Homeಮುಖಪುಟಮುಸ್ಲಿಮರನ್ನು ತುಚ್ಛವಾಗಿ ನಿಂದಿಸುತ್ತಿರುವ ಬಿಜೆಪಿ ನಾಯಕಿ ನಾಝಿಯಾ ಇಲಾಹಿ : ಕ್ರಮ ಕೈಗೊಳ್ಳದ ಪೊಲೀಸರು

ಮುಸ್ಲಿಮರನ್ನು ತುಚ್ಛವಾಗಿ ನಿಂದಿಸುತ್ತಿರುವ ಬಿಜೆಪಿ ನಾಯಕಿ ನಾಝಿಯಾ ಇಲಾಹಿ : ಕ್ರಮ ಕೈಗೊಳ್ಳದ ಪೊಲೀಸರು

- Advertisement -
- Advertisement -

ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ನಾಯಕಿ ಎನ್ನಲಾದ ನಾಝಿಯಾ ಇಲಾಹಿ (ನಾಝಿಯಾ ಇಲಾಹಿ ಖಾನ್) ಪದೇ ಪದೇ ಮುಸ್ಲಿಮರನ್ನು ತುಚ್ಛವಾಗಿ ನಿಂದಿಸಿ, ಅದರ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ರಾಜಾರೋಷವಾಗಿ ಹಂಚಿಕೊಳ್ಳುತ್ತಿದ್ದು, ಪೊಲೀಸರು ಯಾವುದೇ ಕ್ರಮ ಕೈಗೊಂಡ ಬಗ್ಗೆ ಇದುವರೆಗೆ ವರದಿಯಾಗಿಲ್ಲ.

ಸಾಮಾಜಿಕ ಜಾಲತಾಣಗಳಲ್ಲಿ ಈಕೆಯ ವರ್ತನೆಯ ಬಗ್ಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಸೂಕ್ತ ಕ್ರಮಕ್ಕೆ ಜನರು ಆಗ್ರಹಿಸಿದ್ದಾರೆ.

ಇತ್ತೀಚಿನ ಘಟನೆಯಲ್ಲಿ, ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ, ಅಲ್ಲಿನ ಮುಸ್ಲಿಂ ಸಿಬ್ಬಂದಿಯನ್ನು ಧಾರ್ಮಿಕ ಗುರುತಿನ ಮೇಲೆ ನಿಂದಿಸಿದ ವಿಡಿಯೋವನ್ನು ಸ್ವತಃ ನಾಝಿಯಾ ಸೋಮವಾರ (ಡಿ.22) ತನ್ನ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದರು.

ವಿಡಿಯೋ ಜೊತೆಗೆ, “ತುರ್ತು ಪ್ರಯಾಣ ನಿಮಿತ್ತ ಇಂಡಿಗೋ ಟಿಕೆಟ್ ಪಡೆದು ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಪ್ರವೇಶಿಸಿದಾಗ, ಇಂಡಿಗೋ ಕೌಂಟರ್‌ನಿಂದ ರನ್‌ವೇವರೆಗೆ ಮೂರು ಸಲ ಮಿನಿ ಜಿಹಾದಿಯನ್ನು ಎದುರಿಸಬೇಕಾದರೆ ಎನನಿಸಬೇಕು?” ಎಂದು ಬರೆದುಕೊಂಡಿದ್ದರು.

ಮುಂದುವರಿದು, “ಇಂಡಿಗೋ ಕೌಂಟರ್ ‘ಕೆ’ ನಲ್ಲಿ ರೆಹಾನ್, ಸ್ಟ್ರೆಚ್ ಕೌಂಟರ್‌ನಲ್ಲಿ ಮೊಯಿನುದ್ದೀನ್ ಮತ್ತು ರನ್‌ವೇ ಕೋಚ್‌ನಲ್ಲಿ ಚಾಲಕ ಅಬ್ದುಲ್ಲಾ ಖಾನ್. ನಿಮ್ಮ ಹೃದಯದಲ್ಲಿರುವ ದೇಶ ಭಕ್ತಿಯಿಂದ ನಿಮ್ಮನ್ನು ಗುರುತಿಸಿ, ನಂತರ ಅವರು ನಿಮಗೆ ಕಿರುಕುಳ ನೀಡಲು ಮತ್ತು ವಿವಿಧ ರೀತಿಯಲ್ಲಿ ಹಾನಿ ಮಾಡಲು ಪ್ರಯತ್ನಿಸುತ್ತಾರೆ. ಇಂದು ನನಗೆ ಇದೇ ಅನುಭವ ಆಯಿತು” ಎಂದಿದ್ದರು.

