Homeಮುಖಪುಟಇಂದೋರ್| ಕಲುಷಿತ ನೀರು ಸೇವಿಸಿ ಏಳು ಜನರು ಸಾವು; ದೃಢಪಡಿಸಿದ ಮೇಯರ್

ಇಂದೋರ್| ಕಲುಷಿತ ನೀರು ಸೇವಿಸಿ ಏಳು ಜನರು ಸಾವು; ದೃಢಪಡಿಸಿದ ಮೇಯರ್

- Advertisement -
- Advertisement -

ಮಧ್ಯಪ್ರದೇಶದ ಇಂದೋರ್ ನಗರದಲ್ಲಿ ಕಲುಷಿತ ನೀರು ಸೇವಿಸಿದ ಪರಿಣಾಮ ಅತಿಸಾರ ಮತ್ತು ವಾಂತಿಯಿಂದ ಇದುವರೆಗೆ ಏಳು ಜನರು ಸಾವನ್ನಪ್ಪಿದ್ದಾರೆ ಎಂದು ಮೇಯರ್ ಪುಷ್ಯಮಿತ್ರ ಭಾರ್ಗವ ಬುಧವಾರ ದೃಢಪಡಿಸಿದರು.

“ಭಾಗೀರಥಪುರ ಪ್ರದೇಶದಲ್ಲಿ ಅತಿಸಾರದಿಂದ ಮೂರು ಸಾವುಗಳು ಸಂಭವಿಸಿವೆ ಎಂದು ಆರೋಗ್ಯ ಇಲಾಖೆ ವರದಿ ಮಾಡಿದೆ. ಆದರೆ ನನಗೆ ತಿಳಿದ ಮಟ್ಟಿಗೆ, ಈ ಕಾಯಿಲೆಯಿಂದ ಬಳಲುತ್ತಿರುವ ಇನ್ನೂ ನಾಲ್ಕು ಜನರನ್ನು ಆಸ್ಪತ್ರೆಗೆ ಕರೆತರಲಾಯಿತು, ಅವರು ಸಹ ಸಾವನ್ನಪ್ಪಿದರು” ಎಂದು ಅವರು ವರದಿಗಾರರಿಗೆ ತಿಳಿಸಿದರು.

ಪ್ರಾಥಮಿಕ ಅಂದಾಜಿನ ಪ್ರಕಾರ, ಒಳಚರಂಡಿ ನೀರು ಸೋರಿಕೆಯಾಗಿ ಕುಡಿಯುವ ನೀರಿನ ಪೈಪ್‌ಲೈನ್‌ಗೆ ಪ್ರವೇಶಿಸಿದೆ. ಇದು ಭಾಗೀರಥಪುರ ಪ್ರದೇಶದಲ್ಲಿ ಅತಿಸಾರ ಮತ್ತು ವಾಂತಿಗೆ ಕಾರಣವಾಯಿತು ಎಂದು ಭಾರ್ಗವ ಹೇಳಿದರು.

ಕಲುಷಿತ ಕುಡಿಯುವ ನೀರಿನಿಂದ ಉಂಟಾದ ಅತಿಸಾರದಿಂದ ನಾಲ್ಕು ಜನರು ಸಾವನ್ನಪ್ಪಿರುವುದನ್ನು ವೈದ್ಯರು ದೃಢಪಡಿಸಿದ್ದಾರೆ ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ಶಿವಂ ವರ್ಮಾ ಹೇಳಿದರು.

ಈ ಕಾಯಿಲೆಯಿಂದ ಬಳಲುತ್ತಿರುವ 149 ರೋಗಿಗಳನ್ನು ನಗರದಾದ್ಯಂತ 27 ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಅವರ ಆರೋಗ್ಯ ಸ್ಥಿತಿಯನ್ನು ಮೇಲ್ವಿಚಾರಣೆ ಮಾಡಲಾಗುತ್ತಿದೆ ಎಂದು ಅವರು ಹೇಳಿದರು.

