Homeಮುಖಪುಟವಿಬಿ-ಜಿ ರಾಮ್‌ ಜಿ ಕಾಯ್ದೆ ವಿರುದ್ಧ ಪ್ರಧಾನಿಗೆ ಸಿಎಂ ಸಿದ್ದರಾಮಯ್ಯ ಪತ್ರ : ರಾಜ್ಯಗಳೊಂದಿಗೆ ಸಮಾಲೋಚನೆ...

ವಿಬಿ-ಜಿ ರಾಮ್‌ ಜಿ ಕಾಯ್ದೆ ವಿರುದ್ಧ ಪ್ರಧಾನಿಗೆ ಸಿಎಂ ಸಿದ್ದರಾಮಯ್ಯ ಪತ್ರ : ರಾಜ್ಯಗಳೊಂದಿಗೆ ಸಮಾಲೋಚನೆ ನಡೆಸಲು ಆಗ್ರಹ

- Advertisement -
- Advertisement -

ನರೇಗಾ ಬದಲಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಬಿ-ಜಿ ರಾಮ್‌ ಜಿ ಕಾಯ್ದೆಯ ಕುರಿತು ಕಳವಳ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಅದರ ಅನುಷ್ಠಾನ ತಡೆ ಹಿಡಿಯುವಂತೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಮಂಗಳವಾರ (ಡಿ.30) ಪತ್ರ ಬರೆದಿದ್ದಾರೆ.

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜಗಾರ್ ಅಂಡ್ ಆಜೀವಿಕಾ ಮಿಶನ್ (ಗ್ರಾಮೀಣ) (ವಿಬಿ-ಜಿ ರಾಮ್ ಜಿ) ಕಾಯ್ದೆಯು, ಮಹಾತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಮೂಲ ಉದ್ದೇಶಕ್ಕೆ ವಿರುದ್ಧವಾಗಿದೆ. ಮೂಲ ಉದ್ಯೋಗ ಖಾತ್ರಿ ಯೋಜನೆ ಗ್ರಾಮೀಣ ಜನರ ಉದ್ಯೋಗದ ಬೇಡಿಕೆ ಮತ್ತು ಹಕ್ಕು ಆಧಾರಿತವಾಗಿತ್ತು ಎಂದು ಸಿಎಂ ಪತ್ರದಲ್ಲಿ ಹೇಳಿದ್ದಾರೆ.

ಹೊಸ ಕಾಯ್ದೆಯು ಉದ್ಯೋಗದ ದಿನಗಳನ್ನು 100 ರಿಂದ 125 ಕ್ಕೆ ಏರಿಸಿದರೂ, ಯೋಜನೆ ಅನುಷ್ಠಾನದಲ್ಲಿ ಕೇಂದ್ರದ ನಿಗದಿತ ಅನುದಾನದ ಖಾತ್ರಿಯಿರುವುದಿಲ್ಲ. ಕೇಂದ್ರ ಸರ್ಕಾರದ ಹಣಕಾಸು ಹೊಣೆಗಾರಿಕೆಯನ್ನು ಪ್ರತಿ ರಾಜ್ಯದ “ಅಧಿಸೂಚಿತ” ಪ್ರದೇಶಕ್ಕೆ “ಮಾನದಂಡ ಹಂಚಿಕೆ” ಗೆ ಸೀಮಿತಗೊಳಿಸಲಾಗಿದೆ. ಇದರಲ್ಲಿ ಕೇಂದ್ರವು 60% ಮಾತ್ರ ನೀಡುತ್ತದೆ (ಬಹುತೇಕ ರಾಜ್ಯಗಳಲ್ಲಿ). ಇದರಿಂದಾಗಿ, 125 ದಿನಗಳ ಕಾಯ್ದೆಬದ್ಧ ಭರವಸೆ ಪೂರ್ಣವಾಗಿರದೆ, ಕೇಂದ್ರವು ನಿಗದಿ ಮಾಡುವ ಹಣಕಾಸು ಮಿತಿಗೆ ಒಳಪಟ್ಟಿರುತ್ತದೆ. ಇದರಿಂದ ಅನೇಕ ಗ್ರಾಮ ಪಂಚಾಯಿತಿಗಳಲ್ಲಿ ನಿಜವಾದ ಬೇಡಿಕೆ ಇದ್ದರೂ ಹಣದ ಅಭಾವ ಉಂಟಾಗಬಹುದು ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ಹೊಸ ಕಾಯ್ದೆಯ ಪ್ರಕಾರ ಕೇಂದ್ರ ಸರ್ಕಾರವು “ವಸ್ತುನಿಷ್ಠ ನಿಯತಾಂಕಗಳ” ಆಧಾರದ ಮೇಲೆ ರಾಜ್ಯವಾರು ಮಾನದಂಡ ಹಂಚಿಕೆ ನಿಗದಿ ಮಾಡುತ್ತದೆ. ಈ ನಿಯತಾಂಕಗಳು ಕಾಯ್ದೆಯಲ್ಲಿ ಸೇರಿರದೆ, ಯಾವುದೇ ಸಮಯದಲ್ಲಿ ಬದಲಾಯಿಸಬಹುದು
ಇದರಿಂದಾಗಿ ಬೇಡಿಕೆ-ಚಾಲಿತ ವ್ಯವಸ್ಥೆಯು, ಸರಬರಾಜು-ಚಾಲಿತ, ಮೇಲಿನಿಂದ-ಕೆಳಗಿನ ವ್ಯವಸ್ಥೆಯಾಗಿ ಮಾರ್ಪಡುವ ಅಪಾಯವಿದೆ. ಇದು ಮೂಲ ಕಾಯ್ದೆಯಲ್ಲಿರುವ ಸಹಭಾಗಿತ್ವದ ವಿಧಾನಕ್ಕೆ (ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕಾರ್ಮಿಕ ಬಜೆಟ್, ಗ್ರಾಮಗಳ ಬೇಡಿಕೆಗೆ ಅನುಗುಣವಾದ ಹಂಚಿಕೆ) ವಿರುದ್ಧವಾಗಿದೆ ಎಂದಿದ್ದಾರೆ.