“ಒಂದು ವೇಳೆ ಇಂಡಿಗೋ ಏರ್‌ಲೈನ್ಸ್ ಮೂಲಕ ಭಯೋತ್ಪಾದಕರು ಮತ್ತು ಭಯೋತ್ಪಾದನೆ ಭುಗಿಲೆದ್ದರೆ, ಭಾರತ ದೇಶಕ್ಕೆ ಹಾನಿ ಮಾಡಲು ಪ್ರಯತ್ನಿಸಿದರೆ, ಆಗ ಇಂಡಿಗೋ ಏರ್‌ಲೈನ್ಸ್ ಮಾಲೀಕರು ಕೊಂಚವೂ ಆಘಾತಕ್ಕೊಳಗಾಗುವುದಿಲ್ಲ ಎಂದು ನಾನು ಭಾವಿಸುತ್ತೇನೆ. ಏಕೆಂದರೆ ಇಂಡಿಗೋ ಏರ್‌ಲೈನ್ಸ್ ಮಾಲೀಕರು ಉದಾರವಾದಿ ಹಿಂದೂವಾಗಿ ಪೂರೈಸುತ್ತಿರುವ ಜವಾಬ್ದಾರಿಯಿಂದ” ಎಂದು ಹೇಳಿದ್ದರು.

“ಹೆಚ್ಚಿನ ಸಂಖ್ಯೆಯಲ್ಲಿ ಉಮ್ಮ (ಮುಸ್ಲಿಮರು) ಜನರನ್ನು ನೇಮಿಸಿಕೊಳ್ಳುವ ಮೂಲಕ ಇದು ವ್ಯವಸ್ಥಿತ ಪಿತೂರಿಯೇ? ಅಥವಾ ಒಬ್ಬ ಉದಾರವಾದಿ ಹಿಂದೂವಿನ ಕರ್ತವ್ಯಗಳ ನೆರವೇರಿಕೆಯೇ? ಸರ್ಕಾರವು ಕೇವಲ ಕೈಜೋಡಿಸಿ ಪ್ರತಿ ಬಾರಿಯೂ ಕ್ಷಮೆಯಾಚಿಸಿದರೆ ಕ್ಷಮಿಸುವುದಿಲ್ಲ, ಹಾಗೆ ಆಗಬಾರದು” ಎಂದು ಬರೆದುಕೊಂಡಿದ್ದರು.

ತಾನು ಪೋಸ್ಟ್ ಮಾಡಿದ್ದ ವಿಡಿಯೋದಲ್ಲಿಯೂ ಆಕೆ, “Poora desh pareshan ho gaya hai tum Abdul aur Abdullah se” (ಅಬ್ದುಲ್ ಮತ್ತು ಅಬ್ದುಲ್ಲಾ, ನಿಮ್ಮಿಂದಾಗಿ ಇಡೀ ದೇಶ ತೊಂದರೆಗೀಡಾಗಿದೆ) ಎಂದು ಹೇಳುವುದು ಇದೆ.

ಈ ಮೂಲಕ ಮುಸ್ಲಿಮರ ಮೇಲಿನ ಮತೀಯ ದ್ವೇಷವನ್ನು ನಾಝಿಯಾ ಹೊರ ಹಾಕಿದ್ದರು. ತನ್ನ ಪೋಸ್ಟನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ, ಇಂಡಿಗೋ ಸಂಸ್ಥೆಗೆ ಟ್ಯಾಗ್ ಮಾಡಿದ್ದರು.

ವಿಡಿಯೋ ಅಥವಾ ಪೋಸ್ಟ್‌ನಲ್ಲಿ ನಾಝಿಯಾ ಅವರು ಮುಂಬೈ ನಿಲ್ದಾಣದಲ್ಲಿ ಆಕೆಗೆ ಆಗಿರುವ ಸಮಸ್ಯೆ ಏನು? ಆಕೆ ಮುಸ್ಲಿಂ ಸಿಬ್ಬಂದಿಯನ್ನು ನಿಂದಿಸಲು ಕಾರಣವೇನು? ಎಂದು ಸ್ಪಷ್ಟಪಡಿಸಿಲ್ಲ.