ಕಳೆದ ಒಂದು ವಾರದಲ್ಲಿ ಭಾಗೀರಥಪುರ ಪ್ರದೇಶದಲ್ಲಿ ಕಲುಷಿತ ನೀರು ಸೇವಿಸಿ ಆರು ಮಹಿಳೆಯರು ಸೇರಿದಂತೆ ಕನಿಷ್ಠ ಎಂಟು ಜನರು ಅಸ್ವಸ್ಥರಾಗಿ ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯ ನಿವಾಸಿಗಳು ಹೇಳಿದ್ದಾರೆ.

ಘಟನೆಯ ಬಗ್ಗೆ ಮುಖ್ಯಮಂತ್ರಿ ಮೋಹನ್ ಯಾದವ್ ದುಃಖ ವ್ಯಕ್ತಪಡಿಸಿ, ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂಪಾಯಿಗಳ ಆರ್ಥಿಕ ನೆರವು ಘೋಷಿಸಿದರು. ಜೊತೆಗೆ ಎಲ್ಲಾ ರೋಗಿಗಳ ಚಿಕಿತ್ಸೆಯ ಸಂಪೂರ್ಣ ವೆಚ್ಚವನ್ನು ಸರ್ಕಾರ ಭರಿಸಲಿದೆ ಎಂದು ಹೇಳಿದರು.

ಮುಖ್ಯಮಂತ್ರಿಗಳ ಸೂಚನೆಗಳನ್ನು ಅನುಸರಿಸಿ, ಭಾಗೀರಥಪುರದ ಪುರಸಭೆಯ ವಲಯ ಅಧಿಕಾರಿ ಮತ್ತು ಸಹಾಯಕ ಎಂಜಿನಿಯರ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಲಾಗಿದೆ. ಉಸ್ತುವಾರಿ ಉಪ ಎಂಜಿನಿಯರ್‌ಗಳನ್ನು ಸೇವೆಯಿಂದ ವಜಾಗೊಳಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕಲುಷಿತ ಕುಡಿಯುವ ನೀರಿನ ಘಟನೆಯ ತನಿಖೆಗಾಗಿ ಭಾರತೀಯ ಆಡಳಿತ ಸೇವೆ (ಐಎಎಸ್) ಅಧಿಕಾರಿಯ ನೇತೃತ್ವದಲ್ಲಿ ಮೂವರು ಸದಸ್ಯರ ಸಮಿತಿಯನ್ನು ರಚಿಸಲಾಗಿದೆ ಎಂದು ಅಧಿಕಾರಿ ಹೇಳಿದರು.

ಭಗೀರಥಪುರದ ಮುಖ್ಯ ನೀರು ಸರಬರಾಜು ಪೈಪ್‌ಲೈನ್‌ನಲ್ಲಿ ಶೌಚಾಲಯ ನೀರು ಸೋರಿಕೆಯಾಗಿರುವುದು ಕಂಡುಬಂದಿದೆ. ಈ ಸೋರಿಕೆಯಿಂದಾಗಿ ಕುಡಿಯುವ ನೀರು ಕಲುಷಿತವಾಗಿರಬಹುದು ಎಂದು ಪುರಸಭೆ ಆಯುಕ್ತ ದಿಲೀಪ್ ಕುಮಾರ್ ಯಾದವ್ ಹೇಳಿದ್ದಾರೆ.

