Homeಮುಖಪುಟ'ಇಸ್ರೇಲ್ ಗಾಝಾಗೆ ಪಾಠ ಕಲಿಸಿದಂತೆ ಬಾಂಗ್ಲಾದೇಶಕ್ಕೂ ಕಲಿಸಬೇಕು' : ನರಮೇಧ, ಜನಾಂಗೀಯ ಹತ್ಯೆಗೆ ಹಪಹಪಿಸಿದ ಬಿಜೆಪಿ...

‘ಇಸ್ರೇಲ್ ಗಾಝಾಗೆ ಪಾಠ ಕಲಿಸಿದಂತೆ ಬಾಂಗ್ಲಾದೇಶಕ್ಕೂ ಕಲಿಸಬೇಕು’ : ನರಮೇಧ, ಜನಾಂಗೀಯ ಹತ್ಯೆಗೆ ಹಪಹಪಿಸಿದ ಬಿಜೆಪಿ ನಾಯಕ

- Advertisement -
- Advertisement -

“ಇಸ್ರೇಲ್ ಗಾಝಾಗೆ ಕಲಿಸಿದಂತೆ ಬಾಂಗ್ಲಾದೇಶಕ್ಕೂ ಪಾಠ ಕಲಿಸಬೇಕು” ಎಂದು ಬಿಜೆಪಿ ಹಾಗೂ ಪಶ್ಚಿಮ ಬಂಗಾಳ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ನೀಡಿದ ಹೇಳಿಕೆಗೆ ಸಾರ್ವಜನಿಕ ವಲಯದಲ್ಲಿ ಭಾರೀ ಖಂಡನೆ ವ್ಯಕ್ತವಾಗಿದೆ.

ಡಿಸೆಂಬರ್ 26, ಶುಕ್ರವಾರ ಕೋಲ್ಕತ್ತಾದಲ್ಲಿರುವ ಬಾಂಗ್ಲಾದೇಶ ಉಪ ಹೈಕಮಿಷನ್ ಮುಂದೆ ಸುದ್ದಿಗಾರರೊಂದಿಗೆ ಮಾತನಾಡಿದ ಸುವೇಂದು ಅಧಿಕಾರಿ, “ಇಸ್ರೇಲ್ ಗಾಝಾಗೆ ಕಲಿಸಿದಂತೆ ಈ ಜನರಿಗೆ (ಬಾಂಗ್ಲಾದೇಶದ) ಪಾಠ ಕಲಿಸಬೇಕು. ನಮ್ಮ 100 ಕೋಟಿ ಹಿಂದೂಗಳು ಮತ್ತು ಹಿಂದೂಗಳ ಹಿತಾಸಕ್ತಿಗಾಗಿ ಕೆಲಸ ಮಾಡುವ ಸರ್ಕಾರ ಆಪರೇಷನ್ ಸಿಂಧೂರ್‌ನಲ್ಲಿ ಪಾಕಿಸ್ತಾನಕ್ಕೆ ಪಾಠ ಕಲಿಸಿದಂತೆಯೇ ಅವರಿಗೂ ಪಾಠ ಕಲಿಸಬೇಕು” ಎಂದು ಹೇಳಿದ್ದಾರೆ.

ಗಾರ್ಮೆಂಟ್ಸ್ ಕಾರ್ಖಾನೆಯ ಕೆಲಸಗಾರ 27 ವರ್ಷದ ದೀಪು ಚಂದ್ರ ದಾಸ್ ಅವರನ್ನು ಬಾಂಗ್ಲಾದಲ್ಲಿ ಗುಂಪು ಹತ್ಯೆಗೈದಿರುವುದನ್ನು ಖಂಡಿಸಿ, ಡಿಸೆಂಬರ್ 22ರಿಂದ ಬಾಂಗ್ಲಾದೇಶದ ಉಪ ಹೈಕಮಿಷನ್ ಮುಂದೆ ಪ್ರತಿಭಟನೆಗಳು ನಡೆಯುತ್ತಿವೆ. ಡಿಸೆಂಬರ್ 18ರಂದು ದೀಪು ಅವರನ್ನು ಬಾಂಗ್ಲಾದ ಮೆಯ್ಮೆನ್ಸಿಂಗ್ ಜಿಲ್ಲೆಯಲ್ಲಿ ಗುಂಪು ಹತ್ಯೆಗೈದು, ಬಳಿಕ ಅವರ ದೇಹವನ್ನು ಮರಕ್ಕೆ ತೂಗುಹಾಕಿ ಬೆಂಕಿ ಹಚ್ಚಲಾಗಿತ್ತು.

