Homeಮುಖಪುಟಬಾಂಗ್ಲಾದೇಶದ ಮೊದಲ ಮಹಿಳಾ ಪ್ರಧಾನಿ ಖಾಲಿದಾ ಝಿಯಾ ನಿಧನ

ಬಾಂಗ್ಲಾದೇಶದ ಮೊದಲ ಮಹಿಳಾ ಪ್ರಧಾನಿ ಖಾಲಿದಾ ಝಿಯಾ ನಿಧನ

- Advertisement -
- Advertisement -

ಬಾಂಗ್ಲಾದೇಶದ ಮೊದಲ ಮಹಿಳಾ ಪ್ರಧಾನಿ ಖಾಲಿದಾ ಝಿಯಾ ದೀರ್ಘಕಾಲದ ಅನಾರೋಗ್ಯದ ನಂತರ ಮಂಗಳವಾರ (ಡಿಸೆಂಬರ್ 30, 2025) ಬೆಳಗಿನ ಜಾವ ನಿಧನರಾದರು. ಅವರಿಗೆ 80 ವರ್ಷ ವಯಸ್ಸಾಗಿತ್ತು.

ಖಾಲಿದಾ ಅವರು ಬಾಂಗ್ಲಾದೇಶದ ವಿರೋಧ ಪಕ್ಷ ಬಾಂಗ್ಲಾದೇಶ್ ನ್ಯಾಷನಲಿಸ್ಟ್ ಪಾರ್ಟಿ (ಬಿಎನ್‌ಪಿ) ಅಧ್ಯಕ್ಷೆಯಾಗಿದ್ದರು.

“ಬಿಎನ್‌ಪಿ ಅಧ್ಯಕ್ಷೆ, ಮಾಜಿ ಪ್ರಧಾನಿ ಹಾಗೂ ರಾಷ್ಟ್ರೀಯ ನಾಯಕಿ ಬೇಗಂ ಖಾಲಿದಾ ಝಿಯಾ ಅವರು ಇಂದು ಬೆಳಿಗ್ಗೆ ಫಜ್ರ್ ಪ್ರಾರ್ಥನೆಯ ನಂತರ 6 ಗಂಟೆಗೆ ಕೊನೆಯುಸಿರೆಳೆದರು” ಎಂದು ಪಕ್ಷ ಪ್ರಕಟಣೆಯಲ್ಲಿ ತಿಳಿಸಿದೆ. ಅವರ ಅಗಲಿಕೆಗೆ ಸಂತಾಪ ಸೂಚಿಸಿ, ಪ್ರಾರ್ಥನೆ ಸಲ್ಲಿಸುವಂತೆ ಬಿಎನ್‌ಪಿ ಮನವಿ ಮಾಡಿದೆ.

ವೈದ್ಯರ ಪ್ರಕಾರ, ಖಾಲಿದಾ ಝಿಯಾ ಅವರು ಯಕೃತ್ತಿನ ಸಮಸ್ಯೆ, ಸಂಧಿವಾತ, ಮಧುಮೇಹ ಹಾಗೂ ಹೃದಯ ಸಂಬಂಧಿ ಖಾಯಿಲೆಗಳಿಂದ ಬಳಲುತ್ತಿದ್ದರು. ಅನಾರೋಗ್ಯದ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿದ್ದ ಸಂದರ್ಭದಲ್ಲಿ ಮಗ ಹಾಗೂ ಬಿಎನ್‌ಪಿಯ ಹಂಗಾಮಿ ಅಧ್ಯಕ್ಷ ತಾರಿಕ್ ರೆಹಮಾನ್ ತಾಯಿಯನ್ನು ಭೇಟಿಮಾಡಿದ್ದರು.

ಖಾಲಿದಾ ಝಿಯಾ ಮತ್ತು ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ನಡುವಿನ ರಾಜಕೀಯ ಪೈಪೋಟಿ ದಶಕಗಳ ಕಾಲ ಬಾಂಗ್ಲಾದೇಶದ ರಾಜಕೀಯ ದಿಕ್ಕನ್ನು ನಿರ್ಧರಿಸಿತ್ತು. 1981ರಲ್ಲಿ ದಂಗೆಯಲ್ಲಿ ಹತ್ಯೆಯಾದ ಅಧ್ಯಕ್ಷ ಝಿಯಾವುರ್‌ ರೆಹಮಾನ್ ಅವರ ಪತ್ನಿಯಾದ ಖಾಲಿದಾ ಝಿಯಾ, ನಂತರ ಮಿಲಿಟರಿ ಆಡಳಿತದ ವಿರುದ್ಧ ನಡೆದ ಸಾಮೂಹಿಕ ಆಂದೋಲನದಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಈ ಆಂದೋಲನದ ಫಲವಾಗಿ 1990ರಲ್ಲಿ ಮಿಲಿಟರಿ ಆಡಳಿತ ಪತನವಾಯಿತು.

