Homeಕರ್ನಾಟಕಭಾರತದ ಪ್ರಜೆಗಳನ್ನು ಅನುಮಾನದಿಂದ ನೋಡುತ್ತಿದೆಯೇ ಸರ್ಕಾರ?

ಭಾರತದ ಪ್ರಜೆಗಳನ್ನು ಅನುಮಾನದಿಂದ ನೋಡುತ್ತಿದೆಯೇ ಸರ್ಕಾರ?

ನಾನು ಪೌರತ್ವವನ್ನು ಸಾಬೀತುಪಡಿಸಲು ಅಧಿಕಾರಿ ಮುಂದೆ ಹಾಜರಾಗಿ ದಾಖಲೆಗಳನ್ನು ನೀಡಿ ಅದು ಸಾಬೀತಾಗುವವರೆಗೂ ನಾನು ಭಾರತದ ಪ್ರಜೆ ಅಲ್ಲ.

- Advertisement -
- Advertisement -

ದೇಶದಲ್ಲಿ ಹುಟ್ಟಿರುವ ಪ್ರತಿಯೊಬ್ಬ ಮಗು ಕೂಡ ನೈಸರ್ಗದತ್ತವಾಗಿ ಭಾರತದ ಪೌರತ್ವ ಪಡೆಯುತ್ತದೆ ಎಂದು ರಾಜ್ಯಶಾಸ್ತ್ರದಲ್ಲಿ ಓದಿದ ನೆನಪು. ಪದವಿ ವ್ಯಾಸಂಗ ಮಾಡುತ್ತಿದ್ದಾಗ ರಾಜ್ಯಶಾಸ್ತ್ರದ ಪ್ರಾಧ್ಯಾಪಕರು ಪೌರತ್ವ ಹೇಗೆ ಬರುತ್ತದೆ ಎಂಬ ಬಗ್ಗೆ ತರಗತಿಯಲ್ಲಿ ಪಾಠ ಮಾಡುವಾಗ ಹೇಳಿದ್ದರು. ಅದರ ಆಧಾರದ ಮೇಲೆ ನಾನು ಇದುವರೆಗೂ ಭಾರತೀಯ ಪೌರನೆಂದು ಹೆಮ್ಮೆಯಿಂದ ಅಂದುಕೊಂಡಿದ್ದೆ. ನಾನು ಈ ದೇಶದ ಪೌರತ್ವವನ್ನು ಹುಟ್ಟಿನ ಕಾರಣದಿಂದ ಪಡೆದಿದ್ದೇನೆ ಎಂದು ಅರ್ಥಮಾಡಿಕೊಂಡಿದ್ದೆ. ಆದರೆ ಈಗ ಅನುಮಾನ ಕಾಡಲು ಶುರುವಾಗಿದೆ. ಹಾಗೆಯೇ ನನ್ನಂಥ ಹಲವರನ್ನೂ ಕೂಡ ಕಾಡತೊಡಗಿದೆ. ಇಲ್ಲಿ ನಾನು ಆಡಳಿತ ಪಕ್ಷ, ವಿರೋಧ ಪಕ್ಷ, ಪ್ರಾದೇಶಿಕ ಪಕ್ಷ, ಅಧಿಕಾರಿ, ನೌಕರ ಎಂಬ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಎಲ್ಲರೂ ಪೌರತ್ವ ಸಾಬೀತುಪಡಿಸಲೇಬೇಕು. ಇಲ್ಲಿ ಯಾರನ್ನೂ ಮಾಫ್ ಮಾಡಲು ಬರುವುದಿಲ್ಲ.

