Homeಮುಖಪುಟಛತ್ತೀಸ್‌ಗಢ : ಹಿಂಸಾಚಾರಕ್ಕೆ ತಿರುಗಿದ ಕಲ್ಲಿದ್ದಲು ಗಣಿ ವಿರೋಧಿ ಹೋರಾಟ : ಹಲವು ಪೊಲೀಸರಿಗೆ ಗಾಯ,...

ಛತ್ತೀಸ್‌ಗಢ : ಹಿಂಸಾಚಾರಕ್ಕೆ ತಿರುಗಿದ ಕಲ್ಲಿದ್ದಲು ಗಣಿ ವಿರೋಧಿ ಹೋರಾಟ : ಹಲವು ಪೊಲೀಸರಿಗೆ ಗಾಯ, ವಾಹನಗಳಿಗೆ ಬೆಂಕಿ

- Advertisement -
- Advertisement -

ಛತ್ತೀಸ್‌ಗಢದ ರಾಯ್‌ಗಢ ಜಿಲ್ಲೆಯ ತಮ್ನಾರ್ ಪ್ರದೇಶದಲ್ಲಿ ಕಲ್ಲಿದ್ದಲು ಗಣಿಗಾರಿಕೆ ಯೋಜನೆಯನ್ನು ವಿರೋಧಿಸಿ ಶನಿವಾರ (ಡಿ.27) ನಡೆದ ಪ್ರತಿಭಟನೆ ಹಿಂಸಾತ್ಮಕ ರೂಪ ಪಡೆದುಕೊಂಡಿದ್ದು, ಪೊಲೀಸ್ ಸಿಬ್ಬಂದಿ ಸೇರಿದಂತೆ ಕನಿಷ್ಠ ಎಂಟು ಜನರು ಗಾಯಗೊಂಡಿದ್ದಾರೆ ಮತ್ತು ಹಲವಾರು ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ ಎಂದು ವರದಿಯಾಗಿದೆ.

ಜಿಲ್ಲಾಡಳಿತದ ಪ್ರಕಾರ, ಪ್ರತಿಭಟನಾಕಾರರು ಜಿಂದಾಲ್ ಪವರ್ ಲಿಮಿಟೆಡ್‌ನ ಕಲ್ಲಿದ್ದಲು ನಿರ್ವಹಣಾ ಘಟಕಕ್ಕೆ ನುಗ್ಗಿ, ಒಂದು ಕನ್ವೇಯರ್ ಬೆಲ್ಟ್, ಎರಡು ಟ್ರ್ಯಾಕ್ಟರ್‌ಗಳು ಮತ್ತು ಇತರ ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ ಮತ್ತು ಕಚೇರಿ ಆವರಣವನ್ನು ಧ್ವಂಸಗೊಳಿಸಿದ್ದಾರೆ. ಘರ್ಷಣೆಯ ಸಮಯದಲ್ಲಿ ಪೊಲೀಸ್ ಬಸ್, ಜೀಪ್ ಮತ್ತು ಆಂಬ್ಯುಲೆನ್ಸ್‌ಗೆ ಬೆಂಕಿ ಹಚ್ಚಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರತಿಭಟನಾಕಾರರು ಕಲ್ಲು ತೂರಾಟ ನಡೆಸಿದ ಮತ್ತು ಬೆಂಕಿ ಹಚ್ಚಿದ ನಂತರ ಉದ್ವಿಗ್ನತೆ ಹೆಚ್ಚಾಯಿತು. ಇದರಿಂದಾಗಿ ಹಲವಾರು ಸರ್ಕಾರಿ ವಾಹನಗಳಿಗೆ ಹಾನಿಯಾಯಿತು. ಹಿರಿಯ ಅಧಿಕಾರಿಗಳು ಮತ್ತು ಸ್ಥಳೀಯ ಶಾಸಕರು ಸ್ಥಳಕ್ಕೆ ತಲುಪಿ ಜನರನ್ನು ಸಮಾಧಾನಪಡಿಸಿದ ನಂತರವೂ ಪರಿಸ್ಥಿತಿ ಉದ್ವಿಗ್ನವಾಗಿತ್ತು ಎಂದು ಆಡಳಿತ ಹೇಳಿದೆ.