ಅಧಿಕಾರಿ ಹೇಳಿಕೆಗೆ ಪ್ರತಿಕ್ರಿಯಿಸಿರುವ ಅಖಿಲ ಭಾರತ ತೃಣಮೂಲ ಕಾಂಗ್ರೆಸ್, ಬಿಜೆಪಿ “ದ್ವೇಷ ಮತ್ತು ಅಸಹಿಷ್ಣುತೆಯನ್ನು ಒಂದು ಕಲಾರೂಪವಾಗಿ ಪರಿವರ್ತಿಸಿದೆ” ಎಂದು ಹೇಳಿದೆ.

“ಸುವೇಂದು ಅಧಿಕಾರಿ ತನ್ನ ವಿಷಪೂರಿತ ಧ್ವನಿಯಲ್ಲಿ ಮತ್ತೊಮ್ಮೆ ತನ್ನ ಫ್ಯಾಸಿಸ್ಟ್ ಕೋರೆಹಲ್ಲುಗಳನ್ನು ಹೊರತೆಗೆದು, ಇಸ್ರೇಲ್ ಗಾಝಾಗೆ ಕಲಿಸಿದಂತೆ ಭಾರತವು ಮುಸ್ಲಿಮರಿಗೆ ಪಾಠ ಕಲಿಸಬೇಕು ಎಂದು ಘೋಷಿಸುವ ಮೂಲಕ ನರಮೇಧದ ಪಿತ್ತವನ್ನು ಕಾರಿದ್ದಾರೆ. ಇದು ಬಹಿರಂಗ ದ್ವೇಷ ಭಾಷಣ, ಸಾಮೂಹಿಕ ಹತ್ಯೆ ಮತ್ತು ಜನಾಂಗೀಯ ಶುದ್ಧೀಕರಣಕ್ಕಾಗಿ ಕೊಟ್ಟ ರಕ್ತಪಿಪಾಸು ಕರೆಯಾಗಿದೆ. ಇವರ ವಿರುದ್ದ ಯಾವುದೇ ಎಫ್ಐಆರ್ ದಾಖಲಾಗಿಲ್ಲ, ಬಂಧಿಸಿಲ್ಲ, ಕನಿಷ್ಠ ಕಾನೂನು ಕ್ರಮ ಜರುಗಿಸಿಲ್ಲ. ಈ ಹಿಟ್ಲರ್ ವರ್ತನೆಯ ಮೇಲೆ ಯಾವುದೇ ಯುಎಪಿಎ ವಿಧಿಸಲಾಗಿಲ್ಲ” ಎಂದಿದೆ.

ಐವರು ಸದಸ್ಯರ ನಿಯೋಗದೊಂದಿಗೆ ಅಧಿಕಾರಿ ಶುಕ್ರವಾರ ಬಾಂಗ್ಲಾದ ಉಪ ಹೈಕಮಿಷನ್‌ನ ಹಿರಿಯ ಅಧಿಕಾರಿಗಳನ್ನು ಭೇಟಿಯಾಗಿದ್ದು, ಹೊರಬಂದ ಬಳಿಕ ರಾಜತಾಂತ್ರಿಕರ ಬಳಿ ನಮ್ಮ ಹೆಚ್ಚಿನ ಪ್ರಶ್ನೆಗಳಿಗೆ ಉತ್ತರವಿರಲಿಲ್ಲ ಎಂದು ಹೇಳಿದ್ದಾರೆ.

“ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರು ಮ್ಯಾನ್ಮಾರ್ ರೋಹಿಂಗ್ಯಾಗಳಿಗೆ ಕಾಕ್ಸ್ ಬಜಾರ್‌ನಲ್ಲಿ ಆಶ್ರಯ ನೀಡಿದ್ದು ಅವರು ಮುಸ್ಲಿಮರು ಎಂಬ ಕಾರಣಕ್ಕಾಗಿ, ಹೀಗಿರುವಾಗ ಹಿಂದೂಗಳನ್ನು ಏಕೆ ಅನಿಯಂತ್ರಿತವಾಗಿ ಗುರಿಯಾಗಿಸಲಾಗುತ್ತಿದೆ ಎಂದು ನಾನು ಅವರನ್ನು ಕೇಳಿದೆ? ಆ ದೇಶದಲ್ಲಿ ಎರಡು ಕೋಟಿ ಹಿಂದೂಗಳನ್ನು ನಿರಂತರವಾಗಿ ಗುರಿಯಾಗಿಸಿಕೊಳ್ಳಲಾಗುತ್ತಿದೆ. ಗಡಿಯ ಈ ಬದಿಯಲ್ಲಿರುವ 100 ಕೋಟಿ ಹಿಂದೂಗಳು ಮೌನವಾಗಿ ಕುಳಿತು ನೋಡುತ್ತಾರೆ ಎಂದು ಅವರು ಭಾವಿಸಿದ್ದರೆ, ಅದು ತಪ್ಪು” ಎಂದಿದ್ದಾರೆ.

