Homeಮುಖಪುಟಬಾಂಗ್ಲಾದೇಶದ ಮೊದಲ ಮಹಿಳಾ ಪ್ರಧಾನಿ ಖಾಲಿದಾ ಝಿಯಾ ನಿಧನ

ಬಾಂಗ್ಲಾದೇಶದ ಮೊದಲ ಮಹಿಳಾ ಪ್ರಧಾನಿ ಖಾಲಿದಾ ಝಿಯಾ ನಿಧನ

- Advertisement -
- Advertisement -

ಬಾಂಗ್ಲಾದೇಶದ ಮೊದಲ ಮಹಿಳಾ ಪ್ರಧಾನಿ ಖಾಲಿದಾ ಝಿಯಾ ದೀರ್ಘಕಾಲದ ಅನಾರೋಗ್ಯದ ನಂತರ ಮಂಗಳವಾರ (ಡಿಸೆಂಬರ್ 30, 2025) ಬೆಳಗಿನ ಜಾವ ನಿಧನರಾದರು. ಅವರಿಗೆ 80 ವರ್ಷ ವಯಸ್ಸಾಗಿತ್ತು.

ಖಾಲಿದಾ ಅವರು ಬಾಂಗ್ಲಾದೇಶದ ವಿರೋಧ ಪಕ್ಷ ಬಾಂಗ್ಲಾದೇಶ್ ನ್ಯಾಷನಲಿಸ್ಟ್ ಪಾರ್ಟಿ (ಬಿಎನ್‌ಪಿ) ಅಧ್ಯಕ್ಷೆಯಾಗಿದ್ದರು.

“ಬಿಎನ್‌ಪಿ ಅಧ್ಯಕ್ಷೆ, ಮಾಜಿ ಪ್ರಧಾನಿ ಹಾಗೂ ರಾಷ್ಟ್ರೀಯ ನಾಯಕಿ ಬೇಗಂ ಖಾಲಿದಾ ಝಿಯಾ ಅವರು ಇಂದು ಬೆಳಿಗ್ಗೆ ಫಜ್ರ್ ಪ್ರಾರ್ಥನೆಯ ನಂತರ 6 ಗಂಟೆಗೆ ಕೊನೆಯುಸಿರೆಳೆದರು” ಎಂದು ಪಕ್ಷ ಪ್ರಕಟಣೆಯಲ್ಲಿ ತಿಳಿಸಿದೆ. ಅವರ ಅಗಲಿಕೆಗೆ ಸಂತಾಪ ಸೂಚಿಸಿ, ಪ್ರಾರ್ಥನೆ ಸಲ್ಲಿಸುವಂತೆ ಬಿಎನ್‌ಪಿ ಮನವಿ ಮಾಡಿದೆ.

ವೈದ್ಯರ ಪ್ರಕಾರ, ಖಾಲಿದಾ ಝಿಯಾ ಅವರು ಯಕೃತ್ತಿನ ಸಮಸ್ಯೆ, ಸಂಧಿವಾತ, ಮಧುಮೇಹ ಹಾಗೂ ಹೃದಯ ಸಂಬಂಧಿ ಖಾಯಿಲೆಗಳಿಂದ ಬಳಲುತ್ತಿದ್ದರು. ಅನಾರೋಗ್ಯದ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿದ್ದ ಸಂದರ್ಭದಲ್ಲಿ ಮಗ ಹಾಗೂ ಬಿಎನ್‌ಪಿಯ ಹಂಗಾಮಿ ಅಧ್ಯಕ್ಷ ತಾರಿಕ್ ರೆಹಮಾನ್ ತಾಯಿಯನ್ನು ಭೇಟಿಮಾಡಿದ್ದರು.

ಖಾಲಿದಾ ಝಿಯಾ ಮತ್ತು ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ನಡುವಿನ ರಾಜಕೀಯ ಪೈಪೋಟಿ ದಶಕಗಳ ಕಾಲ ಬಾಂಗ್ಲಾದೇಶದ ರಾಜಕೀಯ ದಿಕ್ಕನ್ನು ನಿರ್ಧರಿಸಿತ್ತು. 1981ರಲ್ಲಿ ದಂಗೆಯಲ್ಲಿ ಹತ್ಯೆಯಾದ ಅಧ್ಯಕ್ಷ ಝಿಯಾವುರ್‌ ರೆಹಮಾನ್ ಅವರ ಪತ್ನಿಯಾದ ಖಾಲಿದಾ ಝಿಯಾ, ನಂತರ ಮಿಲಿಟರಿ ಆಡಳಿತದ ವಿರುದ್ಧ ನಡೆದ ಸಾಮೂಹಿಕ ಆಂದೋಲನದಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಈ ಆಂದೋಲನದ ಫಲವಾಗಿ 1990ರಲ್ಲಿ ಮಿಲಿಟರಿ ಆಡಳಿತ ಪತನವಾಯಿತು.