ಹೊಸ ಕಾಯ್ದೆಯಲ್ಲಿನ ಹಣಕಾಸು ಹಂಚಿಕೆಯೂ ಸಹ ಕಳವಳಕಾರಿಯಾಗಿದೆ. ಮೂಲ ಕಾಯ್ದೆಯ ಚೌಕಟ್ಟಿನಲ್ಲಿ ಹೆಚ್ಚಿನ ರಾಜ್ಯಗಳಲ್ಲಿ 90:10 (ಕೇಂದ್ರ-ರಾಜ್ಯ) ಹಂಚಿಕೆ ಇದೆ. ಹೊಸ ಕಾಯ್ದೆಯು ಇದನ್ನು 60:40 ಗೆ ಬದಲಾಯಿಸಿ, ಕಾನೂನುಬದ್ಧ ಭರವಸೆಯನ್ನು ಸಾಮಾನ್ಯ ಯೋಜನೆಯಾಗಿ ಮಾರ್ಪಡಿಸುತ್ತದೆ. ಇದು ರಾಜ್ಯ ಹಣಕಾಸಿನ ಮೇಲೆ ಹೆಚ್ಚುವರಿ ಹೊರೆಯನ್ನು ಹೇರುತ್ತದೆ. ರಾಜ್ಯ ಸರ್ಕಾರಗಳೊಂದಿಗೆ ಅರ್ಥಪೂರ್ಣ ಸಮಾಲೋಚನೆ ಇಲ್ಲದೆ ಈ ಬದಲಾವಣೆ ಮಾಡಲಾಗಿದೆ ಎಂದು ವಿರೋಧ ವ್ಯಕ್ತಪಡಿಸಿದ್ದಾರೆ.

ಹೊಸ ಕಾಯ್ದೆಯು ರಾಜ್ಯವು ತನ್ನ ಮಾನದಂಡ ಹಂಚಿಕೆಯನ್ನು ಮೀರಿ ಖರ್ಚು ಮಾಡಿದಲ್ಲಿ, ಆ ಖರ್ಚನ್ನು ಕೇಂದ್ರ ನಿಗದಿ ಮಾಡುವ ವಿಧಾನದ ಪ್ರಕಾರ ರಾಜ್ಯ ಸರ್ಕಾರವೇ ಭರಿಸಬೇಕು ಎಂದು ಹೇಳುತ್ತದೆ. ಇದರಿಂದ ಕೇಂದ್ರ ನಿಗದಿ ಮಿತಿಗಿಂತ ಹೆಚ್ಚಿನ ಬೇಡಿಕೆಗಳ ಅನುಷ್ಠಾನಕ್ಕೆ ರಾಜ್ಯಗಳು ಶೇ.100ರಷ್ಟು ಹೊಣೆಗಾರಿಕೆ ಹೊರಬೇಕಾಗುತ್ತದೆ ಎಂದು ಹೇಳಿದ್ದಾರೆ.

