Homeಮುಖಪುಟ'ಇಸ್ರೇಲ್ ಗಾಝಾಗೆ ಪಾಠ ಕಲಿಸಿದಂತೆ ಬಾಂಗ್ಲಾದೇಶಕ್ಕೂ ಕಲಿಸಬೇಕು' : ನರಮೇಧ, ಜನಾಂಗೀಯ ಹತ್ಯೆಗೆ ಹಪಹಪಿಸಿದ ಬಿಜೆಪಿ...

‘ಇಸ್ರೇಲ್ ಗಾಝಾಗೆ ಪಾಠ ಕಲಿಸಿದಂತೆ ಬಾಂಗ್ಲಾದೇಶಕ್ಕೂ ಕಲಿಸಬೇಕು’ : ನರಮೇಧ, ಜನಾಂಗೀಯ ಹತ್ಯೆಗೆ ಹಪಹಪಿಸಿದ ಬಿಜೆಪಿ ನಾಯಕ

- Advertisement -
- Advertisement -

“ಇಸ್ರೇಲ್ ಗಾಝಾಗೆ ಕಲಿಸಿದಂತೆ ಬಾಂಗ್ಲಾದೇಶಕ್ಕೂ ಪಾಠ ಕಲಿಸಬೇಕು” ಎಂದು ಬಿಜೆಪಿ ಹಾಗೂ ಪಶ್ಚಿಮ ಬಂಗಾಳ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ನೀಡಿದ ಹೇಳಿಕೆಗೆ ಸಾರ್ವಜನಿಕ ವಲಯದಲ್ಲಿ ಭಾರೀ ಖಂಡನೆ ವ್ಯಕ್ತವಾಗಿದೆ.

ಡಿಸೆಂಬರ್ 26, ಶುಕ್ರವಾರ ಕೋಲ್ಕತ್ತಾದಲ್ಲಿರುವ ಬಾಂಗ್ಲಾದೇಶ ಉಪ ಹೈಕಮಿಷನ್ ಮುಂದೆ ಸುದ್ದಿಗಾರರೊಂದಿಗೆ ಮಾತನಾಡಿದ ಸುವೇಂದು ಅಧಿಕಾರಿ, “ಇಸ್ರೇಲ್ ಗಾಝಾಗೆ ಕಲಿಸಿದಂತೆ ಈ ಜನರಿಗೆ (ಬಾಂಗ್ಲಾದೇಶದ) ಪಾಠ ಕಲಿಸಬೇಕು. ನಮ್ಮ 100 ಕೋಟಿ ಹಿಂದೂಗಳು ಮತ್ತು ಹಿಂದೂಗಳ ಹಿತಾಸಕ್ತಿಗಾಗಿ ಕೆಲಸ ಮಾಡುವ ಸರ್ಕಾರ ಆಪರೇಷನ್ ಸಿಂಧೂರ್‌ನಲ್ಲಿ ಪಾಕಿಸ್ತಾನಕ್ಕೆ ಪಾಠ ಕಲಿಸಿದಂತೆಯೇ ಅವರಿಗೂ ಪಾಠ ಕಲಿಸಬೇಕು” ಎಂದು ಹೇಳಿದ್ದಾರೆ.

ಗಾರ್ಮೆಂಟ್ಸ್ ಕಾರ್ಖಾನೆಯ ಕೆಲಸಗಾರ 27 ವರ್ಷದ ದೀಪು ಚಂದ್ರ ದಾಸ್ ಅವರನ್ನು ಬಾಂಗ್ಲಾದಲ್ಲಿ ಗುಂಪು ಹತ್ಯೆಗೈದಿರುವುದನ್ನು ಖಂಡಿಸಿ, ಡಿಸೆಂಬರ್ 22ರಿಂದ ಬಾಂಗ್ಲಾದೇಶದ ಉಪ ಹೈಕಮಿಷನ್ ಮುಂದೆ ಪ್ರತಿಭಟನೆಗಳು ನಡೆಯುತ್ತಿವೆ. ಡಿಸೆಂಬರ್ 18ರಂದು ದೀಪು ಅವರನ್ನು ಬಾಂಗ್ಲಾದ ಮೆಯ್ಮೆನ್ಸಿಂಗ್ ಜಿಲ್ಲೆಯಲ್ಲಿ ಗುಂಪು ಹತ್ಯೆಗೈದು, ಬಳಿಕ ಅವರ ದೇಹವನ್ನು ಮರಕ್ಕೆ ತೂಗುಹಾಕಿ ಬೆಂಕಿ ಹಚ್ಚಲಾಗಿತ್ತು.

