Homeಮುಖಪುಟವಿಬಿ-ಜಿ ರಾಮ್‌ ಜಿ ಕಾಯ್ದೆ ವಿರುದ್ಧ ಪ್ರಧಾನಿಗೆ ಸಿಎಂ ಸಿದ್ದರಾಮಯ್ಯ ಪತ್ರ : ರಾಜ್ಯಗಳೊಂದಿಗೆ ಸಮಾಲೋಚನೆ...

ವಿಬಿ-ಜಿ ರಾಮ್‌ ಜಿ ಕಾಯ್ದೆ ವಿರುದ್ಧ ಪ್ರಧಾನಿಗೆ ಸಿಎಂ ಸಿದ್ದರಾಮಯ್ಯ ಪತ್ರ : ರಾಜ್ಯಗಳೊಂದಿಗೆ ಸಮಾಲೋಚನೆ ನಡೆಸಲು ಆಗ್ರಹ

- Advertisement -
- Advertisement -

ನರೇಗಾ ಬದಲಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಬಿ-ಜಿ ರಾಮ್‌ ಜಿ ಕಾಯ್ದೆಯ ಕುರಿತು ಕಳವಳ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಅದರ ಅನುಷ್ಠಾನ ತಡೆ ಹಿಡಿಯುವಂತೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಮಂಗಳವಾರ (ಡಿ.30) ಪತ್ರ ಬರೆದಿದ್ದಾರೆ.

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜಗಾರ್ ಅಂಡ್ ಆಜೀವಿಕಾ ಮಿಶನ್ (ಗ್ರಾಮೀಣ) (ವಿಬಿ-ಜಿ ರಾಮ್ ಜಿ) ಕಾಯ್ದೆಯು, ಮಹಾತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಮೂಲ ಉದ್ದೇಶಕ್ಕೆ ವಿರುದ್ಧವಾಗಿದೆ. ಮೂಲ ಉದ್ಯೋಗ ಖಾತ್ರಿ ಯೋಜನೆ ಗ್ರಾಮೀಣ ಜನರ ಉದ್ಯೋಗದ ಬೇಡಿಕೆ ಮತ್ತು ಹಕ್ಕು ಆಧಾರಿತವಾಗಿತ್ತು ಎಂದು ಸಿಎಂ ಪತ್ರದಲ್ಲಿ ಹೇಳಿದ್ದಾರೆ.

