Homeಕರ್ನಾಟಕಡಿಸೆಂಬರ್ 29ರಂದು ಕುವೆಂಪುರವರು ಹುಟ್ಟಿದ ದಿನ ಸಾವಿರ ಕಡೆ ಸಹಭೋಜನಕ್ಕೆ ಕರೆ...

ಡಿಸೆಂಬರ್ 29ರಂದು ಕುವೆಂಪುರವರು ಹುಟ್ಟಿದ ದಿನ ಸಾವಿರ ಕಡೆ ಸಹಭೋಜನಕ್ಕೆ ಕರೆ…

ಈ ಕಾರ್ಯಕ್ರಮಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಅದ್ಭುತ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬಹಳಷ್ಟು ಜನರು ತಮ್ಮ ಊರಿನಲ್ಲಿಯೂ ಸಹ ಆಯೋಜಿಸುವುದಾಗಿ ವಾಲಂಟಿಯರ್‌ ಮಾಡಿದ್ದಾರೆ.

- Advertisement -
- Advertisement -

‘ಸರ್ವಜನಾಂಗದ ಶಾಂತಿಯ ತೋಟ’ ಎಂಬ ಟ್ಯಾಗ್‌ಲೈನ್ ಜೊತೆಗೆ, ಡಿಸೆಂಬರ್ 29ರಂದು ಕುವೆಂಪುರವರು ಹುಟ್ಟಿದ ದಿನ ಕರ್ನಾಟಕದಲ್ಲಿ ವಿಶಿಷ್ಠ ಕಾರ್ಯಕ್ರಮ ನಡೆಯುತ್ತಿದೆ. ಹಿಂದೂಗಳು, ಮುಸ್ಲಿಮರು, ಕ್ರೈಸ್ತರು, ದಲಿತರು, ಮಹಿಳೆಯರು, ವಿದ್ಯಾರ್ಥಿಗಳು ಜೊತೆಗೂಡಿ “ಸಹಸ್ರ ಸಹಭೋಜನ” ಕರ್ನಾಟಕದ ಸಾವಿರ ಕಡೆಗಳಲ್ಲಿ ಸಂವಿಧಾನದ ಮುನ್ನುಡಿಯ ಓದು ಮತ್ತು ಜೊತೆಗೆ ಸಹಭೋಜನ ಮಾಡುವ ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ನಿಮ್ಮ ಊರಿನಲ್ಲಿಯೂ ಕೂಡ ನಡೆಸಬಹುದು ಎಂಬುದಾಗಿ ಕರೆ ನೀಡಲಾಗಿದೆ.

ನಮ್ಮ ಪ್ರೀತಿಯ ಭಾರತವನ್ನು ವಿಭಜಿಸಲು ಬಿಡುವುದಿಲ್ಲ ಎಂದು ಘೋಷಿಸಿರುವ ಈ ಕಾರ್ಯಕ್ರಮವು ಯಾವ ಸಂಘಟನೆ, ಒಕ್ಕೂಟಗಳ ಬ್ಯಾನರ್ ಅಡಿಯಲ್ಲೂ ನಡೆಯುವುದಿಲ್ಲ. ಜನ ಸ್ವಪ್ರೇರಣೆಯಿಂದ ದೇಶದ ಸಹಬಾಳ್ವೆ ಮತ್ತು ಸಾಮರಸ್ಯವನ್ನು ಉತ್ತೇಜಿಸಲು ಈ ಕಾರ್ಯಕ್ರಮ ನಡೆಯುತ್ತಿದ್ದು ವಿಶ್ವಮಾನವ ಸಂದೇಶ ಸಾರಿದ ಕುವೆಂಪುರವರ ಜನ್ಮದಿನದಂದೇ ಕರ್ನಾಟಕದಾದ್ಯಂತ ನಡೆಯುತ್ತಿದೆ. ಕನಿಷ್ಠ ಒಂದು ಸಾವಿರ ಕಡೆ ಕಾರ್ಯಕ್ರಮವನ್ನು ನಡೆಸಲು ಉದ್ದೇಶಿಸಲಾಗಿದೆ.

