Homeದಲಿತ್ ಫೈಲ್ಸ್ಹರಿಯಾಣ| ಕಳ್ಳತನ ಆರೋಪದ ಮೇಲೆ 12 ವರ್ಷದ ದಲಿತ ಬಾಲಕನಿಗೆ ಚಿತ್ರಹಿಂಸೆ; ಕಟ್ಟಿಹಾಕಿ ದೌರ್ಜನ್ಯ

ಹರಿಯಾಣ| ಕಳ್ಳತನ ಆರೋಪದ ಮೇಲೆ 12 ವರ್ಷದ ದಲಿತ ಬಾಲಕನಿಗೆ ಚಿತ್ರಹಿಂಸೆ; ಕಟ್ಟಿಹಾಕಿ ದೌರ್ಜನ್ಯ

- Advertisement -
- Advertisement -

12 ವರ್ಷದ ದಲಿತ ಬಾಲಕನ ಮೇಲೆ ಕಳ್ಳತನದ ಶಂಕೆಯಿಂದ ಹಲವಾರು ಗಂಟೆಗಳ ಕಾಲ ಚಿತ್ರಹಿಂಸೆ ನೀಡಿ ಅಕ್ರಮ ಬಂಧನದಲ್ಲಿಟ್ಟ ಆರೋಪದ ಮೇಲೆ ಕುಟುಂಬವೊಂದರ 10 ಸದಸ್ಯರ ವಿರುದ್ಧ ಹರಿಯಾಣದ ಪಲ್ವಾಲ್‌ನಲ್ಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಆರೋಪಿಗಳ ವಿರುದ್ಧ, ಸ್ವಯಂಪ್ರೇರಣೆಯಿಂದ ನೋವುಂಟುಮಾಡುವುದು, ಅಕ್ರಮ ಬಂಧನ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ಇತರ ಅಪರಾಧಗಳ ಜೊತೆಗೆ ಆರೋಪ ಹೊರಿಸಲಾಗಿದೆ. ಇಲ್ಲಿಯವರೆಗೆ ಓರ್ವ ಶಂಕಿತನನ್ನು ಮಾತ್ರ ಬಂಧಿಸಲಾಗಿದೆ. ಆದರೆ ಮೂವರು ಪ್ರಮುಖ ಆರೋಪಿಗಳು ತಲೆಮರೆಸಿಕೊಂಡಿದ್ದಾರೆ.

ಅಪ್ರಾಪ್ತ ವಯಸ್ಕನನ್ನು ಹಿಡಿದಿಟ್ಟುಕೊಂಡಿದ್ದ ಗುಂಪು, ಅವನ ಕೈಕಾಲುಗಳನ್ನು ಕಟ್ಟಿ, ಪದೇ ಪದೇ ವಿದ್ಯುತ್ ಶಾಕ್‌ ನೀಡಿದೆ ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ. ತನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ಬಾಲಕ ತನಿಖಾಧಿಕಾರಿಗಳಿಗೆ ತಿಳಿಸಿದ್ದಾನೆ.

ಪೊಲೀಸರ ಪ್ರಕಾರ, ಡಿಸೆಂಬರ್ 10 ಮತ್ತು 11 ರ ಮಧ್ಯರಾತ್ರಿ ಈ ಘಟನೆ ನಡೆದಿದೆ. ಸಂತ್ರಸ್ತ ಬಾಲಕ, ತನ್ನ ವಿಧವೆ ತಾಯಿಯನ್ನು ಪೋಷಿಸಲು ಮದುವೆ ಮೆರವಣಿಗೆಗಳಲ್ಲಿ ದೀಪಗಳನ್ನು ಹೊರುವ ಕೆಲಸ ಮಾಡುತ್ತಿದ್ದ. ಕೆಲಸ ಮುಗಿಸಿ ಇಬ್ಬರು ಗೆಳೆಯರೊಂದಿಗೆ ಹೊಡಾಲ್‌ನಿಂದ ಬಂಚಾರಿ ಗ್ರಾಮಕ್ಕೆ ಹಿಂತಿರುಗುತ್ತಿದ್ದಾಗ, ರಾತ್ರಿ 11.30 ರ ಸುಮಾರಿಗೆ ಕುಡಿದ ಮತ್ತಿನಲ್ಲಿದ್ದ ನಿವಾಸಿಗಳು ಚಲಾಯಿಸುತ್ತಿದ್ದ ಕಾರು ಅವರನ್ನು ಬೆನ್ನಟ್ಟಲು ಪ್ರಾರಂಭಿಸಿತು.

ಪೊಲೀಸರಿಗೆ ನೀಡಿದ ಹೇಳಿಕೆಯಲ್ಲಿ, ತಪ್ಪಿಸಿಕೊಳ್ಳುವ ಪ್ರಯತ್ನದಲ್ಲಿ, ಬಾಲಕ ಮನೆಯ ಆವರಣಕ್ಕೆ ಹಾರಿದ್ದಾನೆ. ಆದರೆ ಉಳಿದ ಇಬ್ಬರು ಹಳ್ಳಿಯ ಕಡೆಗೆ ಓಡಿಹೋದರು ಎಂದು ಬಾಲಕ ಹೇಳಿದ್ದಾನೆ.

“ಅವನು ಕಳ್ಳನೆಂದು ಶಂಕಿಸಿದ ನಿವಾಸಿಗಳು, ಅಪ್ರಾಪ್ತ ವಯಸ್ಕನನ್ನು ಹಿಡಿದರು. ಅವನು ಬಿಟ್ಟುಬಿಡುವಂತೆ ಬೇಡಿಕೊಳ್ಳುತ್ತಲೇ ಇದ್ದಾಗ, ಗುಂಪು ಬಾಲಕನ ಗುರುತು ಕೇಳಿದ ನಂತರ ಅವನ ಮೇಲೆ ಹಲ್ಲೆ ನಡೆಸಿದರು. ಅವರು ಬಾಲಕನನ್ನು ಮನೆಯೊಳಗೆ ಕರೆದೊಯ್ದು, ಅವನ ಕೈಕಾಲುಗಳನ್ನು ಕಟ್ಟಿ, ಮೂರ್ಛೆ ಹೋದ ನಂತರವೂ ಗಂಟೆಗಟ್ಟಲೆ ವಿದ್ಯುತ್ ಶಾಕ್ ನೀಡಿದರು” ಎಂದು ಅಧಿಕಾರಿ ಹೇಳಿದರು.

ಗುಂಪು ನನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದೆ ಎಂದು ಬಲಿಪಶುವಿನ ಹೇಳಿಕೆಯನ್ನು ಉಲ್ಲೇಖಿಸಿ ಅಧಿಕಾರಿ ಹೇಳಿದರು.

ಅವರು ಹುಡುಗನನ್ನು ಬಂಧಿಸಿದ ಕೆಲವೇ ಗಂಟೆಗಳ ನಂತರ, ಅಂತಿಮವಾಗಿ ಪೊಲೀಸರಿಗೆ ಕರೆ ಮಾಡಿ ಬಲಿಪಶುವನ್ನು ವಶಕ್ಕೆ ಪಡೆದರು. 12 ವರ್ಷದ ಬಾಲಕ ಕಳ್ಳತನದ ಪ್ರಕರಣದಲ್ಲಿ ಶಂಕಿತನಾಗಿದ್ದರಿಂದ ಆ ಸಮಯದಲ್ಲಿ ಯಾರನ್ನೂ ಬಂಧಿಸಲಾಗಿಲ್ಲ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಹಲ್ಲೆಯ ಪರಿಣಾಮವಾಗಿ ಬಲಿಪಶುವಿನ ಎದೆ ಮತ್ತು ಹೊಟ್ಟೆಯ ಮೇಲೆ ಕನಿಷ್ಠ 16 ಸುಟ್ಟ ಗಾಯಗಳಾಗಿವೆ. ಕರೆಂಟ್ ವೈರ್‌ಗಳನ್ನು ಮುಟ್ಟಿದ್ದರಿಂದ ಅವನ ಎದೆ ಮತ್ತು ಹೊಟ್ಟೆಯ ಮೇಲೆ ಕನಿಷ್ಠ 16 ಸುಟ್ಟ ಗಾಯಗಳಾಗಿವೆ ಎಂದು ಅಪರಾಧ ವಿಭಾಗದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ವಕೀಲರು ಮತ್ತು ಸಾಮಾಜಿಕ ಕಾರ್ಯಕರ್ತರು ಈ ವಿಷಯದ ಕುರಿತು ಧ್ವನಿ ಎತ್ತಿದ ನಂತರ, ಡಿಸೆಂಬರ್ 13 ರಂದು, ಪೊಲೀಸರು ಹತ್ತು ಜನರ ವಿರುದ್ಧ ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಸೆಕ್ಷನ್‌ಗಳು 115 (ಸ್ವಯಂಪ್ರೇರಿತವಾಗಿ ನೋವುಂಟುಮಾಡುವುದು), 127(2) (ಅಕ್ರಮ ಬಂಧನ), 190 (ಕಾನೂನುಬಾಹಿರ ಸಭೆ), 191(2) (ಗಲಭೆ) ಮತ್ತು 351(3) (ಸಾವು ಅಥವಾ ಗಂಭೀರ ಗಾಯವನ್ನುಂಟುಮಾಡುವ ಬೆದರಿಕೆಯಿಂದ ಕ್ರಿಮಿನಲ್ ಬೆದರಿಕೆ) ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ ಕಾಯ್ದೆ) ಮತ್ತು ಬಾಲ ನ್ಯಾಯ (ಮಕ್ಕಳ ಆರೈಕೆ ಮತ್ತು ರಕ್ಷಣೆ) ಕಾಯ್ದೆಯಡಿಯಲ್ಲಿ ಮುಂಡ್ಕಟಿ ಪೊಲೀಸ್ ಠಾಣೆಯಲ್ಲಿ ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ದಾಖಲಿಸಿದ್ದಾರೆ.