ಹೊಸ ಕಾಯ್ದೆಯು ಉದ್ಯೋಗದ ದಿನಗಳನ್ನು 100 ರಿಂದ 125 ಕ್ಕೆ ಏರಿಸಿದರೂ, ಯೋಜನೆ ಅನುಷ್ಠಾನದಲ್ಲಿ ಕೇಂದ್ರದ ನಿಗದಿತ ಅನುದಾನದ ಖಾತ್ರಿಯಿರುವುದಿಲ್ಲ. ಕೇಂದ್ರ ಸರ್ಕಾರದ ಹಣಕಾಸು ಹೊಣೆಗಾರಿಕೆಯನ್ನು ಪ್ರತಿ ರಾಜ್ಯದ “ಅಧಿಸೂಚಿತ” ಪ್ರದೇಶಕ್ಕೆ “ಮಾನದಂಡ ಹಂಚಿಕೆ” ಗೆ ಸೀಮಿತಗೊಳಿಸಲಾಗಿದೆ. ಇದರಲ್ಲಿ ಕೇಂದ್ರವು 60% ಮಾತ್ರ ನೀಡುತ್ತದೆ (ಬಹುತೇಕ ರಾಜ್ಯಗಳಲ್ಲಿ). ಇದರಿಂದಾಗಿ, 125 ದಿನಗಳ ಕಾಯ್ದೆಬದ್ಧ ಭರವಸೆ ಪೂರ್ಣವಾಗಿರದೆ, ಕೇಂದ್ರವು ನಿಗದಿ ಮಾಡುವ ಹಣಕಾಸು ಮಿತಿಗೆ ಒಳಪಟ್ಟಿರುತ್ತದೆ. ಇದರಿಂದ ಅನೇಕ ಗ್ರಾಮ ಪಂಚಾಯಿತಿಗಳಲ್ಲಿ ನಿಜವಾದ ಬೇಡಿಕೆ ಇದ್ದರೂ ಹಣದ ಅಭಾವ ಉಂಟಾಗಬಹುದು ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ಹೊಸ ಕಾಯ್ದೆಯ ಪ್ರಕಾರ ಕೇಂದ್ರ ಸರ್ಕಾರವು “ವಸ್ತುನಿಷ್ಠ ನಿಯತಾಂಕಗಳ” ಆಧಾರದ ಮೇಲೆ ರಾಜ್ಯವಾರು ಮಾನದಂಡ ಹಂಚಿಕೆ ನಿಗದಿ ಮಾಡುತ್ತದೆ. ಈ ನಿಯತಾಂಕಗಳು ಕಾಯ್ದೆಯಲ್ಲಿ ಸೇರಿರದೆ, ಯಾವುದೇ ಸಮಯದಲ್ಲಿ ಬದಲಾಯಿಸಬಹುದು
ಇದರಿಂದಾಗಿ ಬೇಡಿಕೆ-ಚಾಲಿತ ವ್ಯವಸ್ಥೆಯು, ಸರಬರಾಜು-ಚಾಲಿತ, ಮೇಲಿನಿಂದ-ಕೆಳಗಿನ ವ್ಯವಸ್ಥೆಯಾಗಿ ಮಾರ್ಪಡುವ ಅಪಾಯವಿದೆ. ಇದು ಮೂಲ ಕಾಯ್ದೆಯಲ್ಲಿರುವ ಸಹಭಾಗಿತ್ವದ ವಿಧಾನಕ್ಕೆ (ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕಾರ್ಮಿಕ ಬಜೆಟ್, ಗ್ರಾಮಗಳ ಬೇಡಿಕೆಗೆ ಅನುಗುಣವಾದ ಹಂಚಿಕೆ) ವಿರುದ್ಧವಾಗಿದೆ ಎಂದಿದ್ದಾರೆ.

ಹೊಸ ಕಾಯ್ದೆಯಲ್ಲಿನ ಹಣಕಾಸು ಹಂಚಿಕೆಯೂ ಸಹ ಕಳವಳಕಾರಿಯಾಗಿದೆ. ಮೂಲ ಕಾಯ್ದೆಯ ಚೌಕಟ್ಟಿನಲ್ಲಿ ಹೆಚ್ಚಿನ ರಾಜ್ಯಗಳಲ್ಲಿ 90:10 (ಕೇಂದ್ರ-ರಾಜ್ಯ) ಹಂಚಿಕೆ ಇದೆ. ಹೊಸ ಕಾಯ್ದೆಯು ಇದನ್ನು 60:40 ಗೆ ಬದಲಾಯಿಸಿ, ಕಾನೂನುಬದ್ಧ ಭರವಸೆಯನ್ನು ಸಾಮಾನ್ಯ ಯೋಜನೆಯಾಗಿ ಮಾರ್ಪಡಿಸುತ್ತದೆ. ಇದು ರಾಜ್ಯ ಹಣಕಾಸಿನ ಮೇಲೆ ಹೆಚ್ಚುವರಿ ಹೊರೆಯನ್ನು ಹೇರುತ್ತದೆ. ರಾಜ್ಯ ಸರ್ಕಾರಗಳೊಂದಿಗೆ ಅರ್ಥಪೂರ್ಣ ಸಮಾಲೋಚನೆ ಇಲ್ಲದೆ ಈ ಬದಲಾವಣೆ ಮಾಡಲಾಗಿದೆ ಎಂದು ವಿರೋಧ ವ್ಯಕ್ತಪಡಿಸಿದ್ದಾರೆ.

