Homeಕರ್ನಾಟಕಹುಬ್ಬಳ್ಳಿ ಮರ್ಯಾದೆಗೇಡು ಹತ್ಯೆ ಪ್ರಕರಣ: ಪ್ರತ್ಯೇಕ ಕಾಯ್ದೆಗೆ ಪ್ರಗತಿಪರ ಸಂಘಟನೆಗಳ ಆಗ್ರಹ

ಹುಬ್ಬಳ್ಳಿ ಮರ್ಯಾದೆಗೇಡು ಹತ್ಯೆ ಪ್ರಕರಣ: ಪ್ರತ್ಯೇಕ ಕಾಯ್ದೆಗೆ ಪ್ರಗತಿಪರ ಸಂಘಟನೆಗಳ ಆಗ್ರಹ

- Advertisement -
- Advertisement -

ಮಾದಿಗ ಸಮುದಾಯದ ಯುವಕನನ್ನು ಮದುವೆಯಾಗಿದ್ದ ಲಿಂಗಾಯತ ಸಮುದಾಯದ ಮಾನ್ಯ ಪಾಟೀಲ್ ಎಂಬ ಯುವತಿಯ ಮರ್ಯಾದಾಗೇಡು ಹತ್ಯೆ ಪ್ರಕರಣವನ್ನು ಖಂಡಿಸಿ ಸಮಾನ ಮನಸ್ಕ ಪ್ರಗತಿಪರ ಸಂಘಟನೆಗಳು ಶುಕ್ರವಾರ (ಡಿ.26) ಸಂಜೆ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದವು.

ಹುಬ್ಬಳ್ಳಿಯ ಲಿಂಗಾಯಿತ ಸಮುದಾಯದ ಯುವತಿ ಮಾನ್ಯ ಎಂಬಾಕೆ ವಿವೇಕಾನಂದ ಎನ್ನುವ ದಲಿತ ಸಮುದಾಯದ ಯುವಕನನ್ನು ವಿವಾಹವಾಗಿದ್ದ ಕಾರಣಕ್ಕೆ, ಇದೇ ಡಿಸೆಂಬರ್ 21 ರಂದು ಆಕೆ ಗರ್ಭಿಣಿಯಿದ್ದಾಗಲೇ ಅವಳ ತಂದೆ ಹುಬ್ಬಳ್ಳಿಯಲ್ಲಿ ಬರ್ಬರವಾಗಿ ಕೊಲೆ ಮಾಡಿ, ಆಕೆಯ ಗಂಡ ಮತ್ತವನ ತಂದೆತಾಯಿಗಳ ಮೇಲೂ ದೈಹಿಕವಾಗಿ ದಾಳಿ ನಡೆಸಿದ್ದಾರೆ. ಕೃತ್ಯವನ್ನು ಖಂಡಿಸುವ ಜೊತೆಗೆ, ಮರ್ಯಾದೆಗೇಡು ಹತ್ಯೆಗಳ ನಿಗ್ರಹಕ್ಕೆ ಪ್ರತ್ಯೇಕ ಕಾಯ್ದೆ ರೂಪಿಸಬೇಕು ಎಂದು ಹೋರಾಟಗಾರರು ಆಗ್ರಹಿಸಿದರು.

“ಮರ್ಯಾದೆಯ ಹೆಸರಿನಲ್ಲಿ ನಡೆಯುತ್ತಿರುವ ಇಂತಹ ಹತ್ಯೆಗಳಲ್ಲಿ ಯಾವ ಗೌರವದ ವಿಚಾರವೂ ಇಲ್ಲ. ಇದೊಂದು ಜಾತಿಗ್ರಸ್ತ ಸಮಾಜ ಎಸಗುವ ಕ್ರೂರ ಕೊಲೆಯಷ್ಟೇ. ಈ ಹತ್ಯೆಗಳು ಜಾತಿ ಮತ್ತು ಪಿತೃಪ್ರಭುತ್ವ ಸಮಾಜದ ಸಾಧನಗಳಾಗಿವೆ. ಭಯ ಮತ್ತು ಭಯೋತ್ಪಾದನೆಯ ಮೂಲಕ ಜಾತಿ ವ್ಯವಸ್ಥೆಯನ್ನು ಹೇರುವ, ಮಹಿಳೆಯರ ದೇಹ ಮತ್ತು ಸ್ವಾತಂತ್ರ್ಯವನ್ನು ನಿಯಂತ್ರಿಸಲು ನಿರಂತರವಾಗಿ ಯತ್ನಿಸಲಾಗುತ್ತಿದೆ. ಸ್ವಂತ ಮಗಳ ಜೀವ ತೆಗೆಯುವುದು ಜಾತಿ ವ್ಯವಸ್ಥೆಯ ಕ್ರೌರ್ಯ. ಇಂತಹ ಕೃತ್ಯಗಳು ಸಂವಿಧಾನದ ಆಶಯವಾದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವದ ಮೂಲಭೂತ ಮೌಲ್ಯಗಳಿಗೆ ಹೊಡೆತ ನೀಡುತ್ತವೆ ಎಂದು ಕಿಡಿಕಾರಿದ್ದಾರೆ.