ಈ ವಾರದ ಆರಂಭದಲ್ಲಿ ಉಪ ಹೈಕಮಿಷನ್ ಮುಂದೆ ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರ ಮೇಲೆ ಪೊಲೀಸ್ ಕ್ರಮ ಕೈಗೊಂಡಿದ್ದಕ್ಕಾಗಿ ಅಧಿಕಾರಿ ಮಮತಾ ಬ್ಯಾನರ್ಜಿ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದ್ದಾರೆ.

“ಗಡಿಯ ಆ ಬದಿಯಲ್ಲಿರುವ ಮುಮ್ಮಮದ್ ಯೂನುಸ್ ಪೊಲೀಸರಿಗೂ ಇಲ್ಲಿನ ಮಮತಾ ಬ್ಯಾನರ್ಜಿ ಪೊಲೀಸರಿಗೂ ಯಾವುದೇ ವ್ಯತ್ಯಾಸವಿಲ್ಲ. ಇಬ್ಬರೂ ತಮ್ಮ ಯಜಮಾನರಿಗೆ ಕುರುಡಾಗಿ ಸೇವೆ ಸಲ್ಲಿಸುತ್ತಿದ್ದಾರೆ” ಎಂದು ಅಧಿಕಾರಿ ಹೇಳಿದ್ದಾರೆ.

ಡಿಸೆಂಬರ್ 23 ರಂದು ಉಪ ಹೈಕಮಿಷನ್ ಮೇಲೆ ದಾಳಿ ಮಾಡಲು ಮುಂದಾದಾಗ ಬ್ಯಾರಿಕೇಡ್‌ಗಳನ್ನು ಮುರಿದು ಪೊಲೀಸರೊಂದಿಗೆ ಘರ್ಷಣೆ ನಡೆಸಿದ ಆರೋಪದಲ್ಲಿ ಹಿಂದೂ ಸಂಘಟನೆಯ 19 ಬೆಂಬಲಿಗರ ಮೇಲೆ ಲಾಠಿ ಚಾರ್ಜ್ ನಡೆಸಲಾಗಿದೆ ಮತ್ತು ಅವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ.

ಶುಕ್ರವಾರ ಉಪ ಹೈಕಮಿಷನ್ ಕಚೇರಿಯ ಮುಂದೆ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿತ್ತು. ನೆಲಕ್ಕೆ ಬಿಗಿಯಾಗಿ ಜೋಡಿಸಲಾದ ಲೋಹದ ಬ್ಯಾರಿಕೇಡ್‌ಗಳನ್ನು ಸ್ಥಾಪಿಸಲಾಗಿದೆ.

ದಾಳಿಗಳು ನಿರಂತರವಾಗಿ ಮುಂದುವರಿದರೆ, ನೂರಾರು ಹಿಂದೂ ಸನ್ಯಾಸಿಗಳೊಂದಿಗೆ, ಇನ್ನೂ ದೊಡ್ಡ ಪಡೆಯೊಂದಿಗೆ ಹೈಕಮಿಷನ್ ಕಚೇರಿಗೆ ನುಗ್ಗುವುದಾಗಿ ಅಧಿಕಾರಿ ಬೆದರಿಕೆ ಹಾಕಿದ್ದಾರೆ.

“ಗಂಗಾಸಾಗರ ಮೇಳಕ್ಕೆ ಹೋಗುವ ದಾರಿಯಲ್ಲಿ ಸನ್ಯಾಸಿಗಳು ಬಾಬುಘಾಟ್‌ನಲ್ಲಿ ಶಿಬಿರಗಳನ್ನು ಸ್ಥಾಪಿಸುತ್ತಾರೆ. ಮುಂದಿನ ವರ್ಷದ ಆರಂಭದಲ್ಲಿ ನಾನು ಗಂಗಾಸಾಗರದ ಐದು ಲಕ್ಷ ಹಿಂದೂ ಯಾತ್ರಿಕರೊಂದಿಗೆ ಹಿಂತಿರುಗುತ್ತೇನೆ ಮತ್ತು ಹೈಕಮಿಷನ್ ಕಚೇರಿಗೆ ಮೆರವಣಿ ಮಾಡುವ ಮೂಲಕ ಈ ಬ್ಯಾರಿಕೇಡ್‌ಗಳನ್ನು ಕಿತ್ತುಹಾಕುತ್ತೇನೆ” ಎಂದು ಸುವೇಂದು ಅಧಿಕಾರಿ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...