Homeಕರ್ನಾಟಕಬಳ್ಳಾರಿ | ಪ್ರಭಾವ, ಗೂಂಡಾಗಿರಿ ಮೂಲಕ ಬಡ ಜನರ ಭೂ ಕಬಳಿಕೆ : ಬುಡಾ ಮಾಜಿ...

ಬಳ್ಳಾರಿ | ಪ್ರಭಾವ, ಗೂಂಡಾಗಿರಿ ಮೂಲಕ ಬಡ ಜನರ ಭೂ ಕಬಳಿಕೆ : ಬುಡಾ ಮಾಜಿ ಅಧ್ಯಕ್ಷನ ವಿರುದ್ಧ ಗಂಭೀರ ಆರೋಪ

- Advertisement -
- Advertisement -

ಬಳ್ಳಾರಿ ನಗರಕ್ಕೆ ಹೊಂದಿಕೊಂಡಿರುವ ಕೌಲ್‌ ಬಜಾರಿನ ದಾನಪ್ಪಬೀದಿ ಮತ್ತು ಬಂಡಿಹಟ್ಟಿ ಏರಿಯಾಗಳ ಬಡ ಜನರಿಗೆ ಇನಾಂ ರದ್ದತಿಯ ಬಳಿಕ ನೀಡಲಾಗಿದ್ದ ಭೂಮಿಯನ್ನು ಬಳ್ಳಾರಿ ನಗರಾಭಿವೃದ್ದಿ ಪ್ರಾಧಿಕಾರ (ಬುಡಾ) ದ ಮಾಜಿ ಅಧ್ಯಕ್ಷ ಎನ್‌. ಪ್ರತಾಪ್‌ ರೆಡ್ಡಿ ಪ್ರಭಾವ ಬಳಸಿ, ಬೆದರಿಕೆ ಹಾಕಿ ಕಿತ್ತುಕೊಂಡಿರುವ ಆರೋಪ ಕೇಳಿ ಬಂದಿದೆ.

ಶುಕ್ರವಾರ (ಡಿ.26) ಬೆಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಠಿ ನಡೆಸಿದ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ, ಪ್ರತಾಪ್ ರೆಡ್ಡಿ ವಿರುದ್ದ ಗಂಭೀರ ಆರೋಪಗಳನ್ನು ಮಾಡಿದೆ.

1970ರ ದಶಕದಲ್ಲಿ ಇನಾಂ ರದ್ದತಿಯ ಬಳಿಕ ಸರ್ವೆ ನಂಬರ್ 715ಎ ಕೌಲ್‌ ಬಜಾರಿನ 1080 ಎಕರೆ ಇನಾಂ ಭೂಮಿಯಲ್ಲಿ 134 ಎಕರೆ ಭೂಮಿಯನ್ನು, 7 ಮಾದಿಗ, 4 ಕುರುಬ, 5 ಮಡಿವಾಳ ಹಾಗೂ 1 ಈಡಿಗ ಸೇರಿ 17 ಕುಟುಂಬಗಳಿಗೆ ಆಗಿನ ಭೂ ನ್ಯಾಯ ಮಂಡಳಿ ಹಂಚಿಕೆ ಮಾಡಿತ್ತು. ಈ ಎಲ್ಲಾ ಕುಟುಂಬಗಳಿಗೆ ಮಂಡಳಿ ಫಾರಂ ನಂಬರ್ 10 ನೀಡಿತ್ತು, ಅಲ್ಲದೆ ಫಲಾನುಭವಿಗಳ ಹೆಸರಿಗೆ ಹಕ್ಕು ಬದಲಾಯಿಸಿತ್ತು. ಅಂದಿನಿಂದ ಈ ಎಲ್ಲಾ ಕುಟುಂಬಗಳು ತಮಗೆ ದೊರೆತ ಭೂಮಿಯನ್ನು ನಂಬಿ ಬದುಕುತ್ತಿದ್ದವು ಎಂದು ಸಮಿತಿ ಹೇಳಿದೆ.