ಆಯೋಜಕರ ಮತ್ತು ಆ ಊರಿನ ಸಾಧ್ಯತೆಗೆ ತಕ್ಕಂತೆ ಕಾರ್ಯಕ್ರಮದ ಗಾತ್ರ ಹಾಗೂ ಜೊತೆಗೂಡಿ ಏನು ತಿನ್ನಬಹುದು ಎಂಬುದನ್ನು ನಿಗದಿ ಮಾಡಿಕೊಳ್ಳಬಹುದು. ಆದರೆ ಸಂವಿಧಾನ ಓದು, ವಿವಿಧ ಧರ್ಮ ಹಾಗೂ ಜಾತಿಗಳ ಜನರು ಇರುವಂತೆ ನೋಡಿಕೊಳ್ಳಬೇಕು. ದೊಡ್ಡ ಊರುಗಳಲ್ಲಿ ಒಂದೇ ಕಡೆ ನಡೆಯಬೇಕೆಂದೇನಿಲ್ಲ. ಎಷ್ಟು ಬೇಕಾದರೂ ನಡೆಯಬಹುದು. ಕೆಲವರ ಮನೆಗಳಲ್ಲಿ, ಸಭಾಂಗಣಗಳಲ್ಲಿ, ಮೈದಾನಗಳಲ್ಲಿ ಎಲ್ಲಿ ಬೇಕಾದರೂ ಮಾಡಬಹುದು. ಕನಿಷ್ಠ 10 ಜನದಿಂದ 10,000 ಜನರವರೆಗೆ ಎಷ್ಟು ಜನರಾದರೂ ಸೇರಬಹುದು ಎಂದು ಕರೆ ನೀಡಲಾಗಿದೆ.

ಇದರ ಪರಿಣಾಮ (ಅಂದರೆ ಸಂವಿಧಾನದ ಮುನ್ನುಡಿಯನ್ನು ಗಟ್ಟಿಯಾಗಿ ಸಾಮೂಹಿಕವಾಗಿ ಓದುವುದು ಮತ್ತು ಹಿಂದೂ, ಮುಸ್ಲಿಂ, ಕ್ರೈಸ್ತ ದಲಿತ, ಮಹಿಳೆಯರು, ವಿದ್ಯಾರ್ಥಿಗಳು ಒಂದೆಡೆ ಸೇರಿ ಸಹಭೋಜನ ಮಾಡುವುದು – ಒಂದೇ ದಿನ ಸಾವಿರ ಕಡೆ) ಹಲವು ರೀತಿಯದ್ದಾಗಿರುತ್ತದೆ ಎಂಬುದನ್ನು ನೀವು ಊಹಿಸಬಲ್ಲಿರಿ. ಸ್ವಾಮೀಜಿಗಳು, ಮುಲ್ಲಾಗಳು, ಎಲ್ಲಾ ಜಾತಿಯ ಜನರನ್ನೂ ಒಳಗೊಳ್ಳಬಹುದು. ಈಗಾಗಲೇ 75 ಊರುಗಳಲ್ಲಿ ನಿಗದಿಯಾಗಿದ್ದು, ಪ್ರತಿ ಗಂಟೆಗೂ ಸಂಖ್ಯೆ ಏರುತ್ತಿದೆ “ಸಹಸ್ರ ಸಹಭೋಜನ” ಫೇಸ್‌ಬುಕ್‌ ಪುಟದಲ್ಲಿ ಪ್ರಕಟಿಸಲಾಗಿದೆ.

ನೀವು ಎಲ್ಲಿಯಾದರೂ ಇದನ್ನು ಸಂಘಟಿಸಬಹುದೇ? ಹಾಗೆಯೇ ನಿಮ್ಮ ಗೆಳೆಯರು (ಯಾವ ಊರಾದರೂ ಸರಿ) ಎಲ್ಲೆಲ್ಲಿ ಸಂಘಟಿಸಬಹುದು? ಕೂಡಲೇ ತಿಳಿಸಿ. ಮಾಡುವವರ ಸಹಾಯ ಸಂಪರ್ಕಕ್ಕಾಗಿ 9353666821 ಗೆ ಸಂಪರ್ಕಿಸಬಹುದೆಂದು ತಿಳಿಸಲಾಗಿದೆ. ಹೆಚ್ಚಿನ ವಿವರಗಳಿಗೆ ಸಹಸ್ರ ಸಹಭೋಜನ ಫೇಸ್ಬುಕ್ ಪುಟ ಸಹಾ ನೋಡಬಹುದು.