ಕೇಂದ್ರ ಸರ್ಕಾರದ ರಾಷ್ಟ್ರೀಯ ಪೌರತ್ವ ಕಾಯ್ದೆ ಮತ್ತು ರಾಷ್ಟ್ರೀಯ ಪೌರತ್ವ ನೋಂದಣಿ ಜಾರಿ ಮಾಡುವ ಸಂದರ್ಭದಲ್ಲಿ ಅನುಮಾನ ಬಲವಾಗಿ ಕಾಡತೊಡಗಿದೆ. ನಾನು ಪೌರತ್ವವನ್ನು ಸಾಬೀತುಪಡಿಸಲು ಅಧಿಕಾರಿ ಮುಂದೆ ಹಾಜರಾಗಿ ದಾಖಲೆಗಳನ್ನು ನೀಡಿ ಅದು ಸಾಬೀತಾಗುವವರೆಗೂ ನಾನು ಭಾರತದ ಪ್ರಜೆ ಅಲ್ಲ. ನನ್ನಂಥೆ ಈ ದೇಶದ ಎಲ್ಲರೂ ಎರಡು ಅಥವಾ ಅದಕ್ಕಿಂತ ಹೆಚ್ಚು ದಾಖಲೆಗಳನ್ನು ಹಾಜರುಪಡಿಸಿದ ಮೇಲೆಯೇ ಪೌರರಾಗಲು ಸಾಧ್ಯ. ಸರ್ಕಾರಕ್ಕೆ ಈ ದೇಶದ ಪ್ರಜೆಗಳಾದ ಪೌರರ ಮೇಲೆ ಅನುಮಾನ ಬಂದಿದೆಯೇ ಎಂಬುದು ನನ್ನ ಮುಂದಿರುವ ಯಕ್ಷಪ್ರಶ್ನೆ.

ರಾಷ್ಟ್ರೀಯ ಪೌರತ್ವ ಕಾಯ್ದೆ ಮತ್ತು ರಾಷ್ಟ್ರೀಯ ಪೌರತ್ವ ನೋಂದಣಿ ಪ್ರಕ್ರಿಯೆಗೆ ನಾನು ಸೇರಿದಂತೆ ಪ್ರತಿಯೊಬ್ಬರು ಸರ್ಕಾರ ನಿಗದಿಪಡಿಸಬಹುದಾದ ದಾಖಲೆಗಳನ್ನು ತೋರಿಸುವುದು ಕಡ್ಡಾಯ. ಅಂದರೆ ನನ್ನ ಪೌರತ್ವವನ್ನು ನಾನು ಸಾಬೀತುಪಡಿಸಬೇಕು. ನನ್ನ ಬಳಿ ಎಲ್ಲಾ ದಾಖಲೆಗಳು ಇರಬಹುದು. ಹಾಗಂತೆ ನಾನು ಪೌರತ್ವ ಪಡೆದಿದ್ದೇನೆ. ನಾನೇಕೆ ತೋರಿಸಬೇಕು ಎಂದು ಸುಮ್ಮನೆ ಕೂರುವುದಿಲ್ಲ. ಅಂದರೆ ಪ್ರತಿಯೊಬ್ಬ ಪೌರನೂ ಸರ್ಕಾರದ ಅಧಿಕಾರಿಗಳಿಂದ ಸಹಿ ಮುದ್ರೆ ಹಾಕಲ್ಪಟ್ಟ ದಾಖಲೆಗಳನ್ನು ತೋರಿಸಲೇಬೇಕು. ಅಲ್ಲಿಯವರೆಗೂ ನಾನು ಭಾರತೀಯ ಪೌರ ಎಂದು ಎದೆತಟ್ಟಿ ಹೇಳಿಕೊಳ್ಳಲು ಸಾಧ್ಯವೇ ಇಲ್ಲ. ಅಂದಮೇಲೆ ಭಾರತೀಯರಾದ ನಾವು ಮತ್ತೊಮ್ಮೆ ದೊಡ್ಡ ಕ್ಯೂನಲ್ಲಿ ನಿಲ್ಲಲೇಬೇಕಾದಂತಹ ಅನಿವಾರ್ಯತೆ/ ಅಗತ್ಯತೆ ನಮ್ಮ ಮುಂದೆ ಬರಲಿದೆ.