ಅಧಿಕಾರಿ ಹೇಳಿಕೆಗೆ ಪ್ರತಿಕ್ರಿಯಿಸಿರುವ ಅಖಿಲ ಭಾರತ ತೃಣಮೂಲ ಕಾಂಗ್ರೆಸ್, ಬಿಜೆಪಿ “ದ್ವೇಷ ಮತ್ತು ಅಸಹಿಷ್ಣುತೆಯನ್ನು ಒಂದು ಕಲಾರೂಪವಾಗಿ ಪರಿವರ್ತಿಸಿದೆ” ಎಂದು ಹೇಳಿದೆ.

“ಸುವೇಂದು ಅಧಿಕಾರಿ ತನ್ನ ವಿಷಪೂರಿತ ಧ್ವನಿಯಲ್ಲಿ ಮತ್ತೊಮ್ಮೆ ತನ್ನ ಫ್ಯಾಸಿಸ್ಟ್ ಕೋರೆಹಲ್ಲುಗಳನ್ನು ಹೊರತೆಗೆದು, ಇಸ್ರೇಲ್ ಗಾಝಾಗೆ ಕಲಿಸಿದಂತೆ ಭಾರತವು ಮುಸ್ಲಿಮರಿಗೆ ಪಾಠ ಕಲಿಸಬೇಕು ಎಂದು ಘೋಷಿಸುವ ಮೂಲಕ ನರಮೇಧದ ಪಿತ್ತವನ್ನು ಕಾರಿದ್ದಾರೆ. ಇದು ಬಹಿರಂಗ ದ್ವೇಷ ಭಾಷಣ, ಸಾಮೂಹಿಕ ಹತ್ಯೆ ಮತ್ತು ಜನಾಂಗೀಯ ಶುದ್ಧೀಕರಣಕ್ಕಾಗಿ ಕೊಟ್ಟ ರಕ್ತಪಿಪಾಸು ಕರೆಯಾಗಿದೆ. ಇವರ ವಿರುದ್ದ ಯಾವುದೇ ಎಫ್ಐಆರ್ ದಾಖಲಾಗಿಲ್ಲ, ಬಂಧಿಸಿಲ್ಲ, ಕನಿಷ್ಠ ಕಾನೂನು ಕ್ರಮ ಜರುಗಿಸಿಲ್ಲ. ಈ ಹಿಟ್ಲರ್ ವರ್ತನೆಯ ಮೇಲೆ ಯಾವುದೇ ಯುಎಪಿಎ ವಿಧಿಸಲಾಗಿಲ್ಲ” ಎಂದಿದೆ.

ಐವರು ಸದಸ್ಯರ ನಿಯೋಗದೊಂದಿಗೆ ಅಧಿಕಾರಿ ಶುಕ್ರವಾರ ಬಾಂಗ್ಲಾದ ಉಪ ಹೈಕಮಿಷನ್‌ನ ಹಿರಿಯ ಅಧಿಕಾರಿಗಳನ್ನು ಭೇಟಿಯಾಗಿದ್ದು, ಹೊರಬಂದ ಬಳಿಕ ರಾಜತಾಂತ್ರಿಕರ ಬಳಿ ನಮ್ಮ ಹೆಚ್ಚಿನ ಪ್ರಶ್ನೆಗಳಿಗೆ ಉತ್ತರವಿರಲಿಲ್ಲ ಎಂದು ಹೇಳಿದ್ದಾರೆ.

“ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರು ಮ್ಯಾನ್ಮಾರ್ ರೋಹಿಂಗ್ಯಾಗಳಿಗೆ ಕಾಕ್ಸ್ ಬಜಾರ್‌ನಲ್ಲಿ ಆಶ್ರಯ ನೀಡಿದ್ದು ಅವರು ಮುಸ್ಲಿಮರು ಎಂಬ ಕಾರಣಕ್ಕಾಗಿ, ಹೀಗಿರುವಾಗ ಹಿಂದೂಗಳನ್ನು ಏಕೆ ಅನಿಯಂತ್ರಿತವಾಗಿ ಗುರಿಯಾಗಿಸಲಾಗುತ್ತಿದೆ ಎಂದು ನಾನು ಅವರನ್ನು ಕೇಳಿದೆ? ಆ ದೇಶದಲ್ಲಿ ಎರಡು ಕೋಟಿ ಹಿಂದೂಗಳನ್ನು ನಿರಂತರವಾಗಿ ಗುರಿಯಾಗಿಸಿಕೊಳ್ಳಲಾಗುತ್ತಿದೆ. ಗಡಿಯ ಈ ಬದಿಯಲ್ಲಿರುವ 100 ಕೋಟಿ ಹಿಂದೂಗಳು ಮೌನವಾಗಿ ಕುಳಿತು ನೋಡುತ್ತಾರೆ ಎಂದು ಅವರು ಭಾವಿಸಿದ್ದರೆ, ಅದು ತಪ್ಪು” ಎಂದಿದ್ದಾರೆ.