ಈ ಕಾರ್ಯಕ್ರಮಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಅದ್ಭುತ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬಹಳಷ್ಟು ಜನರು ತಮ್ಮ ಊರಿನಲ್ಲಿಯೂ ಸಹ ಆಯೋಜಿಸುವುದಾಗಿ ವಾಲಂಟಿಯರ್‌ ಮಾಡಿದ್ದಾರೆ. ಇದುವೇ ದೇಶವನ್ನು ಉಳಿಸುವ ಮಾರ್ಗ ಎಂದು ಹಲವಾರು ಜನ ಪ್ರತಿಕ್ರಿಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೇಸಿಗೆ ಎದುರಿಸಲು ಸಿದ್ಧತೆ: ಬೆಂಗಳೂರಿನ ಆಯ್ದ ಪ್ರದೇಶಗಳಲ್ಲಿ ಮಿನಿ ವಾಟರ್ ಟ್ಯಾಂಕ್‌ ಸ್ಥಾಪನೆಗೆ ಮುಂದಾದ ಬಿಡಬ್ಲ್ಯೂಎಸ್ಎಸ್ಬಿ

ಬೆಂಗಳೂರು: ಬೇಸಿಗೆ ಆರಂಭವಾಗಲಿರುವ ಹಿನ್ನೆಲೆಯಲ್ಲಿ, ನಗರದ ನಿರ್ದಿಷ್ಟ ಪ್ರದೇಶಗಳಲ್ಲಿ ನೀರಿನ ಬೇಡಿಕೆಯನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ಮತ್ತು ಸಂಭಾವ್ಯ ಕೊರತೆಯನ್ನು ನೀಗಿಸಲು ಸಿದ್ಧತೆಗಳನ್ನು ಹೆಚ್ಚಿಸಲಾಗಿದೆ ಎಂದು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ...

ಸೋನಮ್ ವಾಂಗ್‌ಚುಕ್ ಆರೋಗ್ಯವಾಗಿದ್ದಾರೆ, ವೈದ್ಯಕೀಯ ಕಾರಣಕ್ಕೆ ಬಿಡುಗಡೆ ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್‌ಗೆ ತಿಳಿಸಿದ ಕೇಂದ್ರ

ಲಡಾಖ್‌ನ ಹೋರಾಟಗಾರ ಸೋನಮ್ ವಾಂಗ್‌ಚುಕ್ ಅವರನ್ನು ವೈದ್ಯಕೀಯ ಆಧಾರದ ಮೇಲೆ ಬಂಧನದಿಂದ ಬಿಡುಗಡೆ ಮಾಡಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ ಬುಧವಾರ (ಫೆ.11) ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. "ವೈದ್ಯಕೀಯ ಆಧಾರದಲ್ಲಿ ಸೋನಮ್ ವಾಂಗ್‌ಚುಕ್ ಅವರ...

ಬ್ರಿಟಿಷ್ ಕೊಲಂಬಿಯಾದ ಶಾಲೆಯಲ್ಲಿ ಗುಂಡಿನ ದಾಳಿ; ಶಂಕಿತನ ಸೇರಿದಂತೆ 10 ಜನರು ಸಾವು

ಬ್ರಿಟಿಷ್ ಕೊಲಂಬಿಯಾದಲ್ಲಿ ಮಂಗಳವಾರ ನಡೆದ ಗುಂಡಿನ ದಾಳಿಯಲ್ಲಿ ಎಂಟು ಜನರು ಸಾವನ್ನಪ್ಪಿದ್ದಾರೆ ಎಂದು ಕೆನಡಾದ ಅಧಿಕಾರಿಗಳು ತಿಳಿಸಿದ್ದಾರೆ. ಅವರಲ್ಲಿ ಶಂಕಿತ ಬಂದೂಕುಧಾರಿ ಮಹಿಳೆಯೂ ಸೇರಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಶಾಲೆಯ ಹತ್ತಿರದ ನಿವಾಸದಲ್ಲಿ...

