Homeಮುಖಪುಟಅರಾವಳಿ ಬೆಟ್ಟಗಳ ಹೊಸ ವ್ಯಾಖ್ಯಾನಕ್ಕೆ ದೇಶದಾದ್ಯಂತ ತೀವ್ರ ವಿರೋಧ : ಸ್ವಯಂ ಪ್ರೇರಿತ ಪ್ರಕರಣ ಕೈಗೆತ್ತಿಕೊಂಡ...

ಅರಾವಳಿ ಬೆಟ್ಟಗಳ ಹೊಸ ವ್ಯಾಖ್ಯಾನಕ್ಕೆ ದೇಶದಾದ್ಯಂತ ತೀವ್ರ ವಿರೋಧ : ಸ್ವಯಂ ಪ್ರೇರಿತ ಪ್ರಕರಣ ಕೈಗೆತ್ತಿಕೊಂಡ ಸುಪ್ರೀಂ ಕೋರ್ಟ್

- Advertisement -
- Advertisement -

ಅರಾವಳಿ ಬೆಟ್ಟಗಳ ಹೊಸ ವ್ಯಾಖ್ಯಾನದಿಂದ ಪರಿಸರದ ಮೇಲಾಗುವ ಹಾನಿಯ ಕುರಿತು ದೇಶದ ಜನರು ತೀವ್ರ ಆತಂಕ ಮತ್ತು ಕಳವಳ ವ್ಯಕ್ತಪಡಿಸುತ್ತಿರುವ ಹಿನ್ನೆಲೆ, ಸುಪ್ರೀಂ ಕೋರ್ಟ್‌ ಈ ಕುರಿತು ಸ್ವಯಂ ಪ್ರೇರಿತ (Suo Motu Case) ಪ್ರಕರಣ ಕೈಗೆತ್ತಿಕೊಂಡಿದೆ.

ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್, ನ್ಯಾಯಮೂರ್ತಿ ಜೆ.ಕೆ ಮಹೇಶ್ವರಿ ಮತ್ತು ನ್ಯಾಯಮೂರ್ತಿ ಎ.ಜಿ ಮಸೀಹ್ ಅವರನ್ನೊಳಗೊಂಡ ರಜಾ ಕಾಲದ ಪೀಠವು ಡಿಸೆಂಬರ್ 29ರ ಸೋಮವಾರ ಈ ವಿಷಯವನ್ನು ವಿಚಾರಣೆ ನಡೆಸಲಿದೆ.

ನೈಸರ್ಗಿಕ ಪರಿಸರದ ವಿಚಾರದಲ್ಲಿ ಅತ್ಯಂತ ಮಹತ್ವ ಹೊಂದಿರುವ, ಭೂಮಿ ಬರಡಾಗುವುದನ್ನು ತಡೆಗಟ್ಟುವ, ಹವಾಮಾನ ವೈಪರೀತ್ಯಗಳನ್ನು ಸರಿದೂಗಿಸುವ ಮತ್ತು ಅಂತರ್ಜಲ ಮಟ್ಟವನ್ನು ಉಳಿಸಿಕೊಳ್ಳುವಲ್ಲಿ ಪ್ರಮುಖ ಪಾತ್ರ ವಹಿಸುವ ಅರಾವಳಿ ಬೆಟ್ಟಗಳ ಪರಿಷ್ಕೃತ ವ್ಯಾಖ್ಯಾನದ ವಿರುದ್ದ ದೇಶದಾದ್ಯಂತ ಸಾರ್ವಜನಿಕ ವಲಯದಲ್ಲಿ ತೀವ್ರ ಪ್ರತಿಭಟನೆಗಳು ವ್ಯಕ್ತವಾಗುತ್ತಿರುವ ಹಿನ್ನೆಲೆ, ನ್ಯಾಯಾಲಯ ಈ ವಿಚಾರದಲ್ಲಿ ಮಧ್ಯಪ್ರವೇಶಿಸಿದೆ.

ಅರಾವಳಿ ಬೆಟ್ಟಗಳ ವ್ಯಾಖ್ಯಾನವನ್ನು ದುರ್ಬಲಗೊಳಿಸುವ ಹೊಸ ಕ್ರಮವು ಸಂರಕ್ಷಿತ ಪ್ರದೇಶಗಳಲ್ಲಿ ಗಣಿಗಾರಿಕೆ ಮತ್ತು ನಿರ್ಮಾಣ ಚಟುವಟಿಕೆಗಳನ್ನು ಕಾನೂನುಬದ್ಧಗೊಳಿಸಬಹುದು ಎಂಬ ಭಯವನ್ನು ಪರಿಸರ ಗುಂಪುಗಳು ಮತ್ತು ನಾಗರಿಕ ಸಮಾಜ ಸಂಸ್ಥೆಗಳು ವ್ಯಕ್ತಪಡಿಸಿವೆ.