ಕಾಯ್ದೆಯು ರಾಜ್ಯಗಳು ಬಿತ್ತನೆ ಮತ್ತು ಬೆಳೆ ಕಟಾವಿನ ಅವಧಿಯ 60 ದಿನಗಳನ್ನು ಮುಂಚಿತವಾಗಿ ಅಧಿಸೂಚಿಸುವಂತೆ ನಿರ್ದೇಶಿಸುತ್ತದೆ. ಈ ಅವಧಿಯಲ್ಲಿ ಕೃಷಿ ಚಟುವಟಿಕೆಗಳು ಹೆಚ್ಚಾಗಿರಬಹುದಾದರೂ, ಇದು ಕೃಷಿ ಕಾರ್ಮಿಕರ, ಆದಿವಾಸಿ, ದುರ್ಬಲ ಸಮುದಾಯಗಳ ಮಜೂರಿ ಕೂಲಿಯ ಹಕ್ಕನ್ನು ಕಸಿಯುವ ಸಾಧ್ಯತೆಯಿದೆ. ಇದರಿಂದ ಜೀವನೋಪಾಯಕ್ಕಾಗಿ ಒತ್ತಡದಿಂದ ಕಡಿಮೆ ಕೂಲಿ ಕೆಲಸ ಮಾಡುವ ಆ ಮೂಲಕ ನಗರಗಳಿಗೆ ವಲಸೆ ಪ್ರಮಾಣ ಹೆಚ್ಚುವ ಸಾಧ್ಯತೆಯಿದೆ ಎಂದಿದ್ದಾರೆ.

ಹೊಸ ಕಾಯ್ದೆ ಮೂಲ ಉದ್ಯೋಗ ಖಾತ್ರಿ ಯೋಜನೆಯ ಆಶಯಕ್ಕೆ ಸಂಪೂರ್ಣ ವಿರುದ್ಧವಾಗಿದೆ. ಹೊಸ ಕಾಯ್ದೆ “ಕೆಲಸದ ಹಕ್ಕು” ನಿಂದ “ಅನುಮತಿ ಇದ್ದರೆ ಮಾತ್ರ ಕೆಲಸ” ಕ್ಕೆ, “ಗ್ರಾಮೀಣ ಪ್ರದೇಶಗಳಾದ್ಯಂತ ಕೆಲಸ”ದಿಂದ “ಅನುಮತಿ ಇರುವೆಡೆ ಮಾತ್ರ ಕೆಲಸ” ಕ್ಕೆ, ಮತ್ತು “ವರ್ಷದಾದ್ಯಂತ ಕೆಲಸ” ನಿಂದ “ಕೃಷಿ ಚಟುವಟಿಕೆ ಋತುವಿನಲ್ಲಿ ಕೆಲಸವಿಲ್ಲ” ಎಂಬ ನಿಯಮಾವಳಿಯನ್ನು ಸೃಷ್ಟಿಸಿದೆ. ಇದು ಗ್ರಾಮೀಣ ಭಾಗದಲ್ಲಿ ಸಂಪನ್ಮೂಲ ಸೃಷ್ಟಿಯ ಆಶಯವನ್ನು ಗುತ್ತಿಗೆದಾರರ ಕೇಂದ್ರಿತ ಮಾದರಿಗೆ ದಾರಿ ಮಾಡಿಕೊಡುವ ಅಪಾಯವಿದೆ ಎಂದು ಸಿಎಂ ತಿಳಿಸಿದ್ದಾರೆ.

ಹೊಸ ಕಾಯ್ದೆಯಲ್ಲಿ ಹೆಚ್ಚಿನ ತಾಂತ್ರಿಕ ಹಸ್ತಕ್ಷೇಪಕ್ಕೆ ಅವಕಾಶವಿದ್ದು, ಇದರಿಂದ ಬಡತನ ರೇಖೆಗಿಂತ ಕೆಳಗಿರುವ ಮತ್ತು ಡಿಜಿಟಲ್ ಸೌಲಭ್ಯವಿಲ್ಲದ ಗ್ರಾಮೀಣ ನಾಗರಿಕರನ್ನು, ವಿಶೇಷವಾಗಿ ದಲಿತ ಮತ್ತು ಆದಿವಾಸಿ ಸಮುದಾಯಗಳನ್ನು ಯೋಜನೆಯಿಂದ ದೂರ ಮಾಡಬಹುದು ಎಂಬ ಆತಂಕ ವ್ಯಕ್ತಪಡಿಸಿದ್ದಾರೆ.