ಮುಂದುವರಿದು, 2006ರಿಂದ ಪ್ರತಾಪ್‌ ರೆಡ್ಡಿಯ ಕಣ್ಣು ಈ ಭೂಮಿಯ ಮೇಲೆ ಬಿದ್ದಿದೆ. ಆ ಬಳಿಕ ಅವರು ಗೂಂಡಾಗಿರಿ ಮಾಡುತ್ತಾ, ಬೆದರಿಕೆ ಹಾಕುತ್ತಾ ಬಂದಿದ್ದಾರೆ. ಇವರ ಕಿರುಕುಳಕ್ಕೆ ಬಡ ಜನರ ಬದುಕು ದಿವಾಳಿಯಾಗುತ್ತಾ ಸಾಗಿದೆ. ಭೂ ಒಡೆಯರಾಗಿದ್ದ ಮಾದಿಗ ಸಮುದಾಯದ ಕುಟುಂಬಗಳು ಬಳ್ಳಾರಿ ಮಹಾನಗರ ಪಾಲಿಕೆಯಲ್ಲಿ ಕಸ ಗುಡಿಸುವ ಪೌರಕಾರ್ಮಿರಾಗಿ ಜೀವನ ಸಾಗಿಸುವಂತಾಗಿದೆ. ಮಡಿವಾಳರು ಜೀವ ಭಯದಿಂದ ಊರು ಬಿಟ್ಟಿದ್ದರೆ, ಈ ಭೂಮಿಯ ಸಹವಾಸವೇ ಬೇಡವೆಂದು ಜೀವ ಉಳಿಸಿಕೊಂಡು ಬದುಕುವ ಪರಿಸ್ಥಿತಿ ಕೆಲವರದ್ದಾಗಿದೆ. ಇನ್ನೂ ಕೆಲವರು ಜೀವ ಹೋದರೂ ಪರವಾಗಿಲ್ಲ, ನ್ಯಾಯ ಪಡೆದೇ ತೀರುತ್ತೇವೆಂದು ಕರ್ನಾಟಕ ಜನಶಕ್ತಿ ಮತ್ತು ಕರ್ನಾಟಕ ಮಾದಿಗರ ರಕ್ಷಣಾ ವೇದಿಕೆ ನೇತೃತ್ವದಲ್ಲಿ ಬೀದಿಗಿಳಿದು ಹಲವಾರು ಬಾರಿ ಹೋರಾಟ ನಡೆಸಿದ್ದಾರೆ ಎಂದು ಸಮಿತಿ ವಿವರಿಸಿದೆ.

ಇನಾಂ ರದ್ದತಿಗೂ ಮೊದಲು ಈ ಭೂಮಿ ದಿವಂಗತ ರಾಜರಾಜೇಶ್ವರಿಶಾಸ್ತ್ರಿ ಮತ್ತು ಅವರ ಮಗ ಬ್ರಹ್ಮಶಾಸ್ತ್ರಿ ಅವರಿಗೆ ಸೇರಿತ್ತು. ಇದೇ ಭೂಮಿಯಲ್ಲಿ ಈಗಿನವರ ಎರಡು-ಮೂರು ತಲೆಮಾರುಗಳು ದುಡಿಯುತ್ತಾ ಬಂದಿದೆ. ಭೂಮಿಯ ಮಾಲೀಕರಾಗಿದ್ದ ಬ್ರಹ್ಮಶಾಸ್ತ್ರಿಯೇ ಈ ಭೂಮಿಯಲ್ಲಿ ದುಡಿಯುತ್ತಿದ್ದವರ ಕೂಲಿ, ಕೆಲಸ ಗೇಣಿ ಮಾಡುತ್ತಿದ್ದವರ ವಿವರಗಳನ್ನು ಸರ್ಕಾರಕ್ಕೆ ಕೊಟ್ಟಿದ್ದಾರೆ. ಅದರ ಪ್ರಕಾರವೇ ನ್ಯಾಯ ಮಂಡಳಿ 134 ಎಕರೆ ಸೇರಿದಂತೆ ನೂರಾರು ಎಕರೆ ಭೂಮಿಯನ್ನು ಹಂಚಿದೆ. ಫಾರಂ ನಂಬರ್ 10, ಮ್ಯೂಟೇಷನ್, ಪಹಣಿ ಎಲ್ಲವೂ ವರ್ಗಾವಣೆಯಾಗಿ ಇಂದಿನವರೆಗೂ ಕಂದಾಯ ಕಟ್ಟುತ್ತಾ ಬರುತ್ತಿದ್ದಾರೆ. ಭೂಮಿಯ ಮೇಲೆ ಬ್ಯಾಂಕ್ ಸಾಲ, ಬೆಳೆ ಸಾಲ ತೆಗೆದುಕೊಳ್ಳುತ್ತಿದ್ದಾರೆ. ಅಲ್ಲದೆ, ಕುಟುಂಬಗಳು ಬೆಳದಂತೆ ಭೂಮಿಯು ವಿಭಾಗಗಳಾಗಿ ಹಂಚಿಹೋಗಿವೆ. ಜನರು ಭಾವಿ, ಬೋರ್‌ವೆಲ್ ಕೊರೆದು, ವಿದ್ಯುತ್ ಸಂಪರ್ಕ ಪಡೆದು ತರಕಾರಿ ಹಾಗೂ ಇನ್ನಿತರೆ ಬೆಳೆಗಳನ್ನು ಬೆಳೆಯುತ್ತಾ ಬಂದಿದ್ದಾರೆ. ಗಮನಾರ್ಹವಾಗಿ, ಈ ಭೂಮಿಯಲ್ಲಿ ಜೀವ ಸವೆಸಿದ್ದ ಅವರ ತಾತ-ಮುತ್ತಾಂದಿರ ಸಮಾಧಿಗಳು ಕೂಡ ಇದೇ ಎಂದು ಸಮಿತಿ ತಿಳಿಸಿದೆ.

