Homeಮುಖಪುಟಆಕ್ರಮಿತ ಪಶ್ಚಿಮ ದಂಡೆಯಲ್ಲಿ ಇಸ್ರೇಲ್ ಆಕ್ರಮಣ : ಪ್ಯಾಲೆಸ್ತೀನಿಯರ ವಸತಿ ಕಟ್ಟಡಗಳು ಧ್ವಂಸ

ಆಕ್ರಮಿತ ಪಶ್ಚಿಮ ದಂಡೆಯಲ್ಲಿ ಇಸ್ರೇಲ್ ಆಕ್ರಮಣ : ಪ್ಯಾಲೆಸ್ತೀನಿಯರ ವಸತಿ ಕಟ್ಟಡಗಳು ಧ್ವಂಸ

- Advertisement -
- Advertisement -

ಇಸ್ರೇಲಿ ಪಡೆಗಳು ಆಕ್ರಮಿತ ಪಶ್ಚಿಮ ದಂಡೆಯಲ್ಲಿರುವ ಪಟ್ಟಣಗಳಿಗೆ ನುಗ್ಗಿ ಪ್ಯಾಲೆಸ್ತೀನಿಯರ ವಸತಿ ಕಟ್ಟಡಗಳನ್ನು ಕೆಡವಿ ಹಾಕಿದೆ ಎಂದು ಸುದ್ದಿ ಸಂಸ್ಥೆ ಅಲ್‌-ಜಝೀರಾ ವರದಿ ಮಾಡಿದೆ.

ಇದು ಗಾಝಾ ಕದನ ವಿರಾಮದ ಮೂಲಕ ಇಸ್ರೇಲ್ ಪ್ಯಾಲೆಸ್ತೀನಿಯರ ಮೇಲಿನ ಆಕ್ರಮಣ ನಿಲ್ಲಿಸಿಲ್ಲ ಎಂಬುವುದಕ್ಕೆ ಸಾಕ್ಷಿಯಾಗಿದೆ. ಆಕ್ರಮಿತ ಪಶ್ಚಿಮ ದಂಡೆಯಲ್ಲಿ ಪ್ಯಾಲೆಸ್ತೀನಿಯರ ಮೇಲಿನ ನಿರಂತರ ದಾಳಿ ಮುಂದುವರಿದಿದೆ.

ಸೋಮವಾರ ಪೂರ್ವ ಜೆರುಸಲೆಮ್‌ನಲ್ಲಿ ಧ್ವಂಸ ಕಾರ್ಯವನ್ನು ನಡೆಸುತ್ತಿದ್ದಾಗ ಇಸ್ರೇಲಿ ಸೈನಿಕರು ಪ್ಯಾಲೆಸ್ತೀನಿಯರ ಮೇಲೆ ಸ್ಟನ್ ಗ್ರೆನೇಡ್ ಮತ್ತು ಅಶ್ರುವಾಯು ಸಿಡಿಸಿದ್ದಾರೆ ಎಂದು ಅಲ್‌-ಜಝೀರಾ ವರದಿ ಹೇಳಿದೆ.

ಜೆರುಸಲೆಂ ನಗರದಲ್ಲಿ ಇಸ್ರೇಲ್ ಬಲವಂತದ ಸ್ಥಳಾಂತರ ಕೈಗೊಂಡಿದೆ ಎಂದು ಪ್ಯಾಲೆಸ್ತೀನ್ ಅಧಿಕಾರಿಗಳು ಆರೋಪಿಸಿದ್ದು, ಈ ಕಾರ್ಯಾಚರಣೆಯು ಪ್ಯಾಲೆಸ್ತೀನಿಯರನ್ನು ಅವರ ಭೂಮಿಯಿಂದ ಜನಾಂಗೀಯವಾಗಿ ಶುದ್ಧೀಕರಿಸುವ ವ್ಯವಸ್ಥಿತ ಪ್ರಯತ್ನದ ಭಾಗವಾಗಿದೆ ಎಂದು ಹೇಳಿದ್ದಾರೆ.

ಸೋಮವಾರ ಇಸ್ರೇಲಿ ಬುಲ್ಡೋಜರ್‌ಗಳು ನಾಲ್ಕು ಅಂತಸ್ತಿನ ವಸತಿ ಕಟ್ಟಡವನ್ನು ಕೆಡವಿದ ಪರಿಣಾಮ ಪ್ಯಾಲೆಸ್ತೀನಿಯರು ಬಲವಂತವಾಗಿ ಸ್ಥಳಾಂತರಗೊಳ್ಳುವ ಸಂದರ್ಭ ಎದುರಾಯಿತು. ಹೋರಾಟಗಾರರು ಇದನ್ನು ಈ ವರ್ಷ ಪೂರ್ವ ಜೆರುಸಲೆಮ್‌ ಪ್ರದೇಶದಲ್ಲಿ ನಡೆದ ಅತಿದೊಡ್ಡ ಧ್ವಂಸ ಕಾರ್ಯಾಚರಣೆ ಎಂದು ತಿಳಿಸಿದ್ದಾರೆ.

