Homeಕರ್ನಾಟಕಹುಬ್ಬಳ್ಳಿ ಮರ್ಯಾದೆಗೇಡು ಹತ್ಯೆ: ನೊಂದ ಕುಟಂಬವನ್ನು ಭೇಟಿಯಾದ ಮಾವಳ್ಳಿ ಶಂಕರ್

ಹುಬ್ಬಳ್ಳಿ ಮರ್ಯಾದೆಗೇಡು ಹತ್ಯೆ: ನೊಂದ ಕುಟಂಬವನ್ನು ಭೇಟಿಯಾದ ಮಾವಳ್ಳಿ ಶಂಕರ್

- Advertisement -
- Advertisement -

ಮಾದಿಗ ಸಮುದಾಯದ ಯುವಕನನ್ನು ಮದುವೆಯಾಗಿದ್ದಕ್ಕೆ ತಂದೆಯಿಂದಲೇ ಭೀಕರವಾಗಿ ಹತ್ಯೆಗೀಡಾದ ಗರ್ಭಿಣಿ ಯುವತಿ ಮಾನ್ಯ ಪಾಟೀಲ್ ಅವರ ಪತಿ ವಿವೇಕಾನಂದ ಮತ್ತು ಹಲ್ಲೆಗೆ ಒಳಗಾದ ಕುಟುಂಬದ ಸದಸ್ಯರನ್ನು ಹಿರಿಯ ದಲಿತ ನಾಯಕ ಮಾವಳ್ಳಿ ಶಂಕರ್ ಭೇಟಿಯಾಗಿ ಸಾಂತ್ವನ ಹೇಳಿದರು.

ಹುಬ್ಬಳ್ಳಿಯ ತಾಲ್ಲೂಕಿನ ಇನಾಮ್ ಇರಾಪುರ ಗ್ರಾಮಕ್ಕೆ ಸೋಮವಾರ (29-12-2026) ರಂದು ಭೇಟಿ ನೀಡಿದ ದಲಿತ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ರಾಜ್ಯ ಪ್ರಧಾನ ಸಂಚಾಲಕರಾದ ಮಾವಳ್ಳಿ ಶಂಕರ್, “ಈ ಘಟನೆಯನ್ನು ನಾವೆಲ್ಲರೂ ಖಂಡಿಸುತ್ತೇವೆ. ತಂದೆಯಿಂದಲೇ ಕೊಲೆಯಾದ ಮಹಿಳೆಗೆ ನ್ಯಾಯ ಸಿಗಬೇಕು. ಕೊಂದವರಿಗೆ ಗಲ್ಲು ಶಿಕ್ಷೆ ಯಾಗಗುವಂತೆ, ಅವರು ಕಾನೂನಿನ ಕುಣಿಕೆಯಿಂದ ತಪ್ಪಿಸಿಕೊಳ್ಳದಂತೆ ಪೊಲೀಸ್ ಇಲಾಖೆ ನೋಡಿಕೊಳ್ಳಬೇಕು. ಅನ್ಯಾಯಕ್ಕೆ ಒಳಗಾದ ಕುಟುಂಬಕ್ಕೆ ರಕ್ಷಣೆ ಕೊಡುವ ಜೊತೆಗೆ ಸರ್ಕಾರ ಎಲ್ಲ ರೀತಿಯ ಸಹಕಾರ ನೀಡಬೇಕು” ಎಂದು ಆಗ್ರಹಿಸಿದರು.

“ಲಿಂಗಾಯಿತ ಸಮುದಾಯದ ಯುವತಿ ಮಾನ್ಯ ಎಂಬಾಕೆ ದಲಿತ ಯುವಕ ವಿವೇಕಾನಂದನನ್ನು ವಿವಾಹವಾಗಿದ್ದ ಕಾರಣಕ್ಕೆ ಆಕೆ ಗರ್ಭಿಣಿಯಿದ್ದಾಗಲೇ ತಂದೆ ಪ್ರಕಾಶಗೌಡ ಪಾಟೀಲ್ ಬರ್ಬರವಾಗಿ ಕೊಲೆ ಮಾಡಿರುವುದು ನಾಗರಿಕ ಸಮಾಜ ತಲೆತಗ್ಗಿಸುವಂತದ್ದು. ಮರ್ಯಾದೆಗೇಡು ಹತ್ಯೆಗಳ ನಿಗ್ರಹಕ್ಕಾಗಿ ಸರ್ಕಾರ ಕೂಡಲೇ ಪ್ರತ್ಯೇಕ ಮತ್ತು ಕಟ್ಟುನಿಟ್ಟಿನ ಕಾಯ್ದೆ ರೂಪಿಸಬೇಕು” ಎಂದು ಅವರು ಈ ಸಂದರ್ಭದಲ್ಲಿ ಒತ್ತಾಯಿಸಿದರು.