ಮಡಿವಾಳರು ಈ ಜಮೀನಿನಲ್ಲಿ ಅವರ ಕುಲ ಕಸುಬು ಮಾಡಿಕೊಂಡು ಬಂದಿರುವುದಕ್ಕೆ ಅವರವರ ಹೊಲಗಳಲ್ಲಿ ಕಟ್ಟಿರುವ ನೀರಿನ ಕಟ್ಟೆಗಳು, ಚಿಕ್ಕ ಚಿಕ್ಕ ಬಾವಿಗಳು ಪುರಾವೆಯಾಗಿವೆ. ಈಗ 2006ರಿಂದ ಪ್ರತಾಪ್ ರೆಡ್ಡಿ ಆ ಭೂಮಿ ನನ್ನದು ಎಂದು ಹೇಳುತ್ತಿದ್ದಾರೆ ಎಂದಿದೆ.

ಪ್ರತಾಪ್‌ ರೆಡ್ಡಿ ಮತ್ತು ಅವರ ಹೆಂಡತಿ ಶೈಲಜಾ ರೆಡ್ಡಿ ಹೆಸರಿಗೆ ಸರ್ವೆ ನಂಬರ್ 715ಎನಲ್ಲಿ 134 ಎಕರೆ ಭೂಮಿಯನ್ನು 2005-06ರಲ್ಲಿ ಟಿಎಸ್‌ ನಂಬರ್ (ಟೌನ್‌ ಸರ್ವೆ) ನೋಂದಣಿ ಮಾಡಿಕೊಂಡಿದ್ದಾರೆ. ಇದಾದ ನಂತರ ಸರ್ವೆ ನಂಬರ್ 715ಎನಲ್ಲಿ ಉಳುಮೆ ಮಾಡುತ್ತಿದ್ದ ಕುಟುಂಬಗಳನ್ನು ಒಕ್ಕಲೇಳುವಂತೆ ಮಾಡಿದ್ದಾರೆ. ಈ ವ್ಯಾಜ್ಯ ಪೊಲೀಸ್, ಕಂದಾಯ ಇಲಾಖೆ ಮತ್ತು ನ್ಯಾಯಾಲಯದ ಮೆಟ್ಟಿಲೇರಿದೆ. ಕೆಲ ಪೊಲೀಸ್ ಅಧಿಕಾರಿಗಳು ಪ್ರತಾಪ್ ರೆಡ್ಡಿಪರ ವಕಾಲತ್ ವಹಿಸಿ ಕೋರ್ಟ್ ವ್ಯಾಜ್ಯ ಇತ್ಯರ್ಥಪಡಿಸುವವರೆಗೆ ಯಾರೂ ಜಮೀನಿಗೆ ಹೋಗದಂತೆ ಫರ್ಮಾನು ಹೊರಡಿಸಿದ್ದಾರೆ. ಇದರಿಂದ ಭೂಮಿ ಉಳುಮೆ ಮಾಡದೆ ಬೀಳು ಬೀಳುವಂತಾಗಿದೆ. ಪ್ರತಾಪ್ ರೆಡ್ಡಿ ವಿರುದ್ದ ಧ್ವನಿ ಎತ್ತಿದ್ದಕ್ಕಾಗಿ ಫಲಾನುಭವಿಗಳ ಮೇಲೆ ಸುಳ್ಳು ಕೇಸ್‌ ದಾಖಲಿಸಿ ಕೋರ್ಟ್-ಕಚೇರಿ ಅಲೆಯುವಂತೆ ಮಾಡಲಾಗಿದೆ ಎಂದು ಸಮಿತಿ ಹೇಳಿದೆ.