ನಾಝಿಯಾ ಪೋಸ್ಟ್ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಅನೇಕರು ಆಕೆ ದ್ವೇಷ ಹರಡುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಸಾಮಾನ್ಯ ಜನರು ಏನಾದರು ಪೋಸ್ಟ್‌ ಹಾಕಿದಾಗ ತಕ್ಷಣ ಮನೆಗೆ ನುಗ್ಗಿ ಬಂದಿಸುವ ಪೊಲೀಸರು, ಈಕೆಯ ಮೇಲೆ ಇದುವರೆಗೆ ಕ್ರಮ ಕೈಗೊಂಡ ಬಗ್ಗೆ ವರದಿಯಾಗಿಲ್ಲ. ಎಕ್ಸ್‌ ಕೂಡ ಆಕೆಯ ದ್ವೇಷ ಹರಡುವ ವಿಡಿಯೋ ಕುರಿತು ಯಾವುದೇ ಕ್ರಮ ಕೈಗೊಂಡಿಲ್ಲ. ಎಕ್ಸ್‌ನ ಮಾನದಂಡಗಳನ್ನು ಉಲ್ಲಂಘಿಸಿದ ಬಗ್ಗೆ ಚಕಾರವೆತ್ತಿಲ್ಲ.

ತನ್ನ ವಿಡಿಯೋ ದೇಶದಾದ್ಯಂತ ವೈರಲ್ ಆಗಿ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದಂತೆ ನಾಝಿಯಾ ಮತ್ತೊಂದು ಸೆಲ್ಪೀ ವಿಡಿಯೋವನ್ನು ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ವಿಡಿಯೋದಲ್ಲಿ ಮುಸ್ಲಿಮರನ್ನು “ಜಿಹಾದಿ”, “ಕಟ್ಮುಲ್ಲಾ” “ಹಂದಿಗಳು” ಇತ್ಯಾದಿ ಪದಗಳನ್ನು ಉಪಯೋಗಿಸಿ ತುಚ್ಛವಾಗಿ ನಿಂದಿಸಿದ್ದಾರೆ.

ವಿಡಿಯೋ ಜೊತೆಗೆ, “ಇಂಡಿಗೋ ಮಾಲೀಕರು ಭಾರತ ಮತ್ತು ಪಾಕಿಸ್ತಾನದ ಮುಸ್ಲಿಂ ಬೆಂಬಲಿಗರ ಮಾತನ್ನು ಕೇಳಿ ನನ್ನನ್ನು ಕಪ್ಪುಪಟ್ಟಿಗೆ ಸೇರಿಸಬೇಕು. ಏಕೆಂದರೆ ನಾನು ಸುಮ್ಮನಿರುವುದಿಲ್ಲ. ಇಂಡಿಗೋದ ಉಮ್ಮಾ (ಮುಸ್ಲಿಂ) ನೌಕರರು ತಮ್ಮ ಜಿಹಾದಿ ಮನಸ್ಥಿತಿಯನ್ನು ನನಗೆ ತೋರಿಸಿದಾಗಲೆಲ್ಲಾ, ನಾನು ಅವರ ಹಿಜಾಬ್ ಕಳಚುತ್ತೇನೆ, ಇದು ಸವಾಲು” ಎಂದು ಬರೆದುಕೊಂಡಿದ್ದಾರೆ. ಈ ವಿಡಿಯೋ ಬಗ್ಗೆ ಸಂಬಂಧಪಟ್ಟವರು ಕ್ರಮ ಕೈಗೊಂಡ ಬಗ್ಗೆ ವರದಿಯಾಗಿಲ್ಲ.