ತಮ್ನಾರ್ ಪ್ರದೇಶದ ಗೇರ್ ಪೆಲ್ಮಾ ಸೆಕ್ಟರ್-Iರ ಕಲ್ಲಿದ್ದಲು ಬ್ಲಾಕ್‌ ಪ್ರದೇಶದ 14 ಹಳ್ಳಿಗಳ ಜನರು ಡಿಸೆಂಬರ್ 12 ರಿಂದ ಲಿಬ್ರಾ ಗ್ರಾಮದ ಸಿಎಚ್‌ಪಿ ಚೌಕ್‌ನಲ್ಲಿ ಧರಣಿ ನಡೆಸುತ್ತಿದ್ದಾರೆ. ಪ್ರಸ್ತಾವಿತ ಗಣಿಗಾರಿಕೆ ಯೋಜನೆಗಾಗಿ ಡಿಸೆಂಬರ್ 8 ರಂದು ಧೌರಭಟದಲ್ಲಿ ನಡೆದ ಸಾರ್ವಜನಿಕ ಪರಿಶೀಲನೆಯ ವಿರುದ್ಧ ಈ ಆಂದೋಲನ ನಡೆಯುತ್ತಿದೆ. ಇದನ್ನು ನಿಗದಿತ ಮಾನದಂಡಗಳನ್ನು ಉಲ್ಲಂಘಿಸಿ ನಡೆಸಲಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಡಿಸೆಂಬರ್ 4ರಂದು ರಾಜ್ಯದ ಸುರ್ಗುಜಾ ಜಿಲ್ಲೆಯಲ್ಲಿ ಕಲ್ಲಿದ್ದಲು ಗಣಿಗಾರಿಕೆಗೆ ಸಂಬಂಧಿಸಿದಂತೆ ನಡೆದ ಮತ್ತೊಂದು ಪ್ರಮುಖ ಘರ್ಷಣೆಯ ನಂತರ ಈ ಹಿಂಸಾಚಾರ ಸಂಭವಿಸಿದೆ. ಪರ್ಸೋಡಿ ಕಲಾ ಗ್ರಾಮದಲ್ಲಿ ಅಮೇರಾ ಕಲ್ಲಿದ್ದಲು ಗಣಿ ವಿಸ್ತರಣಾ ಯೋಜನೆಯನ್ನು ಪ್ರತಿಭಟಿಸುತ್ತಿದ್ದ ಗ್ರಾಮಸ್ಥರೊಂದಿಗಿನ ಘರ್ಷಣೆಯಲ್ಲಿ 30ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದರು. ಓಪನ್-ಕಾಸ್ಟ್ ಗಣಿ ವಿಸ್ತರಣೆಗೆ ಸಂಬಂಧಿಸಿದ ಪ್ರತಿಭಟನೆಯು ಹಿಂಸಾತ್ಮಕವಾಗಿ ಮಾರ್ಪಟ್ಟಿತ್ತು. ಪ್ರತಿಭಟನಾಕಾರರು ಭದ್ರತಾ ಪಡೆಗಳ ಮೇಲೆ ಕಲ್ಲು ತೂರಾಟ ನಡೆಸಿದಾಗ ಪೊಲೀಸರು ಗುಂಪನ್ನು ಚದುರಿಸಲು ಲಾಠಿ ಚಾರ್ಜ್ ಮಾಡಿ ಅಶ್ರುವಾಯು ಪ್ರಯೋಗಿಸಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಗೇರ್ ಪೆಲ್ಮಾ ಕಲ್ಲಿದ್ದಲು ಬ್ಲಾಕ್ ಈಶಾನ್ಯ ಛತ್ತೀಸ್‌ಗಢದ ಪರಿಸರ ಸೂಕ್ಷ್ಮ ಭಾಗದಲ್ಲಿದೆ. ಇದು ದಟ್ಟವಾದ ಕಾಡುಗಳು, ಫಲವತ್ತಾದ ಕೃಷಿ ಭೂಮಿ ಮತ್ತು ಆದಿವಾಸಿ ಸಮುದಾಯಗಳು ಹೆಚ್ಚಿನ ಸಂಖ್ಯೆಲ್ಲಿರುವ ಪ್ರದೇಶವಾಗಿದೆ. ತಮ್ನಾರ್-ಧರಮ್‌ಜೈಗಢ ಪಟ್ಟಿಯಲ್ಲಿ ದೊಡ್ಡ ಪ್ರಮಾಣದ ಕಲ್ಲಿದ್ದಲು ಗಣಿಗಾರಿಕೆಯು ಅರಣ್ಯನಾಶ, ಅಂತರ್ಜಲ ಕುಸಿತ, ವಾಯು ಮಾಲಿನ್ಯ, ಕೃಷಿ ಮತ್ತು ಕುಡಿಯುವ ನೀರಿನ ಅಗತ್ಯಗಳನ್ನು ಬೆಂಬಲಿಸುವ ಸ್ಥಳೀಯ ಹೊಳೆಗಳ ಮಾಲಿನ್ಯಕ್ಕೆ ಕಾರಣವಾಗಬಹುದು ಎಂದು ಪರಿಸರ ಗುಂಪುಗಳು ಎಚ್ಚರಿಸಿವೆ.