“ಮರ್ಯಾದೆಗೇಡು ಹತ್ಯೆಗಳು ಕಠಿಣ ಶಿಕ್ಷೆಗೆ ಅರ್ಹವಾದ ಅನಾಗರಿಕ ಮತ್ತು ನಾಚಿಕೆಗೇಡಿನ ಕೊಲೆ ಕೃತ್ಯಗಳು ಎಂದು ಸುಪ್ರೀಂ ಕೋರ್ಟ್‌ ಹೇಳಿದೆ. ಜಾತಿ ವ್ಯವಸ್ಥೆಯು ಭಾರತಕ್ಕೆ ಎದುರಾಗಿರುವ ಶಾಪವಾಗಿದೆ. ಅಂತರ್ಜಾತಿ ವಿವಾಹಗಳು ರಾಷ್ಟ್ರೀಯ ಹಿತಾಸಕ್ತಿ ಮತ್ತು ಸಂವಿಧಾನದ ಆಶಯವನ್ನು ಬಲಪಡಿಸುತ್ತವೆ ಎಂಬುದನ್ನು ಸುಪ್ರೀಂ ಕೋರ್ಟ್ ಒತ್ತಿ ಹೇಳಿದೆ. ಮರ್ಯಾದೆಗೇಡು ಹತ್ಯೆಗಳು ಮತ್ತು ಜಾತಿ ದೌರ್ಜನ್ಯಗಳನ್ನು ತಡೆಗಟ್ಟಲು, ಪರಿಹಾರ ಕ್ರಮಗಳನ್ನು ರೂಪಿಸಲು ಹಾಗೂ ಶಿಕ್ಷಾರ್ಹ ಕ್ರಮಗಳನ್ನು ಜಾರಿಗೊಳಿಸಲು ನ್ಯಾಯಾಲಯವು ಸರ್ಕಾರಗಳಿಗೆ ಸೂಚನೆ ನೀಡಿದೆ. ಆದರೆ, ಜಾತಿ ರಾಜಕಾರಣದಲ್ಲಿ ಮುಳುಗಿರುವ ಸರ್ಕಾರಗಳು ಜಾತಿ ವ್ಯವಸ್ಥೆಯನ್ನು ಪೋಷಿಸುತ್ತಿವೆ. ಪರಿಣಾಮ, ಇಂತಹ ಹೇಯ ಕೃತ್ಯಗಳು ನಡೆಯುತ್ತಿವೆ” ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರತಿಭಟನೆಯಲ್ಲಿ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ವಾದ), ದಸಂಸ ಒಕ್ಕೂಟ, ದಲಿತ ಸಂಘರ್ಷ ಸಮಿತಿ (ಸಂಯೋಜಕ), ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಹೋರಾಟ ಸಮಿತಿ, ತಮಟೆ ಮೀಡಿಯಾ, ಎಐಎಸ್‌ಎ, ಸ್ಲಂ ಜನಾಂದೋಲನ – ಕರ್ನಾಟಕ, ಸ್ಲಂ ಜನರ ಸಂಘಟನೆ – ಕರ್ನಾಟಕ, ಜನವಾದಿ ಮಹಿಳಾ ಸಂಘಟನೆ, ಬಯಲು ಬಳಗ, ಎಐಸಿಸಿಟಿಯು, ಎಐಎಂಎಸ್‌ಎಸ್‌, ಎಐಪಿಡಬ್ಲ್ಯೂಎ, ಎನ್‌ಎಫ್‌ಐಡಬ್ಲ್ಯೂ, ಬಹುತ್ವ ಕರ್ನಾಟಕ, ನಾವೆದ್ದು ನಿಲ್ಲದಿದ್ದರೆ, ಎಸ್‌ಎಫ್‌ಐ, ಡಿಎಚ್‌ಎಸ್‌, ಗಮನ ಮಹಿಳಾ ಸಮೂಹ, ಪಿ.ಯು.ಸಿ.ಎಲ್ – ಕರ್ನಾಟಕ , ಕರ್ನಾಟಕ ಜನಶಕ್ತಿ, ಕರ್ನಾಟಕ ವಿದ್ಯಾರ್ಥಿ ಸಂಘಟನೆಗಳ ಮುಖಂಡರು ಭಾಗವಹಿಸಿದ್ದರು.