ಕಲುಷಿತ ಕುಡಿಯುವ ನೀರಿನ ಪ್ರಕರಣದಲ್ಲಿ ತನ್ನ ನಿರ್ಲಕ್ಷ್ಯವನ್ನು ಮುಚ್ಚಿಹಾಕಲು ಆಡಳಿತವು ನಿಜವಾದ ಸಾವಿನ ಸಂಖ್ಯೆಯನ್ನು ಮರೆಮಾಡುತ್ತಿದೆ ಎಂದು ರಾಜ್ಯ ಕಾಂಗ್ರೆಸ್ ವಕ್ತಾರ ನೀಲಭ್ ಶುಕ್ಲಾ ಆರೋಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಹಲ್ಗಾಮ್ ದಾಳಿ ಕುರಿತ ಪೋಸ್ಟ್‌: ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್‌ಗೆ ನಿರೀಕ್ಷಣಾ ಜಾಮೀನು ನೀಡಿದ ಸುಪ್ರೀಂ ಕೋರ್ಟ್

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಸಾಮಾಜಿಕ ಮಾಧ್ಯಮ ಪೋಸ್ಟ್‌ಗೆ ಸಂಬಂಧಿಸಿದಂತೆ ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್ ಅವರ ವಿರುದ್ಧ ದಾಖಲಾಗಿದ್ದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಂಗಳವಾರ ಅವರಿಗೆ ನಿರೀಕ್ಷಣಾ ಜಾಮೀನು...

ಮಧ್ಯಪ್ರಾಚ್ಯ ಉದ್ವಿಗ್ನತೆ: ಎಲ್‌ಪಿಜಿ ಕೊರತೆಗೆ ಮುಂಬೈನಲ್ಲಿ ಶೇ. 20 ರಷ್ಟು ಹೋಟೆಲ್‌, ರೆಸ್ಟೋರೆಂಟ್‌ ಬಂದ್: ಬೆಂಗಳೂರು, ಚೆನ್ನೈನಲ್ಲೂ ಸಮಸ್ಯೆ

ಪಶ್ಚಿಮ ಏಷ್ಯಾ ಸಂಘರ್ಷ ಹತ್ತು ದಿನಗಳಿಗೂ ಹೆಚ್ಚು ಕಾಲ ಮುಂದುವರಿದಿರುವುದರಿಂದ, ಭಾರತದ ಹೋಟೆಲ್‌ಗಳು ಮತ್ತು ಇತರ ಉಧ್ಯಮಗಳು ಎಲ್‌ಪಿಜಿ ಪೂರೈಕೆ ಬಿಕ್ಕಟ್ಟನ್ನು ಎದುರಿಸುತ್ತಿವೆ. ಬೆಂಗಳೂರಿನ ನಂತರ, ಚೆನ್ನೈ ಮತ್ತು ಮುಂಬೈನಂತಹ ಇತರ ನಗರಗಳು ಸಹ...

‘ಕೋವಿಡ್ ಲಸಿಕೆ ಪೀಡಿತರಿಗಾಗಿ ಪರಿಹಾರ ನೀತಿ ಅಳವಡಿಸಿಕೊಳ್ಳಿ..’; ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕೋವಿಡ್ ವಿರುದ್ಧ ರೋಗನಿರೋಧಕ ಶಕ್ತಿಯಾಗಿ ಲಸಿಕೆ ನೀಡಿದ ನಂತರ ಉಂಟಾಗುವ ಪ್ರತಿಕೂಲ ಪರಿಣಾಮಗಳ ವೈಜ್ಞಾನಿಕ ಮೌಲ್ಯಮಾಪನಕ್ಕಾಗಿ ಅಸ್ತಿತ್ವದಲ್ಲಿರುವ ಕಾರ್ಯವಿಧಾನವನ್ನು ಮುಂದುವರಿಸಬೇಕೆಂದು ಸುಪ್ರೀಂ ಕೋರ್ಟ್ ಮಂಗಳವಾರ ಆದೇಶಿಸಿದೆ. ಅದೇ ಸಮಯದಲ್ಲಿ, ಕೋವಿಡ್ -19 ವ್ಯಾಕ್ಸಿನೇಷನ್ ನಂತರದ...