ಅಸ್ಸಾಂ ರಾಜ್ಯದಲ್ಲಿ ರಾಷ್ಟ್ರೀಯ ಪೌರತ್ವ ನೋಂದಣಿಗೆ 14 ದಾಖಲೆಗಳನ್ನು ಹಾಜರುಪಡಿಸುವಂತೆ ಹೇಳಿದೆ. ಆ ದಾಖಲೆ ಹೊಂದಿದವರೂ ಅಧಿಕಾರಿಗಳ ಮುಂದೆ ಎಲ್ಲಾ ಕೆಲಸಗಳನ್ನು ಬಿಟ್ಟು ಹಾಜರುಪಡಿಸಿದ್ದಾರೆ. ಆದರೆ ಅವೆಲ್ಲವೂ ಅಧಿಕಾರಿಗಳಿಗೆ ಸೂಕ್ತವೆನಿಸದೇ ಇರುವುದರಿಂದ 19 ಲಕ್ಷ ಮಂದಿ ನೋಂದಣಿ ಪಟ್ಟಿಯಿಂದ ಹೊರಗೆ ಉಳಿಯುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಸರ್ಕಾರ (ಎನ್.ಆರ್.ಸಿ ತುರ್ತು ಜಾರಿ ಇಲ್ಲ ಎಂದು ಸರ್ಕಾರ ಹೇಳಿದೆ.)  ರಾಷ್ಟ್ರೀಯ ಪೌರತ್ವ ನೋಂದಣಿ ಪ್ರಕ್ರಿಯೆಯನ್ನು ಆರಂಭಿಸಿತು ಅನ್ನಿ. ಆ ಕೂಡಲೇ ಎಲ್ಲರೂ ದಾಖಲೆಗಳನ್ನು ಹೊಂದಿಸಿಕೊಳ್ಳಬೇಕು. ಇಲ್ಲದವರು ಅಧಿಕಾರಿಗಳ ಬಳಿಗೆ ಅಲೆಯಬೇಕು. ಬೇಗ ದಾಖಲೆ ಬೇಕೆಂದರೆ ಲಂಚ ಕೊಡಬೇಕು. ಇದು ಕೇವಲ ಒಬ್ಬರ ಪ್ರಶ್ನೆಯಲ್ಲ. ಇಡೀ ಕುಟುಂಬದ ದಾಖಲೆಯೇ ಇರಬೇಕಾಗುತ್ತದೆ. ಪತ್ನಿ ಬೇರೆ ರಾಜ್ಯದವರಾಗಿದ್ದರೆ ಅದಕ್ಕೂ ದಾಖಲೆ ಬೇಕು. ಅಪ್ಪ-ಅಮ್ಮಂದಿರ ದಾಖಲೆ ಇರಬೇಕು.

ಸರ್ಕಾರದಿಂದ ನೇಮಕಗೊಂಡ ಅಧಿಕಾರಿಗಳು ನಮ್ಮೆಲ್ಲಾ ದಾಖಲೆಗಳನ್ನು ಪರಿಶೀಲಿಸಿ ಅದು ಪಕ್ಕಾ ದಾಖಲೆ ಎಂದು ಪರಿಗಣಿಸಿದ ಮೇಲೆಯೇ ನನ್ನ ಪೌರತ್ವ ಅಧಿಕೃತಗೊಳ್ಳುವುದು. ಇಲ್ಲದಿದ್ದರೆ ಪೌರತ್ವ ಇಲ್ಲವಾಗುತ್ತದೆ. ಪೌರತ್ವ ಸಾಬೀತುಪಡಿಸಲು ತಿಂಗಳುಗಟ್ಟಲೆ ಅಲೆಯುವಂತಾಗುತ್ತದೆ. ಆ ಕಾರಣಕ್ಕಾಗಿಯೇ ದೇಶಾದ್ಯಂತ ಈ ಎರಡೂ ಕಾಯ್ದೆಗಳ ವಿರುದ್ಧ ಜನರು ಗಟ್ಟಿ ದನಿಯಲ್ಲಿ ವಿರೋಧ ವ್ಯಕ್ತಪಡಿಸುತ್ತಿರುವುದು. ಬಹುತೇಕರು ಮುಸ್ಲಿಮರಿಗೆ ಮಾತ್ರ ಇದು ಅನ್ವಯವಾಗುತ್ತದೆ ಎಂದು ನಂಬಿದ್ದಾರೆ ಮತ್ತು ತಿಳಿದುಕೊಂಡಿದ್ದಾರೆ. ಇದು ತಪ್ಪು ಗ್ರಹಿಕೆ. ನನ್ನ ಪೌರತ್ವವನ್ನು ಸಾಬೀತುಪಡಿಸಲು ಎಲ್ಲರಂತೆ ಸರದಿ ಸಾಲಿನಲ್ಲಿ ನಿಲ್ಲಲೇಬೇಕು.

ಅದೇ ಕಾರಣಕ್ಕೆ ರಾಜ್ಯಸಭೆಯಲ್ಲಿ ಪೌರತ್ವ ತಿದ್ದುಪಡಿ ಮಸೂದೆಯ ಪರ ಮತ ಚಲಾಯಿಸಿದ ಬಿಜೆಪಿ ಮಿತ್ರಪಕ್ಷಗಳೆಲ್ಲವೂ ಒಂದೊಂದೇ ಕಾಯ್ದೆಯಾದ ಮೇಲೆ ವಿರೋಧ ವ್ಯಕ್ತಪಡಿಸುತ್ತಿವೆ. ಈಗ ಬಂದಿರುವ ತಿಳುವಳಿಕೆ ಮತ್ತು ಎಚ್ಚರ ಮತ ಚಲಾಯಿಸುವ ಸಂದರ್ಭದಲ್ಲಿ ಇದ್ದಿದ್ದರೆ ಮಸೂದೆ ಅಂಗೀಕಾರವಾಗುತ್ತಲೇ ಇರಲಿಲ್ಲ. ಮಿತ್ರಪಕ್ಷಗಳ ಮುಖಂಡರು ತಮ್ಮ ಮೇಲಿನ ಹಗರಣಗಳು-ಆರೋಪಗಳಿಂದ ಸದ್ಯಕ್ಕೆ ಬಚಾವಾಗುವ ಸಲುವಾಗಿ ಆತುರಾತುರವಾಗಿ ಪೌರತ್ವ ತಿದ್ದುಪಡಿ ಮಸೂದೆಯ ಪರ ಮತ ಚಲಾಯಿಸುವಂತೆ ಸದಸ್ಯರ ಮೇಲೆ ಒತ್ತಡ ಹೇರಿದವು. ಊರು ಹಾಳಾದ ಮೇಲೆ ದಡ್ಡಿ ಬಾಗಿಲು ಹಾಕಿದರು ಎಂಬಂತೆ ಕಾಯ್ದೆಯಾದ ಕೂಗಿಕೊಂಡರೆ ಬಂದ ಫಲವೇನು ಅಲ್ಲವೇ?

ದೇಶದಲ್ಲಿ ಜಿಡಿಪಿ ಕುಸಿದಿದೆ. ಆರ್ಥಿಕ ಹಿಂಜರಿತವಿದೆ. ಉದ್ದಿಮೆಗಳು ಮುಚ್ಚಿಹೋಗಿವೆ. ಕಾರ್ಮಿಕರು ಬೀದಿಗೆ ಬಂದಿದ್ದಾರೆ. ಉದ್ಯೋಗಗಳು ಕಡಿತವಾಗಿವೆ. ಜನರ ಕೊಳ್ಳುವ ಶಕ್ತಿ ಕುಗ್ಗಿದೆ. ಉತ್ಪಾದನೆ ಕುಂಟಿತವಾಗಿದೆ. ನಿರುದ್ಯೋಗ ಸಮಸ್ಯೆ ದೇಶವನ್ನು ಬಾಧಿಸುತ್ತಿದೆ. ಗುಂಪುಹಲ್ಲೆ- ಹತ್ಯೆಗಳು, ಅತ್ಯಾಚಾರ-ಹತ್ಯೆ ಪ್ರಕರಣಗಳು ಹೆಚ್ಚುತ್ತಿವೆ. ಇಂತಹ ಸನ್ನಿವೇಶದಲ್ಲಿ ದೇಶವನ್ನು ಕಿತ್ತುತಿನ್ನುತ್ತಿರುವ ಸಮಸ್ಯೆಗಳ ನಿವಾರಣೆಗೆ ಶ್ರಮಿಸಬೇಕಾದ ಸರ್ಕಾರ ಅನಗತ್ಯ ಕಾಯ್ದೆಗಳನ್ನು ಜಾರಿಗೆ ತಂದು ಜನರ ನೆಮ್ಮದಿಗೆ ಭಂಗ ತರುವಂತಹ ಕಾರ್ಯ ಮಾಡುವುದು ಸರಿಯಾದ ಕ್ರಮವಲ್ಲ.

