Homeಮುಖಪುಟ"ಆತ್ಮಹತ್ಯೆಗೆ ಮುಂದಾದೆ, ಕುಟುಂಬ ನೆನೆದು ಸುಮ್ಮನಾದೆ": ನೋವು ತೋಡಿಕೊಂಡ ಉನ್ನಾವೋ ಅತ್ಯಾಚಾರ ಸಂತ್ರಸ್ತೆ

“ಆತ್ಮಹತ್ಯೆಗೆ ಮುಂದಾದೆ, ಕುಟುಂಬ ನೆನೆದು ಸುಮ್ಮನಾದೆ”: ನೋವು ತೋಡಿಕೊಂಡ ಉನ್ನಾವೋ ಅತ್ಯಾಚಾರ ಸಂತ್ರಸ್ತೆ

ಅಪರಾಧಿ ಕುಲದೀಪ್ ಸಿಂಗ್ ಸೆಂಗಾರ್ ಶಿಕ್ಷೆ ಅಮಾನತು, ಇಂಡಿಯಾ ಗೇಟ್ ಬಳಿ ಸಂತ್ರಸ್ತೆ ಕುಟುಂಬದಿಂದ ಪ್ರತಿಭಟನೆ. ಶಿಕ್ಷೆ ಅಮಾನತಿಗೂ 2027ರ ಯುಪಿ ಚುನಾವಣೆಗೂ ಸಂಬಂಧವಿದೆ ಎಂದ ಸಂತ್ರಸ್ತೆ

- Advertisement -
- Advertisement -

“ನಾನು ಆತ್ಮಹತ್ಯೆ ಮಾಡಿಕೊಳ್ಳಬೇಕೆಂದಿದ್ದೆ. ಆದರೆ, ನನ್ನ ಕುಟುಂಬವನ್ನು ನೆನೆದು ಸುಮ್ಮನಾದೆ” ಇದು ಉನ್ನಾವೋ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಮಂಗಳವಾರ (2025 ಡಿಸೆಂಬರ್ 24) ಸಂಜೆ ದೆಹಲಿಯ ಇಂಡಿಯಾ ಗೇಟ್ ಎದುರಿನ ಹುಲ್ಲುಹಾಸಿನ ಮೇಲೆ ಕುಳಿತು ಹೇಳಿದೆ ನೋವಿನ ಮಾತು.

ದೇಶವನ್ನೇ ಬೆಚ್ಚಿ ಬೀಳಿಸಿದ 2017ರ ಉನ್ನಾವೋ ಅತ್ಯಾಚಾರ ಪ್ರಕರಣದ ಅಪರಾಧಿ, ಬಿಜೆಪಿಯ ಮಾಜಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್‌ಗೆ ವಿಚಾರಣಾ ನ್ಯಾಯಾಲಯ ವಿಧಿಸಿರುವ ಜೀವಾವಧಿ ಶಿಕ್ಷೆಯನ್ನು ದೆಹಲಿ ಹೈಕೋರ್ಟ್ ಮಂಗಳವಾರ ಅಮಾನತಿನಲ್ಲಿಟ್ಟಿದೆ.

ನ್ಯಾಯಾಲಯದ ಆದೇಶ ಹೊರಬಿದ್ದ ಕೆಲವೇ ಗಂಟೆಗಳಲ್ಲಿ ಇಂಡಿಯಾ ಗೇಟ್ ಬಳಿ ಪ್ರಕರಣದ ಸಂತ್ರಸ್ತೆ, ಆಕೆಯ ತಾಯಿ ಪ್ರತಿಭಟನೆ ನಡೆಸಿದರು. ಇವರಿಗೆ ಮಹಿಳಾ ಹಕ್ಕುಗಳ ಹೋರಾಟಗಾರ್ತಿ ಯೋಗಿತಾ ಭಯನಾ ಸಾಥ್ ನೀಡಿದರು.

“ನ್ಯಾಯಾಲಯದ ಆದೇಶದಿಂದ ನಾವು ಭಯದಲ್ಲಿ ಬದುಕುವಂತಾಗಿದೆ. ವ್ಯವಸ್ಥೆ ನಮಗೆ ದ್ರೋಹ ಬಗೆದಿದೆ” ಎಂದು ಪ್ರತಿಭಟನೆ ವೇಳೆ ಸಂತ್ರಸ್ತೆ ಹೇಳಿದ್ದಾರೆ.