ಮೇಘಾಲಯ|ಜಿಲ್ಲಾ ಪರಿಷತ್ ಚುನಾವಣೆಯಲ್ಲಿ ವಿವಾದಾತ್ಮಕ ಅಧಿಸೂಚನೆ: ಪಶ್ಚಿಮ ಗಾರೋ ಬೆಟ್ಟಗಳಲ್ಲಿ ಭುಗಿಲೆದ್ದ ಹಿಂಸಾಚಾರ; ಇಬ್ಬರ ಸಾವು

ಗುವಾಹಟಿ: ಏಪ್ರಿಲ್ 10 ರಂದು ನಡೆಯಲಿರುವ ಗಾರೋ ಹಿಲ್ಸ್ ಸ್ವಾಯತ್ತ ಜಿಲ್ಲಾ ಮಂಡಳಿ (ಜಿಎಚ್‌ಎಡಿಸಿ) ಚುನಾವಣೆಯಲ್ಲಿ ಬುಡಕಟ್ಟು ಜನಾಂಗದವರಲ್ಲದವರು ಸ್ಪರ್ಧಿಸುವುದನ್ನು ನಿಷೇಧಿಸುವ ವಿವಾದಾತ್ಮಕ ಅಧಿಸೂಚನೆಯನ್ನು ವಿರೋಧಿಸಿ ಮೇಘಾಲಯದ ಪಶ್ಚಿಮ ಗಾರೋ ಹಿಲ್ಸ್ ಜಿಲ್ಲೆಯಲ್ಲಿ...

ಸಂವಿಧಾನ, ಸದನದ ಘನತೆ ಉಳಿಸಲು ಲೋಕಸಭಾ ಸ್ಪೀಕರ್ ವಿರುದ್ಧ ನಿರ್ಣಯ: ಕಾಂಗ್ರೆಸ್ ಸಂಸದ ಗೊಗೊಯ್

ಸ್ಪೀಕರ್ ಓಂ ಬಿರ್ಲಾ ಪಕ್ಷಪಾತಿ ವರ್ತನೆ ಹೊಂದಿದ್ದಾರೆ. ಹಾಗಾಗಿ, ಸಂವಿಧಾನ ಉಳಿಸಲು ವಿರೋಧ ಪಕ್ಷವು ಅವರನ್ನು ಪದಚ್ಯುತಗೊಳಿಸುವ ನಿರ್ಣಯ ತರಬೇಕಾಯಿತು ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಮಂಗಳವಾರ (ಮಾ.10) ಲೋಕಸಭೆಯಲ್ಲಿ ಹೇಳಿದರು....

ನಿರಂತರ ಎಲ್‌ಪಿಜಿ ಪೂರೈಕೆ ಖಚಿತಪಡಿಸಿಕೊಳ್ಳಲು ‘ಅಗತ್ಯ ಸರಕು ಕಾಯ್ದೆ’ ಜಾರಿಗೆ ತಂದ ಕೇಂದ್ರ

ಹೋಟೆಲ್‌ ಮತ್ತು ರೆಸ್ಟೋರೆಂಟ್‌ಗಳು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆ ಕುರಿತು ದೂರು ನೀಡಿದ ನಂತರ, ದೇಶೀಯ ಅಡುಗೆ ಅನಿಲದ ನಿರಂತರ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರವು 'ಅಗತ್ಯ ಸರಕು ಕಾಯ್ದೆ'ಯನ್ನು ಜಾರಿಗೆ ತಂದಿದೆ ಎಂದು...

‘ಯುದ್ಧ ಯಾವಾಗ ಕೊನೆಗೊಳ್ಳುತ್ತದೆ ಎಂಬುದನ್ನು ಇರಾನ್ ನಿರ್ಧರಿಸುತ್ತದೆ’: ಟ್ರಂಪ್ ‘ಅಲ್ಪಾವಧಿಯ ಸಂಘರ್ಷ’ ಹೇಳಿಕೆಗೆ ಇರಾನ್ ತಿರುಗೇಟು 

ಟೆಹ್ರಾನ್: ಇರಾನ್‌ನಲ್ಲಿ ಯುದ್ಧವನ್ನು ಕೊನೆಗೊಳಿಸುವ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಟೆಹ್ರಾನ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು, ಅಮೆರಿಕ ಮತ್ತು ಇಸ್ರೇಲಿ ಗುರಿಗಳ ವಿರುದ್ಧದ ಮಿಲಿಟರಿ ಕ್ರಮಗಳು ಯಾವಾಗ ನಿಂತವು ಎಂಬುದನ್ನು...