1991ರಲ್ಲಿ ಮೊದಲ ಬಾರಿಗೆ ಪ್ರಧಾನಿಯಾಗಿದ್ದ ಖಾಲಿದಾ ಝಿಯಾ, 2001ರಿಂದ ಮತ್ತೊಮ್ಮೆ ಪ್ರಧಾನಿಯಾಗಿ ಸೇವೆ ಸಲ್ಲಿಸಿದರು. ಅನೇಕ ಚುನಾವಣೆಗಳಲ್ಲಿ ಅವರ ಎದುರಾಳಿಯಾಗಿ ಶೇಖ್ ಹಸೀನಾ ಸ್ಪರ್ಧಿಸಿದ್ದರು. 2006ರಿಂದ ಅಧಿಕಾರದ ಹೊರಗಿದ್ದ ಅವರು, ರಾಜಕೀಯ ಪ್ರೇರಿತವೆಂದು ಹೇಳಲಾದ ಭ್ರಷ್ಟಾಚಾರ ಪ್ರಕರಣಗಳಲ್ಲಿ ಜೈಲು ಹಾಗೂ ಗೃಹಬಂಧನ ಅನುಭವಿಸಿದ್ದರು.

ಜನವರಿ 2025ರಲ್ಲಿ, ಸುಪ್ರೀಂ ಕೋರ್ಟ್ ಖಾಲಿದಾ ಅವರನ್ನು ಕೊನೆಯ ಭ್ರಷ್ಟಾಚಾರ ಪ್ರಕರಣದಲ್ಲಿ ಖುಲಾಸೆಗೊಳಿಸಿತು. ಇದು ಮುಂದಿನ (2026) ಫೆಬ್ರವರಿಯಲ್ಲಿ ನಡೆಯಲಿರುವ ಸಾರ್ವತ್ರಿಕ ಚುನಾವಣೆಯಲ್ಲಿ ಸ್ಪರ್ಧಿಸಲು ಅವರಿಗೆ ಅವಕಾಶ ನೀಡುತ್ತಿತ್ತು. ಈ ನಡುವೆ ಅವರು ನಿಧನರಾಗಿದ್ದಾರೆ.

2020ರಲ್ಲಿ ಅನಾರೋಗ್ಯದ ಕಾರಣ ಖಾಲಿದಾ ಅವರು ಜೈಲಿನಿಂದ ಬಿಡುಗಡೆಯಾಗಿದ್ದರು. ಆ ಬಳಿಕ ಅವರ ಕುಟುಂಬ ವಿದೇಶದಲ್ಲಿ ಚಿಕಿತ್ಸೆ ನೀಡಲು ಕನಿಷ್ಠ 18 ಬಾರಿ ಶೇಖ್ ಹಸೀನಾ ಸರ್ಕಾರವನ್ನು ವಿನಂತಿಸಿತು. ಆದರೆ, ಈ ವಿನಂತಿಗಳನ್ನು ತಿರಸ್ಕರಿಸಲಾಯಿತು ಎಂದು ಬಿಎನ್‌ಪಿ ಹೇಳಿದೆ.

ಹಸೀನಾ ಸರ್ಕಾರ ಪತನಗೊಂಡ ಬಳಿಕ ರಚನೆಯಾದ ಮಧ್ಯಂತರ ಸರ್ಕಾರ ಈ ವರ್ಷ ಆರಂಭದಲ್ಲಿ ಖಾಲಿದಾ ಅವರನ್ನು ಚಿಕಿತ್ಸೆಗಾಗಿ ವಿದೇಶಕ್ಕೆ ಕರೆದೊಯ್ಯಲು ಅನುಮತಿ ನೀಡಿತು. ವೈದ್ಯಕೀಯ ಚಿಕಿತ್ಸೆಗಾಗಿ ಯುನೈಟೆಡ್ ಕಿಂಗ್‌ಡಮ್‌ಗೆ ತೆರಳಿದ್ದ ಅವರು, ಮೇ ತಿಂಗಳಲ್ಲಿ ಸ್ವದೇಶಕ್ಕೆ ಮರಳಿದ್ದರು.

ಅಧಿಕಾರದಿಂದ ದೂರವಿದ್ದರೂ ಖಾಲಿದಾ ಝಿಯಾ ಹಾಗೂ ಅವರ ಮಧ್ಯ–ಬಲಪಂಥೀಯ ಬಿಎನ್‌ಪಿ ದೇಶದ ರಾಜಕೀಯದಲ್ಲಿ ಪ್ರಭಾವವನ್ನು ಉಳಿಸಿಕೊಂಡಿತ್ತು. ಫೆಬ್ರವರಿಯಲ್ಲಿ ನಡೆಯಲಿರುವ ಸಂಸತ್ತಿನ ಚುನಾವಣೆಯಲ್ಲಿ ಬಿಎನ್‌ಪಿ ಮುಂಚೂಣಿಯಲ್ಲಿದೆ. ಸುಮಾರು 17 ವರ್ಷಗಳ ಸ್ವಯಂ ಗಡಿಪಾರು ಜೀವನದ ಬಳಿಕ ಇತ್ತೀಚೆಗೆ ದೇಶಕ್ಕೆ ಮರಳಿದ ತಾರಿಕ್ ರೆಹಮಾನ್ ಪ್ರಧಾನಿಯಾಗುವ ಪ್ರಬಲ ಅಭ್ಯರ್ಥಿಯಾಗಿ ಕಾಣಿಸಿಕೊಂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....