ಕಲ್ಲಿದ್ದಲು ನಿರ್ವಹಣಾ ಘಟಕಗಳು, ರೈಲು ಕಾರಿಡಾರ್‌ಗಳು ಮತ್ತು ಬೂದಿ ಕೊಳಗಳು ಸೇರಿದಂತೆ ಗಣಿಗಾರಿಕೆ ಸಂಬಂಧಿತ ಮೂಲಸೌಕರ್ಯಗಳು ವೇಗವಾಗಿ ವಿಸ್ತರಿಸುತ್ತಿದ್ದರೂ, ಈ ಪ್ರದೇಶದಲ್ಲಿ ಬಹು ಕಲ್ಲಿದ್ದಲು ಬ್ಲಾಕ್‌ಗಳ ಸಂಚಿತ ಪರಿಸರ ಪರಿಣಾಮವನ್ನು ಸಮರ್ಪಕವಾಗಿ ನಿರ್ಣಯಿಸಲಾಗಿಲ್ಲ ಎಂದು ಹೋರಾಟಗಾರರು ವಾದಿಸುತ್ತಾರೆ.

ಭಾರತದ ಕಲ್ಲಿದ್ದಲು ಉತ್ಪಾದನೆಗೆ ಛತ್ತೀಸ್‌ಗಢವು ಈಗಾಗಲೇ ಹೆಚ್ಚಿನ ಕೊಡುಗೆ ನೀಡುತ್ತಿದೆ ಎಂದು ಹೋರಾಟಗಾರರು ಬೆಟ್ಟು ಮಾಡುತ್ತಾರೆ. ಹವಾಮಾನ ಬದಲಾವಣೆ ಮತ್ತು ಸಾರ್ವಜನಿಕ ಆರೋಗ್ಯದ ಬಗ್ಗೆ ಹೆಚ್ಚುತ್ತಿರುವ ಕಳವಳಗಳ ನಡುವೆ ಅರಣ್ಯ ಪ್ರದೇಶಗಳಲ್ಲಿ ಹೆಚ್ಚಿನ ಅನುಮತಿಗಳ ಅಗತ್ಯವನ್ನು ಪ್ರಶ್ನಿಸಿದ್ದಾರೆ.

ಶನಿವಾರ ಬೆಳಿಗ್ಗೆ ಸುಮಾರು 300 ಪ್ರತಿಭಟನಾಕಾರರು ಸ್ಥಳದಲ್ಲಿ ಜಮಾಯಿಸಿದ್ದರು, ಕೆಲವರು ರಸ್ತೆಗಳನ್ನು ತಡೆದು ಸಂಚಾರಕ್ಕೆ ಅಡ್ಡಿಪಡಿಸಿದರು ಎಂದು ಜಿಲ್ಲಾಡಳಿತ ಹೇಳಿಕೆಯಲ್ಲಿ ತಿಳಿಸಿದೆ. ಹಿರಿಯ ಕಂದಾಯ ಮತ್ತು ಪೊಲೀಸ್ ಅಧಿಕಾರಿಗಳು ಬೆಳಿಗ್ಗೆ 10 ಗಂಟೆ ಸುಮಾರಿಗೆ ಮಧ್ಯಪ್ರವೇಶಿಸಿ ಅವರನ್ನು ತಮ್ಮ ಗೊತ್ತುಪಡಿಸಿದ ಪ್ರತಿಭಟನಾ ಪ್ರದೇಶಕ್ಕೆ ಮರಳುವಂತೆ ಮನವೊಲಿಸಿದರು ಎಂದು ಹೇಳಿದೆ.