‘ನನ್ನ ಗಡ್ಡ ಎಳೆದು ಟೋಪಿ ಕಿತ್ತೆಸೆದರು..’; ಶಿರಡಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಮುಸ್ಲಿಂ ಪ್ರಯಾಣಿಕನ ಮೇಲೆ ಗುಂಪುದಾಳಿ

ಮನ್ಮಾಡ್ ಕಾಕಿನಾಡ ಶಿರಡಿ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮುಸ್ಲಿಂ ವ್ಯಕ್ತಿಯೊಬ್ಬರನ್ನು ಸುಮಾರು 20 ಜನರ ಗುಂಪೊಂದು ದಾಳಿ ಮಾಡಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ. ಹಫೀಜ್‌ಪೇಟೆ ರೈಲು ನಿಲ್ದಾಣದ ಬಳಿ ಘಟನೆ ನಡೆದಿದ್ದು, ಮೊಹಮ್ಮದ್...

ಪ್ರಧಾನಿ ಮೋದಿ ಕುರಿತ ‘ದಿ ವೈರ್’ನ ವಿಡಂಬನಾತ್ಮಕ ಅನಿಮೇಷನ್‌ಗೆ ಸಾಮಾಜಿಕ ಮಾಧ್ಯಮಗಳಲ್ಲಿ ನಿರ್ಬಂಧ

ಸುದ್ದಿ ಸಂಸ್ಥೆ 'ದಿ ವೈರ್' ಪೋಸ್ಟ್ ಮಾಡಿದ್ದ ಪ್ರಧಾನಿ ನರೇಂದ್ರ ಮೋದಿಯವರ ವಿಡಂಬನಾತ್ಮಕ ಅನಿಮೇಷನ್ ಅನ್ನು ಸಾಮಾಜಿಕ ಮಾಧ್ಯಮ ವೇದಿಕೆಗಳಾದ ಇನ್‌ಸ್ಟಾಗ್ರಾಮ್, ಫೇಸ್‌ಬುಕ್ ಮತ್ತು ಎಕ್ಸ್ ನಿರ್ಬಂಧಿಸಿವೆ. ಸೋಮವಾರ (ಫೆ.10) ಸಂಜೆ ಸುಮಾರು ಎರಡು...

‘ಭಾರತವನ್ನು ಮಾರಲು ನಿಮಗೆ ನಾಚಿಕೆಯಾಗುವುದಿಲ್ಲವೇ?’; ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ಉಲ್ಲೇಖಿಸಿ ಪ್ರಧಾನಿ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ

ಅಮೆರಿಕದೊಂದಿಗೆ ಇತ್ತೀಚೆಗೆ ಘೋಷಿಸಲಾದ ವ್ಯಾಪಾರ ಒಪ್ಪಂದದ ಕುರಿತು ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ತೀವ್ರ ವಾಗ್ದಾಳಿ ನಡೆಸಿದ್ದಾರೆ.  ಲೋಕಸಭೆಯಲ್ಲಿ ವ್ಯಾಪಾರ ಒಪ್ಪಂದದ ಹಿನ್ನೆಲೆಯಲ್ಲಿ ತೀವ್ರ ದಾಳಿ ಮಾಡಿದ...

ಗಾಜಾ| ಮನೆ ಅವಶೇಷದಲ್ಲಿ ತನ್ನ ಕುಟುಂಬದ ಸದಸ್ಯರ ಮೂಳೆ ಹುಡುಕಿದ ವ್ಯಕ್ತಿ

ಗಾಜಾ ನಗರದಲ್ಲಿದ್ದ ತನ್ನ ಮನೆಯ ಅವಶೇಷಗಳ ರಾಶಿಯ ನಡುವೆ ಕುಳಿತಿರುವ ಮಹಮೂದ್ ಹಮ್ಮದ್, ದೊಡ್ಡ ಜರಡಿಯಲ್ಲಿ ಮಣ್ಣನ್ನು ತೆಗೆದು ಅಲ್ಲಾಡಿಸಿ, ಅದನ್ನು ಹೊರಗೆ ಎಸೆಯುವ ಮೊದಲು ಎಚ್ಚರಿಕೆಯಿಂದ ನೋಡುವ ವಿಡಯೊ ನೋಡಿದವರ ಮನಕಲಕುತ್ತದೆ....

