Homeಮುಖಪುಟಆಕ್ರಮಿತ ಪಶ್ಚಿಮ ದಂಡೆಯಲ್ಲಿ ಇಸ್ರೇಲ್ ಆಕ್ರಮಣ : ಪ್ಯಾಲೆಸ್ತೀನಿಯರ ವಸತಿ ಕಟ್ಟಡಗಳು ಧ್ವಂಸ

ಆಕ್ರಮಿತ ಪಶ್ಚಿಮ ದಂಡೆಯಲ್ಲಿ ಇಸ್ರೇಲ್ ಆಕ್ರಮಣ : ಪ್ಯಾಲೆಸ್ತೀನಿಯರ ವಸತಿ ಕಟ್ಟಡಗಳು ಧ್ವಂಸ

- Advertisement -
- Advertisement -

ಇಸ್ರೇಲಿ ಪಡೆಗಳು ಆಕ್ರಮಿತ ಪಶ್ಚಿಮ ದಂಡೆಯಲ್ಲಿರುವ ಪಟ್ಟಣಗಳಿಗೆ ನುಗ್ಗಿ ಪ್ಯಾಲೆಸ್ತೀನಿಯರ ವಸತಿ ಕಟ್ಟಡಗಳನ್ನು ಕೆಡವಿ ಹಾಕಿದೆ ಎಂದು ಸುದ್ದಿ ಸಂಸ್ಥೆ ಅಲ್‌-ಜಝೀರಾ ವರದಿ ಮಾಡಿದೆ.

ಇದು ಗಾಝಾ ಕದನ ವಿರಾಮದ ಮೂಲಕ ಇಸ್ರೇಲ್ ಪ್ಯಾಲೆಸ್ತೀನಿಯರ ಮೇಲಿನ ಆಕ್ರಮಣ ನಿಲ್ಲಿಸಿಲ್ಲ ಎಂಬುವುದಕ್ಕೆ ಸಾಕ್ಷಿಯಾಗಿದೆ. ಆಕ್ರಮಿತ ಪಶ್ಚಿಮ ದಂಡೆಯಲ್ಲಿ ಪ್ಯಾಲೆಸ್ತೀನಿಯರ ಮೇಲಿನ ನಿರಂತರ ದಾಳಿ ಮುಂದುವರಿದಿದೆ.

ಸೋಮವಾರ ಪೂರ್ವ ಜೆರುಸಲೆಮ್‌ನಲ್ಲಿ ಧ್ವಂಸ ಕಾರ್ಯವನ್ನು ನಡೆಸುತ್ತಿದ್ದಾಗ ಇಸ್ರೇಲಿ ಸೈನಿಕರು ಪ್ಯಾಲೆಸ್ತೀನಿಯರ ಮೇಲೆ ಸ್ಟನ್ ಗ್ರೆನೇಡ್ ಮತ್ತು ಅಶ್ರುವಾಯು ಸಿಡಿಸಿದ್ದಾರೆ ಎಂದು ಅಲ್‌-ಜಝೀರಾ ವರದಿ ಹೇಳಿದೆ.

ಜೆರುಸಲೆಂ ನಗರದಲ್ಲಿ ಇಸ್ರೇಲ್ ಬಲವಂತದ ಸ್ಥಳಾಂತರ ಕೈಗೊಂಡಿದೆ ಎಂದು ಪ್ಯಾಲೆಸ್ತೀನ್ ಅಧಿಕಾರಿಗಳು ಆರೋಪಿಸಿದ್ದು, ಈ ಕಾರ್ಯಾಚರಣೆಯು ಪ್ಯಾಲೆಸ್ತೀನಿಯರನ್ನು ಅವರ ಭೂಮಿಯಿಂದ ಜನಾಂಗೀಯವಾಗಿ ಶುದ್ಧೀಕರಿಸುವ ವ್ಯವಸ್ಥಿತ ಪ್ರಯತ್ನದ ಭಾಗವಾಗಿದೆ ಎಂದು ಹೇಳಿದ್ದಾರೆ.

ಸೋಮವಾರ ಇಸ್ರೇಲಿ ಬುಲ್ಡೋಜರ್‌ಗಳು ನಾಲ್ಕು ಅಂತಸ್ತಿನ ವಸತಿ ಕಟ್ಟಡವನ್ನು ಕೆಡವಿದ ಪರಿಣಾಮ ಪ್ಯಾಲೆಸ್ತೀನಿಯರು ಬಲವಂತವಾಗಿ ಸ್ಥಳಾಂತರಗೊಳ್ಳುವ ಸಂದರ್ಭ ಎದುರಾಯಿತು. ಹೋರಾಟಗಾರರು ಇದನ್ನು ಈ ವರ್ಷ ಪೂರ್ವ ಜೆರುಸಲೆಮ್‌ ಪ್ರದೇಶದಲ್ಲಿ ನಡೆದ ಅತಿದೊಡ್ಡ ಧ್ವಂಸ ಕಾರ್ಯಾಚರಣೆ ಎಂದು ತಿಳಿಸಿದ್ದಾರೆ.