ಈ ವಾರದ ಆರಂಭದಲ್ಲಿ ಉಪ ಹೈಕಮಿಷನ್ ಮುಂದೆ ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರ ಮೇಲೆ ಪೊಲೀಸ್ ಕ್ರಮ ಕೈಗೊಂಡಿದ್ದಕ್ಕಾಗಿ ಅಧಿಕಾರಿ ಮಮತಾ ಬ್ಯಾನರ್ಜಿ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದ್ದಾರೆ.

“ಗಡಿಯ ಆ ಬದಿಯಲ್ಲಿರುವ ಮುಮ್ಮಮದ್ ಯೂನುಸ್ ಪೊಲೀಸರಿಗೂ ಇಲ್ಲಿನ ಮಮತಾ ಬ್ಯಾನರ್ಜಿ ಪೊಲೀಸರಿಗೂ ಯಾವುದೇ ವ್ಯತ್ಯಾಸವಿಲ್ಲ. ಇಬ್ಬರೂ ತಮ್ಮ ಯಜಮಾನರಿಗೆ ಕುರುಡಾಗಿ ಸೇವೆ ಸಲ್ಲಿಸುತ್ತಿದ್ದಾರೆ” ಎಂದು ಅಧಿಕಾರಿ ಹೇಳಿದ್ದಾರೆ.

ಡಿಸೆಂಬರ್ 23 ರಂದು ಉಪ ಹೈಕಮಿಷನ್ ಮೇಲೆ ದಾಳಿ ಮಾಡಲು ಮುಂದಾದಾಗ ಬ್ಯಾರಿಕೇಡ್‌ಗಳನ್ನು ಮುರಿದು ಪೊಲೀಸರೊಂದಿಗೆ ಘರ್ಷಣೆ ನಡೆಸಿದ ಆರೋಪದಲ್ಲಿ ಹಿಂದೂ ಸಂಘಟನೆಯ 19 ಬೆಂಬಲಿಗರ ಮೇಲೆ ಲಾಠಿ ಚಾರ್ಜ್ ನಡೆಸಲಾಗಿದೆ ಮತ್ತು ಅವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ.

ಶುಕ್ರವಾರ ಉಪ ಹೈಕಮಿಷನ್ ಕಚೇರಿಯ ಮುಂದೆ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿತ್ತು. ನೆಲಕ್ಕೆ ಬಿಗಿಯಾಗಿ ಜೋಡಿಸಲಾದ ಲೋಹದ ಬ್ಯಾರಿಕೇಡ್‌ಗಳನ್ನು ಸ್ಥಾಪಿಸಲಾಗಿದೆ.

ದಾಳಿಗಳು ನಿರಂತರವಾಗಿ ಮುಂದುವರಿದರೆ, ನೂರಾರು ಹಿಂದೂ ಸನ್ಯಾಸಿಗಳೊಂದಿಗೆ, ಇನ್ನೂ ದೊಡ್ಡ ಪಡೆಯೊಂದಿಗೆ ಹೈಕಮಿಷನ್ ಕಚೇರಿಗೆ ನುಗ್ಗುವುದಾಗಿ ಅಧಿಕಾರಿ ಬೆದರಿಕೆ ಹಾಕಿದ್ದಾರೆ.

“ಗಂಗಾಸಾಗರ ಮೇಳಕ್ಕೆ ಹೋಗುವ ದಾರಿಯಲ್ಲಿ ಸನ್ಯಾಸಿಗಳು ಬಾಬುಘಾಟ್‌ನಲ್ಲಿ ಶಿಬಿರಗಳನ್ನು ಸ್ಥಾಪಿಸುತ್ತಾರೆ. ಮುಂದಿನ ವರ್ಷದ ಆರಂಭದಲ್ಲಿ ನಾನು ಗಂಗಾಸಾಗರದ ಐದು ಲಕ್ಷ ಹಿಂದೂ ಯಾತ್ರಿಕರೊಂದಿಗೆ ಹಿಂತಿರುಗುತ್ತೇನೆ ಮತ್ತು ಹೈಕಮಿಷನ್ ಕಚೇರಿಗೆ ಮೆರವಣಿ ಮಾಡುವ ಮೂಲಕ ಈ ಬ್ಯಾರಿಕೇಡ್‌ಗಳನ್ನು ಕಿತ್ತುಹಾಕುತ್ತೇನೆ” ಎಂದು ಸುವೇಂದು ಅಧಿಕಾರಿ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...