ಮಹಿಳಾ ಮೀಸಲಾತಿ ಮಸೂದೆ; ತ್ವರಿತ ಅನುಷ್ಠಾನಕ್ಕೆ ವಿಪಕ್ಷಗಳ ಅಭಿಪ್ರಾಯ ಕೇಳಿದ ಕೇಂದ್ರ ಸರ್ಕಾರ

ನವದೆಹಲಿ: ಮಹಿಳಾ ಮೀಸಲಾತಿ ಕಾನೂನಿನ ಅನುಷ್ಠಾನವನ್ನು ತ್ವರಿತಗೊಳಿಸುವ ಪ್ರಯತ್ನದಲ್ಲಿ, ಲೋಕಸಭೆ ಮತ್ತು ರಾಜ್ಯ ಶಾಸಕಾಂಗ ಸಭೆಗಳಲ್ಲಿ ಮಹಿಳೆಯರಿಗೆ ಶೇ 33 ರಷ್ಟು ಮೀಸಲಾತಿ ನೀಡುವ ಶಾಸನವನ್ನು ತಿದ್ದುಪಡಿ ಮಾಡುವ ಪ್ರಸ್ತಾಪದ ಕುರಿತು ಅಭಿಪ್ರಾಯಗಳನ್ನು...

ಕೋಲ್ಕತ್ತಾ : ಕಾಳಿಘಾಟ್ ಬಳಿಕ ದಕ್ಷಿಣೇಶ್ವರದಲ್ಲೂ ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ‘ಗೋ ಬ್ಯಾಕ್ ಘೋಷಣೆ’

ಕಾಳಿಘಾಟ್ ಬಳಿಕ ಕೋಲ್ಕತ್ತಾದ ದಕ್ಷಿಣೇಶ್ವರ ದೇವಸ್ಥಾನದಲ್ಲೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ದ 'ಗೋ ಬ್ಯಾಕ್ ಘೋಷಣೆಗಳು' ಕೇಳಿ ಬಂದಿವೆ. ಮಂಗಳವಾರ (ಮಾ.10) ಬೆಳಿಗ್ಗೆ ಜ್ಞಾನೇಶ್ ಕುಮಾರ್ ದಕ್ಷಿಣೇಶ್ವರ ಕಾಳಿ ದೇವಸ್ಥಾನಕ್ಕೆ ಭೇಟಿ...

ಉತ್ತರ ಪ್ರದೇಶ| ಹೋಳಿ ಹಬ್ಬದ ಶುಭ ಕೋರಿದ ದಲಿತ ಯುವಕನನ್ನು ಕೊಂದ ಪ್ರಬಲಜಾತಿ ಕುಟುಂಬ

ಉತ್ತರ ಪ್ರದೇಶದ ಲಕ್ನೋದ ದುಬಗ್ಗಾ ಪ್ರದೇಶದಲ್ಲಿ, ಹೋಳಿ ಹಬ್ಬದ ಸಂದರ್ಭದಲ್ಲಿ ಶುಭಕೋರಿದ 22 ವರ್ಷದ ದಲಿತ ವ್ಯಕ್ತಿಯನ್ನು ಬ್ರಾಹ್ಮಣ ಕುಟುಂಬದ ಸದಸ್ಯರು ಇರಿದು ಕೊಂದಿದ್ದಾರೆ ಎಂದು ಆರೋಪಿಸಲಾಗಿದೆ. ಈ ಘಟನೆ ಮಾರ್ಚ್ 4...