ಜೆರುಸಲೆಮ್‌ ಓಲ್ಡ್ ಸಿಟಿಯ ದಕ್ಷಿಣದಲ್ಲಿರುವ ಸಿಲ್ವಾನ್ ಜಿಲ್ಲೆಯ ವಾಡಿ ಖದ್ದಮ್ ಸಮೀಪ 13 ಅಪಾರ್ಟ್‌ಮೆಂಟ್‌ಗಳಿಂದ ಮತ್ತೊಂದು ಕಟ್ಟಡ ಸಮೂಹವನ್ನು ಇಸ್ರೇಲಿ ಸೇನೆಯ ಮೂರು ಬುಲ್ಡೋಜರ್‌ಗಳು ನಾಶಪಡಿಸಿದವು ಎಂದು ಅಲ್ ಜಝೀರಾ ಅರೆಬಿಕ್ ವರದಿ ಮಾಡಿದೆ.

ಕಟ್ಟಡಗಳನ್ನು ಧ್ವಂಸಗೊಳಿಸುವ ವೇಳೆ ಇಸ್ರೇಲ್ ಪಡೆಗಳು ಇಡೀ ಪ್ರದೇಶವನ್ನು ಸುತ್ತುವರೆದಿದ್ದವು. ಪ್ರತಿಭಟಿಸಿದವರ ವಿರುದ್ದ ಹಿಂಸಾತ್ಮಕವಾಗಿ ಪ್ರತಿಕ್ರಿಯಿಸಿತು. ಧ್ವಂಸ ಕಾರ್ಯಾಚರಣೆಯನ್ನು ವಿರೋಧಿಸಿದ ಇಬ್ಬರನ್ನು ಬಂಧಿಸಿತು ಎಂದು ವರದಿ ಉಲ್ಲೇಖಿಸಿದೆ.

ಕಟ್ಟಡವನ್ನು ಪರವಾನಗಿ ಇಲ್ಲದೆ ನಿರ್ಮಿಸಲಾಗಿರುವುದರಿಂದ ಕೆಡವಲಾಗಿದೆ ಎಂದು ಇಸ್ರೇಲಿ ಸೇನೆ ನಿವಾಸಿಗಳಿಗೆ ಹೇಳಿದೆ ಎಂದು ವರದಿ ತಿಳಿಸಿದೆ.

ಇಸ್ರೇಲ್‌ನ ನಿರ್ಬಂಧಿತ ಯೋಜನಾ ನೀತಿಗಳಿಂದಾಗಿ ಕಟ್ಟಡ ಪರವಾನಗಿಗಳನ್ನು ಪಡೆಯುವಲ್ಲಿ ಪ್ಯಾಲೆಸ್ತೀನಿಯರು ತೀವ್ರ ಅಡೆತಡೆಗಳನ್ನು ಎದುರಿಸುತ್ತಿದ್ದಾರೆ ಎಂದು ಹೋರಾಟಗಾರರು ಹೇಳುತ್ತಾರೆ. ಇಸ್ರೇಲ್‌ನ ನೀತಿಯು ಪ್ಯಾಲೆಸ್ತೀನಿಯರನ್ನು ಅವರ ಭೂಮಿಯಿಂದ ಜನಾಂಗೀಯವಾಗಿ ನಿರ್ಮೂಲನೆ ಮಾಡುವ ವ್ಯವಸ್ಥಿತ ಪ್ರಯತ್ನದ ಭಾಗವಾಗಿದೆ ಎಂದಿದ್ದಾರೆ.

ಇಸ್ರೇಲ್‌ನ ಭದ್ರತಾ ಸಚಿವ ಸಂಪುಟವು ಇತ್ತೀಚೆಗೆ ಪಶ್ಚಿಮ ದಂಡೆಯಲ್ಲಿ 19 ಹೊಸ ವಸಾಹತುಗಳನ್ನು ಗುರುತಿಸಲು ಅನುಮೋದನೆ ನೀಡಿದೆ. ಸರ್ಕಾರವು ತನ್ನ ವಸಾಹತು ಪ್ರಯತ್ನವನ್ನು ಮುಂದುವರೆಸುತ್ತಿರುವುದರಿಂದ ಈ ವರ್ಷ ಅನುಮೋದಿಸಲಾದ ಒಟ್ಟು ಸಂಖ್ಯೆ 69ಕ್ಕೆ ಹೆಚ್ಚಳವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...