ಹೊಸ ಕಾಯ್ದೆಯು ರಾಜ್ಯವು ತನ್ನ ಮಾನದಂಡ ಹಂಚಿಕೆಯನ್ನು ಮೀರಿ ಖರ್ಚು ಮಾಡಿದಲ್ಲಿ, ಆ ಖರ್ಚನ್ನು ಕೇಂದ್ರ ನಿಗದಿ ಮಾಡುವ ವಿಧಾನದ ಪ್ರಕಾರ ರಾಜ್ಯ ಸರ್ಕಾರವೇ ಭರಿಸಬೇಕು ಎಂದು ಹೇಳುತ್ತದೆ. ಇದರಿಂದ ಕೇಂದ್ರ ನಿಗದಿ ಮಿತಿಗಿಂತ ಹೆಚ್ಚಿನ ಬೇಡಿಕೆಗಳ ಅನುಷ್ಠಾನಕ್ಕೆ ರಾಜ್ಯಗಳು ಶೇ.100ರಷ್ಟು ಹೊಣೆಗಾರಿಕೆ ಹೊರಬೇಕಾಗುತ್ತದೆ ಎಂದು ಹೇಳಿದ್ದಾರೆ.

ಕಾಯ್ದೆಯು ರಾಜ್ಯಗಳು ಬಿತ್ತನೆ ಮತ್ತು ಬೆಳೆ ಕಟಾವಿನ ಅವಧಿಯ 60 ದಿನಗಳನ್ನು ಮುಂಚಿತವಾಗಿ ಅಧಿಸೂಚಿಸುವಂತೆ ನಿರ್ದೇಶಿಸುತ್ತದೆ. ಈ ಅವಧಿಯಲ್ಲಿ ಕೃಷಿ ಚಟುವಟಿಕೆಗಳು ಹೆಚ್ಚಾಗಿರಬಹುದಾದರೂ, ಇದು ಕೃಷಿ ಕಾರ್ಮಿಕರ, ಆದಿವಾಸಿ, ದುರ್ಬಲ ಸಮುದಾಯಗಳ ಮಜೂರಿ ಕೂಲಿಯ ಹಕ್ಕನ್ನು ಕಸಿಯುವ ಸಾಧ್ಯತೆಯಿದೆ. ಇದರಿಂದ ಜೀವನೋಪಾಯಕ್ಕಾಗಿ ಒತ್ತಡದಿಂದ ಕಡಿಮೆ ಕೂಲಿ ಕೆಲಸ ಮಾಡುವ ಆ ಮೂಲಕ ನಗರಗಳಿಗೆ ವಲಸೆ ಪ್ರಮಾಣ ಹೆಚ್ಚುವ ಸಾಧ್ಯತೆಯಿದೆ ಎಂದಿದ್ದಾರೆ.

ಹೊಸ ಕಾಯ್ದೆ ಮೂಲ ಉದ್ಯೋಗ ಖಾತ್ರಿ ಯೋಜನೆಯ ಆಶಯಕ್ಕೆ ಸಂಪೂರ್ಣ ವಿರುದ್ಧವಾಗಿದೆ. ಹೊಸ ಕಾಯ್ದೆ “ಕೆಲಸದ ಹಕ್ಕು” ನಿಂದ “ಅನುಮತಿ ಇದ್ದರೆ ಮಾತ್ರ ಕೆಲಸ” ಕ್ಕೆ, “ಗ್ರಾಮೀಣ ಪ್ರದೇಶಗಳಾದ್ಯಂತ ಕೆಲಸ”ದಿಂದ “ಅನುಮತಿ ಇರುವೆಡೆ ಮಾತ್ರ ಕೆಲಸ” ಕ್ಕೆ, ಮತ್ತು “ವರ್ಷದಾದ್ಯಂತ ಕೆಲಸ” ನಿಂದ “ಕೃಷಿ ಚಟುವಟಿಕೆ ಋತುವಿನಲ್ಲಿ ಕೆಲಸವಿಲ್ಲ” ಎಂಬ ನಿಯಮಾವಳಿಯನ್ನು ಸೃಷ್ಟಿಸಿದೆ. ಇದು ಗ್ರಾಮೀಣ ಭಾಗದಲ್ಲಿ ಸಂಪನ್ಮೂಲ ಸೃಷ್ಟಿಯ ಆಶಯವನ್ನು ಗುತ್ತಿಗೆದಾರರ ಕೇಂದ್ರಿತ ಮಾದರಿಗೆ ದಾರಿ ಮಾಡಿಕೊಡುವ ಅಪಾಯವಿದೆ ಎಂದು ಸಿಎಂ ತಿಳಿಸಿದ್ದಾರೆ.