1991ರಲ್ಲಿ ಮೊದಲ ಬಾರಿಗೆ ಪ್ರಧಾನಿಯಾಗಿದ್ದ ಖಾಲಿದಾ ಝಿಯಾ, 2001ರಿಂದ ಮತ್ತೊಮ್ಮೆ ಪ್ರಧಾನಿಯಾಗಿ ಸೇವೆ ಸಲ್ಲಿಸಿದರು. ಅನೇಕ ಚುನಾವಣೆಗಳಲ್ಲಿ ಅವರ ಎದುರಾಳಿಯಾಗಿ ಶೇಖ್ ಹಸೀನಾ ಸ್ಪರ್ಧಿಸಿದ್ದರು. 2006ರಿಂದ ಅಧಿಕಾರದ ಹೊರಗಿದ್ದ ಅವರು, ರಾಜಕೀಯ ಪ್ರೇರಿತವೆಂದು ಹೇಳಲಾದ ಭ್ರಷ್ಟಾಚಾರ ಪ್ರಕರಣಗಳಲ್ಲಿ ಜೈಲು ಹಾಗೂ ಗೃಹಬಂಧನ ಅನುಭವಿಸಿದ್ದರು.

ಜನವರಿ 2025ರಲ್ಲಿ, ಸುಪ್ರೀಂ ಕೋರ್ಟ್ ಖಾಲಿದಾ ಅವರನ್ನು ಕೊನೆಯ ಭ್ರಷ್ಟಾಚಾರ ಪ್ರಕರಣದಲ್ಲಿ ಖುಲಾಸೆಗೊಳಿಸಿತು. ಇದು ಮುಂದಿನ (2026) ಫೆಬ್ರವರಿಯಲ್ಲಿ ನಡೆಯಲಿರುವ ಸಾರ್ವತ್ರಿಕ ಚುನಾವಣೆಯಲ್ಲಿ ಸ್ಪರ್ಧಿಸಲು ಅವರಿಗೆ ಅವಕಾಶ ನೀಡುತ್ತಿತ್ತು. ಈ ನಡುವೆ ಅವರು ನಿಧನರಾಗಿದ್ದಾರೆ.

2020ರಲ್ಲಿ ಅನಾರೋಗ್ಯದ ಕಾರಣ ಖಾಲಿದಾ ಅವರು ಜೈಲಿನಿಂದ ಬಿಡುಗಡೆಯಾಗಿದ್ದರು. ಆ ಬಳಿಕ ಅವರ ಕುಟುಂಬ ವಿದೇಶದಲ್ಲಿ ಚಿಕಿತ್ಸೆ ನೀಡಲು ಕನಿಷ್ಠ 18 ಬಾರಿ ಶೇಖ್ ಹಸೀನಾ ಸರ್ಕಾರವನ್ನು ವಿನಂತಿಸಿತು. ಆದರೆ, ಈ ವಿನಂತಿಗಳನ್ನು ತಿರಸ್ಕರಿಸಲಾಯಿತು ಎಂದು ಬಿಎನ್‌ಪಿ ಹೇಳಿದೆ.

ಹಸೀನಾ ಸರ್ಕಾರ ಪತನಗೊಂಡ ಬಳಿಕ ರಚನೆಯಾದ ಮಧ್ಯಂತರ ಸರ್ಕಾರ ಈ ವರ್ಷ ಆರಂಭದಲ್ಲಿ ಖಾಲಿದಾ ಅವರನ್ನು ಚಿಕಿತ್ಸೆಗಾಗಿ ವಿದೇಶಕ್ಕೆ ಕರೆದೊಯ್ಯಲು ಅನುಮತಿ ನೀಡಿತು. ವೈದ್ಯಕೀಯ ಚಿಕಿತ್ಸೆಗಾಗಿ ಯುನೈಟೆಡ್ ಕಿಂಗ್‌ಡಮ್‌ಗೆ ತೆರಳಿದ್ದ ಅವರು, ಮೇ ತಿಂಗಳಲ್ಲಿ ಸ್ವದೇಶಕ್ಕೆ ಮರಳಿದ್ದರು.

ಅಧಿಕಾರದಿಂದ ದೂರವಿದ್ದರೂ ಖಾಲಿದಾ ಝಿಯಾ ಹಾಗೂ ಅವರ ಮಧ್ಯ–ಬಲಪಂಥೀಯ ಬಿಎನ್‌ಪಿ ದೇಶದ ರಾಜಕೀಯದಲ್ಲಿ ಪ್ರಭಾವವನ್ನು ಉಳಿಸಿಕೊಂಡಿತ್ತು. ಫೆಬ್ರವರಿಯಲ್ಲಿ ನಡೆಯಲಿರುವ ಸಂಸತ್ತಿನ ಚುನಾವಣೆಯಲ್ಲಿ ಬಿಎನ್‌ಪಿ ಮುಂಚೂಣಿಯಲ್ಲಿದೆ. ಸುಮಾರು 17 ವರ್ಷಗಳ ಸ್ವಯಂ ಗಡಿಪಾರು ಜೀವನದ ಬಳಿಕ ಇತ್ತೀಚೆಗೆ ದೇಶಕ್ಕೆ ಮರಳಿದ ತಾರಿಕ್ ರೆಹಮಾನ್ ಪ್ರಧಾನಿಯಾಗುವ ಪ್ರಬಲ ಅಭ್ಯರ್ಥಿಯಾಗಿ ಕಾಣಿಸಿಕೊಂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....