ಅರಾವಳಿ ಎಂಬುವುದು ಉತ್ತರ ಭಾರತದಲ್ಲಿ ಹರಡಿರುವ ಹಳೆಯ ಬೆಟ್ಟಗಳ ಶ್ರೇಣಿಯಾಗಿದೆ. ಇದು ದೆಹಲಿ, ಹರಿಯಾಣ, ರಾಜಸ್ಥಾನ ಮತ್ತು ಗುಜರಾತ್ ರಾಜ್ಯಗಳ ಮೂಲಕ ಹಾದುಹೋಗುತ್ತದೆ.

ಈ ಬೆಟ್ಟಗಳು ಮತ್ತು ಶ್ರೇಣಿಗಳನ್ನು ಪ್ರತಿ ರಾಜ್ಯದಲ್ಲಿ ವಿಭಿನ್ನ ರೀತಿಯಲ್ಲಿ ವ್ಯಾಖ್ಯಾನಿಸಲಾಗಿದೆ. ಅಂದರೆ, ಒಂದು ರಾಜ್ಯದಲ್ಲಿ ‘ಅರಾವಳಿ’ ಎಂದರೆ ಏನು ಎಂದು ಪರಿಗಣಿಸಲಾಗುತ್ತದೆಯೋ ಅದು ಮತ್ತೊಂದು ರಾಜ್ಯದಲ್ಲಿ ಬೇರೆಯಾಗಿರಬಹುದು. ಈ ವಿರೋಧಾಭಾಸದ ವ್ಯಾಖ್ಯಾನಗಳು ಕಾನೂನು ಮತ್ತು ನಿಯಂತ್ರಣದಲ್ಲಿ ಸಮಸ್ಯೆಗಳನ್ನು ಉಂಟುಮಾಡಿವೆ.

ಈ ವ್ಯತ್ಯಾಸಗಳಿಂದಾಗಿ ನಿಯಂತ್ರಣದಲ್ಲಿ ಅಂತರಗಳು ಉಂಟಾಗಿವೆ. ಅಂದರೆ, ಕೆಲವು ಪ್ರದೇಶಗಳಲ್ಲಿ ಕಾನೂನುಗಳು ಸರಿಯಾಗಿ ಅನ್ವಯಿಸಲು ಸಾಧ್ಯವಾಗದೆ, ಅಕ್ರಮ ಗಣಿಗಾರಿಕೆ ಹೆಚ್ಚಾಗಿದೆ. ಇದರಿಂದ ಪರಿಸರ ಹಾನಿ, ನೀರಿನ ಕೊರತೆ ಮತ್ತು ಇತರ ಸಮಸ್ಯೆಗಳು ಉದ್ಭವಿಸಿವೆ.

ಒಂದು ರಾಜ್ಯದಲ್ಲಿ ಗಣಿಗಾರಿಕೆ ನಿಷೇಧಿಸಲಾಗಿದ್ದರೂ, ಮತ್ತೊಂದು ರಾಜ್ಯದ ವ್ಯಾಖ್ಯಾನದಿಂದಾಗಿ ಗಡಿ ಪ್ರದೇಶಗಳಲ್ಲಿ ಅಕ್ರಮ ಚಟುವಟಿಕೆಗಳು ನಡೆಯುತ್ತಿವೆ. ಇದು ಒಟ್ಟಾರೆಯಾಗಿ ಸರ್ಕಾರದ ನಿಯಂತ್ರಣ ವ್ಯವಸ್ಥೆಯನ್ನು ದುರ್ಬಲಗೊಳಿಸಿದೆ ಮತ್ತು ಪರಿಸರ ಸಂರಕ್ಷಣೆಗೆ ತೊಂದರೆಯಾಗಿದೆ. ಈ ಸಮಸ್ಯೆಯನ್ನು ಪರಿಹರಿಸಲು ಏಕರೂಪದ ವ್ಯಾಖ್ಯಾನ ಮತ್ತು ಕಾನೂನುಗಳ ಅಗತ್ಯವಿದೆ.

ಇದನ್ನು ಪರಿಹರಿಸಲು, ಸುಪ್ರೀಂ ಕೋರ್ಟ್ ಈ ಹಿಂದೆ ಉನ್ನತ ಮಟ್ಟದ ಸಮಿತಿಯನ್ನು ರಚಿಸಿತ್ತು.