ಪ್ರತಾಪ್‌ ರೆಡ್ಡಿ ತನ್ನ ಹೆಸರಿಗೆ 61.23 ಎಕರೆ ಭೂಮಿಗೆ 13,50,000 ರೂಪಾಯಿಗಳನ್ನು ಕೊಟ್ಟಿದ್ದರೆ, ಅವರ ಹೆಂಡತಿ ಶೈಲಜಾರೆಡ್ಡಿ 73 ಎಕರೆ ಭೂಮಿಗೆ 13,50,000 ರೂಪಾಯಿಗಳನ್ನು ಕೊಟ್ಟು ದಿನಾಂಕ : 17-10-2005 ನೋಂದಣಿ ಮಾಡಿಸಿಕೊಂಡಿದ್ದಾರೆಂದು ದಾಖಲೆಗಳು ಹೇಳುತ್ತಿವೆ. ಅಂದರೆ ಎಕರೆಗೆ ಕೇವಲ 20 ಸಾವಿರ ರೂಪಾಯಿ ಕೊಟ್ಟಂತಾಗಿದೆ. 134 ಎಕರೆ ಗಂಡ ಹೆಂಡತಿ ಹೆಸರಲ್ಲಿ ಒಂದೇ ದಿನ ನೋಂದಣಿ ಆಗಿರುವ ಈ ಭೂಮಿ ಬಳ್ಳಾರಿ ನಗರದಲ್ಲಿ ಇಷ್ಟು ಕಡಿಮೆ ದರದಲ್ಲಿ, ಅದೂ ಅವರ ಪ್ರಕಾರವೇ ಟೌನ್ ವ್ಯಾಪ್ತಿಗೊಳಪಟ್ಟ ಭೂಮಿ ಸಿಗುತ್ತದೆಂದರೆ ನಂಬಲು ಸಾಧ್ಯವೇ? ಎಂದು ಸಮಿತಿ ಪ್ರಶ್ನಿಸಿದೆ.