ಜೆರುಸಲೆಮ್‌ ಓಲ್ಡ್ ಸಿಟಿಯ ದಕ್ಷಿಣದಲ್ಲಿರುವ ಸಿಲ್ವಾನ್ ಜಿಲ್ಲೆಯ ವಾಡಿ ಖದ್ದಮ್ ಸಮೀಪ 13 ಅಪಾರ್ಟ್‌ಮೆಂಟ್‌ಗಳಿಂದ ಮತ್ತೊಂದು ಕಟ್ಟಡ ಸಮೂಹವನ್ನು ಇಸ್ರೇಲಿ ಸೇನೆಯ ಮೂರು ಬುಲ್ಡೋಜರ್‌ಗಳು ನಾಶಪಡಿಸಿದವು ಎಂದು ಅಲ್ ಜಝೀರಾ ಅರೆಬಿಕ್ ವರದಿ ಮಾಡಿದೆ.

ಕಟ್ಟಡಗಳನ್ನು ಧ್ವಂಸಗೊಳಿಸುವ ವೇಳೆ ಇಸ್ರೇಲ್ ಪಡೆಗಳು ಇಡೀ ಪ್ರದೇಶವನ್ನು ಸುತ್ತುವರೆದಿದ್ದವು. ಪ್ರತಿಭಟಿಸಿದವರ ವಿರುದ್ದ ಹಿಂಸಾತ್ಮಕವಾಗಿ ಪ್ರತಿಕ್ರಿಯಿಸಿತು. ಧ್ವಂಸ ಕಾರ್ಯಾಚರಣೆಯನ್ನು ವಿರೋಧಿಸಿದ ಇಬ್ಬರನ್ನು ಬಂಧಿಸಿತು ಎಂದು ವರದಿ ಉಲ್ಲೇಖಿಸಿದೆ.

ಕಟ್ಟಡವನ್ನು ಪರವಾನಗಿ ಇಲ್ಲದೆ ನಿರ್ಮಿಸಲಾಗಿರುವುದರಿಂದ ಕೆಡವಲಾಗಿದೆ ಎಂದು ಇಸ್ರೇಲಿ ಸೇನೆ ನಿವಾಸಿಗಳಿಗೆ ಹೇಳಿದೆ ಎಂದು ವರದಿ ತಿಳಿಸಿದೆ.

ಇಸ್ರೇಲ್‌ನ ನಿರ್ಬಂಧಿತ ಯೋಜನಾ ನೀತಿಗಳಿಂದಾಗಿ ಕಟ್ಟಡ ಪರವಾನಗಿಗಳನ್ನು ಪಡೆಯುವಲ್ಲಿ ಪ್ಯಾಲೆಸ್ತೀನಿಯರು ತೀವ್ರ ಅಡೆತಡೆಗಳನ್ನು ಎದುರಿಸುತ್ತಿದ್ದಾರೆ ಎಂದು ಹೋರಾಟಗಾರರು ಹೇಳುತ್ತಾರೆ. ಇಸ್ರೇಲ್‌ನ ನೀತಿಯು ಪ್ಯಾಲೆಸ್ತೀನಿಯರನ್ನು ಅವರ ಭೂಮಿಯಿಂದ ಜನಾಂಗೀಯವಾಗಿ ನಿರ್ಮೂಲನೆ ಮಾಡುವ ವ್ಯವಸ್ಥಿತ ಪ್ರಯತ್ನದ ಭಾಗವಾಗಿದೆ ಎಂದಿದ್ದಾರೆ.

ಇಸ್ರೇಲ್‌ನ ಭದ್ರತಾ ಸಚಿವ ಸಂಪುಟವು ಇತ್ತೀಚೆಗೆ ಪಶ್ಚಿಮ ದಂಡೆಯಲ್ಲಿ 19 ಹೊಸ ವಸಾಹತುಗಳನ್ನು ಗುರುತಿಸಲು ಅನುಮೋದನೆ ನೀಡಿದೆ. ಸರ್ಕಾರವು ತನ್ನ ವಸಾಹತು ಪ್ರಯತ್ನವನ್ನು ಮುಂದುವರೆಸುತ್ತಿರುವುದರಿಂದ ಈ ವರ್ಷ ಅನುಮೋದಿಸಲಾದ ಒಟ್ಟು ಸಂಖ್ಯೆ 69ಕ್ಕೆ ಹೆಚ್ಚಳವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...

ಹನೂರು ಶೂಟೌಟ್ ಪ್ರಕರಣ: ಮೂವರು ಅರಣ್ಯ ಸಿಬ್ಬಂದಿಗೆ ನಿರೀಕ್ಷಣಾ ಜಾಮೀನು.!

ಕಾವೇರಿ ವನ್ಯಜೀವಿ ಅಭಯಾರಣ್ಯದ ಹನೂರು ವ್ಯಾಪ್ತಿಯಲ್ಲಿ ಮೂವರು ಮೃತಪಟ್ಟಿದ್ದ ವಿವಾದಾತ್ಮಕ ಗುಂಡಿನ ದಾಳಿ ಪ್ರಕರಣಕ್ಕೆ ಇದೀಗ ಕಾನೂನು ತಿರುವು ಸಿಕ್ಕಿದೆ. ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಮೂವರು ಅರಣ್ಯ ಸಿಬ್ಬಂದಿಗೆ ಕೊಳ್ಳೇಗಾಲದ ಮೊದಲ ಹೆಚ್ಚುವರಿ...