ವಿಬಿ-ಜಿ ರಾಮ್ ಜಿ ಕಾಯ್ದೆಯ ಜಾರಿಯು ಸಂವಿಧಾನದ 258 ಮತ್ತು 280ನೇ ವಿಧಿಗಳನ್ನು ಉಲ್ಲಂಘಿಸುತ್ತದೆ. ಸಂವಿಧಾನದ ಈ ವಿಧಿಗಳು ಕೇಂದ್ರ ಪ್ರಾಯೋಜಿತ ಯೋಜನೆಗಳಡಿ ಹಣಕಾಸು ಚೌಕಟ್ಟು ವಿಧಿಸುವ ಮುನ್ನ ರಾಜ್ಯ ಸರ್ಕಾರಗಳೊಂದಿಗೆ ಸಮಾಲೋಚನೆ, ಹಣಕಾಸು ಒಕ್ಕೂಟ, ಮತ್ತು ಸ್ಥಳೀಯ ಆಡಳಿತ ಬಲಗೊಳಿಸುವಿಕೆಗೆ ಮಹತ್ವ ನೀಡುತ್ತದೆ. ಆದರೆ ಕೇಂದ್ರ ಸರ್ಕಾರದ ಧೋರಣೆ ಸಹಕಾರಿ ಒಕ್ಕೂಟದ ಅಡಿಪಾಯಕ್ಕೆ ಅಪಾಯಕಾರಿಯಾಗಿದೆ ಎಂದಿದ್ದಾರೆ.

ಉದ್ಯೋಗ ಭರವಸೆ ಕಾನೂನು ಕೇವಲ ಒಂದು ಕಲ್ಯಾಣ ಕ್ರಮವಲ್ಲ; ಇದೊಂದು ಐತಿಹಾಸಿಕ, ವಿಶ್ವಮಾನ್ಯತೆ ಪಡೆದ, ಹಕ್ಕು-ಆಧಾರಿತ ಶಾಸನವಾಗಿದೆ. ಇದು ಗ್ರಾಮ ಸ್ವರಾಜ್ ಮತ್ತು ಅಂತ್ಯೋದಯದ ಪ್ರತೀಕವಾದ ಮಹಾತ್ಮಾ ಗಾಂಧೀಜಿಯ ಹೆಸರನ್ನು ಹೊಂದಿರುವುದು ಅರ್ಥಪೂರ್ಣವಾಗಿದೆ. ಆದರೆ ಪ್ರಸ್ತುತ ಕಾನೂನಿನಲ್ಲಿ ಮಹಾತ್ಮಾ ಗಾಂಧಿ ಅವರ ಹೆಸರನ್ನು ತೆಗೆದುಹಾಕಿರುವುದು ದುರದೃಷ್ಟಕರ ಸಂದೇಶ ನೀಡುತ್ತಿದ್ದು, ಹೊಸ ಕಾಯ್ದೆಯ ನೈತಿಕ ಅಧಿಕಾರವನ್ನು ದುರ್ಬಲಗೊಳಿಸಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಈ ಎಲ್ಲಾ ವಿಷಯಗಳನ್ನು ಗಮನದಲ್ಲಿಟ್ಟುಕೊಂಡು, ವಿಬಿ-ಜಿ ರಾಮ್ ಜಿ ಕಾಯ್ದೆಯ ಅನುಷ್ಠಾನವನ್ನು ತಡೆಹಿಡಿಯಲು, ಜೀವನೋಪಾಯದ ಹಕ್ಕನ್ನು ಬಲಪಡಿಸಲು ಮತ್ತು ಸಂವಿಧಾನಬದ್ಧವಾಗಿ ರಾಜ್ಯ ಸರ್ಕಾರಗಳೊಂದಿಗಿನ ಸಮಾಲೋಚನೆಗಳನ್ನು ನಡೆಸುವ ನಿಟ್ಟಿನಲ್ಲಿ ತಾವು ವೈಯಕ್ತಿಕವಾಗಿ ಮುಂದಾಗಬೇಕು ಎಂದು ಸಿಎಂ ಪತ್ರದಲ್ಲಿ ಕೋರಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....