ಈ ರೀತಿಯ ದೊಡ್ಡ ಮಟ್ಟದ ಭೂಮಿಯ ನೋಂದಣಿ ಮಾಡಿರುವುದು ಕೂಡ ಕಾನೂನಿಗೆ ವಿರುದ್ಧವಾಗಿದೆ.
ಭೂಮಿಯು ಮೂಲತಃ ದಿವಂಗತ ರಾಜರಾಜೇಶ್ವರಿಶಾಸ್ತ್ರಿಯವರಿಗೆ ಸೇರಿದ್ದು ಇವರಿಗೆ ಬ್ರಹ್ಮಶಾಸ್ತ್ರಿ ಮತ್ತು ತಿಪ್ಪಾಶಾಸ್ತ್ರಿ ಇಬ್ಬರು ಮಕ್ಕಳು, ಬೃಹ್ಮಶಾಸ್ತ್ರಿಗೆ ಮಕ್ಕಳಿಲ್ಲ. ತಿಪ್ಪಶಾಸ್ತ್ರಿಗೆ 3 ಜನ ಮಕ್ಕಳೆಂದರೆ ವೆಂಕಟರಮಣಶಾಸ್ತ್ರಿ, ಕೃಷ್ಣಶಾಸ್ತ್ರಿ, ಮತ್ತು ದಕ್ಷಿಣಾಮೂರ್ತಿ, ಉಳಿದ ಭೂಮಿಯೆಲ್ಲವೂ ದಿವಂಗತವಾಗಿರುವ ವೆಂಕಟರಮಣಶಾಸ್ತ್ರಿಯ ಹೆಸರಿನಲ್ಲಿದೆ. ಕೃಷ್ಣಶಾಸ್ತ್ರಿ ಹೆಂಡತಿ ಲಲಿತಮ್ಮ ಮತ್ತು ಇವರ ಮಕ್ಕಳಿಂದ ಪ್ರತಾಪ್‌ರೆಡ್ಡಿಯವರು 27 ಲಕ್ಷ ಹಣ ಕೊಟ್ಟು ಭೂಮಿಯನ್ನು ಖರೀದಿಸಿದ್ದಾರೆ ಎಂದು ಹೇಳಲಾಗುತ್ತಿದೆ. ವಾಸ್ತವದಲ್ಲಿ ಪ್ರತಾಪ್‌ರೆಡ್ಡಿಗೆ ಮಾರಾಟ ಮಾಡಿರುವ ವ್ಯಕ್ತಿಗಳ ಹೆಸರಿನಲ್ಲಿ ಭೂಮಿಯ ಹಕ್ಕು ಬದಲಾಗಿರುವ ಯಾವುದೇ ದಾಖಲೆಗಳಿಲ್ಲ. ಇದಕ್ಕೆ ಸಂಬಂಧಿಸಿದ ಲಿಂಕ್ ದಾಖಲೆಗಳನ್ನು ಮಾಹಿತಿ ಹಕ್ಕು ಕಾಯ್ದೆ ಪ್ರಕಾರ ಕೇಳಿದರೆ, ಲಿಂಕ್ ದಾಖಲೆ ಪತ್ರಗಳನ್ನು ಸುಟ್ಟು ಹಾಕಲಾಗಿದೆ ಎಂದು ಲಿಖಿತವಾದ ಉತ್ತರವನ್ನು ಅಧಿಕಾರಿಗಳು ನೀಡಿದ್ದಾರೆ. ದಾಖಲೆಗಳನ್ನು ಸುಟ್ಟು ಹಾಕಲಾಗಿದೆ ಎಂದರೆ ವಾಸ್ತವವನ್ನು ಮರೆಮಾಚಿದಂತೆ ಆಗುವುದಿಲ್ಲವೇ? ಎಂದು ಸಮಿತಿ ಕೇಳಿದೆ. ಇದರ ಹಿಂದೆ ಭ್ರಷ್ಟ ಅಧಿಕಾರಿಗಳ ಕೈವಾಡ ಇರುವ ಇದೆ ಎನ್ನುವುದರಲ್ಲಿ ಸಂಶಯವಿಲ್ಲವೆಂದು ಹೇಳಬಹುದಾಗಿದೆ ಎಂದಿದೆ.

ಸರ್ಕಾರವೇ ಕೊಟ್ಟ ಎಲ್ಲಾ ದಾಖಲೆ ಪತ್ರಗಳು ಇದ್ದರೂ, ಜಿಲ್ಲಾಡಳಿತ ಬಡವರ ಪರವಾಗಿ ನಿಂತು ಗೊಂದಲವನ್ನು ಬಗೆ ಹರಿಸಬಹುದಾದ ವಿಷಯವಾಗಿದ್ದರೂ, ಕೆಲ ಅಧಿಕಾರಿಗಳು ಮಾಡಿದ ತಪ್ಪು ಮತ್ತು ಬೇಜವಾಬ್ದಾರಿತನಗಳು ವಿಷಯ ಕಗ್ಗಂಟಾಗಲು ಕಾರಣವಾಗಿದೆ. ಇದಕ್ಕೆ ಎನ್.ಪ್ರತಾಪ್‌ರೆಡ್ಡಿಯವರ ಅಧಿಕಾರ-ಹಣ ಕೆಲಸ ಮಾಡಿದೆ ಎಂದು ಯಾವುದೇ ಸಂಶಯವಿಲ್ಲದೇ ಹೇಳಬಹುದು ಎಂದು ಸಮಿತಿ ತಿಳಿಸಿದೆ.

