Homeಮುಖಪುಟ"ಆತ್ಮಹತ್ಯೆಗೆ ಮುಂದಾದೆ, ಕುಟುಂಬ ನೆನೆದು ಸುಮ್ಮನಾದೆ": ನೋವು ತೋಡಿಕೊಂಡ ಉನ್ನಾವೋ ಅತ್ಯಾಚಾರ ಸಂತ್ರಸ್ತೆ

“ಆತ್ಮಹತ್ಯೆಗೆ ಮುಂದಾದೆ, ಕುಟುಂಬ ನೆನೆದು ಸುಮ್ಮನಾದೆ”: ನೋವು ತೋಡಿಕೊಂಡ ಉನ್ನಾವೋ ಅತ್ಯಾಚಾರ ಸಂತ್ರಸ್ತೆ

ಅಪರಾಧಿ ಕುಲದೀಪ್ ಸಿಂಗ್ ಸೆಂಗಾರ್ ಶಿಕ್ಷೆ ಅಮಾನತು, ಇಂಡಿಯಾ ಗೇಟ್ ಬಳಿ ಸಂತ್ರಸ್ತೆ ಕುಟುಂಬದಿಂದ ಪ್ರತಿಭಟನೆ. ಶಿಕ್ಷೆ ಅಮಾನತಿಗೂ 2027ರ ಯುಪಿ ಚುನಾವಣೆಗೂ ಸಂಬಂಧವಿದೆ ಎಂದ ಸಂತ್ರಸ್ತೆ

- Advertisement -
- Advertisement -

“ನಾನು ಆತ್ಮಹತ್ಯೆ ಮಾಡಿಕೊಳ್ಳಬೇಕೆಂದಿದ್ದೆ. ಆದರೆ, ನನ್ನ ಕುಟುಂಬವನ್ನು ನೆನೆದು ಸುಮ್ಮನಾದೆ” ಇದು ಉನ್ನಾವೋ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಮಂಗಳವಾರ (2025 ಡಿಸೆಂಬರ್ 24) ಸಂಜೆ ದೆಹಲಿಯ ಇಂಡಿಯಾ ಗೇಟ್ ಎದುರಿನ ಹುಲ್ಲುಹಾಸಿನ ಮೇಲೆ ಕುಳಿತು ಹೇಳಿದೆ ನೋವಿನ ಮಾತು.

ದೇಶವನ್ನೇ ಬೆಚ್ಚಿ ಬೀಳಿಸಿದ 2017ರ ಉನ್ನಾವೋ ಅತ್ಯಾಚಾರ ಪ್ರಕರಣದ ಅಪರಾಧಿ, ಬಿಜೆಪಿಯ ಮಾಜಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್‌ಗೆ ವಿಚಾರಣಾ ನ್ಯಾಯಾಲಯ ವಿಧಿಸಿರುವ ಜೀವಾವಧಿ ಶಿಕ್ಷೆಯನ್ನು ದೆಹಲಿ ಹೈಕೋರ್ಟ್ ಮಂಗಳವಾರ ಅಮಾನತಿನಲ್ಲಿಟ್ಟಿದೆ.

ನ್ಯಾಯಾಲಯದ ಆದೇಶ ಹೊರಬಿದ್ದ ಕೆಲವೇ ಗಂಟೆಗಳಲ್ಲಿ ಇಂಡಿಯಾ ಗೇಟ್ ಬಳಿ ಪ್ರಕರಣದ ಸಂತ್ರಸ್ತೆ, ಆಕೆಯ ತಾಯಿ ಪ್ರತಿಭಟನೆ ನಡೆಸಿದರು. ಇವರಿಗೆ ಮಹಿಳಾ ಹಕ್ಕುಗಳ ಹೋರಾಟಗಾರ್ತಿ ಯೋಗಿತಾ ಭಯನಾ ಸಾಥ್ ನೀಡಿದರು.

“ನ್ಯಾಯಾಲಯದ ಆದೇಶದಿಂದ ನಾವು ಭಯದಲ್ಲಿ ಬದುಕುವಂತಾಗಿದೆ. ವ್ಯವಸ್ಥೆ ನಮಗೆ ದ್ರೋಹ ಬಗೆದಿದೆ” ಎಂದು ಪ್ರತಿಭಟನೆ ವೇಳೆ ಸಂತ್ರಸ್ತೆ ಹೇಳಿದ್ದಾರೆ.

ಸುದ್ದಿ ಸಂಸ್ಥೆ ಎಎನ್‌ಐ ಜೊತೆ ಮಾತನಾಡಿರುವ ಆಕೆ, “ಜಾಮೀನು ನೀಡಿದ ಸಮಯವು ರಾಜಕೀಯ ಪ್ರೇರಿತವಾಗಿದ್ದು. ಇದಕ್ಕೂ 2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೂ ಸಂಬಂಧವಿದೆ ಎಂದಿದ್ದಾರೆ.