ಸಣ್ಣರಾಜ್ಯ ಅಸ್ಸಾಂನಲ್ಲೇ ರಾಷ್ಟ್ರೀಯ ಪೌರತ್ವ ನೋಂದಣಿ ಮಾಡಲು 10 ಸಾವಿರ ಕೋಟಿ ರೂಪಾಯಿ ವೆಚ್ಚ  ವೆಚ್ಚವಾಗಿದೆ ಎಂದು ವರದಿಗಳು ಹೇಳುತ್ತವೆ. ಇದು ನಿಜವೇ ಆದರೆ ದೊಡ್ಡ ರಾಜ್ಯಗಳಲ್ಲಿ ಇದಕ್ಕೆ ಎಷ್ಟು ಕೋಟಿಗಳು ಬೇಕಾಗಬಹುದು. ಒತ್ತೆ ಕೇಂದ್ರಗಳ ನಿರ್ಮಾಣಕ್ಕೆ ಹಣ ಎಷ್ಟು ಬೇಕು. ಅವರಿಗೆ ನಿತ್ಯವೂ ಊಟ ಹಾಕಲು ಬೇಕಾಗುವ ವೆಚ್ಚ ಎಷ್ಟು ಎಂದು ಅಂದಾಜಿಸಲು ಕೂಡ ಸಾಧ್ಯವಿಲ್ಲ. ಜನ ಹೇಗೋ ಕಷ್ಟವೋ ಸುಖವೋ ಅಂತು ಅವರೇ ಸ್ವಂತ ಬಲದಿಂದ ದುಡಿದು ತಿನ್ನುತ್ತಿದ್ದಾರೆ. ಅದಕ್ಕೂ ಕಲ್ಲು ಬೀಳುವುದಿಲ್ಲವೇ? ಸರ್ಕಾರ ಯೋಚಿಸಿ ಕಾಯ್ದೆಯನ್ನು ಹಿಂಪಡೆಯುವುದು ಒಳ್ಳೆಯದು.

(ಲೇಖಕರು ಪತ್ರಕರ್ತರು ಮತ್ತು ಸಾಮಾಜಿಕ ಕಾರ್ಯಕರ್ತರು. ಲೇಖನದಲ್ಲಿರುವ ಅಭಿಪ್ರಾಯಗಳು ವ್ಯಕ್ತಿಗತವಾದವು)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರೂರ್ ಕಾಲ್ತುಳಿತ : ಸಿಬಿಐ ಮುಂದೆ ವಿಚಾರಣೆಗೆ ಹಾಜರಾದ ನಟ ವಿಜಯ್

ಕರೂರ್ ಕಾಲ್ತುಳಿತ ಘಟನೆಗೆ ಸಂಬಂಧಪಟ್ಟಂತೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್ ಸೋಮವಾರ (ಜ.12) ದೆಹಲಿಯ ಕೇಂದ್ರ ತನಿಖಾ ದಳ (ಸಿಬಿಐ) ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ಚಾರ್ಟರ್ಡ್ ವಿಮಾನದಲ್ಲಿ...

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...