ಇದೇ ಘಟನೆಗೆ ಸಂಬಂಧಪಟ್ಟಂತೆ ಡಿಸೆಂಬರ್ 24ರಂದು ನಾಝಿಯಾ ಮತ್ತೊಂದು ವಿಡಿಯೋ ಹಂಚಿಕೊಂಡಿದ್ದಾರೆ. ಅದರಲ್ಲಿ ಜಮ್ಮು ಕಾಶ್ಮೀರಾದ ಪಿಡಿಪಿ ಪಕ್ಷದ ನಾಯಕಿ ಇಲ್ತಿಜಾ ಮುಫ್ತಿ ವಿಷಯ ಗೊತ್ತಿಲ್ಲದೆ ಹೇಳಿಕೆ ಕೊಡುವ ಮೂಲಕ ನನ್ನನ್ನು ಅವಮಾನಿಸಿದ್ದಾರೆ. ಅಲ್ಲದೆ, ಅವರ ಕಡೆಯವರು ನನಗೆ ಬೆದರಿಕೆ ಕರೆಗಳನ್ನು ಮಾಡುತ್ತಿದ್ದಾರೆ ಎಂದು ಕೆಲ ಫೋನ್‌ ನಂಬರ್‌ಗಳನ್ನು ಹಂಚಿಕೊಂಡಿದ್ದಾರೆ.

ನಾಝಿಯಾ ತಮ್ಮ ಎಕ್ಸ್‌ ಖಾತೆ ಬಯೋದಲ್ಲಿ, “ಕ್ಷಮೆಯಾಚಿಸದ ಭಾರತೀಯೆ, ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ನಾಯಕಿ, ರಾಜ್ಯ ಸಮಿತಿ ಸದಸ್ಯೆ ಕೈಮಗ್ಗ_ನೇಯ್ಗೆ ಕೋಶ, ರಾಷ್ಟ್ರೀಯ ವೀಕ್ಷಕಿ ಮಜ್ದೂರ್ ಕೋಶ, ಅಧ್ಯಕ್ಷೆ ಖಾನ್ ಲೀಗಲ್ ಸಾಲಿಸಿಟರ್ ಸಂಸ್ಥೆ” ಎಂದು ತನ್ನನ್ನು ತಾನು ಪರಿಚಯಿಸಿಕೊಂಡಿದ್ದಾರೆ.

ಇತರ ಮುಸ್ಲಿಂ ದ್ವೇಷ ಭಾಷಣಗಳು

1. ಆಗಸ್ಟ್ 2024ರಲ್ಲಿ ಸಂದರ್ಶನವೊಂದರಲ್ಲಿ ಪ್ರವಾದಿ ಮುಹಮ್ಮದರು, ಮದೀನಾ ನಗರ ಮತ್ತು ಮುಸ್ಲಿಂ ಮಹಿಳೆಯರನ್ನು ನಾಝಿಯಾ ಅವಹೇಳನ ಮಾಡಿದ್ದರು. ಇದರ ವಿರುದ್ದ ಕೋಲ್ಕತ್ತಾದ ಕ್ರಿಮಿನಲ್ ವಕೀಲರೊಬ್ಬರು ದೂರು ದಾಖಲಿಸಿದ್ದರು.

    2. ಜನವರಿ 2025ರಲ್ಲಿ ದೆಹಲಿಯ ರೋಹಿಣಿ ಪ್ರದೇಶದಲ್ಲಿ ಹಿಂದುತ್ವ ಸಂಘಟನೆಯೊಂದು ಏರ್ಪಡಿಸಿದ್ದ ಸಾರ್ವಜನಿಕ ಕಾರ್ಯಕ್ರಮದಲ್ಲಿ ನಾಝಿಯಾ ಲವ್ ಜಿಹಾದ್, ಅತ್ಯಾಚಾರ, ಹಿಂಸಾಚಾರ, ಭಯೋತ್ಪಾದನೆ ಆರೋಪಗಳನ್ನು ಮಾಡಿ ಮುಸ್ಲಿಮರನ್ನು ನಿಂದಿಸಿದ್ದರು.

    ಈ ಸಂಬಂಧ ‘ಚುನಾವಣೆಗೆ ಮುನ್ನ ಕೋಮು ಹಿಂಸಾಚಾರಕ್ಕೆ ಪ್ರಚೋದನೆ ನೀಡಿದ ಆರೋಪದ’ ಮೇಲೆ ಸಿಟಿಜನ್ಸ್ ಫಾರ್ ಜಸ್ಟೀಸ್ ಅಂಡ್ ಪೀಸ್ (ಸಿಜೆಪಿ) ದೆಹಲಿಯ ಮುಖ್ಯ ಚುನಾವಣಾ ಅಧಿಕಾರಿಗೆ ದೂರು ಸಲ್ಲಿಸಿತ್ತು. ಮಾದರಿ ನೀತಿ ಸಂಹಿತೆ (ಎಂಸಿಸಿ) ಮತ್ತು ಜನತಾ ಪ್ರಾತಿನಿಧ್ಯ ಕಾಯ್ದೆ, 1951ರ ಉಲ್ಲಂಘನೆಯಾಗಿದೆ ಎಂದು ಆರೋಪಿಸಿತ್ತು.