“ನಮಗೆ ಅನ್ಯಾಯ ಮಾಡಲಾಗಿದೆ. ಚುನಾವಣೆ ಬರುತ್ತಿದೆ. ಕುಲದೀಪ್ ಸಿಂಗ್ ಸೆಂಗಾರ್ ಪತ್ನಿ ಚುನಾವಣೆಯಲ್ಲಿ ಸ್ಪರ್ಧಿಸಲು ಸಾಧ್ಯವಾಗುವಂತೆ ಅವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ” ಎಂದು ಹೇಳಿದ್ದಾರೆ. “ಇಂತಹ ಅತ್ಯಾಚಾರ ಆರೋಪಿ ಹೊರಬಂದರೆ, ನಾವು ಹೇಗೆ ಸುರಕ್ಷಿತವಾಗಿರಲು ಸಾಧ್ಯ ಎಂದು? ಪ್ರಶ್ನಿಸಿದ್ದಾರೆ.

“ದೆಹಲಿ ನ್ಯಾಯಾಲಯದಿಂದ ಶಿಕ್ಷೆ ಅಮಾನತಿನಲ್ಲಿಟ್ಟ ಆದೇಶ ಹೊರಬಿದ್ದ ಬಳಿಕ ನಮಗೆ ಭಯ ಶುರುವಾಗಿದೆ. ನ್ಯಾಯಾಲಯ ದಯವಿಟ್ಟು ಜಾಮೀನು ರದ್ದುಗೊಳಿಸಬೇಕು” ಎಂದು ಸಂತ್ರಸ್ತೆ ಮನವಿ ಮಾಡಿದ್ದಾರೆ.

ನೋವಿನ ನಡುವೆಯೂ ಆಕೆ, “ನನಗೆ ನ್ಯಾಯಾಂಗದ ಮೇಲೆ ಇನ್ನೂ ನಂಬಿಕೆ ಇದೆ” ಎಂದು ಹೇಳಿದ್ದು, ಸುಪ್ರೀಂ ಕೋರ್ಟ್ ಮೊರೆ ಹೋಗುವುದಾಗಿ ತಿಳಿಸಿದ್ದಾರೆ.

ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಮೂವರನ್ನೂ ಸ್ಥಳದಿಂದ ಕರೆದೊಯ್ದರು. ಪೊಲೀಸರು ಅವರನ್ನು ತಮ್ಮ ವಾಹನಕ್ಕೆ ಹತ್ತಿಸಿದ ಮತ್ತು ಪ್ರತಿಭಟನೆಗೆ ಅವಕಾಶ ನೀಡುವಂತೆ ಅವರು ಮನವಿ ಮಾಡಿದ ವಿಡಿಯೋಗಳನ್ನು ಮಾಧ್ಯಮಗಳು ತೋರಿಸಿವೆ.

ಹೋರಾಟಗಾರ್ತಿ ಯೋಗಿತಾ ಅವರು, ಕುಲದೀಪ್ ಸಿಂಗ್ ಸೆಂಗಾರ್‌ಗೆ ಜಾಮೀನು ನೀಡಿದ ಕಾರಣವನ್ನು ಪ್ರಶ್ನಿಸಿದ್ದಾರೆ. ಕಾನೂನು ಹೋರಾಟದ ವೇಳೆ ಪೂರ್ತಿಯಾಗಿ ಸಂತ್ರಸ್ತೆ ಮತ್ತು ಆಕೆಯ ತಾಯಿ ಪ್ರತ್ಯೇಕವಾಗಿ (ಏಕಾಂಗಿಯಾಗಿ) ಇದ್ದರು ಎಂದಿದ್ದಾರೆ.

ಸಂತ್ರಸ್ತೆ ಮತ್ತು ಆಕೆಯ ತಾಯಿ ತುಂಬಾ ಕಷ್ಟಗಳನ್ನು ಎದುರಿಸಿ ಕಾನೂನು ಹೋರಾಟ ನಡೆಸುವ ಮೂಲಕ ಅಪರಾಧಿಗೆ ಶಿಕ್ಷೆಯಾಗುವಂತೆ ನೋಡಿಕೊಂಡರು. ಆದರೆ, ಈಗ ಏನಾಯಿತು? ಅಪರಾಧಿಗೆ ಜಾಮೀನು ಸಿಕ್ಕಿತು. ದೇಶದಲ್ಲಿ ಅತ್ಯಾಚಾರಿಗಳು ಜಾಮೀನು ಪಡೆಯುತ್ತಿದ್ದಾರೆ, ಅಮಾಯಕರು ಜೈಲಲ್ಲಿದ್ದಾರೆ. ಹೈಕೋರ್ಟ್ ಆದೇಶದ ಬಳಿಕ ಸಂತ್ರಸ್ತೆ ಮತ್ತು ಆಕೆಯ ತಾಯಿ ಭಯದಲ್ಲಿದ್ದಾರೆ ಎಂದು ಹೇಳಿದ್ದಾರೆ.