ಹೊಸ ಕಾಯ್ದೆಯಲ್ಲಿ ಹೆಚ್ಚಿನ ತಾಂತ್ರಿಕ ಹಸ್ತಕ್ಷೇಪಕ್ಕೆ ಅವಕಾಶವಿದ್ದು, ಇದರಿಂದ ಬಡತನ ರೇಖೆಗಿಂತ ಕೆಳಗಿರುವ ಮತ್ತು ಡಿಜಿಟಲ್ ಸೌಲಭ್ಯವಿಲ್ಲದ ಗ್ರಾಮೀಣ ನಾಗರಿಕರನ್ನು, ವಿಶೇಷವಾಗಿ ದಲಿತ ಮತ್ತು ಆದಿವಾಸಿ ಸಮುದಾಯಗಳನ್ನು ಯೋಜನೆಯಿಂದ ದೂರ ಮಾಡಬಹುದು ಎಂಬ ಆತಂಕ ವ್ಯಕ್ತಪಡಿಸಿದ್ದಾರೆ.

ವಿಬಿ-ಜಿ ರಾಮ್ ಜಿ ಕಾಯ್ದೆಯ ಜಾರಿಯು ಸಂವಿಧಾನದ 258 ಮತ್ತು 280ನೇ ವಿಧಿಗಳನ್ನು ಉಲ್ಲಂಘಿಸುತ್ತದೆ. ಸಂವಿಧಾನದ ಈ ವಿಧಿಗಳು ಕೇಂದ್ರ ಪ್ರಾಯೋಜಿತ ಯೋಜನೆಗಳಡಿ ಹಣಕಾಸು ಚೌಕಟ್ಟು ವಿಧಿಸುವ ಮುನ್ನ ರಾಜ್ಯ ಸರ್ಕಾರಗಳೊಂದಿಗೆ ಸಮಾಲೋಚನೆ, ಹಣಕಾಸು ಒಕ್ಕೂಟ, ಮತ್ತು ಸ್ಥಳೀಯ ಆಡಳಿತ ಬಲಗೊಳಿಸುವಿಕೆಗೆ ಮಹತ್ವ ನೀಡುತ್ತದೆ. ಆದರೆ ಕೇಂದ್ರ ಸರ್ಕಾರದ ಧೋರಣೆ ಸಹಕಾರಿ ಒಕ್ಕೂಟದ ಅಡಿಪಾಯಕ್ಕೆ ಅಪಾಯಕಾರಿಯಾಗಿದೆ ಎಂದಿದ್ದಾರೆ.

ಉದ್ಯೋಗ ಭರವಸೆ ಕಾನೂನು ಕೇವಲ ಒಂದು ಕಲ್ಯಾಣ ಕ್ರಮವಲ್ಲ; ಇದೊಂದು ಐತಿಹಾಸಿಕ, ವಿಶ್ವಮಾನ್ಯತೆ ಪಡೆದ, ಹಕ್ಕು-ಆಧಾರಿತ ಶಾಸನವಾಗಿದೆ. ಇದು ಗ್ರಾಮ ಸ್ವರಾಜ್ ಮತ್ತು ಅಂತ್ಯೋದಯದ ಪ್ರತೀಕವಾದ ಮಹಾತ್ಮಾ ಗಾಂಧೀಜಿಯ ಹೆಸರನ್ನು ಹೊಂದಿರುವುದು ಅರ್ಥಪೂರ್ಣವಾಗಿದೆ. ಆದರೆ ಪ್ರಸ್ತುತ ಕಾನೂನಿನಲ್ಲಿ ಮಹಾತ್ಮಾ ಗಾಂಧಿ ಅವರ ಹೆಸರನ್ನು ತೆಗೆದುಹಾಕಿರುವುದು ದುರದೃಷ್ಟಕರ ಸಂದೇಶ ನೀಡುತ್ತಿದ್ದು, ಹೊಸ ಕಾಯ್ದೆಯ ನೈತಿಕ ಅಧಿಕಾರವನ್ನು ದುರ್ಬಲಗೊಳಿಸಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಈ ಎಲ್ಲಾ ವಿಷಯಗಳನ್ನು ಗಮನದಲ್ಲಿಟ್ಟುಕೊಂಡು, ವಿಬಿ-ಜಿ ರಾಮ್ ಜಿ ಕಾಯ್ದೆಯ ಅನುಷ್ಠಾನವನ್ನು ತಡೆಹಿಡಿಯಲು, ಜೀವನೋಪಾಯದ ಹಕ್ಕನ್ನು ಬಲಪಡಿಸಲು ಮತ್ತು ಸಂವಿಧಾನಬದ್ಧವಾಗಿ ರಾಜ್ಯ ಸರ್ಕಾರಗಳೊಂದಿಗಿನ ಸಮಾಲೋಚನೆಗಳನ್ನು ನಡೆಸುವ ನಿಟ್ಟಿನಲ್ಲಿ ತಾವು ವೈಯಕ್ತಿಕವಾಗಿ ಮುಂದಾಗಬೇಕು ಎಂದು ಸಿಎಂ ಪತ್ರದಲ್ಲಿ ಕೋರಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಶಪಡಿಸಿಕೊಂಡ 200 ಕೆ.ಜಿ ಗಾಂಜಾ ಇಲಿಗಳು ತಿಂದಿವೆ ಎಂದ ಪೊಲೀಸರು : ಆರೋಪಿಯನ್ನು ಖುಲಾಸೆಗೊಳಿಸಿದ ಕೋರ್ಟ್