ಆದಾಗ್ಯೂ, ಹತ್ತಿರದ ಹಳ್ಳಿಗಳ ಜನರು ಆಂದೋಲನದಲ್ಲಿ ಸೇರಿಕೊಂಡಾಗ ಜನಸಮೂಹ ಸುಮಾರು 1,000 ಕ್ಕೆ ಏರಿತು. ಶಾಂತಿ ಕಾಪಾಡುವಂತೆ ಅಧಿಕಾರಿಗಳು ಪದೇ ಪದೇ ಮನವಿ ಮಾಡಿದರೂ, ಮಧ್ಯಾಹ್ನ 2.30 ರ ಸುಮಾರಿಗೆ ಜನಸಮೂಹ ಹಿಂಸಾತ್ಮಕವಾಗಿ ತಿರುಗಿ, ಪೊಲೀಸ್ ಬ್ಯಾರಿಕೇಡ್‌ಗಳನ್ನು ಮುರಿದು ಕಲ್ಲು ಮತ್ತು ಕೋಲುಗಳಿಂದ ಸಿಬ್ಬಂದಿ ಮೇಲೆ ದಾಳಿ ಮಾಡಿತು ಎಂದು ತಿಳಿಸಿದೆ.

ಉಪವಿಭಾಗೀಯ ಪೊಲೀಸ್ ಅಧಿಕಾರಿ ಅನಿಲ್ ವಿಶ್ವಕರ್ಮ, ತಮ್ನಾರ್ ಪೊಲೀಸ್ ಠಾಣೆಯ ಉಸ್ತುವಾರಿ ಕಮಲಾ ಪುಸಮ್ ಮತ್ತು ಒಬ್ಬ ಕಾನ್‌ಸ್ಟೆಬಲ್ ಗಂಭೀರ ಗಾಯಗೊಂಡಿದ್ದು, ಮಹಿಳಾ ಸಿಬ್ಬಂದಿ ಸೇರಿದಂತೆ ಹಲವಾರು ಪೊಲೀಸರು ಗಾಯಗೊಂಡಿದ್ದಾರೆ. ಗಾಯಾಳುಗಳ ಸ್ಥಿತಿ ಸ್ಥಿರವಾಗಿದ್ದು, ಕೆಲವರನ್ನು ಹೆಚ್ಚಿನ ವೈದ್ಯಕೀಯ ಚಿಕಿತ್ಸೆಗಾಗಿ ರಾಯ್‌ಗಢಕ್ಕೆ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಪ್ರತಿಭಟನೆಯ ನಂತರ ಜನರ ಗುಂಪು ಜಿಂದಾಲ್ ಕಲ್ಲಿದ್ದಲು ನಿರ್ವಹಣಾ ಘಟಕಕ್ಕೆ ನುಗ್ಗಿ, ಯಂತ್ರೋಪಕರಣಗಳು ಮತ್ತು ವಾಹನಗಳಿಗೆ ಬೆಂಕಿ ಹಚ್ಚಿ, ಕಚೇರಿಗಳನ್ನು ಧ್ವಂಸಗೊಳಿಸಿತು ಎಂದು ಆಡಳಿತ ತಿಳಿಸಿದೆ. ರಾಯ್‌ಗಢ ಜಿಲ್ಲಾಧಿಕಾರಿ ಮಾಯಂಕ್ ಚತುರ್ವೇದಿ, ಪೊಲೀಸ್ ವರಿಷ್ಠಾಧಿಕಾರಿ ದಿವ್ಯಾಂಗ್ ಪಟೇಲ್ ಮತ್ತು ಸ್ಥಳೀಯ ಶಾಸಕಿ ವಿದ್ಯಾವತಿ ಸಿದರ್ ಪರಿಸ್ಥಿತಿಯನ್ನು ಶಾಂತಗೊಳಿಸಲು ಆಗಮಿಸಿದ ನಂತರವೂ ಮತ್ತೆ ಕಲ್ಲು ತೂರಾಟ ನಡೆಯಿತು. ಘಟಕದೊಳಗೆ ಬೆಂಕಿ ಹಚ್ಚಿದ ಘಟನೆ ವರದಿಯಾಗಿದೆ ಎಂದು ಹೇಳಿದೆ.

ಪರಿಸ್ಥಿತಿ ಉದ್ವಿಗ್ನವಾಗಿದ್ದರೂ ನಿಯಂತ್ರಣದಲ್ಲಿದೆ ಎಂದು ಪೊಲೀಸರು ತಿಳಿಸಿದ್ದಾರೆ, ಪ್ರದೇಶದಾದ್ಯಂತ ಭದ್ರತೆಯನ್ನು ಹೆಚ್ಚಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...