    3. ಜನವರಿ 2025ರಲ್ಲಿ ಕರ್ನಾಟಕದ ಬೆಳಗಾವಿಯ ಜಿಲ್ಲೆಯ ಸೂಳಿಬಾವಿ ಗ್ರಾಮದಲ್ಲಿ ನಡೆದ ಸಮಾವೇಶದಲ್ಲಿ ನಾಝಿಯಾ ಮುಸ್ಲಿಮರ ವಿರುದ್ದ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿದ್ದರು.

    ಸಾಮಾಜಿಕ ಜಾಲತಾಣಗಳಲ್ಲಿ ಈಕೆ ಪದೇ ಪದೇ ಮುಸ್ಲಿಮರ ವಿರುದ್ದ ದ್ವೇಷ ಕಾರುತ್ತಿರುತ್ತಾರೆ.

    ಈ ಹಿಂದೆ ಮುಸ್ಲಿಮರ ವಿರುದ್ದ ಸುಳ್ಳು ಸುದ್ದಿ ಹರಡಿ ಸಿಕ್ಕಿಬಿದ್ದಿದ್ದರು ನಾಝಿಯಾ

    ಯಾವುದೇ ವಿಷಯಗಳ ಕುರಿತು ವಿಡಿಯೋ ಮಾಡುವಾಗ, ಪೋಸ್ಟ್‌ ಮಾಡುವಾಗ ಮುಸ್ಲಿಮರನ್ನು ನಿಂದಿಸುವುದನ್ನು ನಾಝಿಯಾ ಮರೆಯುವುದಿಲ್ಲ. ಆಕೆಯ ಬಹುತೇಕ ಪೋಸ್ಟ್‌ಗಳು ಕಟ್ಟರ್ ಹಿಂದುತ್ವದ ಪ್ರತಿಪಾದನೆ ಮತ್ತು ದ್ವೇಷ ಹರಡುವಂತದ್ದಾಗಿದೆ. ಇಂತಹ ನಾಝಿಯಾ ಈ ಹಿಂದೆ ಮುಸ್ಲಿಮರ ವಿರುದ್ದ ಅಪಘಾತದ ಕಟ್ಟು ಕಥೆ ಕಟ್ಟಿ ಸಿಕ್ಕಿಬಿದಿದ್ದರು.

    2025ರ ಫೆಬ್ರವರಿ 24ರಂದು, ಮಹಾಕುಂಭ ಮೇಳಕ್ಕೆ ತೆರಳುವಾಗ ಮುಸ್ಲಿಮರು ನಮ್ಮ ಕಾರನ್ನು ಹಿಂಬಾಲಿಸಿ ಅಪಘಾತವೆಸಗಿದ್ದಾರೆ ಎಂದು ನಾಝಿಯಾ ಆರೋಪಿಸಿದ್ದರು. ಸಾಮಾಜಿಕ ಜಾಲತಾಣಗಳಲ್ಲಿ ಕಣ್ಣೀರು ಹಾಕಿ ವಿಡಿಯೋ ಪೋಸ್ಟ್ ಮಾಡಿದ್ದರು. ಆದರೆ, ಉತ್ತರ ಪ್ರದೇಶ ಪೊಲೀಸರು ತನಿಖೆ ನಡೆಸಿ ಆಕೆಯ ಸುಳ್ಳಾರೋಪವನ್ನು ಬಯಲು ಮಾಡಿದ್ದರು.

    ಈ ಕುರಿತು ನಾನುಗೌರಿ.ಕಾಂ ಪ್ರಕಟಿಸಿದ ಫ್ಯಾಕ್ಟ್‌ಚೆಕ್ ವರದಿಯನ್ನು ಕೆಳಗಡೆ ನೋಡಬಹುದು.

    ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

    LEAVE A REPLY

    Please enter your comment!
    Please enter your name here

    - Advertisment -

    SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

    ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

    ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

    ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

    ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

    ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

    9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

    ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

    ‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

    ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

    ‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

    ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

    ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

    ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

    ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

    ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

    SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

    ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

    ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

    ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...