Homeಕರ್ನಾಟಕಕಾಂಗ್ರೆಸ್ ಕಮ್ಯೂನಿಸ್ಟರು ದೇಶದ್ರೋಹಿಗಳು : ಸೊಗಡು ಶಿವಣ್ಣ

ಕಾಂಗ್ರೆಸ್ ಕಮ್ಯೂನಿಸ್ಟರು ದೇಶದ್ರೋಹಿಗಳು : ಸೊಗಡು ಶಿವಣ್ಣ

- Advertisement -
- Advertisement -

ಪೌರತ್ವ ತಿದ್ದುಪಡಿ ಕಾಯ್ದೆ ಪಾಕಿಸ್ತಾನ ಆಕ್ರಮಿತ ಕಾಶ್ಮೀರ, ಪಾಕಿಸ್ತಾನ ಮತ್ತು ಬಾಂಗ್ಲಾದೇಶದಲ್ಲಿ ನಿರಾಶ್ರಿತರಾಗಿರುವ ಜನರಿಗೆ ಅನುಕೂಲ ಮಾಡಿಕೊಡುತ್ತದೆ. ಆದರೆ ಕಾಂಗ್ರೆಸ್ ಮುಖಂಡರು, ಕಮ್ಯೂನಿಸ್ಟರು ಮತ್ತು ಎಸ್.ಡಿ.ಪಿ.ಐ ನವರ ಸಿಎಎ ಕಾಯ್ದೆಯನ್ನು ವಿರೋಧಿಸುತ್ತಾ ದೇಶದ್ರೋಹಿಗಳಾಗಿದ್ದಾರೆ ಎಂದು ಮಾಜಿ ಸಚಿವ ಸೊಗಡು ಶಿವಣ್ಣ ಆರೋಪಿಸಿದರು.

ತುಮಕೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮದು ಅಖಂಡ ಭಾರತ. ಇಲ್ಲಿ ಮುಸ್ಲಿಮರು ಇರಲಿಲ್ಲ. ಘೋರಿ, ಘಜ್ನಿಯಂತಹ ರಾಜರು ಈ ದೇಶ ಆಳ್ವಿಕೆ ಮಾಡಿ ಹಿಂದೂಗಳನ್ನು ಮುಸ್ಲಿಮರನ್ನಾಗಿ ಮತಾಂತರ ಮಾಡಿದ್ದಾರೆ. ಮುಸ್ಲಮಾನ ಬಂಧುಗಳು ಕಾಂಗ್ರೆಸ್, ಕಮ್ಯೂನಿಸ್ಟ್ ಮತ್ತು ಎಸ್.ಡಿ.ಪಿ.ಐ ಹಿಂದೆ ಹೋಗಬಾರದು. ಅವರು ಅಪಾಯಕಾರಿಗಳು ಎಂಬುದನ್ನು ತಿಳಿಯಬೇಕು ಎಂದು ತಿಳಿಸಿದ್ದಾರೆ.

ಈ ದೇಶದಲ್ಲಿ ಇಟಲಿಯ ಸೋನಿಯಾ ಗಾಂಧಿ ಅವರಿಗೆ ಭಾರತದ ಪೌರತ್ವದ ನೀಡಲಾಗಿದೆ. ಬಾಂಗ್ಲಾದೇಶದ ಲೇಖಕಿ ತಸ್ಲಿಮಾ ನಸ್ರೀನ್ ಅವರಿಗೆ ಪಶ್ಚಿಮ ಬಂಗಾಳದಲ್ಲಿ ಆಶ್ರಯ ನೀಡಲಾಗಿದೆ. ಆದರೆ ಸೋನಿಯಾ ಗಾಂಧಿ, ಮಮತಾ ಬ್ಯಾನರ್ಜಿ ಮತ್ತು ಸಿದ್ದರಾಮಯ್ಯ ಅವರಿಗೆ ಮಾನಮರ್ಯಾದೆ ಇದ್ದರೆ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಬಾರದು. ಪ್ರತಿಭಟನೆಗೆ ಕುಮ್ಮಕ್ಕು ನೀಡಬಾರದು ಎಂದು ತಾಕೀತು ಮಾಡಿದರು.

ಸ್ವಾತಂತ್ರ್ಯ ಬಂದು 72 ವರ್ಷ ಸಂದಿದೆ. ಕಾಂಗ್ರೆಸ ಪಕ್ಷದವರೇ ಪೌರತ್ವ ಕಾಯ್ದೆಯನ್ನು ಮಾಡಿದ್ದು. ಆದರೆ ಅದನ್ನು ಜಾರಿಗೆ ತರಲು ಕಾಂಗ್ರೆಸ್‌ನವರಿಗೆ ಸಾಮರ್ಥ್ಯವಿರಲಿಲ್ಲ. ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ಅವರು ಈ ಕಾಯ್ದೆಯನ್ನು ಜಾರಿಗೊಳಿಸಿದ್ದಾರೆ. ಅದು ಅವರ ತಾಕತ್ತು. ಕಾಂಗ್ರೆಸ್ ಮುಸ್ಲಿಮರನ್ನು ಮುಂದು ಮಾಡಿಕೊಂಡು ಪ್ರತಿಭಟನೆ ಮಾಡುತ್ತಿದೆ. ಕಮ್ಯುನಿಸ್ಟರು ದೇಶದ್ರೋಹಿಗಳು ಎಂದು ವಾಗ್ದಾಳಿ ನಡೆಸಿದರು.

ಅಖಂಡ ಭಾರತದ ಪರಿಕಲ್ಪನೆ ನಮ್ಮದು. ಇಲ್ಲಿ ಹಿಂದೂಗಳನ್ನು ಬಿಟ್ಟರೆ ಬೇರೆ ಯಾರೂ ಇರಲಿಲ್ಲ. ಅದೇ ಕಾರಣಕ್ಕೆ ಅಖಂಡ ಭಾರತದಲ್ಲಿ ನಿರಾಶ್ರಿತರಾಗಿರುವ ಭಾರತೀಯರನ್ನು ರಕ್ಷಿಸಲು ಈ ಕಾಯ್ದೆ ಜಾರಿಗೆ ಕೇಂದ್ರ ಸರ್ಕಾರ ಮುಂದಾಗಿದೆ. ಇದಕ್ಕೆ ಏಕೆ ವಿರೋಧ ಮಾಡುತ್ತಾರೆ. ವಿರೋಧಿಸುವವರೆಲ್ಲರೂ ದೇಶದ್ರೋಹಿಗಳು. ಈ ದೇಶದ ಮುಸ್ಲಿಮರಿಗೆ ಏನೂ ಆಗುವುದಿಲ್ಲ. ಯಾರು ಹೊರದೇಶಗಳಿಂದ ಬಂದಿರುತ್ತಾರೋ ಅವರಿಗೆ ಮಾತ್ರ ಪೌರತ್ವ ಕಾಯ್ದೆ ಅನ್ವಯವಾಗುತ್ತದೆ ಎಂದು ತಿಳಿಸಿದರು.

ತುಮಕೂರು ನಗರದಲ್ಲಿ ಟರ್ಕಿ ದೇಶದ ಕುಟುಂಬವೊಂದು ನೆಲೆಸಿದೆ. ಈ ಬಗ್ಗೆ ನನಗೆ ಮಾಹಿತಿ ಇದೆ. ಅದು ಎಲ್ಲಿ ವಾಸವಾಗಿದೆ ಎಂಬುದನ್ನು ಹುಡುಕಿಸುತ್ತಿದ್ದೇನೆ. ವಿದೇಶಿಗರು ತುಮಕೂರಿನಲ್ಲೂ ವಾಸವಾಗಿದ್ದಾರೆ. ಇದನ್ನು ತಪ್ಪಿಸುವ ಸಲುವಾಗಿ ಕಾಯ್ದೆ ತಂದಿದ್ದೇವೆ. ಇದೇ ವೇಳೆ ಮಾಜಿ ಶಾಸಕರು ಮುಸ್ಲಿಮರನ್ನು ಸೇರಿಸಿಕೊಂಡು ಸಭೆ ನಡೆಸಿದ್ದಾರೆ. ಹೀಗೆ ಸಭೆ ನಡೆಸುವುದು ಅಪಾಯಕಾರಿ. ಕಾಂಗ್ರೆಸ್ ನವರು ಸಭೆ ಮಾಡಬಾರದು ಎಂದು ತಮ್ಮದೇ ವಾದಸರಣಿಯನ್ನು ಮಾಧ್ಯಮದವರ ಮುಂದಿಟ್ಟರು.

ಪತ್ರಕರ್ತರು ಕೇಳಿದ ಪ್ರಶ್ನೆಗಳಿಗೆ ಸೊಗಡು ಶಿವಣ್ಣ ಸಮರ್ಪಕ ಉತ್ತರ ನೀಡಲಿಲ್ಲ. ಶ್ರೀಲಂಕಾಕ್ಕೂ ನಮಗೂ ಏನು ಸಂಬಂಧ ಎಂದ ಅವರು? ಕಾಂಗ್ರೆಸ್ ನವರು, ಕಮ್ಯುನಿಸ್ಟರು, ಎಸ್ಎಫ್ಐ, ಎಸ್.ಡಿ.ಪಿಐನವರು ದೇಶದ್ರೋಹಿಗಳು ಎಂದು ಪುನರುಚ್ಛರಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....