೆಯನ್ನು ಬಾಗಿಲಿಗೆ ಬಡಿಯುವುದು, ಕಪಾಳಮೋಕ್ಷ ಮಾಡುವುದು ಸೇರಿದಂತೆ ವಿವಿಧ ರೀತಿಯಲ್ಲಿ ಹಿಂಸಿಸಿದ್ದಾನೆ. ಕೊನೆಗೆ ಕಟ್ಟಿಗೆಯಿಂದ ಆಕೆಗೆ ಹೊಡೆಯಲು ಪ್ರಾರಂಭಿಸಿದ್ದಾನೆ. ಇದನ್ನು ನೋಡಿದ ದಾರಿ ಹೋಕ ಮಹಿಳೆಯೊಬ್ಬರು ತಡೆಯಲು ಪ್ರಯತ್ನಿಸಿದ್ದರು. ಆದರೆ, ಅನುಷಾ ಕುಸಿದು ಬೀಳುವವರೆಗೆ ಪರಮೇಶ್ ಹೊಡೆಯುವುದನ್ನು ನಿಲ್ಲಿಸಿಲ್ಲ ಎಂದು ಡಿವೈಎಸ್ಪಿ ಹೇಳಿದ್ದಾರೆ.

ಘಟನೆಯ ದೃಶ್ಯಗಳು ಪರಮೇಶ್‌ನ ಮನೆಯ ಸಿಸಿಟಿವಿಯಲ್ಲಿ ದಾಖಲಾಗಿದೆ ಎಂದು ಹೇಳಿದ್ದಾರೆ.

ಮದುವೆಗೂ ಮುಂಚೆ ಕೆಲ ಸಮಯದಿಂದ ಅನುಷಾ ಮತ್ತು ಪರಮೇಶ್ ಪರಸ್ಪರ ಪ್ರೀತಿಸುತ್ತಿದ್ದರು. ಕಳೆದ ಮಾರ್ಚ್‌ನಲ್ಲಿ ಕುಟುಂಬಸ್ಥರ ಸಮ್ಮುಖದಲ್ಲಿ ಇಬ್ಬರ ಮದುವೆ ನಡೆದಿತ್ತು. ಮದುವೆ ಸಂದರ್ಭದಲ್ಲಿ 1.11 ಲಕ್ಷ ರೂಪಾಯಿ ಹಣ ಮತ್ತು ಇತರ ಕೆಲ ವಸ್ತುಗಳನ್ನು ವರದಕ್ಷಿಣೆಯಾಗಿ ಅನುಷಾಳ ಪೋಷಕರು ನೀಡಿದ್ದರು ಎಂದು ಡಿವೈಎಸ್ಪಿ ಮಾಹಿತಿ ನೀಡಿದ್ದಾರೆ.

ಮದುವೆಯಾಗಿ ಎರಡೇ ತಿಂಗಳಿಗೆ ಹೆಚ್ಚಿನ ವರದಕ್ಷಿಣೆ ತರುವಂತೆ ಪರಮೇಶ್ ಅನುಷಾಳಿಗೆ ಕಿರುಕುಳ ನೀಡಲು ಶುರು ಮಾಡಿದ್ದ. ಆತನ ಕುಟುಂಬಕ್ಕೆ 10 ಎಕರೆ ಭೂಮಿ ಇದ್ದು, ಆರ್ಥಿಕ ವಿಚಾರದಲ್ಲಿ ಚೆನ್ನಾಗಿದ್ದಾರೆ. ಪರಮೇಶ್‌ನ ತಾಯಿ ಆಗಾಗ, “ಅನುಷಾಳ ಬದಲು ಬೇರೆ ಹುಡುಗಿಯನ್ನು ಮದುವೆಯಾಗಿದ್ದರೆ ಇನ್ನೂ ಹೆಚ್ಚಿನ ವರದಕ್ಷಿಣೆ ಸಿಗುತ್ತಿತ್ತು” ಎಂದು ಹೇಳುತ್ತಿದ್ದರು.

ಅನುಷಾಳ ಮೇಲೆ ಡಿಸೆಂಬರ್ 15ರಂದು ಹಲ್ಲೆ ನಡೆದಾಗ, ಆಸ್ಪತ್ರೆಯ ಅಧಿಕಾರಿಗಳು ಪೊಲೀಸ್ ದೂರು ನೀಡುವಂತೆ ಸಲಹೆ ಕೊಟ್ಟಿದ್ದರು. ಆದರೆ, ತನ್ನ ವೈವಾಹಿಕ ಜೀವನಕ್ಕೆ ಹೆಚ್ಚಿನ ಸಮಸ್ಯೆ ಆಗಬಹುದು ಎಂದು ಅನುಷಾ ದೂರು ನೀಡಲು ನಿರಾಕರಿಸಿದ್ದಳು ಎಂದು ಆಕೆಯ ತಾಯಿ ಮಾಧ್ಯಮಗಳಿಗೆ ಹೇಳಿದ್ದಾರೆ.

ವಿಕಾರಾಬಾದ್ ಪೊಲೀಸರು ಪರಮೇಶ್ ಮತ್ತು ಆತನ ಪೋಷಕರನ್ನು ಬಂಧಿಸಿದ್ದಾರೆ. ಪರಮೇಶ್ ವಿರುದ್ಧ ಕೊಲೆ, ವರದಕ್ಷಿಣೆ ಹತ್ಯೆ ಮತ್ತು ಮಹಿಳೆಯರ ಮೇಲಿನ ಕ್ರೌರ್ಯಕ್ಕೆ ಸಂಬಂಧಿಸಿದ ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...