ಮೂರು ವರ್ಷಗಳ ಹಿಂದೆ ಜಾರ್ಖಂಡ್ ಪೊಲೀಸರು ವಾಹನವೊಂದನ್ನು ತಡೆದು, ಅದರಿಂದ ಭಾರೀ ಪ್ರಮಾಣದ ಮಾದಕ ವಸ್ತು ಗಾಂಜಾ ವಶಪಡಿಸಿಕೊಂಡಿದ್ದರು. 2024ರಲ್ಲಿ ಈ ಪ್ರಕರಣದ ವಿಚಾರಣೆ ನಡೆಯುವಾಗ, ವಶಪಡಿಸಿಕೊಂಡ ಗಾಂಜಾವನ್ನು ಹಾಜರುಪಡಿಸುವಂತೆ ನ್ಯಾಯಾಲಯ ಸೂಚಿಸಿತ್ತು....

ಗಿಗ್ ಕಾರ್ಮಿಕರಿಂದ ಮತ್ತೆ ಮುಷ್ಕರ : ಹೊಸ ವರ್ಷದ ಸಂಜೆ ಆಹಾರ, ದಿನಸಿ ವಿತರಣೆಯಲ್ಲಿ ವ್ಯತ್ಯಯ ಸಾಧ್ಯತೆ

ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಡಿಸೆಂಬರ್ 25ರ ಕ್ರಿಸ್‌ಮಸ್ ದಿನದಂದು ದೇಶದ ವಿವಿಧ ನಗರಗಳಲ್ಲಿ ಮುಷ್ಕರ ನಡೆಸಿರುವ ಗಿಗ್‌ ಕಾರ್ಮಿಕರು, ಹೊಸ ವರ್ಷದ ಸಂಜೆಯಾದ ಇಂದು (ಡಿ.31) ಮತ್ತೊಮ್ಮೆ ಮುಷ್ಕರ ನಡೆಸಲು ನಿರ್ಧರಿಸಿದ್ದಾರೆ. ನ್ಯಾಯಯುತ ಮತ್ತು...

ಉತ್ತರಾಖಂಡ: ಜಲವಿದ್ಯುತ್ ಯೋಜನೆಯ ಸುರಂಗದೊಳಗೆ ಎರಡು ಲೋಕೋ ರೈಲುಗಳು ಡಿಕ್ಕಿ, 60 ಜನರಿಗೆ ಗಾಯ

ಗೋಪೇಶ್ವರ: ಉತ್ತರಾಖಂಡದ ಚಮೋಲಿ ಜಿಲ್ಲೆಯ ವಿಷ್ಣುಗಢ-ಪಿಪಲ್ಕೋಟಿ ಜಲ ವಿದ್ಯುತ್ ಯೋಜನೆಯ ಸುರಂಗದ ಪಿಪಲ್ಕೋಟಿ ಸುರಂಗದೊಳಗೆ ಮಂಗಳವಾರ ಸಂಜೆ ಕಾರ್ಮಿಕರು ಮತ್ತು ಅಧಿಕಾರಿಗಳನ್ನು ಕರೆದೊಯ್ಯುತ್ತಿದ್ದ ಲೋಕೋ ರೈಲು, ಸರಕು ರೈಲಿಗೆ ಡಿಕ್ಕಿ ಹೊಡೆದು ಸುಮಾರು...

