Homeಕರ್ನಾಟಕಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಎಚ್‌.ಡಿ ರೇವಣ್ಣ ಖುಲಾಸೆ

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಎಚ್‌.ಡಿ ರೇವಣ್ಣ ಖುಲಾಸೆ

- Advertisement -
- Advertisement -

ಮನೆ ಕೆಲಸದ ಮಹಿಳೆಯ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೆಡಿಎಸ್‌ ಶಾಸಕ ಎಚ್‌.ಡಿ ರೇವಣ್ಣ ಅವರನ್ನು ಬೆಂಗಳೂರಿನ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯವು ಸೋಮವಾರ (ಡಿ.29) ಆರೋಪ ಮುಕ್ತಗೊಳಿಸಿ ಮಹತ್ವದ ಆದೇಶ ನೀಡಿದೆ. ಕಳೆದ ತಿಂಗಳು ಇದೇ ಸಂತ್ರಸ್ತೆಯ ಘನತೆಗೆ ಚ್ಯುತಿ ಉಂಟು ಮಾಡಿದ ರೇವಣ್ಣ ವಿರುದ್ಧದ ಆರೋಪವನ್ನು ಕರ್ನಾಟಕ ಹೈಕೋರ್ಟ್‌ ರದ್ದುಪಡಿಸಿತ್ತು.

ಹೈಕೋರ್ಟ್‌ ನಿರ್ದೇಶನದಂತೆ ಪ್ರಕರಣದ ವಿಚಾರಣೆಯನ್ನು ವಿಶೇಷ ಮ್ಯಾಜಿಸ್ಟ್ರೇಟ್‌ ಕೆ.ಎನ್‌ ಶಿವಕುಮಾರ್‌ ಅವರು ವಿಚಾರಣೆ ನಡೆಸಿದ್ದರು.

ಸಂತ್ರಸ್ತೆ ದೂರು ದಾಖಲಿಸಲು ಅಥವಾ ಪ್ರಾಸಿಕ್ಯೂಷನ್ ಆರಂಭಿಸಲು ಸಾಕಷ್ಟು ವಿಳಂಬವಾಗಿರುವ ಕಾರಣಕ್ಕೆ ಪ್ರಕರಣದ ಸಂಜ್ಞೇಯ ಪರಿಗಣಿಸಲು ನಿರಾಕರಿಸಿರುವ ನ್ಯಾಯಾಲಯ, ರೇವಣ್ಣ ವಿರುದ್ಧದ ಆರೋಪಗಳನ್ನು ಕೈಬಿಟ್ಟು ಆದೇಶಿಸಿದೆ.

ಪ್ರಕರಣದ ಮೊದಲ ಆರೋಪಿಯಾಗಿರುವ ಎಚ್.ಡಿ ರೇವಣ್ಣ ವಿರುದ್ಧ ಐಪಿಸಿ ಸೆಕ್ಷನ್ 354ಎ ಅಡಿಯಲ್ಲಿ ಲೈಂಗಿಕ ದೌರ್ಜನ್ಯದ ಆರೋಪ ‌ಮಾಡಲಾಗಿತ್ತು. ಆದರೆ, ಈ ಅಪರಾಧಕ್ಕೆ ಸಂಬಂಧಿಸಿದಂತೆ ದೂರು ದಾಖಲಿಸಲು ಅಥವಾ ಪ್ರಾಸಿಕ್ಯೂಷನ್ ಆರಂಭಿಸಲು ಸಾಕಷ್ಟು ವಿಳಂಬವಾಗಿದ್ದು, ಈ ವಿಳಂಬವನ್ನು ಮನ್ನಿಸಲು ಇದು ಸೂಕ್ತ ಪ್ರಕರಣವಲ್ಲ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

2025ರ ನವೆಂಬರ್ 19ರಂದು ಮನೆ ಕೆಲಸದ ಮಹಿಳೆಯ ಘನತೆಗೆ ಧಕ್ಕೆಯುಂಟು ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಎಚ್.ಡಿ ರೇವಣ್ಣ ವಿರುದ್ಧದ ಪ್ರಕರಣದಲ್ಲಿ ಸಂಜ್ಞೇಯ ತೆಗೆದುಕೊಂಡಿದ್ದ ವಿಚಾರಣಾ‌ಧೀನ ನ್ಯಾಯಾಲಯದ ಕ್ರಮವನ್ನು ರದ್ದುಪಡಿಸಿದ್ದ ಹೈಕೋರ್ಟ್, ಲೈಂಗಿಕ ದೌರ್ಜನ್ಯ ಆರೋಪವನ್ನು ಪರಿಗಣಿಸಲು ಪ್ರಕರಣವನ್ನು ವಿಚಾರಣಾಧೀನ ನ್ಯಾಯಾಲಯಕ್ಕೆ ಮರಳಿಸಿತ್ತು.

ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣ ರದ್ದು ಕೋರಿ ಎಚ್‌.ಡಿ ರೇವಣ್ಣ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿಯನ್ನು ಭಾಗಶಃ ಪುರಸ್ಕರಿಸಿದ್ದ ನ್ಯಾಯಮೂರ್ತಿ ಎಂ ಐ ಅರುಣ್‌ ಅವರ ಏಕಸದಸ್ಯ ಪೀಠವು ರೇವಣ್ಣ ವಿರುದ್ಧ ಐಪಿಸಿ ಸೆಕ್ಷನ್ 354ರ (ಮಹಿಳೆಯ ಘನತೆಗೆ ಚ್ಯುತಿ) ಅಡಿ ಸಂಜ್ಞೇಯ ತೆಗೆದುಕೊಂಡು 42ನೇ ಎಸಿಜೆಎಂ ನ್ಯಾಯಾಲಯ ಹೊರಡಿಸಿದ್ದ ಆದೇಶ ರದ್ದುಪಡಿಸಿತ್ತು. ಆದರೆ, ಐಪಿಸಿ 354ಎ (ಲೈಂಗಿಕ ದೌರ್ಜನ್ಯ) ಅಡಿ ಸೂಕ್ತ ಆದೇಶ ಹೊರಡಿಸಲು ಪರಿಗಣಿಸುವಂತೆ ಪ್ರಕರಣವನ್ನು ವಿಚಾರಣಾಧೀನ ನ್ಯಾಯಾಲಯಕ್ಕೆ ಹಿಂದಿರುಗಿಸಿತ್ತು. ಇದೀಗ ಲೈಂಗಿಕ ದೌರ್ಜನ್ಯ ಆರೋಪಕ್ಕೆ ಸಂಬಂಧಿಸಿದ ಪ್ರಕರಣ ಸಂಜ್ಞೇಯ ತೆಗೆದುಕೊಳ್ಳಲು ವಿಚಾರಣಾ ನ್ಯಾಯಾಲಯವು ನಿರಾಕರಿಸಿದೆ.

ಮನೆ ಕೆಲಸದ ಮಹಿಳೆ ಹಾಗೂ ಅವರ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಕ್ಕೆ ಸಂಬಂಧಿಸಿದಂತೆ ಹೊಳೆನರಸೀಪುರ ಕ್ಷೇತ್ರದ ಶಾಸಕ ಎಚ್‌.ಡಿ ರೇವಣ್ಣ ಹಾಗೂ ಅವರ ಪುತ್ರ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧ ಹೊಳೆನರಸೀಪುರ ನಗರ ಪೊಲೀಸ್‌ ಠಾಣೆಯಲ್ಲಿ 2024ರ ಏಪ್ರಿಲ್‌ 28ರಂದು ಪ್ರಕರಣ ದಾಖಲಾಗಿತ್ತು.

ಸಂತ್ರಸ್ತೆಯ ದೂರು ಆಧರಿಸಿ ಐಪಿಸಿ ಸೆಕ್ಷನ್‌ 354ಎ, 354ಡಿ, 506, 509ರ ಅಡಿ ಪ್ರಕರಣ ದಾಖಲಿಸಲಾಗಿದ್ದು ರೇವಣ್ಣ ಅವರನ್ನು ಮೊದಲನೇ ಆರೋಪಿ ಹಾಗೂ ಪ್ರಜ್ವಲ್‌ ಅವರನ್ನು ಎರಡನೇ ಆರೋಪಿಯನ್ನಾಗಿ ಹೆಸರಿಸಲಾಗಿತ್ತು.

ರೇವಣ್ಣ ಅವರು ತಮ್ಮ ಪತ್ನಿ ಭವಾನಿ ಮನೆಯಲ್ಲಿ ಇಲ್ಲದ ವೇಳೆ ನನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗುತಿದ್ದರು. ಅಲ್ಲದೆ ನನ್ನ ಮಗಳಿಗೂ ಅಸಭ್ಯ ಸಂಭಾಷಣೆ ಮೂಲಕ ಪ್ರಚೋದನೆ ನೀಡುತ್ತಿದ್ದು, ಮಗಳು ಹೆದರಿ ನಂಬರ್‌ ಬ್ಲಾಕ್‌ ಮಾಡಿಕೊಂಡಿದ್ದಳು. ಇದರಿಂದ ನಾನು ಕೆಲಸ ತೊರೆದಿದ್ದಾಗಿ ಸಂತ್ರಸ್ತೆ ದೂರಿನಲ್ಲಿ ತಿಳಿಸಿದ್ದರು.

ಜೀವ ಭಯ ಇರುವುದರಿಂದ ನನಗೆ ಹಾಗೂ ನನ್ನ ಮಗಳ ಇಚ್ಛೆಗೆ ವಿರುದ್ಧವಾಗಿ ಲೈಂಗಿಕ ದೌರ್ಜನ್ಯ ಎಸಗಿರುವ ಎಚ್‌ ಡಿ ರೇವಣ್ಣ ಹಾಗೂ ಪ್ರಜ್ವಲ್‌ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ದೂರಿನಲ್ಲಿ ಕೋರಿದ್ದರು.

ಈ ಮಧ್ಯೆ, ಸಂತ್ರಸ್ತೆಯನ್ನು ಅಪಹರಿಸಿದ ಸಂಬಂಧ ರೇವಣ್ಣ, ಅವರ ಪತ್ನಿ ಭವಾನಿ ಸೇರಿದಂತೆ 9 ಮಂದಿ ವಿರುದ್ಧ ಕೆ.ಆರ್‌ ಪೇಟೆಯಲ್ಲಿ ಬೇರೊಂದು ಪ್ರಕರಣ ದಾಖಲಾಗಿದೆ. ಇದರಲ್ಲಿ ರೇವಣ್ಣ ಮೊದಲ ಆರೋಪಿಯಾಗಿದ್ದು, ಜಾಮೀನಿನ ಮೇಲೆ ಹೊರಗಿದ್ದಾರೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...