ಸಂತ್ರಸ್ತೆಯ ಸಹೋದರಿ ಕೂಡ ಜಾಮೀನು ದೊರೆತಿರುವ ಕುರಿತು ಮಾತನಾಡಿದ್ದು, “ಅಪರಿಚಿತ ವ್ಯಕ್ತಿಗಳು ನಮ್ಮ ಮನೆಯ ಸುತ್ತಮುತ್ತ ಓಡಾಡುತ್ತಿದ್ದಾರೆ, ನಮಗೆ ಬೆದರಿಕೆ ಹಾಕುತ್ತಿದ್ದಾರೆ” ಎಂದು ಹೇಳಿದ್ದಾರೆ.

“ಅವನು (ಸೆಂಗಾರ್) ಮೊದಲು ನನ್ನ ಚಿಕ್ಕಪ್ಪನನ್ನು ಕೊಂದ, ಬಳಿಕ ನನ್ನ ಅಪ್ಪನನ್ನು ಕೊಂದ. ನಂತರ ನನ್ನ ಸಹೋದರಿ ಮೇಲೆ ದೌರ್ಜನ್ಯ ನಡೆಯಿತು. ಎಲ್ಲಾ ಪ್ರಕರಣಗಳು ಆತನಿಗೆ ಸಂಬಂಧಿಸಿದೆ. ಆದರೆ, ಆತ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾನೆ. ನಾವು ಇನ್ನೂ ಭಯದಲ್ಲಿದ್ದೇವೆ. ಕೊನೆಪಕ್ಷ ನಾವು ಜೈಲಲ್ಲಿ ಇದ್ದರೆ ಜೀವಂತ ಇರಬಹುದು” ಎಂದು ಆತಂಕ, ನೋವು ತೋಡಿಕೊಂಡಿದ್ದಾರೆ.

ಕುಲದೀಪ್ ಸಿಂಗ್ ಸೆಂಗಾರ್‌ಗೆ ವಿಚಾರಣಾ ನ್ಯಾಯಾಲಯವು 2019ರಲ್ಲಿ ಜೀವಾವಧಿ ಶಿಕ್ಷೆ ವಿಧಿಸಿದೆ. ಇದರ ವಿರುದ್ದ ಸೆಂಗಾರ್‌ ದೆಹಲಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಮೇಲ್ಮನವಿ ವಿಚಾರಣೆ ಮುಗಿಯುವವರೆಗೆ ಶಿಕ್ಷೆಯನ್ನು ಅಮಾನತಿನಲ್ಲಿಟ್ಟಿದೆ.

ನ್ಯಾಯಮೂರ್ತಿ ಸುಬ್ರಹ್ಮಣ್ಯಂ ಪ್ರಸಾದ್ ಮತ್ತು ಹರೀಶ್ ವೈದ್ಯನಾಥನ್ ಶಂಕರ್ ಅವರಿದ್ದ ವಿಭಾಗೀಯ ಪೀಠವು 15 ಲಕ್ಷ ರೂಪಾಯಿಗಳ ಜಾಮೀನು ಬಾಂಡ್ ಸಲ್ಲಿಸಬೇಕೆಂಬ ಷರತ್ತಿನ ಮೇಲೆ ಜಾಮೀನು ಮಂಜೂರು ಮಾಡಿದೆ.

ಆದಾಗ್ಯೂ, ಸಂತ್ರಸ್ತೆಯ ತಂದೆಯ ಕಸ್ಟಡಿ ಸಾವಿಗೆ ಸಂಬಂಧಿಸಿದ ಪ್ರತ್ಯೇಕ ಪ್ರಕರಣದಲ್ಲಿ ಸೆಂಗಾರ್‌ಗೆ ಜಾಮೀನು ಸಿಗದ ಕಾರಣ ಆತ ಸದ್ಯಕ್ಕೆ ಬಂಧನದಲ್ಲೇ ಇರುತ್ತಾರೆ. ಆ ಪ್ರಕರಣದಲ್ಲಿ ಅವರಿಗೆ 10 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದ್ದು, ಶಿಕ್ಷೆಯನ್ನು ಅಮಾನತುಗೊಳಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯೊಂದಿಗೆ ಅವರ ಮೇಲ್ಮನವಿ ಇನ್ನೂ ದೆಹಲಿ ಹೈಕೋರ್ಟ್‌ನಲ್ಲಿ ಬಾಕಿ ಇದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...