ಚಕ್ರವರ್ತಿ ಸೂಲಿಬೆಲೆಗೆ ಆಹ್ವಾನ ವಿರೋಧಿಸಿ ಪ್ರತಿಭಟನೆ; ಧಾರವಾಡ ಕೃಷಿ ವಿವಿ ವಿದ್ಯಾರ್ಥಿ ಸಂಘದ ಪದಗ್ರಹಣ ಕಾರ್ಯಕ್ರಮ ರದ್ದು

ಧಾರವಾಡದ ಕೃಷಿ ವಿಶ್ವ ವಿದ್ಯಾನಿಲಯದಲ್ಲಿ ಆಯೋಜಿಸಲಾಗಿದ್ದ ವಿದ್ಯಾರ್ಥಿ ಸಂಘದ ಪದಗ್ರಹಣ ಕಾರ್ಯಕ್ರಮಕ್ಕೆ ಹಿಂದುತ್ವ ಭಾಷಣಕಾರ ಚಕ್ರವರ್ತಿ ಸೂಲಿಬೆಲೆಗೆ ಆಹ್ವಾನ ನೀಡಿರುವುದನ್ನು ವಿರೋಧಿಸಿ ದಲಿತ ಸಂಘಟನೆ ಹಾಗೂ ಕೃಷಿ ವಿವಿ ಬೋರ್ಡ್ ಸದಸ್ಯರು ವಿವಿ...

ಯುಪಿ: ತಂದೆ ಮತ್ತು ಮಾನಸಿಕ ಅಸ್ವಸ್ಥ ಮಗಳನ್ನು ಐದು ವರ್ಷ ಕೋಣೆಯಲ್ಲಿ ಕೂಡಿ ಹಾಕಿದ ಸೇವಕ ದಂಪತಿ: ತಂದೆ ಸಾವು, ಅಸ್ಥಿಪಂಜರದಂತೆ ಪತ್ತೆಯಾದ ಮಗಳು

ಉತ್ತರ ಪ್ರದೇಶದ ಮಹೋಬಾ ಜಿಲ್ಲೆಯಲ್ಲಿ ನಿವೃತ್ತ ರೈಲ್ವೆ ಉದ್ಯೋಗಿ ಮತ್ತು ಅವರ ಮಾನಸಿಕ ಅಸ್ವಸ್ಥ ಮಗಳನ್ನು ಅವರ ಆರೈಕೆದಾರರು ಐದು ವರ್ಷಗಳ ಕಾಲ ಬಂಧಿಯಾಗಿಟ್ಟು ಚಿತ್ರಹಿಂಸೆ ನೀಡಿ, ಆ ವ್ಯಕ್ತಿಯ ಸಾವಿಗೆ ಕಾರಣವಾದ...

ಈಶಾನ್ಯ ಭಾರತ ನಾಗರಿಕರ ವಿರುದ್ಧದ ಜನಾಂಗೀಯ ಹಿಂಸಾಚಾರ: ಸುಪ್ರೀಂ ಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ

ಈಶಾನ್ಯ ರಾಜ್ಯಗಳು ಮತ್ತು ಇತರ ಗಡಿ ಪ್ರದೇಶಗಳ ನಾಗರಿಕರ ಮೇಲಿನ ಜನಾಂಗೀಯ ತಾರತಮ್ಯ ಮತ್ತು ಹಿಂಸಾಚಾರವನ್ನು ತಡೆಗಟ್ಟುವಲ್ಲಿ, ಪ್ರತಿಕ್ರಿಯಿಸುವಲ್ಲಿ ನಿರಂತರ ಸಾಂವಿಧಾನಿಕ ವೈಫಲ್ಯವನ್ನು ಪರಿಹರಿಸಲು ನ್ಯಾಯಾಂಗ ಹಸ್ತಕ್ಷೇಪವನ್ನು ಕೋರಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ...

