Homeಮುಖಪುಟವಿಬಿ-ಜಿ ರಾಮ್‌ ಜಿ ಕಾಯ್ದೆ ವಿರುದ್ಧ ಪ್ರಧಾನಿಗೆ ಸಿಎಂ ಸಿದ್ದರಾಮಯ್ಯ ಪತ್ರ : ರಾಜ್ಯಗಳೊಂದಿಗೆ ಸಮಾಲೋಚನೆ...

ವಿಬಿ-ಜಿ ರಾಮ್‌ ಜಿ ಕಾಯ್ದೆ ವಿರುದ್ಧ ಪ್ರಧಾನಿಗೆ ಸಿಎಂ ಸಿದ್ದರಾಮಯ್ಯ ಪತ್ರ : ರಾಜ್ಯಗಳೊಂದಿಗೆ ಸಮಾಲೋಚನೆ ನಡೆಸಲು ಆಗ್ರಹ

- Advertisement -
- Advertisement -

ನರೇಗಾ ಬದಲಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಬಿ-ಜಿ ರಾಮ್‌ ಜಿ ಕಾಯ್ದೆಯ ಕುರಿತು ಕಳವಳ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಅದರ ಅನುಷ್ಠಾನ ತಡೆ ಹಿಡಿಯುವಂತೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಮಂಗಳವಾರ (ಡಿ.30) ಪತ್ರ ಬರೆದಿದ್ದಾರೆ.

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜಗಾರ್ ಅಂಡ್ ಆಜೀವಿಕಾ ಮಿಶನ್ (ಗ್ರಾಮೀಣ) (ವಿಬಿ-ಜಿ ರಾಮ್ ಜಿ) ಕಾಯ್ದೆಯು, ಮಹಾತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಮೂಲ ಉದ್ದೇಶಕ್ಕೆ ವಿರುದ್ಧವಾಗಿದೆ. ಮೂಲ ಉದ್ಯೋಗ ಖಾತ್ರಿ ಯೋಜನೆ ಗ್ರಾಮೀಣ ಜನರ ಉದ್ಯೋಗದ ಬೇಡಿಕೆ ಮತ್ತು ಹಕ್ಕು ಆಧಾರಿತವಾಗಿತ್ತು ಎಂದು ಸಿಎಂ ಪತ್ರದಲ್ಲಿ ಹೇಳಿದ್ದಾರೆ.

ಹೊಸ ಕಾಯ್ದೆಯು ಉದ್ಯೋಗದ ದಿನಗಳನ್ನು 100 ರಿಂದ 125 ಕ್ಕೆ ಏರಿಸಿದರೂ, ಯೋಜನೆ ಅನುಷ್ಠಾನದಲ್ಲಿ ಕೇಂದ್ರದ ನಿಗದಿತ ಅನುದಾನದ ಖಾತ್ರಿಯಿರುವುದಿಲ್ಲ. ಕೇಂದ್ರ ಸರ್ಕಾರದ ಹಣಕಾಸು ಹೊಣೆಗಾರಿಕೆಯನ್ನು ಪ್ರತಿ ರಾಜ್ಯದ “ಅಧಿಸೂಚಿತ” ಪ್ರದೇಶಕ್ಕೆ “ಮಾನದಂಡ ಹಂಚಿಕೆ” ಗೆ ಸೀಮಿತಗೊಳಿಸಲಾಗಿದೆ. ಇದರಲ್ಲಿ ಕೇಂದ್ರವು 60% ಮಾತ್ರ ನೀಡುತ್ತದೆ (ಬಹುತೇಕ ರಾಜ್ಯಗಳಲ್ಲಿ). ಇದರಿಂದಾಗಿ, 125 ದಿನಗಳ ಕಾಯ್ದೆಬದ್ಧ ಭರವಸೆ ಪೂರ್ಣವಾಗಿರದೆ, ಕೇಂದ್ರವು ನಿಗದಿ ಮಾಡುವ ಹಣಕಾಸು ಮಿತಿಗೆ ಒಳಪಟ್ಟಿರುತ್ತದೆ. ಇದರಿಂದ ಅನೇಕ ಗ್ರಾಮ ಪಂಚಾಯಿತಿಗಳಲ್ಲಿ ನಿಜವಾದ ಬೇಡಿಕೆ ಇದ್ದರೂ ಹಣದ ಅಭಾವ ಉಂಟಾಗಬಹುದು ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ಹೊಸ ಕಾಯ್ದೆಯ ಪ್ರಕಾರ ಕೇಂದ್ರ ಸರ್ಕಾರವು “ವಸ್ತುನಿಷ್ಠ ನಿಯತಾಂಕಗಳ” ಆಧಾರದ ಮೇಲೆ ರಾಜ್ಯವಾರು ಮಾನದಂಡ ಹಂಚಿಕೆ ನಿಗದಿ ಮಾಡುತ್ತದೆ. ಈ ನಿಯತಾಂಕಗಳು ಕಾಯ್ದೆಯಲ್ಲಿ ಸೇರಿರದೆ, ಯಾವುದೇ ಸಮಯದಲ್ಲಿ ಬದಲಾಯಿಸಬಹುದು
ಇದರಿಂದಾಗಿ ಬೇಡಿಕೆ-ಚಾಲಿತ ವ್ಯವಸ್ಥೆಯು, ಸರಬರಾಜು-ಚಾಲಿತ, ಮೇಲಿನಿಂದ-ಕೆಳಗಿನ ವ್ಯವಸ್ಥೆಯಾಗಿ ಮಾರ್ಪಡುವ ಅಪಾಯವಿದೆ. ಇದು ಮೂಲ ಕಾಯ್ದೆಯಲ್ಲಿರುವ ಸಹಭಾಗಿತ್ವದ ವಿಧಾನಕ್ಕೆ (ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕಾರ್ಮಿಕ ಬಜೆಟ್, ಗ್ರಾಮಗಳ ಬೇಡಿಕೆಗೆ ಅನುಗುಣವಾದ ಹಂಚಿಕೆ) ವಿರುದ್ಧವಾಗಿದೆ ಎಂದಿದ್ದಾರೆ.