ಹಕ್ಕೊತ್ತಾಯಗಳು:

  1. ಮಾನ್ಯ ಅವರ ಪತಿಯ ಕುಟುಂಬಕ್ಕೆ ಸರ್ಕಾರವು ರಕ್ಷಣೆ ಮತ್ತು ಪರಿಹಾರ ನೀಡಬೇಕು.
  2. ವಿವೇಕಾನಂದ ಅವರ ಬದುಕಿನ ಖಾತ್ರಿಗಾಗಿ ಅವರಿಗೆ ಸರ್ಕಾರಿ ಉದ್ಯೋಗ ಒದಗಿಸಬೇಕು.
  3. ಪ್ರಕರಣದಲ್ಲಿ ಸರ್ಕಾರವು ನ್ಯಾಯಯುತ, ತ್ವರಿತ ಹಾಗೂ ನಿಷ್ಪಕ್ಷಪಾತ ತನಿಖೆ ನಡೆಸಬೇಕು. ಕೃತ್ಯ ಎಸಗಿದ
  4. ಕೃತ್ಯಕ್ಕೆ ಪ್ರೋತ್ಸಾಹ ನೀಡಿದ ಎಲ್ಲ ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು.
  5. ರಾಜ್ಯ ಸರ್ಕಾರವು ಸಾರ್ವಜನಿಕ ಸಮಾಲೋಚನೆ ಸೇರಿದಂತೆ ತಕ್ಷಣದ ಕ್ರಮಗಳನ್ನು ತೆಗೆದುಕೊಳ್ಳಬೇಕು.
  6. ಇದರಲ್ಲಿ ಮರ್ಯಾದೆಗೇಡು ಅಪರಾಧಗಳನ್ನು ತಡೆಗಟ್ಟುವಿಕೆ, ಸಂತ್ರಸ್ತರ ರಕ್ಷಣೆ, ಸಾಕ್ಷಿಗಳ ರಕ್ಷಣೆ, ಪರಿಹಾರ
  7. ಕ್ರಮಗಳು ಹಾಗೂ ವಿವಾಹ ಆಯ್ಕೆಯ ಸ್ವಾತಂತ್ರ್ಯದ ಸಾಂವಿಧಾನಿಕ ಹಕ್ಕನ್ನು ದೃಢೀಕರಿಸಲು ಮತ್ತು ರಕ್ಷಿಸಲು ಅಗತ್ಯ ಕ್ರಮಗಳನ್ನು ಒಳಗೊಂಡಿರಬೇಕು.
  8. ಮರ್ಯಾದೆಗೇಡು ಹತ್ಯೆಗಳ ತಡೆಗೆ ಸಂಬಧಿಸಿದಂತೆ ಸುಪ್ರೀಂ ಕೋರ್ಟ್‌ನ ನಿರ್ದೇಶನಗಳನ್ನು ಸರ್ಕಾರಗಳು ಕಟ್ಟುನಿಟ್ಟಾಗಿ ಪಾಲಿಸಬೇಕು.
  9. ಜಾತಿ ಆಧಾರಿತ ಹಿಂಸೆ ಮತ್ತು ಪಿತೃಪ್ರಧಾನ ಧೋರಣೆಗಳು ಎದುರಿಸಲು ಮತ್ತು ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವದ ಸಾಂವಿಧಾನಿಕ ಮೌಲ್ಯಗಳನ್ನು ಉತ್ತೇಜಿಸಲು ಪೊಲೀಸ್, ಸ್ಥಳೀಯ ಅಧಿಕಾರಿಗಳು ಹಾಗೂ ಸಾರ್ವಜನಿಕರನ್ನು ಒಳಗೊಂಡ ಜಾಗೃತಿ ಕಾರ್ಯಕ್ರಮಗಳನ್ನು ನಡೆಸಬೇಕು.
  10. ಸಂವಿಧಾನದ ಸಮಾನತೆ, ಸ್ವಾತಂತ್ರ್ಯ ಹಾಗೂ ಭ್ರಾತೃತ್ವದ ಆಶಯಗಳನ್ನು ಖಾತ್ರಿಪಡಿಸಲು ಸರ್ಕಾರಗಳು ಜಾತಿಯ ಸಂಪೂರ್ಣ ನಿರ್ಮೂಲನೆಗೆ ಮುಂದಾಗಬೇಕು.

ಬಳ್ಳಾರಿ | ಪ್ರಭಾವ, ಗೂಂಡಾಗಿರಿ ಮೂಲಕ ಬಡ ಜನರ ಭೂ ಕಬಳಿಕೆ : ಬುಡಾ ಮಾಜಿ ಅಧ್ಯಕ್ಷನ ವಿರುದ್ಧ ಗಂಭೀರ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...