ಸುದ್ದಿ ಸಂಸ್ಥೆ ಎಎನ್‌ಐ ಜೊತೆ ಮಾತನಾಡಿರುವ ಆಕೆ, “ಜಾಮೀನು ನೀಡಿದ ಸಮಯವು ರಾಜಕೀಯ ಪ್ರೇರಿತವಾಗಿದ್ದು. ಇದಕ್ಕೂ 2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೂ ಸಂಬಂಧವಿದೆ ಎಂದಿದ್ದಾರೆ.

“ನಮಗೆ ಅನ್ಯಾಯ ಮಾಡಲಾಗಿದೆ. ಚುನಾವಣೆ ಬರುತ್ತಿದೆ. ಕುಲದೀಪ್ ಸಿಂಗ್ ಸೆಂಗಾರ್ ಪತ್ನಿ ಚುನಾವಣೆಯಲ್ಲಿ ಸ್ಪರ್ಧಿಸಲು ಸಾಧ್ಯವಾಗುವಂತೆ ಅವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ” ಎಂದು ಹೇಳಿದ್ದಾರೆ. “ಇಂತಹ ಅತ್ಯಾಚಾರ ಆರೋಪಿ ಹೊರಬಂದರೆ, ನಾವು ಹೇಗೆ ಸುರಕ್ಷಿತವಾಗಿರಲು ಸಾಧ್ಯ ಎಂದು? ಪ್ರಶ್ನಿಸಿದ್ದಾರೆ.

“ದೆಹಲಿ ನ್ಯಾಯಾಲಯದಿಂದ ಶಿಕ್ಷೆ ಅಮಾನತಿನಲ್ಲಿಟ್ಟ ಆದೇಶ ಹೊರಬಿದ್ದ ಬಳಿಕ ನಮಗೆ ಭಯ ಶುರುವಾಗಿದೆ. ನ್ಯಾಯಾಲಯ ದಯವಿಟ್ಟು ಜಾಮೀನು ರದ್ದುಗೊಳಿಸಬೇಕು” ಎಂದು ಸಂತ್ರಸ್ತೆ ಮನವಿ ಮಾಡಿದ್ದಾರೆ.

ನೋವಿನ ನಡುವೆಯೂ ಆಕೆ, “ನನಗೆ ನ್ಯಾಯಾಂಗದ ಮೇಲೆ ಇನ್ನೂ ನಂಬಿಕೆ ಇದೆ” ಎಂದು ಹೇಳಿದ್ದು, ಸುಪ್ರೀಂ ಕೋರ್ಟ್ ಮೊರೆ ಹೋಗುವುದಾಗಿ ತಿಳಿಸಿದ್ದಾರೆ.

ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಮೂವರನ್ನೂ ಸ್ಥಳದಿಂದ ಕರೆದೊಯ್ದರು. ಪೊಲೀಸರು ಅವರನ್ನು ತಮ್ಮ ವಾಹನಕ್ಕೆ ಹತ್ತಿಸಿದ ಮತ್ತು ಪ್ರತಿಭಟನೆಗೆ ಅವಕಾಶ ನೀಡುವಂತೆ ಅವರು ಮನವಿ ಮಾಡಿದ ವಿಡಿಯೋಗಳನ್ನು ಮಾಧ್ಯಮಗಳು ತೋರಿಸಿವೆ.

ಹೋರಾಟಗಾರ್ತಿ ಯೋಗಿತಾ ಅವರು, ಕುಲದೀಪ್ ಸಿಂಗ್ ಸೆಂಗಾರ್‌ಗೆ ಜಾಮೀನು ನೀಡಿದ ಕಾರಣವನ್ನು ಪ್ರಶ್ನಿಸಿದ್ದಾರೆ. ಕಾನೂನು ಹೋರಾಟದ ವೇಳೆ ಪೂರ್ತಿಯಾಗಿ ಸಂತ್ರಸ್ತೆ ಮತ್ತು ಆಕೆಯ ತಾಯಿ ಪ್ರತ್ಯೇಕವಾಗಿ (ಏಕಾಂಗಿಯಾಗಿ) ಇದ್ದರು ಎಂದಿದ್ದಾರೆ.

ಸಂತ್ರಸ್ತೆ ಮತ್ತು ಆಕೆಯ ತಾಯಿ ತುಂಬಾ ಕಷ್ಟಗಳನ್ನು ಎದುರಿಸಿ ಕಾನೂನು ಹೋರಾಟ ನಡೆಸುವ ಮೂಲಕ ಅಪರಾಧಿಗೆ ಶಿಕ್ಷೆಯಾಗುವಂತೆ ನೋಡಿಕೊಂಡರು. ಆದರೆ, ಈಗ ಏನಾಯಿತು? ಅಪರಾಧಿಗೆ ಜಾಮೀನು ಸಿಕ್ಕಿತು. ದೇಶದಲ್ಲಿ ಅತ್ಯಾಚಾರಿಗಳು ಜಾಮೀನು ಪಡೆಯುತ್ತಿದ್ದಾರೆ, ಅಮಾಯಕರು ಜೈಲಲ್ಲಿದ್ದಾರೆ. ಹೈಕೋರ್ಟ್ ಆದೇಶದ ಬಳಿಕ ಸಂತ್ರಸ್ತೆ ಮತ್ತು ಆಕೆಯ ತಾಯಿ ಭಯದಲ್ಲಿದ್ದಾರೆ ಎಂದು ಹೇಳಿದ್ದಾರೆ.

ಸಂತ್ರಸ್ತೆಯ ಸಹೋದರಿ ಕೂಡ ಜಾಮೀನು ದೊರೆತಿರುವ ಕುರಿತು ಮಾತನಾಡಿದ್ದು, “ಅಪರಿಚಿತ ವ್ಯಕ್ತಿಗಳು ನಮ್ಮ ಮನೆಯ ಸುತ್ತಮುತ್ತ ಓಡಾಡುತ್ತಿದ್ದಾರೆ, ನಮಗೆ ಬೆದರಿಕೆ ಹಾಕುತ್ತಿದ್ದಾರೆ” ಎಂದು ಹೇಳಿದ್ದಾರೆ.

“ಅವನು (ಸೆಂಗಾರ್) ಮೊದಲು ನನ್ನ ಚಿಕ್ಕಪ್ಪನನ್ನು ಕೊಂದ, ಬಳಿಕ ನನ್ನ ಅಪ್ಪನನ್ನು ಕೊಂದ. ನಂತರ ನನ್ನ ಸಹೋದರಿ ಮೇಲೆ ದೌರ್ಜನ್ಯ ನಡೆಯಿತು. ಎಲ್ಲಾ ಪ್ರಕರಣಗಳು ಆತನಿಗೆ ಸಂಬಂಧಿಸಿದೆ. ಆದರೆ, ಆತ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾನೆ. ನಾವು ಇನ್ನೂ ಭಯದಲ್ಲಿದ್ದೇವೆ. ಕೊನೆಪಕ್ಷ ನಾವು ಜೈಲಲ್ಲಿ ಇದ್ದರೆ ಜೀವಂತ ಇರಬಹುದು” ಎಂದು ಆತಂಕ, ನೋವು ತೋಡಿಕೊಂಡಿದ್ದಾರೆ.

ಕುಲದೀಪ್ ಸಿಂಗ್ ಸೆಂಗಾರ್‌ಗೆ ವಿಚಾರಣಾ ನ್ಯಾಯಾಲಯವು 2019ರಲ್ಲಿ ಜೀವಾವಧಿ ಶಿಕ್ಷೆ ವಿಧಿಸಿದೆ. ಇದರ ವಿರುದ್ದ ಸೆಂಗಾರ್‌ ದೆಹಲಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಮೇಲ್ಮನವಿ ವಿಚಾರಣೆ ಮುಗಿಯುವವರೆಗೆ ಶಿಕ್ಷೆಯನ್ನು ಅಮಾನತಿನಲ್ಲಿಟ್ಟಿದೆ.

ನ್ಯಾಯಮೂರ್ತಿ ಸುಬ್ರಹ್ಮಣ್ಯಂ ಪ್ರಸಾದ್ ಮತ್ತು ಹರೀಶ್ ವೈದ್ಯನಾಥನ್ ಶಂಕರ್ ಅವರಿದ್ದ ವಿಭಾಗೀಯ ಪೀಠವು 15 ಲಕ್ಷ ರೂಪಾಯಿಗಳ ಜಾಮೀನು ಬಾಂಡ್ ಸಲ್ಲಿಸಬೇಕೆಂಬ ಷರತ್ತಿನ ಮೇಲೆ ಜಾಮೀನು ಮಂಜೂರು ಮಾಡಿದೆ.

ಆದಾಗ್ಯೂ, ಸಂತ್ರಸ್ತೆಯ ತಂದೆಯ ಕಸ್ಟಡಿ ಸಾವಿಗೆ ಸಂಬಂಧಿಸಿದ ಪ್ರತ್ಯೇಕ ಪ್ರಕರಣದಲ್ಲಿ ಸೆಂಗಾರ್‌ಗೆ ಜಾಮೀನು ಸಿಗದ ಕಾರಣ ಆತ ಸದ್ಯಕ್ಕೆ ಬಂಧನದಲ್ಲೇ ಇರುತ್ತಾರೆ. ಆ ಪ್ರಕರಣದಲ್ಲಿ ಅವರಿಗೆ 10 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದ್ದು, ಶಿಕ್ಷೆಯನ್ನು ಅಮಾನತುಗೊಳಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯೊಂದಿಗೆ ಅವರ ಮೇಲ್ಮನವಿ ಇನ್ನೂ ದೆಹಲಿ ಹೈಕೋರ್ಟ್‌ನಲ್ಲಿ ಬಾಕಿ ಇದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...

ತಲೆ ಮರೆಸಿಕೊಂಡಿದ್ದ ಸ್ವತಂತ್ರ ಭಾರದ್ವಾಜ್‌ ಅರೆಸ್ಟ್ : ಪೋಕ್ಸೋ ಅಡಿ ಮತ್ತೊಂದು ಪ್ರಕರಣ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈನಲ್ಲಿ ನಡೆದ ಸಿಜೆಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಝಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಹಿಂದುತ್ವ ಸೋಶಿಯಲ್ ಮೀಡಿಯಾ 'ಇನ್‌ಫ್ಲುಯೆನ್ಸರ್' ಸ್ವತಂತ್ರ...

ಆರ್‌ಎಸ್ಎಸ್ ಬೆಂಬಲಿತ ಗುಂಪುಗಳಿಂದ ದೇಣಿಗೆ ಸ್ವೀಕರಿಸದಿರಲು ಅಮೆರಿಕದ ರಾಜಕಾರಣಿಗಳಿಂದ ಪ್ರತಿಜ್ಞೆ

ಅಮೆರಿಕದ ಸುಮಾರು 90 ಜನಪ್ರತಿನಿಧಿಗಳು ಮತ್ತು ರಾಜಕೀಯ ಅಭ್ಯರ್ಥಿಗಳು ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) ಬೆಂಬಲಿತ ಗುಂಪುಗಳಿಂದ ರಾಜಕೀಯ ದೇಣಿಗೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಹಿಂದುತ್ವ ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್...

KPSC ಪರೀಕ್ಷಾ ಅಕ್ರಮ: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ, ರಾಜಕೀಯ ಪಕ್ಷ ನೋಡದೆ ನಿರ್ದಾಕ್ಷಿಣ್ಯ ಕ್ರಮ – ಸಚಿವ ಪ್ರಿಯಾಂಕ್ ಖರ್ಗೆ

ಕೆಪಿಎಸ್‌ಸಿ (KPSC) ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿದ್ದು, ಇದರಲ್ಲಿ ಭಾಗಿಯಾಗಿರುವ ಯಾರನ್ನೇ ಆಗಲಿ ರಕ್ಷಿಸುವ ಪ್ರಶ್ನೆಯೇ ಇಲ್ಲ. ಆರೋಪಿಗಳು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ಅಥವಾ ಯಾವುದೇ ರಾಜಕೀಯ ಪಕ್ಷಕ್ಕೆ...

ಉತ್ತರ ಪ್ರದೇಶ: ಸಹಾರನ್‌ಪುರ ಕಲೆಕ್ಟರೇಟ್ ಮಸೀದಿ ಧ್ವಂಸ, ‘ಬುಲ್ಡೋಜರ್ ರಾಜಕಾರಣ’ಕ್ಕೆ ವಿಪಕ್ಷಗಳಿಂದ ಖಂಡನೆ!

ಸಹಾರನ್‌ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿದ್ದ ಮಸೀದಿಯನ್ನು ಶನಿವಾರ (ಸೆಪ್ಟೆಂಬರ್ 5) ಮುಂಜಾನೆ ಭಾರಿ ಪೊಲೀಸ್ ಭದ್ರತೆಯೊಂದಿಗೆ ಬುಲ್ಡೋಜರ್ ಬಳಸಿ ಧ್ವಂಸಗೊಳಿಸಲಾಗಿದೆ. ಈ ಕಾರ್ಯಾಚರಣೆಗೆ ವ್ಯಾಪಕ ಆಕ್ರೋಶ...

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...