ಎಸ್‌ಐಆರ್‌ ದೊಡ್ಡ ಹಗರಣ : ನೈಜ ಮತದಾರರನ್ನು ಕೈಬಿಟ್ಟರೆ ಚು.ಆಯೋಗದ ಕಚೇರಿಗೆ ಘೇರಾವ್ : ಮಮತಾ ಬ್ಯಾನರ್ಜಿ ಎಚ್ಚರಿಕೆ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ಪೂರ್ಣಗೊಂಡ ನಂತರ ಅಂತಿಮ ಮತದಾರರ ಪಟ್ಟಿಯಿಂದ ಒಬ್ಬನೇ ಒಬ್ಬ ಕಾನೂನುಬದ್ಧ ಮತದಾರರ ಹೆಸರನ್ನು ಅಳಿಸಿದರೆ, ದೆಹಲಿಯಲ್ಲಿರುವ ಚುನಾವಣಾ ಆಯೋಗದ ಕಚೇರಿಗೆ ಘೇರಾವ್ ಹಾಕುವುದಾಗಿ...

ಬೀದಿ ನಾಯಿ ಎಣಿಕೆ ಕಾರ್ಯಕ್ಕೆ ಶಾಲಾ ಶಿಕ್ಷಕರನ್ನು ನಿಯೋಜಿಸಿಲ್ಲ: ದೆಹಲಿ ಸರ್ಕಾರದ ಸ್ಪಷ್ಟನೆ

ನಗರದಲ್ಲಿ ಬೀದಿ ನಾಯಿಗಳ ಎಣಿಕೆಗೆ ಯಾವುದೇ ಶಾಲಾ ಶಿಕ್ಷಕರನ್ನು ನಿಯೋಜಿಸಲಾಗಿಲ್ಲ ಎಂದು ದೆಹಲಿ ಸರ್ಕಾರ ಸ್ಪಷ್ಟಪಡಿಸಿದೆ. ಶಿಕ್ಷಕರಿಗೆ ಜನಗಣತಿ ಸಂಬಂಧಿತ ಕರ್ತವ್ಯಗಳಿಗೆ ಮಾತ್ರ ನಿಯೋಜಿಸಲಾಗಿದೆ. ಬೀದಿ ನಾಯಿ ಸಂಬಂಧಿತ ವಿಷಯಗಳಿಗೆ ಸಂಬಂಧಿಸಿದಂತೆ ಶಿಕ್ಷಣ ಸಂಸ್ಥೆಗಳಿಗೆ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಎಚ್‌.ಡಿ ರೇವಣ್ಣ ಖುಲಾಸೆ

ಮನೆ ಕೆಲಸದ ಮಹಿಳೆಯ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೆಡಿಎಸ್‌ ಶಾಸಕ ಎಚ್‌.ಡಿ ರೇವಣ್ಣ ಅವರನ್ನು ಬೆಂಗಳೂರಿನ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯವು ಸೋಮವಾರ (ಡಿ.29) ಆರೋಪ ಮುಕ್ತಗೊಳಿಸಿ ಮಹತ್ವದ ಆದೇಶ ನೀಡಿದೆ. ಕಳೆದ ತಿಂಗಳು...

ಅಧಿಕಾರಕ್ಕೆ ಬಂದರೆ ಬಂಗಾಳವನ್ನು ನುಸುಳುಕೋರರಿಂದ ಮುಕ್ತಗೊಳಿಸುತ್ತೇವೆ: ಅಮಿತ್ ಶಾ

ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಯ ನಂತರ ಪಕ್ಷವು ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ, ಪಶ್ಚಿಮ ಬಂಗಾಳವನ್ನು ನುಸುಳುಕೋರರಿಂದ ಮುಕ್ತಗೊಳಿಸುವುದು ಬಿಜೆಪಿಯ ಮೊದಲ ಕೆಲಸ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಮಂಗಳವಾರ...