Homeಕರ್ನಾಟಕಹುಬ್ಬಳ್ಳಿ ಮರ್ಯಾದೆಗೇಡು ಹತ್ಯೆ ಪ್ರಕರಣ: ಪ್ರತ್ಯೇಕ ಕಾಯ್ದೆಗೆ ಪ್ರಗತಿಪರ ಸಂಘಟನೆಗಳ ಆಗ್ರಹ

ಹುಬ್ಬಳ್ಳಿ ಮರ್ಯಾದೆಗೇಡು ಹತ್ಯೆ ಪ್ರಕರಣ: ಪ್ರತ್ಯೇಕ ಕಾಯ್ದೆಗೆ ಪ್ರಗತಿಪರ ಸಂಘಟನೆಗಳ ಆಗ್ರಹ

- Advertisement -
- Advertisement -

ಮಾದಿಗ ಸಮುದಾಯದ ಯುವಕನನ್ನು ಮದುವೆಯಾಗಿದ್ದ ಲಿಂಗಾಯತ ಸಮುದಾಯದ ಮಾನ್ಯ ಪಾಟೀಲ್ ಎಂಬ ಯುವತಿಯ ಮರ್ಯಾದಾಗೇಡು ಹತ್ಯೆ ಪ್ರಕರಣವನ್ನು ಖಂಡಿಸಿ ಸಮಾನ ಮನಸ್ಕ ಪ್ರಗತಿಪರ ಸಂಘಟನೆಗಳು ಶುಕ್ರವಾರ (ಡಿ.26) ಸಂಜೆ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದವು.

ಹುಬ್ಬಳ್ಳಿಯ ಲಿಂಗಾಯಿತ ಸಮುದಾಯದ ಯುವತಿ ಮಾನ್ಯ ಎಂಬಾಕೆ ವಿವೇಕಾನಂದ ಎನ್ನುವ ದಲಿತ ಸಮುದಾಯದ ಯುವಕನನ್ನು ವಿವಾಹವಾಗಿದ್ದ ಕಾರಣಕ್ಕೆ, ಇದೇ ಡಿಸೆಂಬರ್ 21 ರಂದು ಆಕೆ ಗರ್ಭಿಣಿಯಿದ್ದಾಗಲೇ ಅವಳ ತಂದೆ ಹುಬ್ಬಳ್ಳಿಯಲ್ಲಿ ಬರ್ಬರವಾಗಿ ಕೊಲೆ ಮಾಡಿ, ಆಕೆಯ ಗಂಡ ಮತ್ತವನ ತಂದೆತಾಯಿಗಳ ಮೇಲೂ ದೈಹಿಕವಾಗಿ ದಾಳಿ ನಡೆಸಿದ್ದಾರೆ. ಕೃತ್ಯವನ್ನು ಖಂಡಿಸುವ ಜೊತೆಗೆ, ಮರ್ಯಾದೆಗೇಡು ಹತ್ಯೆಗಳ ನಿಗ್ರಹಕ್ಕೆ ಪ್ರತ್ಯೇಕ ಕಾಯ್ದೆ ರೂಪಿಸಬೇಕು ಎಂದು ಹೋರಾಟಗಾರರು ಆಗ್ರಹಿಸಿದರು.

“ಮರ್ಯಾದೆಯ ಹೆಸರಿನಲ್ಲಿ ನಡೆಯುತ್ತಿರುವ ಇಂತಹ ಹತ್ಯೆಗಳಲ್ಲಿ ಯಾವ ಗೌರವದ ವಿಚಾರವೂ ಇಲ್ಲ. ಇದೊಂದು ಜಾತಿಗ್ರಸ್ತ ಸಮಾಜ ಎಸಗುವ ಕ್ರೂರ ಕೊಲೆಯಷ್ಟೇ. ಈ ಹತ್ಯೆಗಳು ಜಾತಿ ಮತ್ತು ಪಿತೃಪ್ರಭುತ್ವ ಸಮಾಜದ ಸಾಧನಗಳಾಗಿವೆ. ಭಯ ಮತ್ತು ಭಯೋತ್ಪಾದನೆಯ ಮೂಲಕ ಜಾತಿ ವ್ಯವಸ್ಥೆಯನ್ನು ಹೇರುವ, ಮಹಿಳೆಯರ ದೇಹ ಮತ್ತು ಸ್ವಾತಂತ್ರ್ಯವನ್ನು ನಿಯಂತ್ರಿಸಲು ನಿರಂತರವಾಗಿ ಯತ್ನಿಸಲಾಗುತ್ತಿದೆ. ಸ್ವಂತ ಮಗಳ ಜೀವ ತೆಗೆಯುವುದು ಜಾತಿ ವ್ಯವಸ್ಥೆಯ ಕ್ರೌರ್ಯ. ಇಂತಹ ಕೃತ್ಯಗಳು ಸಂವಿಧಾನದ ಆಶಯವಾದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವದ ಮೂಲಭೂತ ಮೌಲ್ಯಗಳಿಗೆ ಹೊಡೆತ ನೀಡುತ್ತವೆ ಎಂದು ಕಿಡಿಕಾರಿದ್ದಾರೆ.

“ಮರ್ಯಾದೆಗೇಡು ಹತ್ಯೆಗಳು ಕಠಿಣ ಶಿಕ್ಷೆಗೆ ಅರ್ಹವಾದ ಅನಾಗರಿಕ ಮತ್ತು ನಾಚಿಕೆಗೇಡಿನ ಕೊಲೆ ಕೃತ್ಯಗಳು ಎಂದು ಸುಪ್ರೀಂ ಕೋರ್ಟ್‌ ಹೇಳಿದೆ. ಜಾತಿ ವ್ಯವಸ್ಥೆಯು ಭಾರತಕ್ಕೆ ಎದುರಾಗಿರುವ ಶಾಪವಾಗಿದೆ. ಅಂತರ್ಜಾತಿ ವಿವಾಹಗಳು ರಾಷ್ಟ್ರೀಯ ಹಿತಾಸಕ್ತಿ ಮತ್ತು ಸಂವಿಧಾನದ ಆಶಯವನ್ನು ಬಲಪಡಿಸುತ್ತವೆ ಎಂಬುದನ್ನು ಸುಪ್ರೀಂ ಕೋರ್ಟ್ ಒತ್ತಿ ಹೇಳಿದೆ. ಮರ್ಯಾದೆಗೇಡು ಹತ್ಯೆಗಳು ಮತ್ತು ಜಾತಿ ದೌರ್ಜನ್ಯಗಳನ್ನು ತಡೆಗಟ್ಟಲು, ಪರಿಹಾರ ಕ್ರಮಗಳನ್ನು ರೂಪಿಸಲು ಹಾಗೂ ಶಿಕ್ಷಾರ್ಹ ಕ್ರಮಗಳನ್ನು ಜಾರಿಗೊಳಿಸಲು ನ್ಯಾಯಾಲಯವು ಸರ್ಕಾರಗಳಿಗೆ ಸೂಚನೆ ನೀಡಿದೆ. ಆದರೆ, ಜಾತಿ ರಾಜಕಾರಣದಲ್ಲಿ ಮುಳುಗಿರುವ ಸರ್ಕಾರಗಳು ಜಾತಿ ವ್ಯವಸ್ಥೆಯನ್ನು ಪೋಷಿಸುತ್ತಿವೆ. ಪರಿಣಾಮ, ಇಂತಹ ಹೇಯ ಕೃತ್ಯಗಳು ನಡೆಯುತ್ತಿವೆ” ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರತಿಭಟನೆಯಲ್ಲಿ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ವಾದ), ದಸಂಸ ಒಕ್ಕೂಟ, ದಲಿತ ಸಂಘರ್ಷ ಸಮಿತಿ (ಸಂಯೋಜಕ), ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಹೋರಾಟ ಸಮಿತಿ, ತಮಟೆ ಮೀಡಿಯಾ, ಎಐಎಸ್‌ಎ, ಸ್ಲಂ ಜನಾಂದೋಲನ – ಕರ್ನಾಟಕ, ಸ್ಲಂ ಜನರ ಸಂಘಟನೆ – ಕರ್ನಾಟಕ, ಜನವಾದಿ ಮಹಿಳಾ ಸಂಘಟನೆ, ಬಯಲು ಬಳಗ, ಎಐಸಿಸಿಟಿಯು, ಎಐಎಂಎಸ್‌ಎಸ್‌, ಎಐಪಿಡಬ್ಲ್ಯೂಎ, ಎನ್‌ಎಫ್‌ಐಡಬ್ಲ್ಯೂ, ಬಹುತ್ವ ಕರ್ನಾಟಕ, ನಾವೆದ್ದು ನಿಲ್ಲದಿದ್ದರೆ, ಎಸ್‌ಎಫ್‌ಐ, ಡಿಎಚ್‌ಎಸ್‌, ಗಮನ ಮಹಿಳಾ ಸಮೂಹ, ಪಿ.ಯು.ಸಿ.ಎಲ್ – ಕರ್ನಾಟಕ , ಕರ್ನಾಟಕ ಜನಶಕ್ತಿ, ಕರ್ನಾಟಕ ವಿದ್ಯಾರ್ಥಿ ಸಂಘಟನೆಗಳ ಮುಖಂಡರು ಭಾಗವಹಿಸಿದ್ದರು.

ಹಕ್ಕೊತ್ತಾಯಗಳು:

  1. ಮಾನ್ಯ ಅವರ ಪತಿಯ ಕುಟುಂಬಕ್ಕೆ ಸರ್ಕಾರವು ರಕ್ಷಣೆ ಮತ್ತು ಪರಿಹಾರ ನೀಡಬೇಕು.
  2. ವಿವೇಕಾನಂದ ಅವರ ಬದುಕಿನ ಖಾತ್ರಿಗಾಗಿ ಅವರಿಗೆ ಸರ್ಕಾರಿ ಉದ್ಯೋಗ ಒದಗಿಸಬೇಕು.
  3. ಪ್ರಕರಣದಲ್ಲಿ ಸರ್ಕಾರವು ನ್ಯಾಯಯುತ, ತ್ವರಿತ ಹಾಗೂ ನಿಷ್ಪಕ್ಷಪಾತ ತನಿಖೆ ನಡೆಸಬೇಕು. ಕೃತ್ಯ ಎಸಗಿದ
  4. ಕೃತ್ಯಕ್ಕೆ ಪ್ರೋತ್ಸಾಹ ನೀಡಿದ ಎಲ್ಲ ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು.
  5. ರಾಜ್ಯ ಸರ್ಕಾರವು ಸಾರ್ವಜನಿಕ ಸಮಾಲೋಚನೆ ಸೇರಿದಂತೆ ತಕ್ಷಣದ ಕ್ರಮಗಳನ್ನು ತೆಗೆದುಕೊಳ್ಳಬೇಕು.
  6. ಇದರಲ್ಲಿ ಮರ್ಯಾದೆಗೇಡು ಅಪರಾಧಗಳನ್ನು ತಡೆಗಟ್ಟುವಿಕೆ, ಸಂತ್ರಸ್ತರ ರಕ್ಷಣೆ, ಸಾಕ್ಷಿಗಳ ರಕ್ಷಣೆ, ಪರಿಹಾರ
  7. ಕ್ರಮಗಳು ಹಾಗೂ ವಿವಾಹ ಆಯ್ಕೆಯ ಸ್ವಾತಂತ್ರ್ಯದ ಸಾಂವಿಧಾನಿಕ ಹಕ್ಕನ್ನು ದೃಢೀಕರಿಸಲು ಮತ್ತು ರಕ್ಷಿಸಲು ಅಗತ್ಯ ಕ್ರಮಗಳನ್ನು ಒಳಗೊಂಡಿರಬೇಕು.
  8. ಮರ್ಯಾದೆಗೇಡು ಹತ್ಯೆಗಳ ತಡೆಗೆ ಸಂಬಧಿಸಿದಂತೆ ಸುಪ್ರೀಂ ಕೋರ್ಟ್‌ನ ನಿರ್ದೇಶನಗಳನ್ನು ಸರ್ಕಾರಗಳು ಕಟ್ಟುನಿಟ್ಟಾಗಿ ಪಾಲಿಸಬೇಕು.
  9. ಜಾತಿ ಆಧಾರಿತ ಹಿಂಸೆ ಮತ್ತು ಪಿತೃಪ್ರಧಾನ ಧೋರಣೆಗಳು ಎದುರಿಸಲು ಮತ್ತು ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವದ ಸಾಂವಿಧಾನಿಕ ಮೌಲ್ಯಗಳನ್ನು ಉತ್ತೇಜಿಸಲು ಪೊಲೀಸ್, ಸ್ಥಳೀಯ ಅಧಿಕಾರಿಗಳು ಹಾಗೂ ಸಾರ್ವಜನಿಕರನ್ನು ಒಳಗೊಂಡ ಜಾಗೃತಿ ಕಾರ್ಯಕ್ರಮಗಳನ್ನು ನಡೆಸಬೇಕು.
  10. ಸಂವಿಧಾನದ ಸಮಾನತೆ, ಸ್ವಾತಂತ್ರ್ಯ ಹಾಗೂ ಭ್ರಾತೃತ್ವದ ಆಶಯಗಳನ್ನು ಖಾತ್ರಿಪಡಿಸಲು ಸರ್ಕಾರಗಳು ಜಾತಿಯ ಸಂಪೂರ್ಣ ನಿರ್ಮೂಲನೆಗೆ ಮುಂದಾಗಬೇಕು.

ಬಳ್ಳಾರಿ | ಪ್ರಭಾವ, ಗೂಂಡಾಗಿರಿ ಮೂಲಕ ಬಡ ಜನರ ಭೂ ಕಬಳಿಕೆ : ಬುಡಾ ಮಾಜಿ ಅಧ್ಯಕ್ಷನ ವಿರುದ್ಧ ಗಂಭೀರ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...