ಡಿಸೆಂಬರ್ 11 ರಂದು ಮುಂಡ್ಕಟಿ ಪೊಲೀಸ್ ಠಾಣೆಯಿಂದ ತನಗೆ ಕರೆ ಬಂದಿತ್ತು ಎಂದು ಸಂತ್ರಸ್ತೆಯ ತಾಯಿ ಎಫ್‌ಐಆರ್‌ನಲ್ಲಿ ಆರೋಪಿಸಿದ್ದಾರೆ. “ನಾನು ಅಲ್ಲಿಗೆ ತಲುಪಿದಾಗ ಮಗನನ್ನು ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಕಂಡೆ. ಅವನಿಗೆ ನಡೆಯಲು ಸಹ ಸಾಧ್ಯವಾಗಲಿಲ್ಲ” ಎಂದು ಅವರು ಎಫ್‌ಐಆರ್‌ನಲ್ಲಿ ಆರೋಪಿಸಿದ್ದಾರೆ.

“ನಾನು ಮಗನನ್ನು ಹೊಡಾಲ್‌ನ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದೆ. ಆದರೆ, ಅವನ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ಬೇರೆ ಆಸ್ಪತ್ರೆಗೆ ಕಳುಹಿಸಿದರು. ನಾನು ಅವನನ್ನು ಪಲ್ವಾಲ್‌ನ ಖಾಸಗಿ ಆಸ್ಪತ್ರೆಗೆ ಕರೆದೊಯ್ದೆ, ಅಲ್ಲಿಂದ ಅವನನ್ನು ಫರಿದಾಬಾದ್‌ಗೆ ಸ್ಥಳಾಂತರಿಸಲಾಯಿತು” ಎಂದು ಅವರು ಹೇಳಿದರು.

ಡಿಎಸ್‌ಪಿ (ಹೊಡಾಲ್) ಸುರೇಂದರ್ ಕುಮಾರ್ ಮಾತನಾಡಿ, ಖಂಬಿ ಗ್ರಾಮದ ರಾಮ್ ಕುಮಾರ್ ಎಂದು ಗುರುತಿಸಲಾದ ಓರ್ವ ಆರೋಪಿಯನ್ನು ಮಾತ್ರ ಇಲ್ಲಿಯವರೆಗೆ ಬಂಧಿಸಲಾಗಿದೆ (ಡಿಸೆಂಬರ್ 20 ರಂದು) ಎಂದು ಹೇಳಿದರು. “ಮೂವರು ಪ್ರಮುಖ ಆರೋಪಿಗಳು ಬಂಚರಿಯಿಂದ ಓಡಿಹೋದ ನಂತರ ಈತ ಅವರಿಗೆ ಆಶ್ರಯ ನೀಡಿದ್ದನು” ಎಂದು ಅವರು ಹೇಳಿದರು.

ಡಿಸೆಂಬರ್ 22 ರಂದು ಮೂವರು ಪ್ರಮುಖ ಶಂಕಿತರು ನಿರೀಕ್ಷಣಾ ಜಾಮೀನು ಅರ್ಜಿಗಳನ್ನು ಸಲ್ಲಿಸಿದರು. ಅಪ್ರಾಪ್ತ ವಯಸ್ಕನಿಗೆ ಆಗಿರುವ ಗಾಯಗಳ ಬಗ್ಗೆ ಯಾವುದೇ ವೈದ್ಯಕೀಯ ವರದಿ ಲಭ್ಯವಿಲ್ಲದ ಕಾರಣ, ಬುಧವಾರ ಪಲ್ವಾಲ್‌ನ ಸೆಷನ್ಸ್ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆಯನ್ನು ಮುಂದೂಡಲಾಯಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...

ಹನೂರು ಶೂಟೌಟ್ ಪ್ರಕರಣ: ಮೂವರು ಅರಣ್ಯ ಸಿಬ್ಬಂದಿಗೆ ನಿರೀಕ್ಷಣಾ ಜಾಮೀನು.!

ಕಾವೇರಿ ವನ್ಯಜೀವಿ ಅಭಯಾರಣ್ಯದ ಹನೂರು ವ್ಯಾಪ್ತಿಯಲ್ಲಿ ಮೂವರು ಮೃತಪಟ್ಟಿದ್ದ ವಿವಾದಾತ್ಮಕ ಗುಂಡಿನ ದಾಳಿ ಪ್ರಕರಣಕ್ಕೆ ಇದೀಗ ಕಾನೂನು ತಿರುವು ಸಿಕ್ಕಿದೆ. ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಮೂವರು ಅರಣ್ಯ ಸಿಬ್ಬಂದಿಗೆ ಕೊಳ್ಳೇಗಾಲದ ಮೊದಲ ಹೆಚ್ಚುವರಿ...

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...