Homeಮುಖಪುಟದೆಹಲಿ ವಾಯು ಮಾಲಿನ್ಯದಿಂದ ಸಾಂತಾ ಕ್ಲಾಸ್ ಮೂರ್ಛೆ ಹೋದ ವಿಡಿಯೋ ಹಂಚಿಕೆ : ಎಎಪಿಯ ಸೌರಭ್...

ದೆಹಲಿ ವಾಯು ಮಾಲಿನ್ಯದಿಂದ ಸಾಂತಾ ಕ್ಲಾಸ್ ಮೂರ್ಛೆ ಹೋದ ವಿಡಿಯೋ ಹಂಚಿಕೆ : ಎಎಪಿಯ ಸೌರಭ್ ಭಾರದ್ವಾಜ್ ಸೇರಿ ಮೂವರ ವಿರುದ್ಧ ಪ್ರಕರಣ ದಾಖಲು

- Advertisement -
- Advertisement -

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಿಪರೀತ ವಾಯುಮಾಲಿನ್ಯದಿಂದ ಸಾಂತಾಕ್ಲಾಸ್ ವೇಷ ಧರಿಸಿದ ಪುರುಷರು ಮೂರ್ಛೆ ಹೋಗುತ್ತಿರುವುದನ್ನು ತೋರಿಸುವ ವಿಡಿಯೋ ಸ್ಕಿಟ್ (ಅಭಿನಯ) ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕರಾದ ಸೌರಭ್ ಭಾರದ್ವಾಜ್, ಸಂಜೀವ್ ಝಾ ಮತ್ತು ಆದಿಲ್ ಅಹ್ಮದ್ ಖಾನ್ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಗುರುವಾರ (ಡಿ.25) ಎಎನ್‌ಐ ವರದಿ ಮಾಡಿದೆ.

ಕ್ರಿಸ್‌ಮಸ್ ಆಚರಣೆಗೆ ಮುನ್ನ ಡಿಸೆಂಬರ್ 17 ಮತ್ತು 18ರಂದು ಎಎಪಿ ನಾಯಕರು ವಿಡಿಯೋ ಪೋಸ್ಟ್ ಮಾಡಿದ್ದರು. ಈ ವಿಡಿಯೋವನ್ನು ದೆಹಲಿಯ ಕನ್ನೌಟ್ ಪ್ಲೇಸ್ ಪ್ರದೇಶದಲ್ಲಿ ಚಿತ್ರೀಕರಿಸಲಾಗಿತ್ತು. “ದೆಹಲಿ ಮಾಲಿನ್ಯದಿಂದ ಸಾಂತಾಕ್ಲಾಸ್ ಮೂರ್ಛೆ ಹೋದರು” ಎಂಬ ಶೀರ್ಷಿಕೆಯನ್ನು ವಿಡಿಯೋಗೆ ಕೊಡಲಾಗಿತ್ತು.

ದೆಹಲಿಯ ವಾಯುಮಾಲಿನ್ಯದಿಂದ ಜನರು ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ. ಆದರೆ, ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಸರ್ಕಾರ ವಿಫಲವಾಗಿದ ಎಂದು ತೋರಿಸುವ ಸಲುವಾಗಿ ಮತ್ತು ಸರ್ಕಾರದ ವಿರುದ್ದ ಪ್ರತಿಭಟನೆ ವ್ಯಕ್ತಪಡಿಸಿ ಎಎಪಿ ನಾಯಕರು ಈ ಸ್ಕಿಟ್ ಮಾಡಿದ್ದರು.

ಸೌರಭ್ ಭಾರದ್ವಾಜ್ ಹಂಚಿಕೊಂಡಿರುವ ವಿಡಿಯೋದಲ್ಲಿ, ದೆಹಲಿಯ ವಿಪರೀತ ವಾಯುಮಾಲಿನ್ಯದಿಂದ ಸಾಂತಾಕ್ಲಾಸ್ ವೇಷ ಧರಿಸಿದ ಇಬ್ಬರು ವ್ಯಕ್ತಿಗಳು ಕುಸಿದು ಬೀಳುವುದು, ಅವರನ್ನು ಭಾರಧ್ವಾಜ್ ಸೇರಿದಂತೆ ಸುತ್ತಲು ನೆರೆದವರು ಮೇಲೆತ್ತುವುದು ಇದೆ. ವಿಡಿಯೋದ ಕೊನೆಯಲ್ಲಿ “ದೆಹಲಿಯ ವಿಪರೀತ ವಾಯುಮಾಲಿನ್ಯದಿಂದ ಕ್ರಿಸ್‌ಮಸ್‌ ಮುನ್ನ ಭಾರತಕ್ಕೆ ಬಂದ, ಭಾರತದ ರಾಜಧಾನಿಗೆ ಬಂದ ಸಾಂತಾಕ್ಲಾಸ್ ಮೂರ್ಛೆ ಹೋಗಿದ್ದಾರೆ ಎಂದು ಭಾರದ್ವಾಜ್ ಹೇಳಿದ್ದಾರೆ.

ಮುಂದುವರಿದು, “ವಾಯುಗುಣಮಟ್ಟ (ಎಕ್ಯೂಐ) ಸಂಖ್ಯೆಗಳಲ್ಲಿ ಮಾತ್ರ ಕಡಿಮೆಯಾಗಿದೆ, ನಿಜವಾಗಿ ಕಡಿಮೆಯಾಗಿಲ್ಲ. ಹಾಗಾಗಿ, ವಿಫಲ ಮುಖ್ಯಮಂತ್ರಿ ರೇಖಾಗುಪ್ತ ರಾಜೀನಾಮೆ ಕೊಡಬೇಕು” ಎಂದು ಅವರು ಒತ್ತಾಯಿಸಿದ್ದಾರೆ.

ರಾಜಕೀಯ ಸ್ಕಿಟ್ ಮಾಡುವಾಗ ಕ್ರೈಸ್ತ ಧರ್ಮೀಯರು ಪವಿತ್ರವಾಗಿ ಪರಿಗಣಿಸುವ ಸಾಂತಾಕ್ಲಾಸ್ ವಸ್ತ್ರ ಧರಿಸಿ ಅವರ ಭಾವನೆಗಳಿಗೆ ಧಕ್ಕೆ ಉಂಟು ಮಾಡಲಾಗಿದೆ. ಕ್ರೈಸ್ತರ ಸಂಸ್ಕೃತಿಯನ್ನು ಅಪಹಾಸ್ಯ ಮಾಡಲಾಗಿದೆ ಎಂದು ಆರೋಪಿಸಿ ಎಎಪಿ ನಾಯಕರ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಎಎನ್‌ಐ ವರದಿ ಉಲ್ಲೇಖಿಸಿದೆ.

ಎಎಪಿ ನಾಯಕರು ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಉದ್ದೇಶದಿಂದ ದುರುದ್ದೇಶಪೂರ್ವಕವಾಗಿ ಕೃತ್ಯಗಳನ್ನು ಎಸಗಿದ್ದಾರೆ ಎಂದು ಆರೋಪಿಸಿ ವಕೀಲೆ ಖುಷ್ಬೂ ಜಾರ್ಜ್ ನೀಡಿದ ದೂರಿನ ಮೇರೆಗೆ ಎಫ್‌ಐಆರ್ ದಾಖಲಿಸಲಾಗಿದೆ ಎಂದು ದಿ ಟ್ರಿಬ್ಯೂನ್ ವರದಿ ಮಾಡಿದೆ.

ಈ ಕುರಿತು ಪ್ರತಿಕ್ರಿಯಿಸಿದ ಭಾರದ್ವಾಜ್, “ದೂರುದಾರರು ಬಿಜೆಪಿ ನಾಯಕರೊಂದಿಗೆ ಇರುವ ಫೋಟೋಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ” ಎಂದಿದ್ದಾರೆ. ದೆಹಲಿ ಮುಖ್ಯಮಂತ್ರಿ ಮತ್ತು ಬಿಜೆಪಿ ಸಂಸದ ಮನೋಜ್ ತಿವಾರಿ ಅವರೊಂದಿಗೆ ದೂರು ನೀಡಿದ ಜಾರ್ಜ್ ಇರುವ ಫೋಟೋಗಳನ್ನು ಅವರು ಹಂಚಿಕೊಂಡಿದ್ದಾರೆ. “ನಾವು ಈ ಜನರಿಗೆ ಉಚಿತ ಪ್ರಚಾರ ನೀಡಬಾರದು” ಎಂದು ಭಾರದ್ವಾಜ್ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...