ವಿಪಕ್ಷಗಳಿಂದ ಅವಿಶ್ವಾಸ ನೋಟಿಸ್: ಕಲಾಪಕ್ಕೆ ಗೈರಾದ ಲೋಕಸಭೆ ಸ್ಪೀಕರ್ ಓಂ ಬಿರ್ಲಾ

'ಪಕ್ಷಪಾತ'ದ ಆರೋಪ ಹೊರಿಸಿ ವಿಪಕ್ಷಗಳು 'ಅವಿಶ್ವಾಸ ನೋಟಿಸ್' ನೀಡಿರುವ ಹಿನ್ನೆಲೆ, ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಕಲಾಪದಿಂದ ದೂರ ಉಳಿದಿದ್ದಾರೆ. ಬುಧವಾರ (ಫೆ.11) ಸ್ಪೀಕರ್ ಪೀಠದಲ್ಲಿ ಹಿರಿಯ ಬಿಜೆಪಿ ಸಂಸದರಾದ ಪಿ.ಸಿ ಮೋಹನ್...

ಕೆನಡಾ ಬ್ರಿಟಿಷ್ ಕೊಲಂಬಿಯಾ ಪ್ರಾಂತ್ಯದ ಶಾಲೆಯಲ್ಲಿ ಗುಂಡಿನ ದಾಳಿ: ಬಂದೂಕುಧಾರಿ ಸೇರಿ ಕನಿಷ್ಠ 10 ಸಾವು, 27 ಮಂದಿಗೆ ಗಾಯ

ಬ್ರಿಟಿಷ್ ಕೊಲಂಬಿಯಾದ ಪೀಸ್ ಪ್ರದೇಶದಲ್ಲಿರುವ ಶಾಲೆಯಲ್ಲಿ ಮಂಗಳವಾರ ಮಧ್ಯಾಹ್ನ ಗುಂಡಿನ ದಾಳಿ ನಡೆದಿದ್ದು, ಕನಿಷ್ಠ ಒಂಬತ್ತು ಮಂದಿ ಸಾವನ್ನಪ್ಪಿದ್ದು, 27 ಮಂದಿಗೆ ಗಂಭೀರ ಗಾಯಗಳಾಗಿರುವುದಾಗಿ ವರದಿಯಾಗಿದೆ. ಶಂಕಿತ ಎಂದು ನಂಬಲಾದವರ ಮನೆಯಲ್ಲಿ ಇನ್ನೂ...

ಉತ್ತರ ಪ್ರದೇಶ| ಭೂಮಿ ವಿವಾದದಲ್ಲಿ ದಲಿತ ಮಹಿಳೆಯರ ಮೇಲೆ ಹಲ್ಲೆ- ಜಾತಿ ನಿಂದನೆ

ಉತ್ತರ ಪ್ರದೇಶದ ಮಾಂಡಾ ಪೊಲೀಸ್ ಠಾಣೆ ವ್ಯಾಪ್ತಿಯ ಹಂಡಿಯಾ ಗ್ರಾಮದಲ್ಲಿ ದೀರ್ಘಕಾಲದಿಂದ ನಡೆಯುತ್ತಿದ್ದ ಭೂ ವಿವಾದ ಭಾನುವಾರ ಹಿಂಸಾಚಾರಕ್ಕೆ ತಿರುಗಿದೆ. ಪ್ರಬಲ ಜಾತಿ ಜನರು ದಲಿತ ಕುಟುಂಬದ ಮೇಲೆ ಹಲ್ಲೆ ನಡೆಸಿದ್ದು, ಪೊಲೀಸರು...