“ಮರ್ಯಾದೆ ಹೆಸರಿನಲ್ಲಿ ನಡೆಯುತ್ತಿರುವ ಇಂತಹ ಹತ್ಯೆಗಳಲ್ಲಿ ಯಾವುದೇ ಗೌರವ ಅಡಗಿಲ್ಲ, ಇದೊಂದು ಜಾತಿಗ್ರಸ್ತ ಸಮಾಜ ಎಸಗುವ ಕ್ರೂರ ಕೊಲೆಯಷ್ಟೇ. ಜಾತಿ ಮತ್ತು ಪಿತೃಪ್ರಭುತ್ವದ ಅಹಂನಿಂದ ಮಹಿಳೆಯರ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಪ್ರಯತ್ನ ನಿರಂತರವಾಗಿ ನಡೆಯುತ್ತಿದೆ. ಸ್ವಂತ ಮಗಳ ಜೀವ ತೆಗೆಯುವುದು ಜಾತಿ ವ್ಯವಸ್ಥೆಯ ಕ್ರೌರ್ಯದ ಪರಮಾವಧಿಯಾಗಿದ್ದು, ಇಂತಹ ಕೃತ್ಯಗಳು ಸಂವಿಧಾನದ ಆಶಯಗಳಾದ ಸಮಾನತೆ ಮತ್ತು ಭ್ರಾತೃತ್ವಕ್ಕೆ ದೊಡ್ಡ ಹೊಡೆತ ನೀಡುತ್ತಿವೆ” ಎಂದು ಅವರು ವಿಷಾದ ವ್ಯಕ್ತಪಡಿಸಿದರು.

“ಸುಪ್ರೀಂ ಕೋರ್ಟ್ ಮರ್ಯಾದೆ ಹತ್ಯೆಗಳನ್ನು ಅನಾಗರಿಕ ಕೃತ್ಯ ಎಂದು ಕರೆದಿದ್ದರೂ, ಜಾತಿ ರಾಜಕಾರಣದಲ್ಲಿ ಮುಳುಗಿರುವ ಸರ್ಕಾರಗಳು ಇಂತಹ ವ್ಯವಸ್ಥೆಯನ್ನು ಪೋಷಿಸುತ್ತಿವೆ. ಅಂತರ್ಜಾತಿ ವಿವಾಹಗಳು ರಾಷ್ಟ್ರೀಯ ಹಿತಾಸಕ್ತಿಯನ್ನು ಬಲಪಡಿಸುತ್ತವೆ ಎಂದು ನ್ಯಾಯಾಲಯ ಹೇಳಿದ್ದರೂ, ಇಂತಹ ಹೇಯ ಕೃತ್ಯಗಳು ಮರುಕಳಿಸುತ್ತಿರುವುದು ಸರ್ಕಾರದ ವೈಫಲ್ಯಕ್ಕೆ ಸಾಕ್ಷಿಯಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಹತ್ಯೆಯಾದ ಮಾನ್ಯ ಪತಿ ವಿವೇಕಾನಂದ ದೊಡ್ಡಮನಿ, ದಸಂಸ ರಾಜ್ಯ ಸಂಘಟನಾ ಸಂಚಾಲಕರಾದ ರಾಮಣ್ಣ ಕಲ್ಲದೇವನಹಳ್ಳಿ, ರಾಜ್ಯ ಸಮಿತಿ ಸದಸ್ಯರಾದ ನಾಗಣ್ಣ ಬಡಿಗೇರ, ದಸಂಸ ಧಾರವಾಡ ಜಿಲ್ಲಾ ಪ್ರಧಾನ ಸಂಚಾಲಕ ಮಂಜುನಾಥ ಶರೇವಾಡ, ಲಕ್ಷ್ಮಣ ದೊಡ್ಡಮನಿ, ಭರತರಾಜ ಅರವೇಡ ಸೇರಿದಂತೆ ಸಂಘಟನೆಯ ಹಲವು ಪದಾಧಿಕಾರಿಗಳು ಹಾಗೂ ಗ್ರಾಮದ ಮುಖಂಡರು ಉಪಸ್ಥಿತರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...