ಹೊಸ ಕಾಯ್ದೆಯಲ್ಲಿನ ಹಣಕಾಸು ಹಂಚಿಕೆಯೂ ಸಹ ಕಳವಳಕಾರಿಯಾಗಿದೆ. ಮೂಲ ಕಾಯ್ದೆಯ ಚೌಕಟ್ಟಿನಲ್ಲಿ ಹೆಚ್ಚಿನ ರಾಜ್ಯಗಳಲ್ಲಿ 90:10 (ಕೇಂದ್ರ-ರಾಜ್ಯ) ಹಂಚಿಕೆ ಇದೆ. ಹೊಸ ಕಾಯ್ದೆಯು ಇದನ್ನು 60:40 ಗೆ ಬದಲಾಯಿಸಿ, ಕಾನೂನುಬದ್ಧ ಭರವಸೆಯನ್ನು ಸಾಮಾನ್ಯ ಯೋಜನೆಯಾಗಿ ಮಾರ್ಪಡಿಸುತ್ತದೆ. ಇದು ರಾಜ್ಯ ಹಣಕಾಸಿನ ಮೇಲೆ ಹೆಚ್ಚುವರಿ ಹೊರೆಯನ್ನು ಹೇರುತ್ತದೆ. ರಾಜ್ಯ ಸರ್ಕಾರಗಳೊಂದಿಗೆ ಅರ್ಥಪೂರ್ಣ ಸಮಾಲೋಚನೆ ಇಲ್ಲದೆ ಈ ಬದಲಾವಣೆ ಮಾಡಲಾಗಿದೆ ಎಂದು ವಿರೋಧ ವ್ಯಕ್ತಪಡಿಸಿದ್ದಾರೆ.

ಹೊಸ ಕಾಯ್ದೆಯು ರಾಜ್ಯವು ತನ್ನ ಮಾನದಂಡ ಹಂಚಿಕೆಯನ್ನು ಮೀರಿ ಖರ್ಚು ಮಾಡಿದಲ್ಲಿ, ಆ ಖರ್ಚನ್ನು ಕೇಂದ್ರ ನಿಗದಿ ಮಾಡುವ ವಿಧಾನದ ಪ್ರಕಾರ ರಾಜ್ಯ ಸರ್ಕಾರವೇ ಭರಿಸಬೇಕು ಎಂದು ಹೇಳುತ್ತದೆ. ಇದರಿಂದ ಕೇಂದ್ರ ನಿಗದಿ ಮಿತಿಗಿಂತ ಹೆಚ್ಚಿನ ಬೇಡಿಕೆಗಳ ಅನುಷ್ಠಾನಕ್ಕೆ ರಾಜ್ಯಗಳು ಶೇ.100ರಷ್ಟು ಹೊಣೆಗಾರಿಕೆ ಹೊರಬೇಕಾಗುತ್ತದೆ ಎಂದು ಹೇಳಿದ್ದಾರೆ.