ಈ ವರ್ಷದ ನವೆಂಬರ್‌ನಲ್ಲಿ ನೀಡಿದ ತೀರ್ಪಿನಲ್ಲಿ, ನಿವೃತ್ತ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ, ನ್ಯಾಯಮೂರ್ತಿಗಳಾದ ಕೆ. ವಿನೋದ್ ಚಂದ್ರನ್ ಮತ್ತು ಎನ್.ವಿ. ಅಂಜಾರಿಯಾ ನೇತೃತ್ವದ ಪೀಠವು, ಗಣಿಗಾರಿಕೆಯ ವಿಷಯದಲ್ಲಿ ಅರಾವಳಿ ಬೆಟ್ಟಗಳು ಮತ್ತು ಶ್ರೇಣಿಗಳಿಗೆ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ ಸಮಿತಿಯು ಶಿಫಾರಸು ಮಾಡಿದ ಕಾರ್ಯಾಚರಣೆಯ ವ್ಯಾಖ್ಯಾನವನ್ನು ಒಪ್ಪಿಕೊಂಡಿತ್ತು.

ಹೊಸ ಶಿಫಾರಸು ಅಥವಾ ವ್ಯಾಖ್ಯಾನದ ಪ್ರಕಾರ, ‘ಅರಾವಳಿ ಬೆಟ್ಟ’ ಎಂದರೆ ಸ್ಥಳೀಯ ಎತ್ತರದಿಂದ (ಅಂದರೆ ಆ ಭೂರೂಪವನ್ನು ಸಂಪೂರ್ಣವಾಗಿ ಆವರಿಸುವ ಕನಿಷ್ಠ ಕಾಂಟೂರ್ ಲೈನ್‌ನಿಂದ) 100 ಮೀಟರ್ ಅಥವಾ ಅದಕ್ಕಿಂತ ಹೆಚ್ಚು ಎತ್ತರವಿರುವ ಯಾವುದೇ ಭೂರೂಪ. ಇದರಲ್ಲಿ ಬೆಟ್ಟದ ಇಳಿಜಾರುಗಳು, ಸಣ್ಣ ಬೆಟ್ಟಗಳು ಮತ್ತು ಸಂಬಂಧಿತ ಪ್ರದೇಶಗಳು ಸೇರಿವೆ.

ಇನ್ನು ‘ಅರಾವಳಿ ಶ್ರೇಣಿ’ ಎಂದರೆ ಎರಡು ಅಥವಾ ಹೆಚ್ಚಿನ ಅರಾವಳಿ ಬೆಟ್ಟಗಳು ಪರಸ್ಪರ 500 ಮೀಟರ್ ಒಳಗೆ ಇದ್ದರೆ, ಅವುಗಳ ನಡುವಿನ ಎಲ್ಲ ಭೂರೂಪಗಳು (ಎತ್ತರ ಕಡಿಮೆ ಇದ್ದರೂ ಸಹ) ಶ್ರೇಣಿಯ ಭಾಗವಾಗಿವೆ ಮತ್ತು ರಕ್ಷಣೆಗೆ ಒಳಪಡುತ್ತವೆ.

ಈ ವ್ಯಾಖ್ಯಾನವು ಹಿಂದಿನ ವಿಭಿನ್ನ ನಿಯಮಗಳಿಂದ ಉಂಟಾದ ಅಂತರಗಳನ್ನು ನಿವಾರಿಸಿ, ಅಕ್ರಮ ಗಣಿಗಾರಿಕೆ ತಡೆಯುವ ಗುರಿಹೊಂದಿದೆ ಎಂದು ಸರ್ಕಾರ ಹೇಳಿಕೊಂಡಿದೆ.

ಆದರೆ, 100 ಮೀಟರ್‌ಗಿಂತ ಕಡಿಮೆ ಎತ್ತರದ ಬೆಟ್ಟಗಳು ಮತ್ತು ಪ್ರದೇಶಗಳು ಈ ವ್ಯಾಖ್ಯಾನದಿಂದ ಹೊರಗುಳಿದು, ಗಣಿಗಾರಿಕೆ ಅಥವಾ ಅಭಿವೃದ್ಧಿಗೆ ತೆರೆಯಬಹುದು ಎಂಬ ಆತಂಕವಿದೆ. ಪರಿಸರವಾದಿಗಳು ಇದನ್ನು ಅರಾವಳಿಯ ನಿರಂತರತೆ ಮತ್ತು ಜೈವಿಕ ವೈವಿಧ್ಯತೆಗೆ ಹಿನ್ನಡೆ ಎಂದು ಟೀಕಿಸಿದ್ದಾರೆ.

ಕೋರ್ಟ್ ಹೊಸ ಗಣಿಗಾರಿಕೆ ಗುತ್ತಿಗೆಗಳನ್ನು ನಿಷೇಧಿಸಿದ್ದು, ಸುಸ್ಥಿರ ಗಣಿಗಾರಿಕೆ ಯೋಜನೆ (MPSM) ತಯಾರಾಗುವವರೆಗೆ ಯಾವುದೇ ಹೊಸ ಚಟುವಟಿಕೆಗಳು ನಿರ್ಬಂಧಿತ ಎಂದಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...