ಭೂ ಫಲಾನುಭವಿಗಳು ತಮಗಾಗುತ್ತಿರುವ ಅನ್ಯಾಯದ ಬಗ್ಗೆ ಅಧಿಕಾರಿಗಳ ಗಮನಕ್ಕೆ ತಂದ ಸಂದರ್ಭದಲ್ಲಿ ಇವರ ಬೆನ್ನಿಗೆ ನಿಲ್ಲಬೇಕಾಗಿದ್ದ ಕಾನೂನು ಪಾಲಕರು, ಕಂದಾಯ ಇಲಾಖೆಯಯವರು ಸರಿಯಾಗಿ ಮಾರ್ಗದರ್ಶನ ಕೂಡ ಮಾಡಿರುವುದಿಲ್ಲ. ಈ ಜನರಿಗೆ ಸರ್ಕಾರವೇ ಕೊಟ್ಟಿರುವ ಭೂಮಿಯ ದಾಖಲೆಗಳ ಬಗ್ಗೆ ಒಬ್ಬೊಬ್ಬರು ಒಂದೊಂದು ರೀತಿಯಲ್ಲಿ ವರ್ತಿಸುತ್ತಾ ಬಂದಿರುವುದರಿಂದ ಪ್ರತಾಪ್‌ರೆಡ್ಡಿ ತೋಡಿದ ಮೋಸದ ಖೆಡ್ಡಾಕ್ಕೆ ಜಿಲ್ಲಾಡಳಿತವನ್ನು ಮತ್ತು ಶೋಷಿತ ಬಡ ಜನರನ್ನು ಬೀಳಿಸಿಕೊಂಡು, ಕಾನೂನು-ನ್ಯಾಯ, ನನ್ನ ಹಣ-ರಾಜಕೀಯ ಬಲಕ್ಕಿಂತ ದೊಡ್ಡದೇ? ಎಂದು ಸೆಡ್ಡು ಹೊಡೆದಿದ್ದಾರೆ ಎಂದಿದೆ.

ಇದು ಪ್ರಜಾತಂತ್ರ ವ್ಯವಸ್ಥೆಗೆ ಮಾರಕವೇ ಆಗಿದೆ. ತಾಲ್ಲೂಕು ಸರ್ವೆಯರ್ ಹನುಮಂತಪ್ಪ ಎಂಬ ಅಧಿಕಾರಿಯನ್ನು ಕೋರ್ಟ್ ಕಮಿಷನ್ ವಾರಂಟ್ ಪ್ರಕಾರ ನೇಮಿಸಲಾಗಿದ್ದು, ಈ ಅಧಿಕಾರಿ ಕಾನೂನು ಪ್ರಕಾರ ಸರ್ವೆ ಮಾಡದೆ ರೈತರ ವಿರುದ್ಧ ಇರುವ ವಕೀಲರ ಮಾತಿನಂತೆ ಕೆಲಸ ಮಾಡುತ್ತೇನೆಂದು ಹೇಳಿ ಬಲಾಡ್ಯರ ಪರವಾಗಿ ಕೆಲಸ ಮಾಡುತ್ತಿದ್ದಾರೆ. ಈ ಅಧಿಕಾರಿಯ ವಿರುದ್ಧ ಮತ್ತು ಕಾನೂನು ಉಲ್ಲಂಘನೆ ಮಾಡುತ್ತಿರುವ ಎನ್. ಪ್ರತಾಪ್‌ರೆಡ್ಡಿ ವಿರುದ್ಧ ಕಾನೂನು ಕ್ರಮ ಜರುಗಿಸಬೇಕಿದೆ. ಹೈಕೋರ್ಟ್‌ನಲ್ಲಿ
ಪ್ರಕರಣ ಬಾಕಿಯಿದ್ದರೂ, ಪ್ರತಾಪ್‌ರೆಡ್ಡಿ ಬಡವರ ಮೇಲೆ ದೌರ್ಜನ್ಯವೆಸಗುತ್ತಿದ್ದಾರೆ ಎಂದು ಸಮಿತಿ ಆರೋಪಿಸಿದೆ.

ಈ ವಿಚಾರವಾಗಿ ಸರ್ಕಾರ ಮತ್ತು ಜಿಲ್ಲಾಡಳಿತ ತಕ್ಷಣವೇ ಮಧ್ಯಪ್ರವೇಶ ಮಾಡಿ ಪ್ರತಾಪ್‌ರೆಡ್ಡಿ ನಡೆಸುತ್ತಿರುವ ಉಪಟಳ ಮತ್ತು ಬಡ ಜನರ ಭೂಮಿಯ ವಂಚನೆ ನಡೆಸುತ್ತಿರುವುದರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಎಂದು ಒತ್ತಾಯಿಸಿದೆ.

ಸುದ್ದಿಗೋಷ್ಠಿಯಲ್ಲಿ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯ ರಾಜ್ಯ ಮುಖಂಡರುಗಳಾದ ಕುಮಾರ್ ಸಮತಳ, ಮರಿಯಪ್ಪ, ಕಾವೇರಿ ಹಾಗೂ ಭೂಮಿಯಿಂದ ವಂಚನೆಗೊಳಗಾಗುತ್ತಿರುವ ಕೆ.ಮೋಹನ್ , ಕೆ.ಎಸ್‌ ರಘು, ಈ.ಈರೇಶ್ ಇದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...