ಕಾಯ್ದೆಯು ರಾಜ್ಯಗಳು ಬಿತ್ತನೆ ಮತ್ತು ಬೆಳೆ ಕಟಾವಿನ ಅವಧಿಯ 60 ದಿನಗಳನ್ನು ಮುಂಚಿತವಾಗಿ ಅಧಿಸೂಚಿಸುವಂತೆ ನಿರ್ದೇಶಿಸುತ್ತದೆ. ಈ ಅವಧಿಯಲ್ಲಿ ಕೃಷಿ ಚಟುವಟಿಕೆಗಳು ಹೆಚ್ಚಾಗಿರಬಹುದಾದರೂ, ಇದು ಕೃಷಿ ಕಾರ್ಮಿಕರ, ಆದಿವಾಸಿ, ದುರ್ಬಲ ಸಮುದಾಯಗಳ ಮಜೂರಿ ಕೂಲಿಯ ಹಕ್ಕನ್ನು ಕಸಿಯುವ ಸಾಧ್ಯತೆಯಿದೆ. ಇದರಿಂದ ಜೀವನೋಪಾಯಕ್ಕಾಗಿ ಒತ್ತಡದಿಂದ ಕಡಿಮೆ ಕೂಲಿ ಕೆಲಸ ಮಾಡುವ ಆ ಮೂಲಕ ನಗರಗಳಿಗೆ ವಲಸೆ ಪ್ರಮಾಣ ಹೆಚ್ಚುವ ಸಾಧ್ಯತೆಯಿದೆ ಎಂದಿದ್ದಾರೆ.

ಹೊಸ ಕಾಯ್ದೆ ಮೂಲ ಉದ್ಯೋಗ ಖಾತ್ರಿ ಯೋಜನೆಯ ಆಶಯಕ್ಕೆ ಸಂಪೂರ್ಣ ವಿರುದ್ಧವಾಗಿದೆ. ಹೊಸ ಕಾಯ್ದೆ “ಕೆಲಸದ ಹಕ್ಕು” ನಿಂದ “ಅನುಮತಿ ಇದ್ದರೆ ಮಾತ್ರ ಕೆಲಸ” ಕ್ಕೆ, “ಗ್ರಾಮೀಣ ಪ್ರದೇಶಗಳಾದ್ಯಂತ ಕೆಲಸ”ದಿಂದ “ಅನುಮತಿ ಇರುವೆಡೆ ಮಾತ್ರ ಕೆಲಸ” ಕ್ಕೆ, ಮತ್ತು “ವರ್ಷದಾದ್ಯಂತ ಕೆಲಸ” ನಿಂದ “ಕೃಷಿ ಚಟುವಟಿಕೆ ಋತುವಿನಲ್ಲಿ ಕೆಲಸವಿಲ್ಲ” ಎಂಬ ನಿಯಮಾವಳಿಯನ್ನು ಸೃಷ್ಟಿಸಿದೆ. ಇದು ಗ್ರಾಮೀಣ ಭಾಗದಲ್ಲಿ ಸಂಪನ್ಮೂಲ ಸೃಷ್ಟಿಯ ಆಶಯವನ್ನು ಗುತ್ತಿಗೆದಾರರ ಕೇಂದ್ರಿತ ಮಾದರಿಗೆ ದಾರಿ ಮಾಡಿಕೊಡುವ ಅಪಾಯವಿದೆ ಎಂದು ಸಿಎಂ ತಿಳಿಸಿದ್ದಾರೆ.

ಹೊಸ ಕಾಯ್ದೆಯಲ್ಲಿ ಹೆಚ್ಚಿನ ತಾಂತ್ರಿಕ ಹಸ್ತಕ್ಷೇಪಕ್ಕೆ ಅವಕಾಶವಿದ್ದು, ಇದರಿಂದ ಬಡತನ ರೇಖೆಗಿಂತ ಕೆಳಗಿರುವ ಮತ್ತು ಡಿಜಿಟಲ್ ಸೌಲಭ್ಯವಿಲ್ಲದ ಗ್ರಾಮೀಣ ನಾಗರಿಕರನ್ನು, ವಿಶೇಷವಾಗಿ ದಲಿತ ಮತ್ತು ಆದಿವಾಸಿ ಸಮುದಾಯಗಳನ್ನು ಯೋಜನೆಯಿಂದ ದೂರ ಮಾಡಬಹುದು ಎಂಬ ಆತಂಕ ವ್ಯಕ್ತಪಡಿಸಿದ್ದಾರೆ.

ವಿಬಿ-ಜಿ ರಾಮ್ ಜಿ ಕಾಯ್ದೆಯ ಜಾರಿಯು ಸಂವಿಧಾನದ 258 ಮತ್ತು 280ನೇ ವಿಧಿಗಳನ್ನು ಉಲ್ಲಂಘಿಸುತ್ತದೆ. ಸಂವಿಧಾನದ ಈ ವಿಧಿಗಳು ಕೇಂದ್ರ ಪ್ರಾಯೋಜಿತ ಯೋಜನೆಗಳಡಿ ಹಣಕಾಸು ಚೌಕಟ್ಟು ವಿಧಿಸುವ ಮುನ್ನ ರಾಜ್ಯ ಸರ್ಕಾರಗಳೊಂದಿಗೆ ಸಮಾಲೋಚನೆ, ಹಣಕಾಸು ಒಕ್ಕೂಟ, ಮತ್ತು ಸ್ಥಳೀಯ ಆಡಳಿತ ಬಲಗೊಳಿಸುವಿಕೆಗೆ ಮಹತ್ವ ನೀಡುತ್ತದೆ. ಆದರೆ ಕೇಂದ್ರ ಸರ್ಕಾರದ ಧೋರಣೆ ಸಹಕಾರಿ ಒಕ್ಕೂಟದ ಅಡಿಪಾಯಕ್ಕೆ ಅಪಾಯಕಾರಿಯಾಗಿದೆ ಎಂದಿದ್ದಾರೆ.

ಉದ್ಯೋಗ ಭರವಸೆ ಕಾನೂನು ಕೇವಲ ಒಂದು ಕಲ್ಯಾಣ ಕ್ರಮವಲ್ಲ; ಇದೊಂದು ಐತಿಹಾಸಿಕ, ವಿಶ್ವಮಾನ್ಯತೆ ಪಡೆದ, ಹಕ್ಕು-ಆಧಾರಿತ ಶಾಸನವಾಗಿದೆ. ಇದು ಗ್ರಾಮ ಸ್ವರಾಜ್ ಮತ್ತು ಅಂತ್ಯೋದಯದ ಪ್ರತೀಕವಾದ ಮಹಾತ್ಮಾ ಗಾಂಧೀಜಿಯ ಹೆಸರನ್ನು ಹೊಂದಿರುವುದು ಅರ್ಥಪೂರ್ಣವಾಗಿದೆ. ಆದರೆ ಪ್ರಸ್ತುತ ಕಾನೂನಿನಲ್ಲಿ ಮಹಾತ್ಮಾ ಗಾಂಧಿ ಅವರ ಹೆಸರನ್ನು ತೆಗೆದುಹಾಕಿರುವುದು ದುರದೃಷ್ಟಕರ ಸಂದೇಶ ನೀಡುತ್ತಿದ್ದು, ಹೊಸ ಕಾಯ್ದೆಯ ನೈತಿಕ ಅಧಿಕಾರವನ್ನು ದುರ್ಬಲಗೊಳಿಸಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಈ ಎಲ್ಲಾ ವಿಷಯಗಳನ್ನು ಗಮನದಲ್ಲಿಟ್ಟುಕೊಂಡು, ವಿಬಿ-ಜಿ ರಾಮ್ ಜಿ ಕಾಯ್ದೆಯ ಅನುಷ್ಠಾನವನ್ನು ತಡೆಹಿಡಿಯಲು, ಜೀವನೋಪಾಯದ ಹಕ್ಕನ್ನು ಬಲಪಡಿಸಲು ಮತ್ತು ಸಂವಿಧಾನಬದ್ಧವಾಗಿ ರಾಜ್ಯ ಸರ್ಕಾರಗಳೊಂದಿಗಿನ ಸಮಾಲೋಚನೆಗಳನ್ನು ನಡೆಸುವ ನಿಟ್ಟಿನಲ್ಲಿ ತಾವು ವೈಯಕ್ತಿಕವಾಗಿ ಮುಂದಾಗಬೇಕು ಎಂದು ಸಿಎಂ ಪತ್ರದಲ್ಲಿ ಕೋರಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...